Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...