Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...