Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...