Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...