Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...