Homeಅಂಕಣಗಳುಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

ಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

- Advertisement -
- Advertisement -

| ಯಾಹೂ |

ಹಠಾತ್ತನೆ ಮನೆ ಕುಸಿಯತೊಡಗಿ ಜೆಡಿಎಸ್ ಕುಟೀರದ ಗೋಡೆ ಬಿರುಕು ಕಾಣಿಸಿಕೊಂಡ ಕೂಡಲೇ ಅನಾಹುತದ ನಿಖರತೆಯನ್ನು ಗುರುತಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಎಂದು ಘೋಷಿಸಿಬಿಟ್ಟಿದ್ದಾರಲ್ಲಾ. ಅರೆ ಸಮ್ಮಿಶ್ರ ಸಂಸಾರ ಬಿಗಡಾಯಿಸಿಕೊಂಡು ಅಲ್ಲಿಂದ ಹೊರಬಿದ್ದವರೊಂದಿಗೆ ಕೂಡಿಕೆ ಮಾಡಿಕೊಂಡು ಸಂಸಾರ ಹೂಡುವ ಬಗ್ಗೆ, ಎಡೂರಪ್ಪನನ್ನು ತಡೆದವರಾರು. ಎಡೂರಪ್ಪನ ಬಾಯಲ್ಲಿ ಇಂತಹ ಮಾತು ಸುಮ್ಮಸುಮ್ಮನೆ ಬರಲಾರದು. ಯಾರೊ ಚಡ್ಡಿಗಳ ಪೈಕಿ ಎಡೂರಪ್ಪನಿಗೆ ವಯಸ್ಸಾಯ್ತು ಎಂದಿರಬಹುದು ಅಥವಾ ಅವರ ಸರದಿ ಮುಗಿಯಿತಲ್ಲಾ ಎಂದಿರಬಹುದು. ಈ ಎಲ್ಲಾ ವಾಸನೆ ಗ್ರಹಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಸಂಸಾರಿ ಎಂದಿರುವುದು. ಅದಿರಲಿ, ಎಡೂರಪ್ಪ ಆಧುನಿಕ ಜಗತ್ತಿನ ಸನ್ಯಾಸಿಗಳನ್ನ ನೋಡಿಲ್ಲ ಅನ್ನಿಸುತ್ತದೆ. ಅವರೆಲ್ಲಾ ಗುಪ್ತ ಸಮಾಲೋಚನಾ ಪ್ರಿಯರಾಗಿ ಬಹಳ ವರ್ಷಗಳಾದವು. ಉಡುಪಿ ಮಠಗಳನ್ನೆ ಆದರ್ಶವಾಗಿ ಗ್ರಹಿಸಿ ಬದುಕನ್ನು ಇಡಿಯಾಗಿ ಮುಕ್ಕುವ ಕಲೆಯನ್ನು ಕರಗತ ಮಾಡಿಕೊಂಡು ಶತಮಾನವೇ ಸರಿಯಿತು. ತೀರ ಇತ್ತೀಚಿನ ತಾಜಾ ಉದಾಹರಣೆಯೆಂದರೆ ನಮ್ಮ ಸಿರಿಗೆರೆಯ ಶಿವಾಚಾರ್ಯ ಮಹಾಸ್ವಾಮಿಗಳವರು ಪೀಠದ ಸಂವಿಧಾನದ ರೀತಿ ಅರವತ್ತು ವರ್ಷಕ್ಕೆ ಪೀಠಬಿಟ್ಟು, ಹಿಂದೆ ಬಂದ ಮರಿಯನ್ನ ಸ್ಥಾಪಿಸಿ ಪಕ್ಕಕ್ಕೆ ನಿಲ್ಲಬೇಕಿತ್ತು. ಆದರೇನು ಭೂಪ ಇನ್ನ ಅಲ್ಲಾಡಿಲ್ಲ. ಇಂತಿರುವಾಗ ಎಡೂರಪ್ಪ ತಮ್ಮ ರಾಜಕಾರಣದ ಉದಾಹರಣೆಗೆ ನಾನು ಸನ್ಯಾಸಿಯಲ್ಲ ಎಂದಿದ್ದಾರಲ್ಲಾ, ಥೂತ್ತೇರಿ..

ಕರ್ನಾಟಕದ ಇವತ್ತಿನ ಸ್ಥಿತಿಯ ಬಗ್ಗೆ ಯಾರಿಗೆ ಫೋನು ಮಾಡಲಿ, ಕುಮಾರಣ್ಣ ಕನಲಿ ಕೆಂಡವಾಗಿದ್ದಾರೆ, ಸಿದ್ದು ಆತಂಕ ತೋರಿಕೆಯಂತೆ ಕಾಣುತ್ತಿದೆ. ಬಿಜೆಪಿಗಳು ಶುದ್ಧ ಕಿಡಿಗೇಡಿಗಳಂತೆ ಕಾಣುತ್ತಿದ್ದಾರೆ. ವಿಶ್ವನಾಥ್ ಈ ಶತಮಾನದ ಮೀರ್‍ಸಾದಿಕನಂತೆ ಗೋಚರಿಸಿದರೆ, ಕೆ.ಆರ್.ಪೇಟೆ ನಾರಾಯಣಗೌಡ ನಿಜಕ್ಕೂ ನೊಂದಂತೆ ಕಾಣುತ್ತಿದ್ದಾನೆ. ಇವೆಲ್ಲಾ ಸಂಗತಿಗಳನ್ನ ಚರ್ಚಿಸಲು ಸೂಕ್ತ ವ್ಯಕ್ತಿಗಾಗಿ ತಪಾಸಣೆ ಮಾಡುತ್ತಿದ್ದಾಗ ವಾಟಿಸ್ಸೆ ಹೆಸರು ಹೊಳೆಯಬೇಕೆ? ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು…

ರಿಂಗ್‍ಟೋನ್ “ಹೋಗದಿರೀ ಸೋದರರೇ.. ಹೋಗದಿರೀ ಬಂಧುಗಳೇ.. ಮನೆಯನು ತೊರೆದು ಹೋಗುವಿರಾ?” ಹಲೊ ಗುಡಾಪ್ಟರ್ ನೂನ್ ಸರ್”
“ವಾಟಿಸ್ಸೆ ಎಲ್ಲಿದ್ದೀ”
“ಎಲ್ಯಾರ ಇದ್ರೂ ನಿಮ್ಮೆದುರಿಗೆ ನಿಂತಂಗಲವ ಸಾ, ಅದ್ಕೆ ಹಂಡ್ರೆಂಡ್ ರುಪೀಸ್ ಕರೆನ್ಸಿ ಹಾಕ್ಸಿ”
“ಹಾಕುಸ್ತಿನಿ ಕರ್ನಾಟಕದ ರಾಜಕಾರಣ ಏನನ್ನಸ್ತಾ ಅದೆ”
“ಏನಾಗಬೇಕೊ ಅದಾಯ್ತ ಅದೆ ಸಾ”
“ಎಮ್ಮೆಲ್ಲೆಗಳ ರಾಜೀನಾಮೆ ಬಗ್ಗೆ ಏನೇಳ್ತಿ”
“ಅವೊಂತರಾ ಬ್ರಾಂಬ್ರು ಕೇರಿಯ ನಾಯಿದ್ದಂಗೆ ಸಾ”
“ಅಂದ್ರೆ”
“ಈ ಬ್ರಾಂಬ್ರು ಕೇರಿ ನಾಯಿಗಳು ಅಕಸ್ಮಾತ್ ಶೂದ್ರ ಕೇರಿಗೋಯ್ತವೆ. ಅಲ್ಲಿ ಚರಂಡೀಲಿ ಕುರಿ, ಆಡಿನ ಮೂಳೆ, ಕೋಳಿ ಮೂಳೆ ರುಚಿ ನೋಡಿದೂ ಅಂದ್ರೇ ತಿರಗಿ ಬ್ರಾಂಬ್ರು ಕೇರಿಗೋಗದಿಲ್ಲ”
“ಅಂಗಂತಿಯಾ”
“ಹೂ ಮತ್ತೆ. ಆ ಬಿಜೆಪಿಗಳು ಕೊಡೋ ದುಡ್ಡಿಗೆ, ಅಧಿಕಾರಕ್ಕೆ, ಮನಸು ಕೊಟ್ಟವೆ ಅನ್ನಸ್ತದೆ ಅದ್ಕೆ ಹೋದೊ ಬುಡಿ ಅತ್ತಗೆ”
“ಹೋಗಿಲ್ಲ ಇನ್ನ ಇಲ್ಲೆ ಇದ್ದಿವಿ ಅಂತಾರಲ್ಲಾ”
“ಇನ್ನ ಇಲ್ಲೇ ಇದ್ದಿವಿ ಅಂದ್ರೆ ಅವುರಿಗೇನಾಗ್ಯದೆ ಕೇಳಬೇಕು ಸಾ.”
“ಯಾರು ಕೇಳಬೇಕು.”
“ಇನ್ಯಾರು ಮುಖ್ಯಮಂತ್ರಿನೇ ಕೇಳಬೇಕು. ಇವುನು ಗ್ರಾಮ ವಾಸ್ತವ್ಯಕ್ಕೋದ್ರೆ ಹಿಂಗೆ ಆಗದು”
“ಈಗೇನಾಗಬವುದು”
“ಅಲ್ಲ ಸಾ, ಬೆಂಗಳೂರಲ್ಲಿರೊ ನೀವು ಹೇಳಬೇಕು.”
“ಜನಗಳಭಿಪ್ರಾಯ ಹೇಳು.”
“ಜನಗಳು ವಿಶ್ವನಾಥನ್ನ ಉಗೀತಾ ಅವುರೆ ಸಾ”
“ಯಾಕೆ?”
“ಯಾಕೆ ಅಂದ್ರೆ ಸಿದ್ದರಾಮಯ್ಯ ಇವುನೇಗ್ತಿ ನೋಡಿ ಕುರಿ ಕ್ವಟಗೆ ಒಳಿಕೆ ನೂಕಿದ್ದ. ದ್ಯಾವೇಗೌಡ ಹೋಗಿ ಕರದು ತಲೆ ಸವುರಿದ. ಆಗ ತನ್ನ ತಲೇನೆ ಸವುರಿಕೊಂಡಂಗಾಯ್ತು. ಕೂಡ್ಳೆ ಪಾರ್ಟಿ ಪ್ರೆಸಿಡೆಂಟ್ ಮಾಡಿ ಎಮ್ಮೆಲ್ಲೆ ಮಾಡಿದ್ರೆ, ಇವುನು ಕೈ ಕೊಡದ ಅಂತ ಅವುರೆ”
“ನಿನಗೇನನ್ಸುತ್ತೆ”
“ಮಂತ್ರಿ ಮಾಡಿದ್ರೆ ಖಾತೆ ಚನ್ನಾಗಿ ನಿಭಾಯಿಸೋನು, ಅಂಗೆ ನೋಡಿದ್ರೆ ಸಾ.ರಾ. ಮಯೇಶ, ಪುಟ್ಟರಾಜ, ತಮ್ಮಣ್ಣ ಇಂತ ಸ್ಕ್ರಾಪ್ ಮಾಲಿಗಿಂತ ವಿಶ್ವನಾಥ್ ಯೋಗ್ಯ, ಈಗ ಮಾತ್ರ ಅಯೋಗ್ಯ”
“ಕೆ.ಆರ್.ಪೇಟೆ ನಾರಾಯಣಗೌಡನ ಬಗ್ಗೆ ಏನೇಳ್ತಿ’.’
“ಅವುನು ಬಾಂಬೆಯಿಂದ ತಪ್ಪಿಸಿಕೊಂಡು ಬಂದ ಮಾರವಾಡಿ ಹುಡುಗನಂಗೆ ಕಾಣ್ತನೆ ಸಾರ್. ಜೆಡಿಎಸ್‍ಗೆ ಬೇಕಾದಷ್ಟು ಮಾಡ್ಯವುನೆ, ಚುಂಚನಗಿರಿ ಮಠಕ್ಕೆ ಬೊಂಬಾಯಿಲೆ ಜಾಗ ಕೊಡಿಸ್ಯಾವುನೆ, ಅಂಥೊನ್ನ ದ್ಯಾವೇಗೌಡನ ಮನೆವ್ರು ಚಪ್ರಾಸಿಯಂಗೆ ನ್ಯಡಿಸಿಕೊಬಾರದಿತ್ತು.”
“ಒಟ್ಟಾರೆ ಈ ರಾಜೀನಾಮೆ ಪ್ರಕರಣ ಏನನ್ನಸುತ್ತೆ”
“ನನಿಗೇನನ್ನಸ್ತದೆ ಅಂದ್ರೆ, ಒಂದು ಅವಿಭಕ್ತ ಕುಟುಂಬದಲ್ಲಿ ಅತೃಪ್ತ ಜನ ಏನೇನೊ ನಾಟಗ ಮಾಡ್ತರೆ. ಹೊಟ್ಟೆನೊವ್ವು ಅಂತರೆ, ಬೇಧಿ ಅಂತರೆ, ಹಲ್ಲುನೋವು ಅಂತರೆ, ಸುಮ್ಮನೆ ಮೂಲೇಲಿ ಮನಿಕತ್ತರೆ, ಅದು ಅವುರ ಪ್ರತಿಭಟನೆ ಸಾ. ಈಗ್ಲು ನ್ಯಡದಿರದು ಈ ಕುಮಾರಸ್ವಾಮಿ ಬ್ಯಾಡ ಅನ್ನೊ ಪ್ರತಿಭಟನೆ ಅಷ್ಟೆ ಸಾ”
“ಅಂಗಾರೆ ಕುಮಾರಣ್ಣ ಬ್ಯಾಡವಾ”
“ಇವುನು ಹೋಯ್ತನೆ ಅಂದ್ರೆ ಯಾರಿಗೂ ಫೀಲಾಗಲ್ಲ ಸಾರ್, ಯಾಕಂದ್ರೆ ಇವುರಿಂದ್ಲೆ ಹಾರವರು ಲಕ್ಕಪತಿಗಳಾದ್ರು, ಅದೇನು ಯಜ್ಞ – ಅದೇನು ಯಾಗ, ಅದೇನು ಹೋಮ, ಅದಿರ್ಲಿ ಯಾರಾರ ತಲೆಯಿದ್ದೋರು, ನಾಮಪತ್ರ ತಗಂಡೋಗಿ ಶೃಂಗೇರೀಲಿ ಪೂಜೆ ಮಾಡಿಸಿಗಂಡು ಬತ್ತರ ಸಾ”
“ಇಲ್ಲ ಬುಡು ಇತಿಹಾಸದಲ್ಲಿ ಯಾರು ಅಂಗೆ ಮಾಡಿಲ್ಲ”
“ದ್ಯಾವೇಗೌಡ್ರು ಫ್ಯಾಮಿಲಿ ಪವರಿಂದ ಇಳದ್ರೆ ಬ್ರಾಂಬ್ರಿಗೆ ಲಾಸಾಗಬಹುದು. ನನಿಗಂತು ಯಾವ ನಷ್ಟನೂ ಇಲ್ಲ ಸಾ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...