Homeರಾಜಕೀಯಇದು ಮೊದಲೇ ಹೊಳೀಲಿಲ್ಲ ಬ್ರದರ್!

ಇದು ಮೊದಲೇ ಹೊಳೀಲಿಲ್ಲ ಬ್ರದರ್!

- Advertisement -
- Advertisement -

ಸದ್ಯದ ಕರ್ನಾಟಕದಲ್ಲಿ ಎಲ್ಲಿ ನೋಡಿದರೂ ಅಳುಮೋರೆ ಕಾಣುತ್ತಿವೆ. ಸರಳ ಬಹುಮತ ಪಡೆವ ಸಂತೋಷದಲ್ಲಿದ್ದ ಸಿದ್ದು ಮುಖ ನೋಡಲಾಗುತ್ತಿಲ್ಲ. ಗೆದ್ದು ಬಹುಮತ ಪಡೆದು 24 ಗಂಟೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಪಡೆವ ತಯಾರಿ ನಡೆಸಿದ್ದ ಯಡ್ಡಿ ಮುಖ ಕಾದ ಹೆಂಚಿನಂತೆ ರವಗುಡುತ್ತಿದೆ. ಇನ್ನು ಗೆದ್ದ 24 ಗಂಟೆಯಲ್ಲಿ ರೈತರ ಸಾಲ ಫೈಸಲ್ ಎಂದಿದ್ದ ಕುಮಾರಣ್ಣ ಪೈಲ್ಸ್ ವ್ಯಾಧಿಯ ಮುಖಭಾವದಲ್ಲಿ ಅವುಡು ನುರಿಯುತ್ತಿದ್ದಾರೆ. ಹಾಗೂ ತಡೆದುಕೊಳ್ಳಲಾರದವರಂತೆ ಎಮ್ಮೆಕರುವಿನಂತೆ ಅತ್ತೇಬಿಟ್ಟಿದ್ದಾರೆ. ಇದರ ನಿಗೂಢ ಕಾರಣ ತಿಳಿಯಲು ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ನಿನಗ್ಯಾರಿದ್ದರೇನೂ ಸುಖವಿಲ್ಲ ಪ್ರಭುವೇ, ದಾರಿ ಸುಖವಿಲ್ಲ, ಬಾಯಾರಿತು ಎಂದು ಕಾಂಗೈ ಬಾಗಿಲಿಗೋದೆ, ಬಾಗಿಲ ತೆಗೆಯದೆ ಗದರಿದರಲ್ಲೋ………. ‘ಹಲೋ ಯಾರು’
“ನಾನು ಸಾರ್ ಯಾಹೂ”
“ಒಂದು ನಿಮಿಷ ಬ್ರದರ್ ನಂತರ ಕಾಲ್ ಮಾಡ್ತೀನಿ”
“ನನಿಗೂ ಒಂದೇ ನಿಮಿಷ ಸಾರ್ ಡೆಡ್‍ಲೈನು”
“ಅದೇನು ಕೇಳಿ”
“ಯಾಕ್ ಸಾರ್ ಸೊರಗರಿಯೋ ಶಬ್ದ, ಅಳತಾಯಿರಂಗಿದೆ”
“ಇನ್ನೇನು ಮಾಡ್ಲಿ ಬ್ರದರ್, ಈಚೆಗೆ ಯಾಕೋ ತುಂಬಾ ಅಳು ಬರ್ತಾಯಿದೆ”
“ಅದು ಹೇರ್ಡಿಟಿ ಸಾರ್ ತಡಕೋಬೇಕು”
“ಹೇರ್ಡಿಟಿನಾ”
“ಹೌದು ಸಾರ್ ದೇವೇಗೌಡ್ರು ತುಂಬ ಅಳತಿದ್ರು”
“ತಂದೆಯವರ ಅಳು ಯಾಕೆ ಅಂದ್ರೇ, ಅದಕ್ಕೆ ಒಂದು ಉನ್ನತ ಮಟ್ಟದ ಕಾರಣ ಇರತಿತ್ತು”
“ನಿಮಗೆ ಕಾರಣ ಇಲ್ದೇ ಅಳು ಬರುತ್ತ”
“ಹೌದು ಬ್ರದರ್”
“ಸಾರ್, ಯಾವುದ್ಕೂ ಮನೋ ವೈದ್ಯರ ಕೇಳಿಬಿಡಿ, ಯಾಕಂದ್ರೆ ಮುಖ್ಯಮಂತ್ರಿ ಸಾರ್ವಜನಿಕವಾಗಿ ಅಳುಬಾರ್ದು. ನೋಡಿ ಈಗಾಗ್ಲೆ ಮಂಡ್ಯದ ಕಡೆ ಕೆಲುವು ತಿಕ್ಕಲಗಳು, ತಾವು ಅಳು ಸುರು ಮಾಡಿಕೊಂಡಿರದಲ್ದೇ, ಕಾಂಗ್ರೆಸ್‍ನವುರ ಬೈತಾ ಅವೆ. ಯಂಗೆ ಅಂದ್ರೆ, ಕಿವಿಕೊಟ್ಟು ಕೇಳಕ್ಕಾಗಲ್ಲ. ಇನ್ನೂ ಕೆಲುವು, ಆ ಸಿದ್ದರಾಮಯ್ಯನೇ ಕಾರಣ ಅಂತ, ಜಾತಿ ಹೆಸರಿಡದೇ ಬೈತಾ ಕುಂತವೇ. ಆದ್ರಿಂದ ನಿಮಗೆ ಅಳು ಬಂದಾಗ ಒಂದು ರೂಮಿಗೆ ಹೋಗಿ ಅತ್ತು ಬುಡಿ, ಸಾರ್ವಜನಿಕವಾಗಿ ಅಳುಬೇಡಿ”
“ನೋಡಿ ಬ್ರದರ್, ಸಡನ್ನಂತ ಅಳು ಬಂದಾಗ ರೂಮು ಹುಡುಕಿಕೊಂಡು ಓಡಕ್ಕಾಗಲ್ಲ, ಒಂದ ಮಾಡ್ತಕ್ಕಂತ ಅಥವಾ ಕಕ್ಕಸ್ ಮಾಡೋ ಸಂದರ್ಭ ಸೃಷ್ಟಿಯಾದಾಗ ಆ ತರದಲ್ಲಿ ಒಂದು ತೀರ್ಮಾನ ತಗೊಳೋ ಬಗ್ಗೆ ಯೋಚಿಸಬವುದು. ಸಡನ್ನಂತ ಅಳು ಬಂದ್ರೆ ಅಳಬೇಕಾಗುತ್ತೆ”
“ಅಳು ಬಂದಾಗ ನಿಮ್ಮ ವೈರಿಗಳ ನೆನೆಸಿಕೊಳ್ಳಿ ನಿಂತೋಯ್ತದೆ”
“ಈಗ್ಯಾರು ವೈರಿಗಳಿಲ್ಲ ಬ್ರದರ್”
“ನಿಜ ಸಾರ್, ವೈರಿಗಳನ್ನೆಲ್ಲಾ ಕರದು ಒಂದೇ ಟೇಬಲಿನಲ್ಲಿ ಊಟ ಹಾಕಿರೋದ್ರಿಂದ ಅವುರೂ ಇಲ್ಲ. ನನಗನ್ನಿಸುತ್ತೆ ಸಾರ್ ನಿಮ್ಮ ಅಳುವಿಗೆ ಖಾಸಗಿ ಕಾರಣ ಇರಬುವುದು”
“ಖಾಸಗಿ ಕಾರಣ ಯಾವುದೂ ನಮ್ಮ ಬಾವುನೆಗೆ ಬರ್ತಾಯಿಲ್ಲ”
“ಅದು ನಿಮಗೆ ಗೊತ್ತಾಗಲ್ಲ ಸಾರ್, ಸಿದ್ದರಾಮಯ್ಯ ಒಂದು ಸತಿ ಅತೃ. ಯಾಕಂದ್ರೆ ಮಗ ತೀರೋಗಿದ್ದ. ಎಡೂರಪ್ಪ ಒಂದು ಸತಿ ಬಿಕ್ಕಡಿಸಿಕಂಡು ಅತೃ ಯಾಕೇಳಿ?”
“ನೀವೆ ಹೇಳಿ”
“ಶೋಭಕ್ಕನ್ನ ಸಂಪುಟದಿಂದ ತೆಗೀರಿ ಅಂತ ರೆಡ್ಡಿಗಳು ಗುಡ್ಡ ಹಗಿಯದ್ನೆ ನಿಲ್ಲಿಸಿದ್ರು. ಆಗ ಎಡೂರಪ್ಪ ಯಮ್ಮೆ ಕಳಕಂಡ ಕೋಣನ ತರ ಅತ್ತಿದ್ರು. ಹಾಗೆ ನಿಮ್ಮದು ಯಾವುದೋ ಖಾಸಗಿ ಕಾರಣ ಇರಬವುದು ಹುಡುಕಿ”
“ಇಲ್ಲ ಬ್ರದರ್”
“ಒಂದು ಕೆಲಸ ಮಾಡಿ ಸಾರ್, ರಾಧಕ್ಕನ ಮನೆಗೋಗಿ ಇದ್ದು, ಶಮಿಕನ್ನ ಮುದ್ದಾಡಿ ಬಂದ್ರೆ ಅಳು ನಿಲ್ಲಬವುದು ನೋಡಿ”
“ಅದ್ಯಲ್ಲ ಈಗ ಸಾಧ್ಯಯಿಲ್ಲ”
“ಅದೇ ಅಳುವಿನ ಮೂಲ ಇರಬವುದು ಸಾರ್”
“ಇಲ್ಲ ಬ್ರದರ್, ನನ್ನ ಅಳುಗೆ ಒಂದೇ ಕಾರಣ ಇಲ್ಲ ಅಂತ ನನ್ನ ಮನಸು ಹೇಳ್ತಾಯಿದೆ”
“ಇರಬವುದು ಸಾರ್, ದಡ್ಡತನಗಳಿಂದ ಮಾಡಿಕೊಂಡ ಅನಾಹುತಗಳೂ ಕಾರಣ ಆಗಿರಬವುದು”
“ದಡ್ಡತನ ನಾನು ಯಾವತ್ತೂ ಮಾಡಿಲ್ಲ ಬ್ರದರ್, ಯಲ್ಲಾ ಸನ್ನಿವೇಶಗಳನ್ನ ತುಂಬಾ ಬುದ್ದಿವಂತಿಕೆಯಿಂದ್ಲೆ ಸರಿಪಡಿಸತಕ್ಕಂತ ಕಾರ್ಯವನ್ನೆ ಪ್ಳಾನ್ ಮಾಡಿದ್ದೀನಿ”
“ನೋಡಿ ಸಾರ್, ನಿಮ್ಮ ಇವತ್ತಿನ ಸ್ಥಿತಿ ಊಹೆ ಮಾಡಿದ್ರೋ ಇಲ್ಲವೋ. ಮುಖ್ಯಮಂತ್ರಿಯಾದ 25 ಗಂಟೇಲಿ ರೈತರ ಸಾಲ ಮನ್ನಾ ಅಂದ್ರಿ, ರೈತರಿಗೆ ನೀವು ನನ್ನ ಉಳಿಸಿದ್ರೆ ನಾನು ನಿಮ್ಮನ್ನ ಉಳುಸ್ತೀನಿ ಅಂದ್ರಿ, ಇನ್ನ ನಿಮ್ಮ ಪ್ರಣಾಳಿಕೇಲಿದ್ದ ಅಶ್ವಾಸನೆ ನೋಡಿದ್ರೆ ಯಂಥಾ ಸರಕಾರ ಬಂದ್ರೂ ಈಡೇರಸಕ್ಕೆ ಸಾಧ್ಯವೇಯಿಲ್ಲ, ಅಂಗಿದ್ದೋ. ನಿಮಗೇನಾರ ತಲೆ ಇದ್ರೆ ನನ್ನ ಅಧಿಕಾರದ ಅವಧೀಲಿ ರೈತರ ಸಾಲ ಪೂರ್ಣ ಮನ್ನಾ ಮಾಡ್ತೀನಿ ಅನ್ನಬವುದಿತ್ತು. ಆಗ 5 ವರ್ಷ ಅವಕಾಶ ಸಿಗುತ್ತಿತ್ತು. ಈಗ ನೋಡಿ ಯಾರೋ ಕೆಲವೇ ಕೆಲವು ರೈತರ ಸಾಲ ಮನ್ನಾ ಕಾರಣಕ್ಕೆ ಇಡೀ ಕರ್ನಾಟಕದ ಜನ ತೆರಿಗೆ ತೆರಬೇಕಾಗ್ಯದೆ. ನಾನು ಅಧ್ಯಯನ ಮಾಡಿದ ಕೆಲವು ಜನ ರೈತರು, ಯಾಕೆ ಲಕ್ಷಲಕ್ಷ ಸಾಲ ಮಾಡ್ಯವುರೆ ಗೊತ್ತಾ”
“ಗೊತ್ತಿಲ್ಲ ಹೇಳಿ ಬ್ರದರ್”
“ವರದಕ್ಷಿಣೆ, ಕಲ್ಯಾಣ ಮಂಟಪ, ಬೀಗರೂಟ, ಇಂತ ಅಂದಾದುಂದಿ ಜನ ಲಕ್ಷಲಕ್ಷ ಸಾಲ ಮಾಡಿದ್ರು. ಆದ್ರೆ ನಿಜವಾದ ರೈತರು ಸಣ್ಣ ಸಾಲ ಮಾಡಿದ್ರು. ಅದು ಗೊತ್ತಿದ್ದ ಸಿದ್ದರಾಮಯ್ಯ ಐವತ್ತು ಸಾವುರದವರೆಗೂ ಮನ್ನಾ ಮಾಡಿದ್ರು ಅದು ಸರಿಯಾಗಿತ್ತು”
“ಬ್ರದರ್ ನಿಮ್ಮ ಮಾತಿನ ಭಾವುನೆಗಳಿಂದ ನೀವು ರೈತರ ವಿರೋಧಿಗಳು ಅಂಬತಕ್ಕಂತ ತೀರ್ಮಾನಕ್ಕೆ ಬರಬೇಕಾಯ್ತದೆ. ರೈತರು ಸಾಲ ಮಾಡಿ ಮದುವೆ ಮಾಡಿದಾರೆ ಅನ್ನತಕ್ಕಂತ ಮಾತನ್ನ ನಾನು ಒಪ್ಪಲ್ಲ”
“ಆಯ್ತು ಸಾರ್, ತೀರಸಕಾಗದೇಯಿದ್ರು ಲಕ್ಷಾಂತೃಪಾಯಿ ಸಾಲ ಯಾಕ್ ಮಾಡ್ತಾರೆ ಅನ್ನದನ್ನಾರೆ ಪತ್ತೆಹಚ್ಚಿ, ಒಂದುವೇಳೆ ಮದುವೆ ಕಾರಣಕ್ಕೆ ಸಾಲ ಮಾಡದಾದ್ರೆ, ಕುವೆಂಪುರವರ ಮಂತ್ರಮಾಂಗಲ್ಯ ಮದುವೆ ಜಾರಿಗೆ ತನ್ನಿ. ಇಲ್ಲ ಅಂದ್ರೆ ನೀವು ರಾಧಿಕನ್ನ ಮದುವೆ ಆದ್ರಲ್ಲ ಆತರ ಆಗದಕ್ಕೆ ಪ್ರೋತ್ಸಾಹ ಕೊಡಿ. ರೈತರು ಉಳಕತ್ತರೆ. ಇಲ್ಲ ಅಂದ್ರೆ ಅವರು ಸಾಲ ಮಾಡದು, ನೀವು ತೀರಸದು, ಅನ್ನದಾದ್ರೆ ಕರ್ನಾಟಕದ ಸಾಮಾನ್ಯ ಜನಗಳ ಪಾಡೇನು ಸಾರ್”
“ನೀವು ಹೇಳತಕ್ಕಂತ ವಿಷಯದಲ್ಲಿ ಯೋಚನೆ ಮಾಡ್ತಕ್ಕಂತ ಭಾವುನೆಗಳೇನಿವೆ, ಅವುಗಳನ್ನ ಚಿಂತನೆ ಮಾಡ್ತೀನಿ. ಆದ್ರೆ ರೈತರ ಸಾಲದ ವಿಷಯದಲ್ಲಿ ನಾನು ತಗಂಡ ತೀರ್ಮಾನ ಸರಿ ಬ್ರದರ್”
“ನೀವು ಅಧಿಕಾರಕ್ಕೆ ತಂದ್ರೆ ನಾನು ಸಾಲಮನ್ನಾ ಮಾಡ್ತೀನಿ ಅಂದಿದ್ರಿ, ಆದ್ರೆ ಜನ 38 ಸೀಟು ಕೊಟ್ರು. ಆದ್ರಿಂದ ಪ್ರತಿಯೊಬ್ಬ ರೈತನ 38 ಸಾವಿರ ಸಾಲ ಮಾತ್ರ ಮನ್ನಾ ಅನ್ನಬೇಕಾಗಿತ್ತು”
“ಇದು ಮೊದಲೆ ಹೊಳಿಲಿಲ್ಲವಲ್ಲ ಬ್ರದರ್”
“ಥೂತ್ತೇರಿ”,

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...