Homeರಾಜಕೀಯಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

- Advertisement -
- Advertisement -

ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ ಘೋಷಿಸಬೇಕಲ್ಲ ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಲು ನಿರಾಕರಿಸಿದರಂತೆ! ’ಮೊದಲು ನಮ್ಮ ದೇಶದಲ್ಲಿನ ಭಯೋತ್ಪಾದಕ ಸಮಸ್ಯೆಯನ್ನು ಸಾಲ್ವ್ ಮಾಡಿಕೊಳ್ಳೋಣ’ ಅಂದರಂತೆ.

ಕುಮಾರಸ್ವಾಮಿ ವಿರುದ್ಧ ಟೈಮ್ಸ್ ನೌ ಅಪಪ್ರಚಾರ

ಇದನ್ನೇ ಇಟ್ಟುಕೊಂಡು ಮೊನ್ನೆ ಟೈಮ್ಸ್ ನೌ ಅರ್ಧ ಘಂಟೆ ಬ್ರೇಕಿಂಗ್ ಹೊಡೆಯಿತು. ಅದರಲ್ಲಿ ಅದು ಪದೇಪದೇ ’ಕಾಂಗ್ರೆಸ್‌ನ ಮೈತ್ರಿ ಪಕ್ಷದ ಕುಮಾರಸ್ವಾಮಿ’ ಎಂದು ಒತ್ತಿ ಒತ್ತಿ ಹೇಳುತ್ತಲೇ ಇತ್ತು! ಇಷ್ಟಕ್ಕೇ ಕಾಯುತ್ತಿದ್ದ ಭಕ್ತರು ಈ ಕ್ಲಿಪ್ ಇಟ್ಟುಕೊಂಡು ಜಾಲತಾಣಗಳಲ್ಲಿ ತಮ್ಮ ನಿತ್ಯದ ’ದಂಧೆ’ ಶುರು ಹಚ್ಚಿಕೊಂಡಿದ್ದಾರೆ.
ಸತ್ಯ: ಕುಮಾರಸ್ವಾಮಿ ಹಾಗೆಲ್ಲ ಹೇಳುವುದು ಸಾಧ್ಯವೇ ಇಲ್ಲ ಎಂಬುದು ಕನ್ನಡಿಗರಿಗೆ ಗೊತ್ತು. ಕುಮಾರಸ್ವಾಮಿ ಕನ್ನಡದಲ್ಲಿ ಹೇಳಿದ್ದನ್ನು ಆ ಚಾನೆಲ್‌ನ ವರದಿಗಾರ/ರ್ತಿ ತಪ್ಪಾಗಿ ಅನುವಾದ ಮಾಡಿದರಾ? ಪ್ರಶ್ನೆ ಅಷ್ಟು ಸರಳವಾಗಿಲ್ಲ. ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿಗಳಿಗೆ ಹೀಗೆಲ್ಲ ತಿರುಚಿ ಒದರುವುದೇ ಒಂದು ದಂಧೆ. ಅವೆಲ್ಲ ಬಿಜೆಪಿಯ ಪೇಯ್ಡ್ ಚಾನೆಲ್‌ಗಳು.

ಕುಮಾರಸ್ವಾಮಿ ಹೇಳಿದ್ದಿಷ್ಟೇ:
’ಪುಲ್ವಾಮಾದ ಮಾಸ್ಟರ್‌ಮೈಂಡ್‌ನನ್ನು ಹೊಡೆದು ಹಾಕಿದ್ದು ಒಳ್ಳೆಯದೇ, ಆದರೆ ಆ ಸೈನಿಕರ ಸಾವಿನ ನೋವು ಹಾಗೇ ಇದೆ. ಇಂಥದ್ದು ಸಂಭವಿಸದಂತೆ ನಾವೆಲ್ಲ ಎಚ್ಚರ ವಹಿಸಬೇಕು. ಅದು ಸರ್ಕಾರದ ಜವಾಬ್ದಾರಿ…. ’

ಟೈಮ್ಸ್ ನೌ ವಿರುದ್ಧ ಕನ್ನಡಿಗರ ಆಕ್ರೋಶ

’ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಘೋಷಿಸಿವುದು ಒಂದು ಭಾಗವಷ್ಟೇ. ಅದಕ್ಕಿಂತ ಮುಖ್ಯವಾಗಿ ಈ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಾಶ ಮಾಡಬೇಕು. ಅದನ್ನು ಗನ್ ಬಳಸಿಯೋ ಅಥವಾ ಅವರನ್ನು ವಿಶ್ವಾಸಕ್ಕೆ ತಂದುಕೊಂಡೋ ಮಾಡಬೇಕು. ಅದು ಕೇಂದ್ರದ ಜವಾಬ್ದಾರಿ…’ ಎಲ್ಲೂ ಕುಮಾರಸ್ವಾಮಿ ಪಾಕ್ ಪರ ಮಾತನಾಡಿಯೇ ಇಲ್ಲ.

ಇದೆಲ್ಲವನ್ನೂ ಕುಮಾರಸ್ವಾಮಿ ಕನ್ನಡದಲ್ಲೇ ಹೇಳಿದ್ದಾರೆ. ಆದರೆ ’ಅನುವಾದ’ದ ದ ಸಮಸ್ಯೆಯಿಂದ ಟೈಮ್ಸ್ ನೌ ತಪ್ಪು ಮಾಡಿತೇ? ಇಲ್ಲ, ಖಂಡಿತ ಇಲ್ಲ. ಅದು ಬಿಜೆಪಿ ಪರ ಅಲೆ ಸೃಷ್ಟಿಸಲು ಎಂತಹ ಹೀನ ಕೆಲಸಕ್ಕೂ ರೆಡಿ. ಅದು ಬೇಕೆಂತಲೇ ಇದನ್ನು ಮಾಡಿದೆ-ಅದರ ಪೇಮೇಂಟ್ ಹೆಚ್ಚಿಸಿಕೊಳ್ಳಲು! ಹಲವಾರು ಕನ್ನಡಿಗರು, ’ನಿಮಗೆ ಅನುವಾದವೇ ಗೊತ್ತಿಲ್ಲವಾ?’ ಎಂದು ಉಗಿದ ಮೇಲಷ್ಟೇ ಟೈಮ್ಸ್ ನೌ ಎಲ್ಲ ಮುಚ್ಚಿಕೊಂಡು ಆ ಸುದ್ದಿಯನ್ನು ಡ್ರಾಪ್ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...