Homeರಾಜಕೀಯಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

- Advertisement -
- Advertisement -

ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ ಘೋಷಿಸಬೇಕಲ್ಲ ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಲು ನಿರಾಕರಿಸಿದರಂತೆ! ’ಮೊದಲು ನಮ್ಮ ದೇಶದಲ್ಲಿನ ಭಯೋತ್ಪಾದಕ ಸಮಸ್ಯೆಯನ್ನು ಸಾಲ್ವ್ ಮಾಡಿಕೊಳ್ಳೋಣ’ ಅಂದರಂತೆ.

ಕುಮಾರಸ್ವಾಮಿ ವಿರುದ್ಧ ಟೈಮ್ಸ್ ನೌ ಅಪಪ್ರಚಾರ

ಇದನ್ನೇ ಇಟ್ಟುಕೊಂಡು ಮೊನ್ನೆ ಟೈಮ್ಸ್ ನೌ ಅರ್ಧ ಘಂಟೆ ಬ್ರೇಕಿಂಗ್ ಹೊಡೆಯಿತು. ಅದರಲ್ಲಿ ಅದು ಪದೇಪದೇ ’ಕಾಂಗ್ರೆಸ್‌ನ ಮೈತ್ರಿ ಪಕ್ಷದ ಕುಮಾರಸ್ವಾಮಿ’ ಎಂದು ಒತ್ತಿ ಒತ್ತಿ ಹೇಳುತ್ತಲೇ ಇತ್ತು! ಇಷ್ಟಕ್ಕೇ ಕಾಯುತ್ತಿದ್ದ ಭಕ್ತರು ಈ ಕ್ಲಿಪ್ ಇಟ್ಟುಕೊಂಡು ಜಾಲತಾಣಗಳಲ್ಲಿ ತಮ್ಮ ನಿತ್ಯದ ’ದಂಧೆ’ ಶುರು ಹಚ್ಚಿಕೊಂಡಿದ್ದಾರೆ.
ಸತ್ಯ: ಕುಮಾರಸ್ವಾಮಿ ಹಾಗೆಲ್ಲ ಹೇಳುವುದು ಸಾಧ್ಯವೇ ಇಲ್ಲ ಎಂಬುದು ಕನ್ನಡಿಗರಿಗೆ ಗೊತ್ತು. ಕುಮಾರಸ್ವಾಮಿ ಕನ್ನಡದಲ್ಲಿ ಹೇಳಿದ್ದನ್ನು ಆ ಚಾನೆಲ್‌ನ ವರದಿಗಾರ/ರ್ತಿ ತಪ್ಪಾಗಿ ಅನುವಾದ ಮಾಡಿದರಾ? ಪ್ರಶ್ನೆ ಅಷ್ಟು ಸರಳವಾಗಿಲ್ಲ. ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿಗಳಿಗೆ ಹೀಗೆಲ್ಲ ತಿರುಚಿ ಒದರುವುದೇ ಒಂದು ದಂಧೆ. ಅವೆಲ್ಲ ಬಿಜೆಪಿಯ ಪೇಯ್ಡ್ ಚಾನೆಲ್‌ಗಳು.

ಕುಮಾರಸ್ವಾಮಿ ಹೇಳಿದ್ದಿಷ್ಟೇ:
’ಪುಲ್ವಾಮಾದ ಮಾಸ್ಟರ್‌ಮೈಂಡ್‌ನನ್ನು ಹೊಡೆದು ಹಾಕಿದ್ದು ಒಳ್ಳೆಯದೇ, ಆದರೆ ಆ ಸೈನಿಕರ ಸಾವಿನ ನೋವು ಹಾಗೇ ಇದೆ. ಇಂಥದ್ದು ಸಂಭವಿಸದಂತೆ ನಾವೆಲ್ಲ ಎಚ್ಚರ ವಹಿಸಬೇಕು. ಅದು ಸರ್ಕಾರದ ಜವಾಬ್ದಾರಿ…. ’

ಟೈಮ್ಸ್ ನೌ ವಿರುದ್ಧ ಕನ್ನಡಿಗರ ಆಕ್ರೋಶ

’ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಘೋಷಿಸಿವುದು ಒಂದು ಭಾಗವಷ್ಟೇ. ಅದಕ್ಕಿಂತ ಮುಖ್ಯವಾಗಿ ಈ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಾಶ ಮಾಡಬೇಕು. ಅದನ್ನು ಗನ್ ಬಳಸಿಯೋ ಅಥವಾ ಅವರನ್ನು ವಿಶ್ವಾಸಕ್ಕೆ ತಂದುಕೊಂಡೋ ಮಾಡಬೇಕು. ಅದು ಕೇಂದ್ರದ ಜವಾಬ್ದಾರಿ…’ ಎಲ್ಲೂ ಕುಮಾರಸ್ವಾಮಿ ಪಾಕ್ ಪರ ಮಾತನಾಡಿಯೇ ಇಲ್ಲ.

ಇದೆಲ್ಲವನ್ನೂ ಕುಮಾರಸ್ವಾಮಿ ಕನ್ನಡದಲ್ಲೇ ಹೇಳಿದ್ದಾರೆ. ಆದರೆ ’ಅನುವಾದ’ದ ದ ಸಮಸ್ಯೆಯಿಂದ ಟೈಮ್ಸ್ ನೌ ತಪ್ಪು ಮಾಡಿತೇ? ಇಲ್ಲ, ಖಂಡಿತ ಇಲ್ಲ. ಅದು ಬಿಜೆಪಿ ಪರ ಅಲೆ ಸೃಷ್ಟಿಸಲು ಎಂತಹ ಹೀನ ಕೆಲಸಕ್ಕೂ ರೆಡಿ. ಅದು ಬೇಕೆಂತಲೇ ಇದನ್ನು ಮಾಡಿದೆ-ಅದರ ಪೇಮೇಂಟ್ ಹೆಚ್ಚಿಸಿಕೊಳ್ಳಲು! ಹಲವಾರು ಕನ್ನಡಿಗರು, ’ನಿಮಗೆ ಅನುವಾದವೇ ಗೊತ್ತಿಲ್ಲವಾ?’ ಎಂದು ಉಗಿದ ಮೇಲಷ್ಟೇ ಟೈಮ್ಸ್ ನೌ ಎಲ್ಲ ಮುಚ್ಚಿಕೊಂಡು ಆ ಸುದ್ದಿಯನ್ನು ಡ್ರಾಪ್ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...