Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....