Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...