Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...