Homeಕರ್ನಾಟಕತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ'

ತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ’

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ.

- Advertisement -
- Advertisement -

| ಕುಮಾರ್  |

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ. ಬದಲಿಗೆ ಬೀದಿಕಾಳಗದ ರೂಪ ಪಡೆಯುವ ಸಂಭವ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಡೆದು ನಿಲ್ಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಯಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೇ ಉಲ್ಟಾ ಹೊಡೆದಿರುವುದು ಎಲ್ಲರಿಗೂ ತಿಳಿದಿದೆ. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ವತಃ ಮಾಜಿ ಪ್ರಧಾನಿ ದೇವೆಗೌಡರೇ ಅಭ್ಯರ್ಥಿಯಾಗಿ ಸೋತಿದ್ದಾರೆ. ಮೂರು ಜನ ಜೆಡಿಎಸ್ ಶಾಸಕರು ಒಬ್ಬ ಕಾಂಗ್ರೆಸ್ ಶಾಸಕ ಇದ್ದರು ಸಹ ದೇವೇಗೌಡರು ಪರಾಭವಗೊಂಡಿರುವುದು ಎರಡು ಪಕ್ಷಗಳಿಗೂ ಮುಖಭಂಗವಾಗಿದೆ. ಆದರೆ ಇದರಿಂದ ಎರಡು ಪಕ್ಷಗಳ ಕೆಲವರಿಗೆ ಒಳಗೊಳಗೆ ಖುಷಿಯಾಗಿರುವಂತೆ ಕಾಣಿಸುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‍ನವರು ಕಣಕ್ಕಿಳಿಯುವುದನ್ನು ತೀವ್ರವಾಗಿ ವಿರೋಧಿಸಿದ್ದ ಕೆ.ಎನ್.ರಾಜಣ್ಣ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಎರಡು ಪಕ್ಷಗಳಲ್ಲಿದೆ. ಇದೇ ಕಾರಣಕ್ಕೆ ರಾಜಣ್ಣನ ವಿರುದ್ಧ ಅಭಿಪ್ರಾಯ ರೂಪಿಸಲು ಹೊರಟ ಕೆಲವು ಕಾಂಗ್ರೆಸ್ ಮುಖಂಡರು ಈಗ ರಾಜಣ್ಣನ ತಂಟೆಗೆ ಹೋಗಿದ್ದೆ ತಪ್ಪಾಯಿತು ಎನ್ನುವಂತೆ ಕಸಿವಿಸಿ ಅನುಭವಿಸುತ್ತಿದ್ದಾರೆ.

ದೇವೆಗೌಡ

ಚುನಾವಣೆಯ ಫಲಿತಾಂಶ ಬಂದನಂತರ ಕೆ.ಎನ್.ರಾಜಣ್ಣ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ‘ತುಮಕೂರಿನಲ್ಲಿ ದೇವೇಗೌಡರು ಸೋಲಲು ನಿಕಿಲ್ ಕುಮಾರಸ್ವಾಮಿ ಕಾರಣ. ಆತ ಕುಂಚಿಟಿಗ ಹೆಣ್ಣುಮಗಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ನಂತರ ಮದುವೆಯಾಗದೆ ಇದ್ದರಿಂದ ಮಧುಗಿರಿಯಲ್ಲಿರುವ ಕುಂಚಿಟಿಗರು ಮತನೀಡಿಲ್ಲ ಮತ್ತು ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡರು ಕೂಡ ಒಕ್ಕಲಿಗರಾಗಿದ್ದು ಅವರನ್ನು ಕಡೆಗಣಿಸಿದ್ದುಕಾರಣ ಎಂದು ಹೇಳಿದ್ದಾರೆ. ಡಾ.ಜಿ.ಪರಮೇಶ್ವರ್ ಅವರನ್ನ ನಾನು ಉಪಮುಖ್ಯಮಂತ್ರಿ ಎಂದು ಪರಿಗಣನೆಯೇ ಮಾಡೋದಿಲ್ಲ, ಅವರು ಜೀರೋ ಟ್ರಾಫಿಕ್‍ಗೆ ಮಾತ್ರ ಸೀಮಿತ ಎಂದು ಹೇಳಿದ್ದರು.

ಇದರಿಂದ ಅಸಮಾಧಾನ ಹೆಚ್ಚಾಗಿ ಜೆಡಿಎಸ್ ನಾಯಕರು ನೇರವಾಗಿ ಕೆ.ಎನ್.ರಾಜಣ್ಣನವರನ್ನು ಟಾರ್ಗೆಟ್ ಮಾಡಿ ಟೀಕೆ ಮಾಡಲು ಶುರು ಮಾಡಿದರು. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತನ್ನ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ರಾಜಣ್ಣ ಬಿಜೆಪಿಗೆ ಬೆಂಬಲಿಸಿದ್ದರೆ ನೇರವಾಗಿ ಹೇಳಲಿ ಅತಿಯಾಗಿ ಮಾತಾನಾಡುವುದನ್ನ ನಿಲ್ಲಿಸಲಿ ಮತ್ತು ನೇರ ಯುದ್ಧಕ್ಕೆ ಬರಲಿ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯಿಂದ ಅನಾನೂಕೂಲವೇ ಹೆಚ್ಚು ಇದರಿಂದ ಹೊರಬರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎನ್.ಆರ್ ಕೇವಲ 500 ಮತಗಳ ಅಂತರದಿಂದ ಒಮ್ಮೆ ಮಧುಗಿರಿಯಿಂದ ಆರಿಸಿ ಬಂದ ಗೌರಿಶಂಕರ್ ಆಪರೇಷನ್ ಕಮಲದಲ್ಲಿ ಸೇಲಾಗಿದ್ದರು ಅವರ ಬಗ್ಗೆ ಮಾತನಾಡಲು ನನಗೆ ಹೇಸಿಗೆಯಾಗುತ್ತದೆ ಎಂದಿದ್ದಾರೆ.
ಡಾ.ಜಿ.ಪರಮೇಶ್ವರ್ ಹಠಾವೋ ಕಾಂಗ್ರೇಸ್ ಬಚಾವೋ

ಪರಮೇಶ್ವರ್

ತುಮಕೂರಿನ ವಾಲ್ಮೀಕಿ ನಗರದಲ್ಲಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಈ ಪೋಸ್ಟರ್‍ಗಳಲ್ಲಿ ಡಾ.ಜಿ.ಪರಮೇಶ್ವರ್ ಅವರ ಭಾವಚಿತ್ರಗಳನ್ನು ಹಾಕಿದ್ದರು ಮತ್ತು ಮಧ್ಯಾಹ್ನದ ನಂತರ ಇವನ್ನು ತೆರವುಗೊಳಿಸಿದ್ದಾರೆ. ಇದು ಕೂಡ ಕೆ.ಎನ್.ಆರ್ ಕೆಲಸವೇ ಎಂದು ಕಾಂಗ್ರೆಸ್‍ನ ಕೆಲವರ ಅನುಮಾನ.

ಈ ಬಗ್ಗೆ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷರಾದ ಕೆಂಚಮಾರಯ್ಯನವರು, ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ಪೋಸ್ಟರ್ ಅಂಟಿಸಿರುವುದನ್ನು ವಿರೋಧಿಸಿದ್ಧು, ಪರಮೇಶ್ವರರನ್ನ ಜೀರೋ ಟ್ರಾಪಿಕ್ ಎಂದು ಅವಹೇಳನ ಮಾಡುವುದು ಅಸ್ಪøಶ್ಯರ ಏಳಿಗೆಯನ್ನ ಸಹಿಸಿಕೊಳ್ಳದ ಕೆ.ಎನ್.ರಾಜಣ್ಣನ ಮನಸ್ಥಿತಿ ಎಂದು ಹೇಳಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಪಕ್ಷದಿಂದ ಹೊರಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ

ಕೆಂಚಮಾರಯ್ಯ

ಇತ್ತ ಕಾಂಗ್ರೆಸ್ ಬೆಂಬಲಿತ ದಲಿತ ಮುಖಂಡರಿಂದ ಕೆಂಚಮಾರಯ್ಯ ಹಠಾವೋ ಕಾಂಗ್ರೆಸ್ ಬಚಾವೋ ಎಂದು ಪ್ರೆಸ್ ಮೀಟ್ ಮಾಡಿಸುವ ಮೂಲಕ ಅವರನ್ನು ಹತ್ತಿಕ್ಕಲೂ ಕೆ.ಎನ್.ಆರ್ ಪಡೆ ಪ್ರಯತ್ನಿಸಿದೆ. ಇದರಿಂದ ಹಠವಾದಿ ರಾಜಣ್ಣ ತನ್ನ ಉಳಿವಿಗಾಗಿ ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳಲು ಸಿದ್ಧ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.

ಕೆ.ಎನ್.ರಾಜಣ್ಣರ ಮಗ ಆರ್.ರಾಜೇಂದ್ರ ಸಹಾ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ಸೋಲಿಗೆ ಅವರ ಇಬ್ಬರು ಸೊಸೆಯಂದಿರೆ ಕಾರಣ. ಇಬ್ಬರು ಮಕ್ಕಳಿಗೆ ಟಿಕೆಟ್ ಬೇಕೆಂದು ಹಠ ಹಿಡಿದರು. ಒಲ್ಲದ ಮನಸ್ಸಿನಲ್ಲಿ ದೇವೆಗೌಡರು ತುಮಕೂರಿನಲ್ಲಿ ಸ್ಫರ್ಧಿಸಿದ್ದಾರೆ. ಇದು ಅವರ ಸೋಲಿಗೆ ಕಾರಣ ಎಂದಿದ್ದಾರೆ.

ರಾಜಣ್ಣನಿಗೆ ಹೆದರಿ ನಾಪತ್ತೆಯಾದ ಕಾಂಗ್ರೆಸ್ ಕಾರ್ಯಕರ್ತರು

ಗೌರಿಶಂಕರ

ಬಿಜೆಪಿ ಗೆಲ್ಲಲು ಕೆ.ಎನ್.ರಾಜಣ್ಣನೇ ಕಾರಣ ಎಂದು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಛೇರಿಯಲ್ಲಿ ಧಿಕ್ಕಾರ ಕೂಗಿದ್ದಾರೆ ಮತ್ತು ಟೌನ್‍ಹಾಲ್ ಹತ್ತಿರ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ತಿಳಿದ ರಾಜಣ್ಣ, ತಾನೇ ಪಕ್ಷದ ಕಛೇರಿಗೆ ಹೋದರು. ಅಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಅಲ್ಲಿಂದ ಸೀದಾ ಪ್ರತಿಭಟನೆ ಸ್ಥಳಕ್ಕೆ ಹೋದರು. ಅಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಸ್ಥಳಬಿಟ್ಟು ಒಬ್ಬೊಬ್ಬರೇ ಓಟ ಕಿತ್ತಿದ್ದಾರೆ. ಅಲ್ಲೇ ಪತ್ರಕರ್ತರ ಜೊತೆ ಮಾತನಾಡಿದ ಕೆ.ಎನ್.ಆರ್ ‘ತಾಕತ್ ಇದ್ದರೆ ನನ್ನ ಎದುರುಗಡೆ ಧಿಕ್ಕಾರ ಕೂಗಲಿ, ದೊಡ್ಡವರಾಗಲಿ ಚಿಕ್ಕವರಾಗಲಿ ನಾಲಿಗೆ ಸೀಳುತ್ತೇನೆ ಎಂದಿದ್ದಾರೆ . ದೇವೆಗೌಡರ ಸೋಲಿಗೆ ಜೀರೋ ಟ್ರಾಫಿಕ್ ಮಂತ್ರಿಯೇ ಕಾರಣ. ಅವರು ಒಮ್ಮೆ ತುಮಕೂರಿಗೆ ಬಂದರೆ 500 ಓಟುಗಳು ಹೋಗುತ್ತವೆ’ ಎಂದು ಪರಮೇಶ್ವರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವನ್ನು ನಾನು ಮತ್ತೆ ಕಟ್ಟುತ್ತೇನೆ ಎಲ್ಲಾ ಅತೃಪ್ತರನ್ನು ಒಂದುಗೂಡಿಸುತ್ತೇನೆ. ಬಸವರಾಜು ಅವರನ್ನು ಮತ್ತೆ ಕಾಂಗ್ರೆಸ್ ತರುತ್ತೇನೆ ಎಂದು ಹೇಳಿದ್ದಾರೆ. ‘ನನ್ನನ್ನು ಆಪೆಕ್ಸ್ ಬ್ಯಾಂಕಿಂದ ಕೆಳಗಿಳಿಸಲು ನೋಡುತ್ತಿದ್ದಾರೆ. ಐದು ವರ್ಷ ನಾನೇ ಮುಂದುವರೆಯುವುದು ಖಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೇಂದ್ರ ಪ್ರೆಸ್ ಮೀಟ್

ಈ ನಡುವೆ ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ. ಇದು ಬರಿ ಅಧಿಕಾರದ ಆಸೆಯಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ರಾಮಕೃಷ್ಣ

ಈ ಮಧ್ಯೆ ಕಾಂಗ್ರೆಸ್‍ನ ತುಮಕೂರು ಜಿಲ್ಲಾಧ್ಯಾಕ್ಷ ರಾಮಕೃಷ್ಣ , ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕೆ.ಎನ್.ರಾಜಣ್ಣನ ವಿರುಧ್ಧ ದೂರು ನೀಡಿದ್ದಾರೆ. ಕೆ.ಎನ್.ಆರ್ ಮೈತ್ರಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದಾರೆ ಹಾಗೂ ಜಿಲ್ಲಾ ಕಛೇರಿಗೆ ಬಂದು ತನ್ನ ವಿರುಧ್ದ ಮಾತನಾಡದಂತೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದಾರೆ . ಜಿಲ್ಲೆಯ ಮತ್ತೊಬ್ಬ ಮುಖಂಡ ಮುರುಳಿಧರ್ ಹಾಲಪ್ಪ ‘ಪಕ್ಷದ ವಿರುದ್ಧ ಮಾತಾನಾಡುವ ಕೆಲಸ ಮಾಡಿದ ಎಲ್ಲರನ್ನೂ ಪಕ್ಷದಿಂದ ಉಚ್ವಾಟಿಸಬೇಕು’ ಎಂದು ಹೇಳಿದ್ದಾರೆ.

ಚಲುವರಾಯಸ್ವಾಮಿ

ತುಮಕೂರು ಜಿಲ್ಲೆ ಮೈತ್ರಿ ಪಕ್ಷ ಸೋತಿದ್ದೇ ಇಲ್ಲಿನ ಮುಖಂಡರ ಒಣ ಪ್ರತಿಷ್ಟೆ ಮತ್ತು ಇಂತಹ ಹತ್ತು ಹಲವು ಅಹಂಗಳಿಂದ ಎಂಬುದು ಸೋಲಿನ ನಂತರದಲ್ಲಾದರೂ ಅರಿವಾಗಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಬದಲಾಗಿ ವಾತಾವರಣ ಹದಗೆಡುತ್ತಿದೆ. ಸಹಜವಾಗಿ ಅದರ ಲಾಭ ಬಿಜೆಪಿಗೆ ಆಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...