Homeಕರ್ನಾಟಕತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ'

ತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ’

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ.

- Advertisement -
- Advertisement -

| ಕುಮಾರ್  |

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ. ಬದಲಿಗೆ ಬೀದಿಕಾಳಗದ ರೂಪ ಪಡೆಯುವ ಸಂಭವ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಡೆದು ನಿಲ್ಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಯಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೇ ಉಲ್ಟಾ ಹೊಡೆದಿರುವುದು ಎಲ್ಲರಿಗೂ ತಿಳಿದಿದೆ. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ವತಃ ಮಾಜಿ ಪ್ರಧಾನಿ ದೇವೆಗೌಡರೇ ಅಭ್ಯರ್ಥಿಯಾಗಿ ಸೋತಿದ್ದಾರೆ. ಮೂರು ಜನ ಜೆಡಿಎಸ್ ಶಾಸಕರು ಒಬ್ಬ ಕಾಂಗ್ರೆಸ್ ಶಾಸಕ ಇದ್ದರು ಸಹ ದೇವೇಗೌಡರು ಪರಾಭವಗೊಂಡಿರುವುದು ಎರಡು ಪಕ್ಷಗಳಿಗೂ ಮುಖಭಂಗವಾಗಿದೆ. ಆದರೆ ಇದರಿಂದ ಎರಡು ಪಕ್ಷಗಳ ಕೆಲವರಿಗೆ ಒಳಗೊಳಗೆ ಖುಷಿಯಾಗಿರುವಂತೆ ಕಾಣಿಸುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‍ನವರು ಕಣಕ್ಕಿಳಿಯುವುದನ್ನು ತೀವ್ರವಾಗಿ ವಿರೋಧಿಸಿದ್ದ ಕೆ.ಎನ್.ರಾಜಣ್ಣ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಎರಡು ಪಕ್ಷಗಳಲ್ಲಿದೆ. ಇದೇ ಕಾರಣಕ್ಕೆ ರಾಜಣ್ಣನ ವಿರುದ್ಧ ಅಭಿಪ್ರಾಯ ರೂಪಿಸಲು ಹೊರಟ ಕೆಲವು ಕಾಂಗ್ರೆಸ್ ಮುಖಂಡರು ಈಗ ರಾಜಣ್ಣನ ತಂಟೆಗೆ ಹೋಗಿದ್ದೆ ತಪ್ಪಾಯಿತು ಎನ್ನುವಂತೆ ಕಸಿವಿಸಿ ಅನುಭವಿಸುತ್ತಿದ್ದಾರೆ.

ದೇವೆಗೌಡ

ಚುನಾವಣೆಯ ಫಲಿತಾಂಶ ಬಂದನಂತರ ಕೆ.ಎನ್.ರಾಜಣ್ಣ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ‘ತುಮಕೂರಿನಲ್ಲಿ ದೇವೇಗೌಡರು ಸೋಲಲು ನಿಕಿಲ್ ಕುಮಾರಸ್ವಾಮಿ ಕಾರಣ. ಆತ ಕುಂಚಿಟಿಗ ಹೆಣ್ಣುಮಗಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ನಂತರ ಮದುವೆಯಾಗದೆ ಇದ್ದರಿಂದ ಮಧುಗಿರಿಯಲ್ಲಿರುವ ಕುಂಚಿಟಿಗರು ಮತನೀಡಿಲ್ಲ ಮತ್ತು ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡರು ಕೂಡ ಒಕ್ಕಲಿಗರಾಗಿದ್ದು ಅವರನ್ನು ಕಡೆಗಣಿಸಿದ್ದುಕಾರಣ ಎಂದು ಹೇಳಿದ್ದಾರೆ. ಡಾ.ಜಿ.ಪರಮೇಶ್ವರ್ ಅವರನ್ನ ನಾನು ಉಪಮುಖ್ಯಮಂತ್ರಿ ಎಂದು ಪರಿಗಣನೆಯೇ ಮಾಡೋದಿಲ್ಲ, ಅವರು ಜೀರೋ ಟ್ರಾಫಿಕ್‍ಗೆ ಮಾತ್ರ ಸೀಮಿತ ಎಂದು ಹೇಳಿದ್ದರು.

ಇದರಿಂದ ಅಸಮಾಧಾನ ಹೆಚ್ಚಾಗಿ ಜೆಡಿಎಸ್ ನಾಯಕರು ನೇರವಾಗಿ ಕೆ.ಎನ್.ರಾಜಣ್ಣನವರನ್ನು ಟಾರ್ಗೆಟ್ ಮಾಡಿ ಟೀಕೆ ಮಾಡಲು ಶುರು ಮಾಡಿದರು. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತನ್ನ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ರಾಜಣ್ಣ ಬಿಜೆಪಿಗೆ ಬೆಂಬಲಿಸಿದ್ದರೆ ನೇರವಾಗಿ ಹೇಳಲಿ ಅತಿಯಾಗಿ ಮಾತಾನಾಡುವುದನ್ನ ನಿಲ್ಲಿಸಲಿ ಮತ್ತು ನೇರ ಯುದ್ಧಕ್ಕೆ ಬರಲಿ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯಿಂದ ಅನಾನೂಕೂಲವೇ ಹೆಚ್ಚು ಇದರಿಂದ ಹೊರಬರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎನ್.ಆರ್ ಕೇವಲ 500 ಮತಗಳ ಅಂತರದಿಂದ ಒಮ್ಮೆ ಮಧುಗಿರಿಯಿಂದ ಆರಿಸಿ ಬಂದ ಗೌರಿಶಂಕರ್ ಆಪರೇಷನ್ ಕಮಲದಲ್ಲಿ ಸೇಲಾಗಿದ್ದರು ಅವರ ಬಗ್ಗೆ ಮಾತನಾಡಲು ನನಗೆ ಹೇಸಿಗೆಯಾಗುತ್ತದೆ ಎಂದಿದ್ದಾರೆ.
ಡಾ.ಜಿ.ಪರಮೇಶ್ವರ್ ಹಠಾವೋ ಕಾಂಗ್ರೇಸ್ ಬಚಾವೋ

ಪರಮೇಶ್ವರ್

ತುಮಕೂರಿನ ವಾಲ್ಮೀಕಿ ನಗರದಲ್ಲಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಈ ಪೋಸ್ಟರ್‍ಗಳಲ್ಲಿ ಡಾ.ಜಿ.ಪರಮೇಶ್ವರ್ ಅವರ ಭಾವಚಿತ್ರಗಳನ್ನು ಹಾಕಿದ್ದರು ಮತ್ತು ಮಧ್ಯಾಹ್ನದ ನಂತರ ಇವನ್ನು ತೆರವುಗೊಳಿಸಿದ್ದಾರೆ. ಇದು ಕೂಡ ಕೆ.ಎನ್.ಆರ್ ಕೆಲಸವೇ ಎಂದು ಕಾಂಗ್ರೆಸ್‍ನ ಕೆಲವರ ಅನುಮಾನ.

ಈ ಬಗ್ಗೆ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷರಾದ ಕೆಂಚಮಾರಯ್ಯನವರು, ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ಪೋಸ್ಟರ್ ಅಂಟಿಸಿರುವುದನ್ನು ವಿರೋಧಿಸಿದ್ಧು, ಪರಮೇಶ್ವರರನ್ನ ಜೀರೋ ಟ್ರಾಪಿಕ್ ಎಂದು ಅವಹೇಳನ ಮಾಡುವುದು ಅಸ್ಪøಶ್ಯರ ಏಳಿಗೆಯನ್ನ ಸಹಿಸಿಕೊಳ್ಳದ ಕೆ.ಎನ್.ರಾಜಣ್ಣನ ಮನಸ್ಥಿತಿ ಎಂದು ಹೇಳಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಪಕ್ಷದಿಂದ ಹೊರಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ

ಕೆಂಚಮಾರಯ್ಯ

ಇತ್ತ ಕಾಂಗ್ರೆಸ್ ಬೆಂಬಲಿತ ದಲಿತ ಮುಖಂಡರಿಂದ ಕೆಂಚಮಾರಯ್ಯ ಹಠಾವೋ ಕಾಂಗ್ರೆಸ್ ಬಚಾವೋ ಎಂದು ಪ್ರೆಸ್ ಮೀಟ್ ಮಾಡಿಸುವ ಮೂಲಕ ಅವರನ್ನು ಹತ್ತಿಕ್ಕಲೂ ಕೆ.ಎನ್.ಆರ್ ಪಡೆ ಪ್ರಯತ್ನಿಸಿದೆ. ಇದರಿಂದ ಹಠವಾದಿ ರಾಜಣ್ಣ ತನ್ನ ಉಳಿವಿಗಾಗಿ ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳಲು ಸಿದ್ಧ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.

ಕೆ.ಎನ್.ರಾಜಣ್ಣರ ಮಗ ಆರ್.ರಾಜೇಂದ್ರ ಸಹಾ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ಸೋಲಿಗೆ ಅವರ ಇಬ್ಬರು ಸೊಸೆಯಂದಿರೆ ಕಾರಣ. ಇಬ್ಬರು ಮಕ್ಕಳಿಗೆ ಟಿಕೆಟ್ ಬೇಕೆಂದು ಹಠ ಹಿಡಿದರು. ಒಲ್ಲದ ಮನಸ್ಸಿನಲ್ಲಿ ದೇವೆಗೌಡರು ತುಮಕೂರಿನಲ್ಲಿ ಸ್ಫರ್ಧಿಸಿದ್ದಾರೆ. ಇದು ಅವರ ಸೋಲಿಗೆ ಕಾರಣ ಎಂದಿದ್ದಾರೆ.

ರಾಜಣ್ಣನಿಗೆ ಹೆದರಿ ನಾಪತ್ತೆಯಾದ ಕಾಂಗ್ರೆಸ್ ಕಾರ್ಯಕರ್ತರು

ಗೌರಿಶಂಕರ

ಬಿಜೆಪಿ ಗೆಲ್ಲಲು ಕೆ.ಎನ್.ರಾಜಣ್ಣನೇ ಕಾರಣ ಎಂದು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಛೇರಿಯಲ್ಲಿ ಧಿಕ್ಕಾರ ಕೂಗಿದ್ದಾರೆ ಮತ್ತು ಟೌನ್‍ಹಾಲ್ ಹತ್ತಿರ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ತಿಳಿದ ರಾಜಣ್ಣ, ತಾನೇ ಪಕ್ಷದ ಕಛೇರಿಗೆ ಹೋದರು. ಅಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಅಲ್ಲಿಂದ ಸೀದಾ ಪ್ರತಿಭಟನೆ ಸ್ಥಳಕ್ಕೆ ಹೋದರು. ಅಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಸ್ಥಳಬಿಟ್ಟು ಒಬ್ಬೊಬ್ಬರೇ ಓಟ ಕಿತ್ತಿದ್ದಾರೆ. ಅಲ್ಲೇ ಪತ್ರಕರ್ತರ ಜೊತೆ ಮಾತನಾಡಿದ ಕೆ.ಎನ್.ಆರ್ ‘ತಾಕತ್ ಇದ್ದರೆ ನನ್ನ ಎದುರುಗಡೆ ಧಿಕ್ಕಾರ ಕೂಗಲಿ, ದೊಡ್ಡವರಾಗಲಿ ಚಿಕ್ಕವರಾಗಲಿ ನಾಲಿಗೆ ಸೀಳುತ್ತೇನೆ ಎಂದಿದ್ದಾರೆ . ದೇವೆಗೌಡರ ಸೋಲಿಗೆ ಜೀರೋ ಟ್ರಾಫಿಕ್ ಮಂತ್ರಿಯೇ ಕಾರಣ. ಅವರು ಒಮ್ಮೆ ತುಮಕೂರಿಗೆ ಬಂದರೆ 500 ಓಟುಗಳು ಹೋಗುತ್ತವೆ’ ಎಂದು ಪರಮೇಶ್ವರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವನ್ನು ನಾನು ಮತ್ತೆ ಕಟ್ಟುತ್ತೇನೆ ಎಲ್ಲಾ ಅತೃಪ್ತರನ್ನು ಒಂದುಗೂಡಿಸುತ್ತೇನೆ. ಬಸವರಾಜು ಅವರನ್ನು ಮತ್ತೆ ಕಾಂಗ್ರೆಸ್ ತರುತ್ತೇನೆ ಎಂದು ಹೇಳಿದ್ದಾರೆ. ‘ನನ್ನನ್ನು ಆಪೆಕ್ಸ್ ಬ್ಯಾಂಕಿಂದ ಕೆಳಗಿಳಿಸಲು ನೋಡುತ್ತಿದ್ದಾರೆ. ಐದು ವರ್ಷ ನಾನೇ ಮುಂದುವರೆಯುವುದು ಖಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೇಂದ್ರ ಪ್ರೆಸ್ ಮೀಟ್

ಈ ನಡುವೆ ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ. ಇದು ಬರಿ ಅಧಿಕಾರದ ಆಸೆಯಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ರಾಮಕೃಷ್ಣ

ಈ ಮಧ್ಯೆ ಕಾಂಗ್ರೆಸ್‍ನ ತುಮಕೂರು ಜಿಲ್ಲಾಧ್ಯಾಕ್ಷ ರಾಮಕೃಷ್ಣ , ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕೆ.ಎನ್.ರಾಜಣ್ಣನ ವಿರುಧ್ಧ ದೂರು ನೀಡಿದ್ದಾರೆ. ಕೆ.ಎನ್.ಆರ್ ಮೈತ್ರಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದಾರೆ ಹಾಗೂ ಜಿಲ್ಲಾ ಕಛೇರಿಗೆ ಬಂದು ತನ್ನ ವಿರುಧ್ದ ಮಾತನಾಡದಂತೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದಾರೆ . ಜಿಲ್ಲೆಯ ಮತ್ತೊಬ್ಬ ಮುಖಂಡ ಮುರುಳಿಧರ್ ಹಾಲಪ್ಪ ‘ಪಕ್ಷದ ವಿರುದ್ಧ ಮಾತಾನಾಡುವ ಕೆಲಸ ಮಾಡಿದ ಎಲ್ಲರನ್ನೂ ಪಕ್ಷದಿಂದ ಉಚ್ವಾಟಿಸಬೇಕು’ ಎಂದು ಹೇಳಿದ್ದಾರೆ.

ಚಲುವರಾಯಸ್ವಾಮಿ

ತುಮಕೂರು ಜಿಲ್ಲೆ ಮೈತ್ರಿ ಪಕ್ಷ ಸೋತಿದ್ದೇ ಇಲ್ಲಿನ ಮುಖಂಡರ ಒಣ ಪ್ರತಿಷ್ಟೆ ಮತ್ತು ಇಂತಹ ಹತ್ತು ಹಲವು ಅಹಂಗಳಿಂದ ಎಂಬುದು ಸೋಲಿನ ನಂತರದಲ್ಲಾದರೂ ಅರಿವಾಗಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಬದಲಾಗಿ ವಾತಾವರಣ ಹದಗೆಡುತ್ತಿದೆ. ಸಹಜವಾಗಿ ಅದರ ಲಾಭ ಬಿಜೆಪಿಗೆ ಆಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....