Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....