Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...