Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...