Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...