Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...