Homeಮುಖಪುಟಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

ಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

- Advertisement -
- Advertisement -

ಸಂತ ತುಕಾರಾಂ ಎಂದರೆ ನಮಗೆ ಡಾ ರಾಜ್ ಅಭಿನಯದ “ಜಯತು ಜಯ ವಿಠಲ” ಎಂದು ಹಾಡಿಕೊಂಡು, ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ, ಸದಾ ಸಾಧು ಸ್ವಭಾವದ ಆಕಳಂತೆ ಇದ್ದು, ಪಡಬಾರದ ಪಾಡನ್ನೆಲ್ಲಾ ಪಟ್ಟ ಭಕ್ತನ ಕಾಪಾಡದ ದೇವರು ಕೊನೆಗೆ ನನ್ನ ಹತ್ತಿರ ನೆಮ್ಮದಿಯಾಗಿರು ಎಂದು ಪುಷ್ಪಕವಿಮಾನದಲ್ಲಿ ಬಂದು ಕರೆದುಕೊಂಡು ಹೋಗುವ ಚಿತ್ರವು ಮನಸ್ಸಿನಲ್ಲಿ ಬಂದರೆ ಅದು ನಮ್ಮ ತಪ್ಪಲ್ಲ. ಪೌರಾಣಿಕದ ಬೂದಿಯಲ್ಲಿ ಇತಿಹಾಸದ ಕೆಂಡವನ್ನು ಮರೆಮಾಡುತ್ತಾ ಒಂದು ನಿರ್ದಿಷ್ಟ ಮನಸ್ಥಿತಿಯಿಂದ ಬರಹಗಾರರು ಸಾಮಾಜಿಕ ಸಾಮರಸ್ಯದಲ್ಲಿ, ಧಾರ್ಮಿಕ ಸಮಾನತೆಯಲ್ಲಿ, ಆಧ್ಯಾತ್ಮಿಕ ಔನ್ನತ್ಯದಲ್ಲಿ ಕ್ರಾಂತಿಕಾರಿ ಸಿಂಹಗಳಾಗಿದ್ದವರನ್ನೂ ಮುಂದೆ ಕುರಿಗಳಂತೆ ತೋರಿಬಿಡುತ್ತಾರೆ ಎಂದು ಸಾಳುಂಖೆ ಎಚ್ಚರಿಸುತ್ತಾರೆ.

ಕಳೆದ ಮೂರು ಶತಮಾನಗಳಿಂದ ತುಕಾರಾಮ ಮಹಾರಾಷ್ಟ್ರದ ಜನರ ಹೃದಯದಲ್ಲಿ ಸಂವೇದನೆಯಾದ. ಅವನ ಅಭಂಗಗಳು ಮರಾಠ ಸಂಸ್ಕೃತಿಯ ಭಾಗವಾಗುವಷ್ಟು ನಾಡು ಅವನನ್ನು ಪ್ರೀತಿಸಿತು. ಅದಕ್ಕೆ ಕಾರಣವನ್ನು ಅರ್ಥಮಾಡಿಕೊಳ್ಳಬೇಕಾದರೆ ಮನಸ್ಸಿನಲ್ಲಿರುವ ಹಳೆಯ ಸಂತ ತುಕಾರಾಮನ ಪ್ರತಿಮೆಯನ್ನು ದೂರ ಮಾಡಬೇಕಾಗುತ್ತದೆ ಎನ್ನುವರು ಸಾಳುಂಖೆ. ಏಕೆಂದರೆ ಅದು ಅವನ ಮೂಲ ವ್ಯಕ್ತಿತ್ವಕ್ಕೆ ಹೋಲುವುದಿಲ್ಲ. ದಿವಾಳಿಯಾಗಿ, ಅಸಹಾಯಕನಾಗಿ ದೇವರ ಭಕ್ತನಾಗಿ, ಸರಿಯಾಗಿ ಸಂಸಾರ ತೂಗಿಸಲಾಗದೇ, ಸದಾ ತಾಳ ಕುಟ್ಟುತ್ತಾ ಕುಳಿತುಕೊಂಡು, ವ್ಯವಹಾರ ಶೂನ್ಯ, ಮುಗ್ಧ ಭೋಳೆ ಸಂತನಂತೆ (ಅದೇ ಸಂತ ತುಕಾರಾಂ ಚಿತ್ರದಲ್ಲಿ ತೋರಿಸುವಂತೆ) ಇರಿಸಲಾಗಿದೆ. ಆದರೆ ಧರ್ಮದ ಹೆಸರಿನಲ್ಲಿ ಅನೀತಿಯ ವ್ಯಾಪಾರ ನಡೆಸುತ್ತಿದ್ದ ಧಾರ್ಮಿಕಸತ್ತೆಯ ವಿರುದ್ಧವಾಗಿ ಇವನು ಮಹಾನ್ ಯೋಧನಂತೆ ಹೋರಾಡಿದ್ದ. ಅತ್ಯಂತ ಪ್ರಬಲ ಮತ್ತು ಮಜಬೂತಾಗಿರುವ ಸಮಾಜ ವ್ಯವಸ್ಥೆಯ ಮೂಲಕ್ಕೆ ಸಿಡಿಮದ್ದು ಇರಿಸುವ ಕಾರ್ಯವನ್ನು ಅವನು ಬದುಕಿನ ಉದ್ದಕ್ಕೂ ಮಾಡುತ್ತಲೇ ಬಂದಿದ್ದ.

ತುಕಾರಾಮನ ಜೀವನದ ಕ್ರಾಂತಿಕಾರಕ ಅನೇಕ ಘಟನೆಗಳನ್ನು ನಿರ್ಲಕ್ಷಿಸಿ, ಅವನನ್ನು ಸಂತನಾಗಿ ತೋರುವ ಧಾವಂತದಲ್ಲಿ ಮರೆಮಾಚಲಾಗಿರುವ ಸಂಗತಿಗಳ ಮೇಲೆ ಸಾಳುಂಖೆ ಬೆಳಕು ಚೆಲ್ಲುತ್ತಾರೆ.

ತನ್ನ ಅಭಂಗಗಳಲ್ಲಿ ತುಕಾರಾಮ ಬುವಾ ಡಾಂಭಿಕ ವ್ಯವಸ್ಥೆಯ ಮೇಲೆ ನೇರಾನೇರ ಪ್ರಹಾರ ಮಾಡುತ್ತಾರೆ. ಧಾರ್ಮಿಕತೆಯು ಮಾಡುವ ಅನ್ಯಾಯಗಳನ್ನು ಖಂಡಿಸಿ ಬರೆಯುತ್ತಿದ್ದ ಅವನ ಅಭಂಗಗಳನ್ನು ಇಂದ್ರಾಣಿ ನದಿಯಲ್ಲಿ ಮುಳುಗಿಸಿಬಿಡುವ ಶಿಕ್ಷೆ ಕೊಡುವುದು ತಿಳಿದಿರುವುದೇ. ಆದರೆ ಹೊಡೆದು, ಬಡಿದು, ನಿಂದಿಸಿ ನಾನಾ ರೀತಿಯಲ್ಲಿ ಹಿಂಸೆಗಳನ್ನು ಕೊಟ್ಟರೂ, “ತುಂಡು ಮಾಡಿ ಕೊಚ್ಚಿ ಹಾಕಿದರೂ ಹೆದರಲಾರೆ” ಎನ್ನುವ ತುಕಾರಾಮ ಅಭಂಗಗಳನ್ನು ಬರೆಯುತ್ತಾನೆ.

ಧಾರ್ಮಿಕನಾಗಿಯೇ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ತುಕಾರಾಮ ಸತ್ತದ್ದೂ ನಿಗೂಢವೇ. ಇಂದ್ರಾಣಿ ನದಿಯ ತೀರದಲ್ಲಿ ಕೀರ್ತನೆ ಹಾಡುತ್ತಿದ್ದಾಗ ಅದೃಶ್ಯನಾದ ಎಂಬ ಐತಿಹ್ಯವನ್ನು ಬೇಧಿಸಿದರೆ ರಾಮೇಶ್ವರ ಭಟ್ಟ ತುಕಾರಾಮನ ಮೇಲೆ ಖಟ್ಲೆ ಹೂಡಿದವನು, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡವನು, ಬಹಿಷ್ಕಾರ ಹಾಕಿಸಿದವನು, ಗಡಿಪಾರಿನ ಆಜ್ಞೆ ಮಾಡಿಸಿದವನು, ಅಭಂಗಗಳನ್ನು ಇಂದ್ರಾಯಣಿ ನದಿಯಲ್ಲಿ ಮುಳುಗಿಸಿದವನು, ಅಂತವನು ಸಾರುವುದೇನೆಂದರೆ, ತುಕಾರಾಮನು ಸದೇಹಿಯಾಗಿ ವೈಕುಂಠಕ್ಕೆ ಹೋದನೆಂದು. ಅಂದರೆ ಹೆಣವೂ ಕೂಡ ಸಿಗದಂತೆ ಮುಗಿಸಿದರೇ?

ತುಕಾರಾಮನ ವೈಕುಂಠಯಾನ ಹೇಗೆ ಹತ್ಯೆಯಾಗಿದ್ದಿರಬಹುದೆಂದು ಸಾಳುಂಖೆ ಎಳೆ ಎಳೆಯಾಗಿ ಬಿಡಿಸುತ್ತಾ ಹೋಗುತ್ತಾರೆ.

ಒಟ್ಟಾರೆ ತುಕಾರಾಮನೆಂಬ ಕ್ರಾಂತಿಕಾರಿಯನ್ನು ಅವನ ಸಾಮಾಜಿಕ ಹೋರಾಟದ ಮತ್ತು ಆಧ್ಯಾತ್ಮಿಕತೆಯ ಮೌಲ್ಯದ ಸಮೇತ ಪರಿಚಯಿಸಿ ಕೊಡುವ ಸಾಳುಂಖೆಯವರ ಕೃತಿಯನ್ನು ಚಂದ್ರಕಾಂತ ಪೋಕಳೆ ಕನ್ನಡಕ್ಕೆ ತಂದಿದ್ದಾರೆ. ಪುಟಪುಟದಲ್ಲೂ ನಮ್ಮ ಭಾರತದ ಧಾರ್ಮಿಕತೆಯಲ್ಲಿ ತನ್ನ ಕ್ರೌರ್ಯ ಮತ್ತು ಅಸಹನೆಯನ್ನು ಮೆರೆದ ಧಾರ್ಮಿಕಸತ್ತೆಯ ದೌರ್ಜನ್ಯದ ಅನಾವರಣವಾಗುತ್ತದೆ. ಜೊತೆಗೆ ತುಕಾರಾಮನ ಹೋರಾಟದ ಘನತೆ ಮತ್ತು ತಾತ್ವಿಕತೆಯು ಪುಟಕ್ಕಿಟ್ಟಂತೆ ಹೊಳೆಯುತ್ತದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಇದನ್ನು ಪ್ರಕಟಿಸಿ ಸಂತ ಯೋಧನ ಅರಿಯುವಲ್ಲಿ ಉಪಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂತ ತುಕಾರಾಮನ ನಿಜ ಚರಿತ್ರೆಯನ್ನು ತಿಳಿಸಿರುವ ಡಾ.ಸಾಳುಂಕೆ ಮತ್ತು ಚಂದ್ರಕಾಂತ ಪೋಕಳೆಯವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...