Homeಮುಖಪುಟಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

ಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

- Advertisement -
- Advertisement -

ಸಂತ ತುಕಾರಾಂ ಎಂದರೆ ನಮಗೆ ಡಾ ರಾಜ್ ಅಭಿನಯದ “ಜಯತು ಜಯ ವಿಠಲ” ಎಂದು ಹಾಡಿಕೊಂಡು, ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ, ಸದಾ ಸಾಧು ಸ್ವಭಾವದ ಆಕಳಂತೆ ಇದ್ದು, ಪಡಬಾರದ ಪಾಡನ್ನೆಲ್ಲಾ ಪಟ್ಟ ಭಕ್ತನ ಕಾಪಾಡದ ದೇವರು ಕೊನೆಗೆ ನನ್ನ ಹತ್ತಿರ ನೆಮ್ಮದಿಯಾಗಿರು ಎಂದು ಪುಷ್ಪಕವಿಮಾನದಲ್ಲಿ ಬಂದು ಕರೆದುಕೊಂಡು ಹೋಗುವ ಚಿತ್ರವು ಮನಸ್ಸಿನಲ್ಲಿ ಬಂದರೆ ಅದು ನಮ್ಮ ತಪ್ಪಲ್ಲ. ಪೌರಾಣಿಕದ ಬೂದಿಯಲ್ಲಿ ಇತಿಹಾಸದ ಕೆಂಡವನ್ನು ಮರೆಮಾಡುತ್ತಾ ಒಂದು ನಿರ್ದಿಷ್ಟ ಮನಸ್ಥಿತಿಯಿಂದ ಬರಹಗಾರರು ಸಾಮಾಜಿಕ ಸಾಮರಸ್ಯದಲ್ಲಿ, ಧಾರ್ಮಿಕ ಸಮಾನತೆಯಲ್ಲಿ, ಆಧ್ಯಾತ್ಮಿಕ ಔನ್ನತ್ಯದಲ್ಲಿ ಕ್ರಾಂತಿಕಾರಿ ಸಿಂಹಗಳಾಗಿದ್ದವರನ್ನೂ ಮುಂದೆ ಕುರಿಗಳಂತೆ ತೋರಿಬಿಡುತ್ತಾರೆ ಎಂದು ಸಾಳುಂಖೆ ಎಚ್ಚರಿಸುತ್ತಾರೆ.

ಕಳೆದ ಮೂರು ಶತಮಾನಗಳಿಂದ ತುಕಾರಾಮ ಮಹಾರಾಷ್ಟ್ರದ ಜನರ ಹೃದಯದಲ್ಲಿ ಸಂವೇದನೆಯಾದ. ಅವನ ಅಭಂಗಗಳು ಮರಾಠ ಸಂಸ್ಕೃತಿಯ ಭಾಗವಾಗುವಷ್ಟು ನಾಡು ಅವನನ್ನು ಪ್ರೀತಿಸಿತು. ಅದಕ್ಕೆ ಕಾರಣವನ್ನು ಅರ್ಥಮಾಡಿಕೊಳ್ಳಬೇಕಾದರೆ ಮನಸ್ಸಿನಲ್ಲಿರುವ ಹಳೆಯ ಸಂತ ತುಕಾರಾಮನ ಪ್ರತಿಮೆಯನ್ನು ದೂರ ಮಾಡಬೇಕಾಗುತ್ತದೆ ಎನ್ನುವರು ಸಾಳುಂಖೆ. ಏಕೆಂದರೆ ಅದು ಅವನ ಮೂಲ ವ್ಯಕ್ತಿತ್ವಕ್ಕೆ ಹೋಲುವುದಿಲ್ಲ. ದಿವಾಳಿಯಾಗಿ, ಅಸಹಾಯಕನಾಗಿ ದೇವರ ಭಕ್ತನಾಗಿ, ಸರಿಯಾಗಿ ಸಂಸಾರ ತೂಗಿಸಲಾಗದೇ, ಸದಾ ತಾಳ ಕುಟ್ಟುತ್ತಾ ಕುಳಿತುಕೊಂಡು, ವ್ಯವಹಾರ ಶೂನ್ಯ, ಮುಗ್ಧ ಭೋಳೆ ಸಂತನಂತೆ (ಅದೇ ಸಂತ ತುಕಾರಾಂ ಚಿತ್ರದಲ್ಲಿ ತೋರಿಸುವಂತೆ) ಇರಿಸಲಾಗಿದೆ. ಆದರೆ ಧರ್ಮದ ಹೆಸರಿನಲ್ಲಿ ಅನೀತಿಯ ವ್ಯಾಪಾರ ನಡೆಸುತ್ತಿದ್ದ ಧಾರ್ಮಿಕಸತ್ತೆಯ ವಿರುದ್ಧವಾಗಿ ಇವನು ಮಹಾನ್ ಯೋಧನಂತೆ ಹೋರಾಡಿದ್ದ. ಅತ್ಯಂತ ಪ್ರಬಲ ಮತ್ತು ಮಜಬೂತಾಗಿರುವ ಸಮಾಜ ವ್ಯವಸ್ಥೆಯ ಮೂಲಕ್ಕೆ ಸಿಡಿಮದ್ದು ಇರಿಸುವ ಕಾರ್ಯವನ್ನು ಅವನು ಬದುಕಿನ ಉದ್ದಕ್ಕೂ ಮಾಡುತ್ತಲೇ ಬಂದಿದ್ದ.

ತುಕಾರಾಮನ ಜೀವನದ ಕ್ರಾಂತಿಕಾರಕ ಅನೇಕ ಘಟನೆಗಳನ್ನು ನಿರ್ಲಕ್ಷಿಸಿ, ಅವನನ್ನು ಸಂತನಾಗಿ ತೋರುವ ಧಾವಂತದಲ್ಲಿ ಮರೆಮಾಚಲಾಗಿರುವ ಸಂಗತಿಗಳ ಮೇಲೆ ಸಾಳುಂಖೆ ಬೆಳಕು ಚೆಲ್ಲುತ್ತಾರೆ.

ತನ್ನ ಅಭಂಗಗಳಲ್ಲಿ ತುಕಾರಾಮ ಬುವಾ ಡಾಂಭಿಕ ವ್ಯವಸ್ಥೆಯ ಮೇಲೆ ನೇರಾನೇರ ಪ್ರಹಾರ ಮಾಡುತ್ತಾರೆ. ಧಾರ್ಮಿಕತೆಯು ಮಾಡುವ ಅನ್ಯಾಯಗಳನ್ನು ಖಂಡಿಸಿ ಬರೆಯುತ್ತಿದ್ದ ಅವನ ಅಭಂಗಗಳನ್ನು ಇಂದ್ರಾಣಿ ನದಿಯಲ್ಲಿ ಮುಳುಗಿಸಿಬಿಡುವ ಶಿಕ್ಷೆ ಕೊಡುವುದು ತಿಳಿದಿರುವುದೇ. ಆದರೆ ಹೊಡೆದು, ಬಡಿದು, ನಿಂದಿಸಿ ನಾನಾ ರೀತಿಯಲ್ಲಿ ಹಿಂಸೆಗಳನ್ನು ಕೊಟ್ಟರೂ, “ತುಂಡು ಮಾಡಿ ಕೊಚ್ಚಿ ಹಾಕಿದರೂ ಹೆದರಲಾರೆ” ಎನ್ನುವ ತುಕಾರಾಮ ಅಭಂಗಗಳನ್ನು ಬರೆಯುತ್ತಾನೆ.

ಧಾರ್ಮಿಕನಾಗಿಯೇ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ತುಕಾರಾಮ ಸತ್ತದ್ದೂ ನಿಗೂಢವೇ. ಇಂದ್ರಾಣಿ ನದಿಯ ತೀರದಲ್ಲಿ ಕೀರ್ತನೆ ಹಾಡುತ್ತಿದ್ದಾಗ ಅದೃಶ್ಯನಾದ ಎಂಬ ಐತಿಹ್ಯವನ್ನು ಬೇಧಿಸಿದರೆ ರಾಮೇಶ್ವರ ಭಟ್ಟ ತುಕಾರಾಮನ ಮೇಲೆ ಖಟ್ಲೆ ಹೂಡಿದವನು, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡವನು, ಬಹಿಷ್ಕಾರ ಹಾಕಿಸಿದವನು, ಗಡಿಪಾರಿನ ಆಜ್ಞೆ ಮಾಡಿಸಿದವನು, ಅಭಂಗಗಳನ್ನು ಇಂದ್ರಾಯಣಿ ನದಿಯಲ್ಲಿ ಮುಳುಗಿಸಿದವನು, ಅಂತವನು ಸಾರುವುದೇನೆಂದರೆ, ತುಕಾರಾಮನು ಸದೇಹಿಯಾಗಿ ವೈಕುಂಠಕ್ಕೆ ಹೋದನೆಂದು. ಅಂದರೆ ಹೆಣವೂ ಕೂಡ ಸಿಗದಂತೆ ಮುಗಿಸಿದರೇ?

ತುಕಾರಾಮನ ವೈಕುಂಠಯಾನ ಹೇಗೆ ಹತ್ಯೆಯಾಗಿದ್ದಿರಬಹುದೆಂದು ಸಾಳುಂಖೆ ಎಳೆ ಎಳೆಯಾಗಿ ಬಿಡಿಸುತ್ತಾ ಹೋಗುತ್ತಾರೆ.

ಒಟ್ಟಾರೆ ತುಕಾರಾಮನೆಂಬ ಕ್ರಾಂತಿಕಾರಿಯನ್ನು ಅವನ ಸಾಮಾಜಿಕ ಹೋರಾಟದ ಮತ್ತು ಆಧ್ಯಾತ್ಮಿಕತೆಯ ಮೌಲ್ಯದ ಸಮೇತ ಪರಿಚಯಿಸಿ ಕೊಡುವ ಸಾಳುಂಖೆಯವರ ಕೃತಿಯನ್ನು ಚಂದ್ರಕಾಂತ ಪೋಕಳೆ ಕನ್ನಡಕ್ಕೆ ತಂದಿದ್ದಾರೆ. ಪುಟಪುಟದಲ್ಲೂ ನಮ್ಮ ಭಾರತದ ಧಾರ್ಮಿಕತೆಯಲ್ಲಿ ತನ್ನ ಕ್ರೌರ್ಯ ಮತ್ತು ಅಸಹನೆಯನ್ನು ಮೆರೆದ ಧಾರ್ಮಿಕಸತ್ತೆಯ ದೌರ್ಜನ್ಯದ ಅನಾವರಣವಾಗುತ್ತದೆ. ಜೊತೆಗೆ ತುಕಾರಾಮನ ಹೋರಾಟದ ಘನತೆ ಮತ್ತು ತಾತ್ವಿಕತೆಯು ಪುಟಕ್ಕಿಟ್ಟಂತೆ ಹೊಳೆಯುತ್ತದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಇದನ್ನು ಪ್ರಕಟಿಸಿ ಸಂತ ಯೋಧನ ಅರಿಯುವಲ್ಲಿ ಉಪಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂತ ತುಕಾರಾಮನ ನಿಜ ಚರಿತ್ರೆಯನ್ನು ತಿಳಿಸಿರುವ ಡಾ.ಸಾಳುಂಕೆ ಮತ್ತು ಚಂದ್ರಕಾಂತ ಪೋಕಳೆಯವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...