Homeಅಂಕಣಗಳುಹೊಸ ಮೌಲ್ಯಕ್ಕಾಗಿ ಯುವಕರು ಹೊಸ ಪಕ್ಷ ಕಟ್ಟುವಂತಾಗಬೇಕು

ಹೊಸ ಮೌಲ್ಯಕ್ಕಾಗಿ ಯುವಕರು ಹೊಸ ಪಕ್ಷ ಕಟ್ಟುವಂತಾಗಬೇಕು

- Advertisement -
- Advertisement -

ಕವಿಯತ್ರಿ ಸರೋಜಿನಿ ನಾಯ್ಡು ಅವರು ಗಾಂಧೀಜಿಯನ್ನು ಪ್ರಥಮ ಬಾರಿಗೆ 1915ರಲ್ಲಿ ಇಂಗ್ಲೆಂಡಿನಲ್ಲಿ ಭೇಟಿಮಾಡುತ್ತಾರೆ. ಆಗ ಗಾಂಧೀಜಿ ದಕ್ಷಿಣ ಆಫ್ರಿಕಾದಿಂದ ಇಂಗ್ಲೆಂಡಿಗೆ ಕಾರ್ಯನಿಮಿತ್ತ ಬಂದಿರುತ್ತಾರೆ. ಗಾಂಧೀಜಿ ಕಂಬಳಿ ಮೇಲೆ ನೆಲದಲ್ಲಿ ಕೂತು ಕಡಲೆಕಾಯಿ ಬೀಜ, ಬಿಸ್ಕತ್, ಕಿವಿಚಿದ ಟಮೋಟಗೆ ಬೆರೆಸಿದ ಆಲೀವ್ ಆಯಿಲ್ ಸೇವಿಸುತ್ತಿದ್ದರು. ಇದನ್ನು ನೋಡಿದ ಸರೋಜಿನಿ ನಾಯ್ಡು ಗಾಂಧೀಜಿಯವರ ಕುರಿತು ‘ನೀವು ನನಗೆ ದಕ್ಷಿಣ ಆಫ್ರಿಕಾದ ಭಾರತೀಯರ ಪರವಾಗಿ ಹೋರಾಡುವ ಧೀರರಾಗಿ ಕಾಣುತ್ತಿಲ್ಲ. ನೀವು ಒಂದು ಮಿಕ್ಕಿಮೌಸ್‍ನಂತೆ ಕಾಣುತ್ತಿದ್ದೀರಿ’ ಎಂದರು. ‘ನೀವು ಸರೋಜಿನಿ ಅಲ್ಲವೇ? ಇನ್ನು ಯಾರಿಗೆ ಇಷ್ಟು ಧಿಮಾಕು, ಧೈರ್ಯ ಇದ್ದೀತು?’ ಎಂದರು ಗಾಂಧೀಜಿ ಆ ತುಂಟ ಮಾತು ಆಕೆಯ ಮನ ತುಂಬಿತು. ಅಂದು ಗಾಂಧೀಜಿಯ ಅನುಯಾಯಿಯಾದ ಸರೋಜಿನಿದೇವಿ ಮುಂದೆ 33 ವರ್ಷಗಳ ಕಾಲ ಗಾಂಧೀಜಿಯ ನಿಕಟವರ್ತಿಯಾಗಿದ್ದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ಬಾರಿ ಸೆರೆಮನೆವಾಸ ಅನುಭವಿಸಿದರು. ಬ್ರಿಟಿಷರೊಡನೆ ರಾಯಭಾರ ಕೆಲಸಕೂಡ ಮಾಡಿದರು.
ಗಾಂಧೀಜಿ ಅವರ ರಾಷ್ಟ್ರಭಕ್ತಿ ಎಂಥದ್ದು? ಅವರು ಹೀಗೆ ಬರೆಯುತ್ತಾರೆ. ‘ನನ್ನ ರಾಷ್ಟ್ರ ಭಕ್ತಿ ಉದಾರ ಚರಿತವಾದುದು. ನಾನು ವಸುಧೈವ ಕುಟುಂಬಕಂ ಎಂಬ ವಿಚಾರದಲ್ಲಿ ಶ್ರದ್ಧೆಯುಳ್ಳವನು. ನಾನು ಬದುಕಿರುವುದು ಭಾರತದ ಸ್ವಾತಂತ್ರ್ಯಕ್ಕಾಗಿ. ನಾನು ಸಾಯುವುದೂ ಆ ಗುರಿ ಸಾಧನೆಯಲ್ಲಿಯೇ.’
‘ನಾನು ಹಿಂದು, ಆದರೆ ನನ್ನ ನಿಲುವು ‘ಸರ್ವಧರ್ಮ ಸಮನ್ವಯ’, ಎಲ್ಲ ಧರ್ಮಗಳನ್ನು ಸಮಾನ ದೃಷ್ಟಿಯಿಂದ ಕಾಣುತ್ತೇನೆ. ನನ್ನ ಕನಸಿನ ಭಾರತದಲ್ಲಿ ನಾನಾ ಧರ್ಮದವರು ಸಂಪೂರ್ಣ ಸ್ನೇಹದಿಂದ ಕೂಡಿಕೊಂಡು ಬದುಕುತ್ತಾರೆ.’
‘ಸ್ವರಾಜ್ಯವೆಂದರೆ ಹಿಂದು ರಾಷ್ಟ್ರವಲ್ಲ. ನನ್ನ ಶಕ್ತಿಯನ್ನೆಲ್ಲ ಬಳಸಿ ಈ ಸಂಕುಚಿತ ರಾಷ್ಟ್ರ ಪರಿಕಲ್ಪನೆಯ ವಿರುದ್ಧವಾಗಿ ಹೋರಾಡುತ್ತೇನೆ. ಅಧಿಕಾರದ ಅಮಲಿನಲ್ಲಿ ಅಲ್ಪಸಂಖ್ಯಾತರನ್ನು ತುಳಿದು ಹಾಕಿ ಅಂಥಾ ರಾಷ್ಟ್ರ ಸ್ಥಾಪಿಸುವುದಾದರೆ ಅದು ಹಿಂದೂ ಧರ್ಮಕ್ಕೇ ದ್ರೋಹ ಬಗೆದಂತೆ. ಅದು ಹಾನಿಕಾರಕವೂ ಹೌದು’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆಗ ಹಿಂದು ದೇವಾಲಯಗಳಿಗೆ ಹರಿಜನರು ಬರುವಂತಿರಲಿಲ್ಲ. ಬಂದರೆ ಅವರನ್ನು ಸನಾತನಿಗಳು ಬರ್ಬರವಾಗಿ ನಡೆಸಿಕೊಳ್ಳುತ್ತಿದ್ದರು. ‘ಭಾರತೀಯರು ತಮ್ಮ ಇಂಥಾ ವರ್ತನೆಗಾಗಿ ಪಶ್ಚಾತಾಪ ಪಡಬೇಕು’ ಎಂದರು ಗಾಂಧೀಜಿ. ಹರಿಜನರಿಗೆ ದೇವಾಲಯಕ್ಕೆ ಪ್ರವೇಶದ ಹಕ್ಕನ್ನು ನೀಡಬೇಕೆಂದು ಹಿಂದುಗಳಲ್ಲಿ ವಿನಂತಿಸಿಕೊಂಡರು. ಸನಾತನಿಗಳು ಗಾಂಧಿಯವರ ನಿಲುವನ್ನು ಅಲ್ಲಗಳೆದರು. ಆಗ ಗಾಂಧೀಜಿ ಹಿಂದುಗಳು ಹರಿಜನರಿಗೆ ದೇವಾಲಯಗಳಿಗೆ ಪ್ರವೇಶಿಸಲು ಅವಕಾಶ ಮಾಡಿಕೊಡಬೇಕೆಂದು ಉಪವಾಸ ಸತ್ಯಾಗ್ರಹ ಆರಂಭಿಸಿದರು. ಹಳ್ಳಿಹಳ್ಳಿಗೂ ಗಾಂಧೀಜಿಯ ಉಪವಾಸದ ಸುದ್ದಿ ಕಾಳ್ಗಿಚ್ಚಿನಂತೆ ಮುಟ್ಟಿತು. ಗಾಂಧೀಜಿ ಉಪವಾಸ 21 ದಿನ ನಡೆಯಿತು. ಉಪವಾಸ ಮುಕ್ತಾಯಕ್ಕೆ ಮೊದಲೇ ಅನೇಕ ಕಡೆ ಹರಿಜನರ ದೇವಾಲಯ ಪ್ರವೇಶಕ್ಕೆ ಜನರು ಅವಕಾಶ ಮಾಡಿಕೊಟ್ಟರು.
ಭಾರತದ ರಾಜಕೀಯವನ್ನು ‘ನಾವು’ ಯುವಕರು ಆಮೂಲಾಗ್ರವಾಗಿ ಬದಲಾಯಿಸಬೇಕು. ರಾಜಕೀಯದಿಂದ ಜಾತಿ, ಧರ್ಮಗಳನ್ನು ದೂರ ಇಡಲು ಹೋರಾಟ ಮಾಡಬೇಕು. ಈ ಬದಲಾವಣೆ ಆಗುವುದೆಂದು ನಿರೀಕ್ಷಣೆ ಮಾಡುತ್ತಾ ಕಾದು ಕೂರುವುದು ಮೂರ್ಖತನ; ಅಥವಾ ಇನ್ಯಾರೋ ನಮ್ಮ ಪರವಾಗಿ ರಾಜಕೀಯದಲ್ಲಿ ಬದಲಾವಣೆ ತರುವುದೆಂದು ಕನಸು ಕಾಣುತ್ತಾ ಕೂಡುವುದೂ ಸರಿಯಲ್ಲ. ಯುವಕರು ತಾವೇ ಬದಲಾವಣೆಯ ವಾಹಕರು ಎಂದು ಘೋಷಣೆ ಮಾಡಬೇಕು.
ದೆಹಲಿಯಲ್ಲಿ ಆಮ್‍ಆದ್ಮಿಪಕ್ಷ ಒಮ್ಮೆಯಲ್ಲ ಎರಡು ಸಾರಿ ಚುನಾವಣೆ ಎದುರಿಸಿ ಸರ್ಕಾರ ರಚಿಸಿದೆ. ಸ್ವಲ್ಪವೇ ಹಣ ಖರ್ಚುಮಾಡಿ ಈ ಚುನಾವಣೆಗಳಲ್ಲಿ ಪಕ್ಷ ಜಯಗಳಿಸಿದೆ. ಹಾಗೆ ಗೆಲ್ಲಿಸಬಹುದು ಎಂಬುದನ್ನು ನಮಗೆ ತೋರಿಸಿಕೊಟ್ಟಿದೆ. ಜನರಿಗೆ ಈಗಿನ ರಾಜಕೀಯ ಪಕ್ಷಗಳ ವೈಫಲ್ಯಗಳನ್ನು ನೋಡಿ ಬೇಸರವಾಗಿದೆ. ಜನರಿಗೆ ಬದಲಾವಣೆ ಬೇಕಾಗಿದೆ. ಅವರ ಆಸೆಯನ್ನು ಪೂರೈಸುವ ಕೆಲಸವನ್ನು ಯುವಕರು ಮಾಡಬೇಕಾಗಿದೆ.
ಇಂದಿನ ರಾಜಕೀಯ ಹೀಗಿದೆ:- ಅಧಿಕಾರಬೇಕೆನ್ನುವವರು ಯಾವುದೋ ಒಂದು ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಾರೆ. ಚುನಾವಣೆಯಲ್ಲಿ ಸೋತರೆ ಮತ್ತೊಂದು ಪಕ್ಷಕ್ಕೆ ಹಾರುತ್ತಾರೆ. ಸೀಟು ಸಿಗದಿದ್ದರೆ ಬೇರೆ ಪಕ್ಷಕ್ಕೆ ಜಿಗಿಯುತ್ತಾರೆ. ಆ ಪಕ್ಷಗಳು ಇಂತಹವರ ಬರುವಿಕೆಗಾಗಿ ಕಾಯುತ್ತಿರುತ್ತವೆ. ಬಂದೊಡನೆ ಸೇರಿಸಿಕೊಳ್ಳುತ್ತವೆ. ನಾಯಿ ಹಸಿದಿತ್ತು ಹಿಟ್ಟು ಹಳಸಿತ್ತು ಎಂಬಂತಾಗಿದೆ ನಮ್ಮ ಇಂದಿನ ರಾಜಕೀಯ. ಈ ಪದ್ಧತಿ ಬದಲಾಗಬೇಕಲ್ಲವೇ? ಈ ವ್ಯವಸ್ಥೆಗೆ ಬೇಸತ್ತು ಜನ ಯಾವ ಒಂದು ಪಕ್ಷಕ್ಕೂ ಬಹುಮತ ನೀಡದೆ ಒಂದು ಅಭದ್ರ ಸ್ಥಿತಿಯನ್ನು ಸೃಷ್ಟಿಸುತ್ತಾರೆ. ಆಗ ರಾಜಕೀಯ ಪಕ್ಷಗಳು ಇತರ ಪಕ್ಷಗಳೊಡನೆ ಹೊಂದಾಣಿಕೆ ಮಾಡಿಕೊಳ್ಳತೊಡಗುತ್ತವೆ. ಆಗ ಎತ್ತು ಏರಿಗೆ ಎಮ್ಮೆ ನೀರಿಗೆ ಎಂಬ ಅನುಭವ ಆ ಪಕ್ಷಗಳದಾಗುತ್ತದೆ.
ಇಂದಿನ ಪರಿಸ್ಥಿತಿಯಲ್ಲಿ ಕಪ್ಪು ಹಣ ಇಲ್ಲದೆ ಚುನಾವಣೆ ಎದುರಿಸುವುದು ಕಷ್ಟವಾಗಿದೆ. ಅಷ್ಟೇ ಅಲ್ಲ, ಚುನಾವಣೆಗೆ ಭಾರೀ ಹಣ ಚೆಲ್ಲಲು ತಯಾರಾಗಬೇಕು. ಈ ಹಣ ರಾಜಕೀಯ ಪಕ್ಷಗಳಿಗೆ ಯಾರು ಯಾರು ಕೊಡುತ್ತಾರೆ? ರಾಜಕೀಯ ಪಕ್ಷಗಳು ಆಯ್ದ ಉದ್ಯಮಿಗಳಿಗೆ ಕೋಟಿ ಕೋಟಿರೂಗಳನ್ನು ದೋಚಿಕೊಳ್ಳಲು ಅವಕಾಶ ಕಲ್ಪಿಸಿಕೊಡುತ್ತವೆ. ಈ ಉದ್ಯಮಿಗಳು ಗಳಿಸಿದ ಪಾಪದ ಹಣದಲ್ಲಿ ಒಂದಿಷ್ಟು ನರಿಪಾಲನ್ನು ರಾಜಕೀಯ ಪಕ್ಷಗಳಿಗೆ ಎಸೆಯುತ್ತವೆ. ಹೀಗೆ ಕೊಡಲಾದ ಹಣ ಕೋಟ್ಯಾಂತರ ರೂಪಾಯಿಗಳು.
ಪಕ್ಷ ಕಟ್ಟಲು ಹತ್ತಾರು ವರ್ಷ ಬೇಕು, ಪಕ್ಷ ಬೆಳೆಸಲು ಕೋಟ್ಯಾಂತರ ರೂಗಳು ಬೇಕು ಎನ್ನುವುದು ಈಗ ಸುಳ್ಳಾಗಿದೆ. ಇಷ್ಟು ಬಲವಾಗಿ ಬೇರೂರಿರುವ ಪಕ್ಷಗಳನ್ನು ಮೂಲೋಚ್ಚಾಟನೆ ಮಾಡಲಾಗದು ಎನ್ನುವುದೂ ಒಂದು ಮಿಥ್ಯೆಯಾಗಿದೆ. ಜನ ಈಗಿರುವ ರಾಜಕೀಯ ಪಕ್ಷಗಳಿಂದ, ರಾಜಕಾರಣಿಗಳಿಂದ ಬೇಸತ್ತು ಹೋಗಿದ್ದಾರೆ. ಅವರಿಗೆ ಬದಲಾವಣೆ ಬೇಕಾಗಿದೆ.
ಇದಕ್ಕೆ ಪರ್ಯಾಯವಾಗಿ ಆದರ್ಶಗಳಿಂದ ಕೂಡಿದ ಒಂದು ಪಕ್ಷದ ಅಗತ್ಯತೆ ಇದೆ. ಈಗಿರುವ ರಾಜಕೀಯ ಪಕ್ಷಗಳಿಗೆ ಪ್ರತಿ ಸ್ಪರ್ಧಿಯಾಗಿ ನಿಲ್ಲುವುದಷ್ಟೇ ನಮ್ಮ ಆಶಯವಾಗಬಾರದು. ಒಂದು ಹೊಸ ಮೌಲ್ಯ ಸ್ಥಾಪನೆಗಾಗಿ ನಮ್ಮ ಹೋರಾಟ ಎಂಬ ಧ್ಯೇಯವಾಕ್ಯ ಇಟ್ಟುಕೊಂಡು ನಾವು ಹೊಸ ಪಕ್ಷ ಕಟ್ಟಬೇಕು.

-ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...