Homeಮುಖಪುಟಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

ಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

- Advertisement -
- Advertisement -

ಒಬ್ಬ ಗಂಡು ಮತ್ತು ಹೆಣ್ಣು ಜೊತೆಯಾಗಿ ಓಡಾಡ್ತಿದ್ದಾರೆ, ಹೆಚ್ಚು ಸಮಯ ಮಾತಾಡ್ತಿದ್ದಾರೆ ಅಂತ ನೋಡಿದ ತಕ್ಷಣ ಅವರಿಬ್ಬರು ಪ್ರೇಮಿಗಳೆಂದು ನಿರ್ಧಾರಕ್ಕೆ ಬಂದುಬಿಡುವುದು ನಮ್ಮ ಸಮಾಜದೊಳಗೆ ಹಳ್ಳಿಯಿಂದ ದಿಲ್ಲಿ(ನಗರ)ಯವರೆಗೆ ಸಾಮಾನ್ಯವೆಂಬಂತೆ ಬೆಳೆದುಹೋಗಿದೆ. ಹಳ್ಳಿಗಳಲ್ಲಿ ಇಂಥ ವಿಷಯಗಳು ಸಿಕ್ಕಿಬಿಟ್ಟರೆ ಆ ಇಬ್ಬರು ಮಾತನಾಡಿದ್ದೇ ಘನ ಘೋರ ಅಪರಾಧವೆಂಬಷ್ಟರ ಮಟ್ಟಕ್ಕೆ ಬಾಯಿಗೆ ತಾಂಬೂಲವಾಗಿ ಪರಿಣಮಿಸುತ್ತವೆ. ಇನ್ನು ಸಿಟಿಗಳಲ್ಲೋ ಹೈ-ಫೈ ಲೈಫ್‍ನ ಡೇಟಿಂಗ್, ಸಂಥಿಂಗ್-ಸಂಥಿಂಗ್‍ಗಳಾಗಿ ಕಾಡುತ್ತವೆ. ಇಂತಹ ವಿಚಾರಗಳಲ್ಲಿ ಸಿನಿಮಾ ಸ್ಟಾರ್‍ಗಳು ಸಿಕ್ಕಿಕೊಂಡರಂತೂ ಮಾಧ್ಯಮದವರಿಗೆ ಅಂದು ಬಾಡೂಟ ಸಿಕ್ಕಂತೆ. ಟಿಆರ್‍ಪಿ ಗೀಳಿನಲ್ಲಿ ಸರಣಿ ಕಾರ್ಯಕ್ರಮಗಳು ನಡೆದೋಗುತ್ತವೆ. ಇತ್ತೀಚೆಗೆ ಕಲ್ಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‍ಬಾಸ್ ಸ್ಪರ್ಧಿಗಳ ನಡುವಿನ ತಮಾಷೆಗಳೂ ಅವರ ನಡುವೆ ಇರುವವರಿಗೇ ಅನುಮಾನವಾಗಿ ಕಾಡಲಾರಂಭಿಸಿದ್ದವು. ಅಲ್ಲದೆ, ಬುಲ್‍ಬುಲ್ ಬೆಡಗಿ ಎಂದೇ ಖ್ಯಾತಿ ಪಡೆದಿರುವ ರಚಿತಾ ರಾಮ್ ಸೀತಾರಾಮ ಕಲ್ಯಾಣ ಸಿನಿಮಾ ಮಾಡಿದ ನಂತರ ಕುಮಾರಸ್ವಾಮಿ ಕುಟುಂಬದೊಂದಿಗೆ ಒಂದು ಹಂತದ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಾರೆ. ರಚಿತಾರಾಮ್ ಅಕ್ಕನ ಮದುವೆಯಲ್ಲಿ ನಿಖಿಲ್ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಶೃಂಗೇರಿಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಲ್ಲಿಸಿದ ಪೂಜೆಯಲ್ಲಿ ರಚಿತಾ ಭಾಗಿಯಾಗಿದ್ದರು ಅದಾದ ಕೆಲವೇ ದಿನಗಳ ನಂತರ ನಿಖಿಲ್ ಹುಟ್ಟಿದ ಹಬ್ಬಕ್ಕೆ ಶುಭಾಷಯವನ್ನು ಕೋರಿದ್ದರು. ಇಷ್ಟು ನಡೆದದ್ದೇ ತಡ ಮಾಂಸದಂಗಡಿ ಮುಂದೆ ಮೂಳೆ ತುಂಡಿಗಾಗಿ ಕಾದು ಕುಳಿತಿದ್ದ ನಾಯಿಯ ರೀತಿಯಲ್ಲಿ ರಚಿತಾ-ನಿಖಿಲ್ ಲವ್ವಿ-ಡವ್ವಿ, ನಿಖಿಲ್-ರಚಿತಾ ಮದುವೆ ಫಿಕ್ಸ್ ಎಂಬಂತ ಸುದ್ದಿಗಳನ್ನು ಬಿತ್ತರಿಸಲಾರಂಭಿಸಿದ್ದವು. ಪದೇ ಪದೇ ಇಂಥ ಗಾಸಿಪ್‍ಗಳನ್ನು ಕೇಳಿದ್ದ ರಚಿತಾ ಮತ್ತು ನಿಖಿಲ್ ನಾವಿಬ್ಬರು ಫ್ರೆಂಡ್ಸ್ ಅಷ್ಟೇ ಬೇರೇನೂ ಇಲ್ಲ ಎಂದು ಇಬ್ಬರೂ ಹೇಳಿದ್ದರು. ಅದಾದ ಕೆಲವೇ ದಿನಗಳಲ್ಲಿ ನಿಖಿಲ್‍ಗೆ ಬೇರೊಂದು ಹುಡುಗಿಯೊಂದಿಗೆ ಜೊತೆ ಮದುವೆ ಫಿಕ್ಸ್ ಆಗಿದೆ. ಸದ್ಯಕ್ಕೆ ಇಬ್ಬರ ಸ್ಟೋರಿಗೆ ಬ್ರೇಕ್ ಬಿದ್ದಿದ್ದು, ಮಾಧ್ಯಮಗಳು ಇಂಥದ್ದೇ ಸುದ್ದಿಯ ಹುಡುಕಾಟದಲ್ಲಿ ನಿರತವಾಗಿವೆ. ಅಂದಹಾಗೇ ಈ ರೀತಿಯ ಗಾಸಿಪ್ ಸುದ್ದಿಗಳು ಇದೇ ಮೊದಲೇನೂ ಅಲ್ಲ ಎಂಬುದು ಸಮಾಧಾನಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...