Homeಅಂಕಣಗಳುಗೆದ್ದ ನಂತರವೇ ಗಡ್ಡಮೀಸೆ ಬೋಳಿಸೋದಾಗಿ ಟೋಫನ್‍ತಲೆ ಮೇಲೆ ಆಣೆ

ಗೆದ್ದ ನಂತರವೇ ಗಡ್ಡಮೀಸೆ ಬೋಳಿಸೋದಾಗಿ ಟೋಫನ್‍ತಲೆ ಮೇಲೆ ಆಣೆ

- Advertisement -
- Advertisement -

ಆಘಾತವಾಣಿ |

ನಮಸ್ಕಾರ, ಆಘಾತವಾಣಿಗೆ ಸ್ವಾಗತ, ಇದೀಗ ಮುಖ್ಯಾಂಶಗಳು. ಓದುತ್ತಿರೋರು ಅಟ್ಯಾಕ್ ಹನ್ಮಂತು

ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಳೆದ ಒಂದು ತಿಂಗಳಿನಿಂದ ಉರಿಬಿಸಿಲಿನಲ್ಲಿ ಓತ್ಲಾ ಹೊಡೆಯುತ್ತಿದ್ದ ‘ವಿಜೇಂದ್ರ ಸನ್ನಾಫ್ ಯಡ್ರಪ್ಪ’ನವರಿಗೆ ಚಾಮರಾಜಪೇಟೆಯ ‘ಹೇ ಶವ ಕೃಪ’ದ ವಯೋವೃದ್ಧರು ಟಿಕೆಟ್ ನಿರಾಕರಿಸಿದ್ದಾರೆ. ತನ್ನ ‘ಅಧಿಕೃತ’ ಮಗನಿಗೇ ಟಿಕೆಟ್ ಢಮಾರ್ ಅನ್ನಿಸಿದ ಈ ಬೆಳವಣಿಗೆಯಿಂದ ನೊಂದ ಯಡೂರಪ್ಪನವರು ಸೋಪಕ್ಕನ ಹಳೇ ಸೀರೆಯೊಂದನ್ನು ಎತ್ತಿಕೊಂಡು ಫ್ಯಾನಿಗೆಸೆದು ನೇಣು ಹಾಕಿಕೊಳ್ಳಲು ಇನ್ನೂ ಯತ್ನಿಸಿಲ್ಲ ಎಂಬ ಸಾಕಿಂಗ್ ನ್ಯೂಸ್ ಹೊರಬಿದ್ದಿದೆ.
< < < <
ಸಂವಿಧಾನ ಬದಲಿಸೋಕೇ ನಾವು ಅಲ್ಲಾಡಿಸಿಕೊಂಡು ಇಲ್ಲೀತನಕ ಬಂದಿದ್ದೇವೆ ಎಂದು ಮಿಯಾಂವ್ ಎಂದಿದ್ದ ಬಿಜೆಪಿಯ ‘ಅನಾಥಕುಮಾರ್ ಹೆಗಡೆ’ಯವರು ಇದ್ದಕ್ಕಿದ್ದಂತೆ ಮಂಗಮಾಯವಾಗಿ ಹೋಗಿದ್ದಾರೆ. ಮೊನ್ನೆ ತಾನೇ ಬಿಜೆಪಿ ನಾಯಕನ ಲಾರಿಯೊಂದು ತಮ್ಮ ಬೆಂಗಾವಲು ವಾಹನಕ್ಕೆ ಗುದ್ದಿದ್ದರಿಂದ ಆಮಶಂಕೆ ಬೇಧಿಯಾಗಿ ಸುಸ್ತಾಗಿದ್ದ ಅನಾಥಕುಮಾರ್.. ಹೋದಲ್ಲಿ ಬಂದಲ್ಲಿ ಕಯ ಕಯ ಎಂದು ನರಳಾಡುತ್ತ ಜನರಿಂದ ಕಪುಕ್ ತುಪುಕ್ ಎಂದು ಉಗಿಸಿಕೊಂಡು ಚರ್ಮದ ಅಲರ್ಜಿಯಿಂದಲೂ ಬಳಲುತ್ತಿದ್ದರು. ಜನರ ಉಗುಳಿನಿಂದ ಇನ್ಫೆಕ್ಷನ್ ಆಗಿರಬಹುದಾದ ಸಾಧ್ಯತೆಯಿದ್ದುದರಿಂದ ಇದಕ್ಕೆ ಚಿಕಿತ್ಸೆ ಪಡೆಯಲು ಅನಾಥಕುಮಾರ್, ನೈಜೀರಿಯಾ ದೇಶಕ್ಕೆ ಅಳುತ್ತ ನಡೆದುಕೊಂಡೇ ಹೋಗಿದ್ದಾರೆ ಎಂಬ ಗುಮಾನಿಗಳು ವ್ಯಕ್ತವಾಗಿವೆ.
< < < <
ಈಗಾಗಲೇ ತಮ್ಮ ಎರಡೂ ಕಾಲನ್ನು ಸ್ಮಶಾನದ ಗುಂಡಿಗೆ ಇಳಿಬಿಟ್ಟಿರುವ ಬೊಚ್ಚುಬಾಯಿ ತಾತ ‘ಅಸಾರಾಂ ಬಾಪು’ ಅವರು ಅಪ್ರಾಪ್ತ ಬಾಲಕಿಯ ಮೇಲೆ ನಡೆಸಿದ ಅತ್ಯಾಚಾರದ ಕೇಸಿನಲ್ಲಿ ಕಳೆದ 5 ವರ್ಷಗಳಿಂದ ಜೈಲಿನಲ್ಲಿ ಶೌಚಾಲಯ ಸ್ವಚ್ಛ ಮಾಡುತ್ತ ಸಜೆಬಂಧಿಯಾಗಿದ್ದುದು ತಮಗೆಲ್ಲರಿಗೂ ತಿಳಿದಿದೆ. ಇದೀಗ ಈ ಅತ್ಯಾಚಾರದ ಕುರಿತಂತೆ ಕೋರ್ಟ್ ತೀರ್ಪು ಪ್ರಕಟವಾಗಿದ್ದು, ತಾತ ಅಸಾರಾಂ ಬಾಪು ತಪ್ಪಿತಸ್ಥ ಎಂದು ಸಾಬೀತಾಗಿದೆ. ಈ ಬಗ್ಗೆ ತೀರ್ಪು ಕೊಡುವಾಗ ರೊಚ್ಚಿಗೆದ್ದ ತೀರ್ಪುಗಾರರು.. ಈ ರೇಪಿಸ್ಟ್ ಮುದುಕನಿಗೆ ಸಾಯುವತನಕ ಪಕೋಡಮ್ಯಾನ್ ಫ್ರಾಡೇಂದ್ರನ ಎಲ್ಲ ಭಾಷಣಗಳನ್ನೂ ಕೇಳುವ ಮತ್ತು ನೋಡುವ ಭಯಾನಕ ಶಿಕ್ಷೆಯನ್ನು ಇನ್ನೂ ವಿಧಿಸಿಲ್ಲ ಎಂದು ವರದಿಯಾಗಿದೆ.
< < < <
ಈ ನಡುವೆ ಗುಜರಾತಿನ ತಮ್ಮ ಅಧಿಕೃತ ಹೆಂಡಿರು ಮಕ್ಕಳನ್ನು ಮರೆತು ಕರ್ನಾಟಕದ ತುಂಬೆಲ್ಲ ಅಂಡಲೆಯುತ್ತಿರುವ ಅಮಿತ್ ಬೋಡಪ್ಪನವರು ಬಿಜೆಪಿ ಪಾರ್ಟಿಗೂ ಮತ್ತು ಗಣಿರೆಡ್ಡಿಗೂ ಯಾವುದೇ ‘ವಿವಾಹೇತರ ಅಕ್ರಮ ಸಂಬಂಧ’ವಿಲ್ಲ ಎಂದು ಹೇಳಿದ್ದರು. ಆದರೂ ಸಹ ಬೋಡಪ್ಪನ ಮಾತಿಗೆ ಹಳೇಮೆಟ್ಟಿನಷ್ಟೂ ಬೆಲೆ ಕೊಡದ ಯಡೂರಪ್ಪನವರು ಗಣಿರೆಡ್ಡಿಯನ್ನು ಕಂಕುಳಲ್ಲಿ ಎತ್ತಿಕೊಂಡು ಕರ್ನಾಟಕದ ಮನೆಮನೆಯಲ್ಲಿ ಓಟಿನ ತಿರುಪೆ ಎತ್ತಲು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿ ತಿಳಿದ ಅಮಿತ್ ಬೋಡಪ್ಪನವರು ಸಿಟ್ಟಿಗೆದ್ದು ಯಡೂರಪ್ಪನ ಮಗನ ಎಲೆಕ್ಷನ್ ಟಿಕೇಟಿಗೆ ಬಗನಿಗೂಟ ಹೆಟ್ಟಿದ್ದಾರೆಂದು ಬಲ್ಲ ಮೂಲಗಳಿಂದ ಇನ್ನೂ ತಿಳಿದು ಬಂದಿಲ್ಲ.
< < < <
ಇದೀಗ ಬಂದ ಸುದ್ದಿ. ಈ ಚುನಾವಣೆಯಲ್ಲಿ ಗೆದ್ದ ನಂತರವೇ ಗಡ್ಡಮೀಸೆ ಬೋಳಿಸುತ್ತೇನೆಂದು ಗಣಿರೆಡ್ಡಿಯ ಟೋಫನ್‍ತಲೆ ಮೇಲೆ ಆಣೆ ಮಡಗಿರುವ ‘ಸ್ತ್ರೀರಾಮುಲು’ ಇದ್ದಕ್ಕಿದ್ದಂತೆ ದೈವಭಕ್ತರಾಗಿದ್ದಾರೆ. ತಮ್ಮ ಮನೆಗೇ ಪೂಜಾರಿಗಳನ್ನು ಕರೆಸಿಕೊಂಡು ಗೋಪೂಜೆಯನ್ನು ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಹಸುವಿಗೆ ಅರಿಶಿಣ ಕುಂಕುಮ ಹಚ್ಚಲು ಹೇಳಿದ ಪೂಜಾರಿಯ ಮಾತು ಮುಗಿಯುವ ಮೊದಲೇ ಅರಿಶಿಣ ಕುಂಕುಮದ ಪಾತ್ರೆಯೆತ್ತಿಕೊಂಡ ಸ್ತ್ರೀರಾಮುಲು ಗೋಡೆಗೆ ಎನಾಮೆಲ್ ಪೇಂಟ್ ಬಳಿದಂತೆ ಹಸುವಿಗೆ ಬಳಿದಿದ್ದಾರೆ. ಪೂಜೆಯ ನಂತರ ಈ ಅನಿರೀಕ್ಷಿತ ಕುಂಕುಮದ ದಾಳಿಯಿಂದ ಬೆಚ್ಚಿಬಿದ್ದ ಹಸುವು ಸ್ತ್ರೀರಾಮುಲು ಮನೆಯಿದ್ದ ವಿರುದ್ಧ ದಿಕ್ಕಿಗೆ ಓಡಿಹೋಗಿದ್ದು ಇಷ್ಟೊತ್ತಿಗೆ ಬಹುಶಃ ರಾಜಸ್ಥಾನ ತಲುಪಿರಬಹುದೆಂದು ತಜ್ಞರು ಅಂದಾಜಿಸಿದ್ದಾರೆ.
< < < <
ಬಿಜೆಪಿ ಪಕ್ಷದ ಅನಧಿಕೃತ ಕಾನ್ಸ್‍ಟೇಬಲ್‍ಗಳಂತೆ ಕೋಮುಗಲಭೆಗಳು, ಬಂದ್, ಪ್ರತಿಭಟನೆಗಳಲ್ಲಿ ಗುಂಪುಗುಂಪಾಗಿ ಧುಮುಕಿ ಜೈಲುಪಾಲಾಗುತ್ತಿದ್ದ ‘ಪಿಲ್ಲವ ಸಮುದಾಯದ’ ವೀರಸೈನಿಕರಿಗೆ ಈ ಬಾರಿ ಬಿಜೆಪಿ ಪಂಗನಾಮ ಎಳೆದಿದೆ. ‘ಪಿಲ್ಲವ ಸಮುದಾಯದ’ ಯಾವೊಬ್ಬ ಗಂಡಸೂ ಮನೆಯಲ್ಲಿ ಇರಲು ಬಿಡದೆ, ಎಲ್ಲರನ್ನೂ ಸಾಮೂಹಿಕವಾಗಿ ಜೈಲಿಗೆ ಸೇರಿಸಿ ಗಿನ್ನೆಸ್ ದಾಖಲೆ ಬರೆಯಲು ಯತ್ನಿಸುತ್ತಿರುವ ಬಿಜೆಪಿಯ ಕೃಶಕಾಯ ಎದೆಯ ಮೇಲೆ ‘ಪಿಲ್ಲವರು’ ಕಾಲೆತ್ತಿ ಮಡಗಿದ್ದಾರೆ. ಯೂಸ್ ಮಾಡಿ ಬಿಸಾಕಲು ನಮ್ಮನ್ನೇನು ಕಾಂಡೋಮ್ ಎಂದುಕೊಂಡಿದ್ದೀರ ಎಂದು ರೊಚ್ಚಿಗೆದ್ದಿರುವ ‘ಪಿಲ್ಲವರ’ ಆಕ್ರೋಶದ ಹಿಂದೆ ಸಮುದಾಯಕ್ಕೆ ಟಿಕೆಟ್ ನಿರಾಕರಿಸಿದ ಬಿಜೆಪಿಯ ದೌಲತ್ತಿದೆ ಎಂಬುದು ತಿಳಿದುಬಂದಿದೆ.
< < < <
ಅತ್ತಾಗೂ ಇಲ್ಲ, ಇತ್ತಾಗೂ ಇಲ್ಲದ ಉಪರಾಷ್ಟ್ರಪತಿ ‘ಪೆಂಕಯ್ಯ ನಾಯ್ಡು’ ಅವರು ‘ಭಾರತದಲ್ಲಿ ಮಹಿಳೆಯರ ಮೇಲೆ ಗೌರವ ಕಡಿಮೆಯಾಗಲು ಬ್ರಿಟಿಷರೇ ಕಾರಣ’ ಎಂದು ಹೇಳಿದ್ದಾರೆ. ಬ್ರಿಟಿಷರು ಬರುವುದಕ್ಕೂ ಮೊದಲು ಭಾರತ ದೇಶದಲ್ಲಿ ವಿಧವೆಯರನ್ನು ಗಂಡನ ಚಿತೆಯೊಳಗೆ ತಳ್ಳಿ ಸುಟ್ಟುಹಾಕುವ ಅದ್ಭುತ ಸತಿಸಹಗಮನ ಪದ್ಧತಿ, ದೇವರ ಹೆಸರಿನಲ್ಲಿ ದಲಿತ ಮಹಿಳೆಯರನ್ನು ವೇಶ್ಯಾವಾಟಿಕೆಗೆ ನೂಕುತ್ತಿದ್ದ ದೇವದಾಸಿ ಪದ್ಧತಿಯಂತಹ ಅತ್ಯದ್ಭುತ ಪದ್ಧತಿಗಳಿದ್ದವು. ಬ್ರಿಟಿಷರು ಬಂದು ಇವೆಲ್ಲ ಅತ್ಯುತ್ತಮ ಪದ್ಧತಿಗಳನ್ನು ನಿಲ್ಲಿಸಿ ಮಹಿಳೆಯರಿಗೆ ಅಗೌರವ ಉಂಟು ಮಾಡಿದರೆಂದು ಪೆಂಕಯ್ಯನವರು ಇನ್ನೂ ಹೇಳಿಲ್ಲವೆಂದು ಬಲ್ಲ ಮೂಲಗಳು ಹೇಳಿವೆ.
< < < <
ನೋಟ್ ಬ್ಯಾನ್ ಮೂಲಕ ಲಕ್ಷಾಂತರ ಕೋಟಿ ಕಪ್ಪುಹಣವನ್ನು ಹೊರತೆಗೆಯಲು ಯತ್ನಿಸಿ ಅಂಡುಸುಟ್ಟ ಬೆಕ್ಕಿನಂತಾಗಿರುವ ಪಕೋಡೇಂದ್ರರ ಅಧ್ವಾನಗಳಿಗೆ ಇಂದಿಗೂ ಸಹ ಭಾರತದ ಎಟಿಎಂಗಳಲ್ಲಿ ಹಣವಿಲ್ಲದಂತಾಗಿದೆ. ಇದನ್ನು ಸರಿಪಡಿಸಲು ಎಟಿಎಂಗಳಲ್ಲಿ ಖೋಟಾನೋಟುಗಳನ್ನು ತುಂಬಿ ಜನರ ಹಣೆಗೆ ಪಂಗನಾಮ ಎಳೆಯುವ ಪ್ರಯತ್ನ ಉತ್ತರ ಭಾರತದಿಂದ ವರದಿಯಾಗಿದೆ. ಬರೇಲಿಯ ಎಟಿಎಂಗಳಲ್ಲಿ ಹಣ ಪಡೆಯಲು ಹೋದ ಜನರ ಕೈಗೆ ಖೋಟಾನೋಟುಗಳು ತುಪತುಪನೆ ಉದುರಿದ್ದು, ಜನರು ಪಕೋಡೇಂದ್ರನ ನೋಟ್‍ಬ್ಯಾನ್ ಸಾಹಸವೇ ಇವೆಲ್ಲ ಕಾಮಿಡಿಗಳಿಗೆ ಕಾರಣವೆಂದು ಪಕೋಡೇಂದ್ರನ ಮೇಲೆ ಮಾಟಮಂತ್ರ ಮಾಡಿಸಿಯಾದರೂ ಸರಿ ದೇಶದಿಂದ ಓಡಿಸಬೇಕೆಂದು ಕೇರಳದ ಮಾಂತ್ರಿಕರನ್ನು ಹುಡುಕುತ್ತಿದ್ದಾರೆ ಎಂಬ ಘನಘೋರ ಸತ್ಯ ಇನ್ನೂ ಬಯಲಾಗಿಲ್ಲ.
< < < <
ಇದೆಲ್ಲದರ ನಡುವೆ ಕುಖ್ಯಾತ ನಟ ‘ಸಾಯಿಗುಮಾರ್’ ಅವರಿಗೆ ಬಿಜೆಪಿ ಪಕ್ಷವು ಟಿಕೇಟನ್ನು ಕೊಟ್ಟಿದ್ದು, ಇದಕ್ಕೆ ಕಾರಣವೇನೆಂದು ಕೆದಕಿದಾಗ ಆಘಾತಕಾರಿ ವಿಷಯಗಳು ಹೊರಬಂದಿವೆ. ಟಿಕೇಟ್ ಕೇಳಲು ಕೈಯಲ್ಲಿ ಲಾಂಗ್ ಹಿಡಿದು ಸೀದ ‘ಹಾರೆಸ್ಸೆಸ್’ ಮುದುಕರ ಕೊಂಪೆಗೆ ನುಗ್ಗಿದ್ದ ಸಾಯಿಗುಮಾರ್ ಅವರು ಅಲ್ಲಿದ್ದ ಮಿಟುಕಲಾಡಿ ಮುದುಕರ ಸೊಂಟದ ಮೇಲೆ ಲಾಂಗ್ ಇಟ್ಟು, ಟಿಕೇಟ್ ಕೊಡ್ತೀರೋ, ಇಲ್ಲಾ ಸೊಂಟ ಕುಯ್ಯಲೋ ಎಂದು ಆವಾಜ್ ಹಾಕಿದ್ದರಂತೆ. ಐಟಂ ಉಳಿದರೆ ಸಾಕೆಂದು ಹಾರೆಸ್ಸೆಸ್ ಮುದುಕರು ಸಾಯಿಗುಮಾರ್‍ಗೆ ಟಿಕೇಟ್ ಕೊಟ್ಟು, ‘ವದಲೇರಾ ದೊಂಗ ನಾ ಕೊಡಕಾ’ ಎಂದು ವಾಟ್ಸಾಪ್ ಮೆಸೇಜ್ ಕಳಿಸಿದ್ದಾರೆಂದು ಇನ್ನೂ ತಿಳಿದುಬಂದಿಲ್ಲ.
< < < <
ಭಾರತೀಯ ಜನ ಪಕ್ಷದ ಒನ್ ಅಂಡ್ ಓನ್ಲಿ ಗಂಡಸಾಗಿರುವ ಸೋಪಕ್ಕನವರು ಈ ಸಲ ಟಿಕೇಟ್ ಸಿಗದೆ ಅಬ್ಬೇಪಾರಿಯಂತಾಗಿ ಮಾನಸಿಕ ಕ್ಷೋಭೆಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ. ‘ಯಾಕೆ ಸೋಪ, ಏನಾಯ್ತು ನಿಂಗೆ, ಯಾಕೆ ಹೀಗೆ ತಲೆಕೆದರಿಕೊಂಡು ಕುಂತಿದ್ದೀಯ’ ಎಂದು ಸಮಾಧಾನಪಡಿಸಲು ಹೋದ ಯಡ್ರಪ್ಪನವರ ತೊಡೆಗೆ ಸೋಪಕ್ಕನವರು ಬಲವಾಗಿ ಅಗಿದಿರುವ ಸಿಸಿಟಿವಿ ದೃಶ್ಯಗಳು ನಮಗೆ ಲಭ್ಯವಾಗಿವೆ. ಕನಿಷ್ಟ ಪಕ್ಷ 250 ಗ್ರಾಂನಷ್ಟು ಮಾಂಸವನ್ನು ಕಿತ್ತಿರುವ ಸೋಪಕ್ಕನವರು ನಂತರ ಯಡ್ರಪ್ಪನವರ ಕುತ್ತಿಗೆಗೆ ಬಾಯಿ ಹಾಕಲು ಯತ್ನಿಸಿದ್ದಾರೆ. ಆಗ ಅಲ್ಲೇ ಇದ್ದ ಸೆಕ್ಯೂರಿಟಿ ಗಾರ್ಡ್‍ಗಳು ಸೋಪನ ಕಪ್ಪಾಳಕ್ಕೆ ಚಟೇರ್-ಪಟೇರ್ ಎಂದು ಬಡಿದು ಯಡ್ರಪ್ಪನವರ ಪ್ರಾಣವನ್ನು ಕಾಪಾಡಿದ್ದಾರೆಂದು ಇನ್ನೇನು ನಮಗೆ ಸುದ್ದಿ ಲಭಿಸಲಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮುಂದಿನ ವಾರ ಸಿಗೋಣ. ಟೇಕ್ ಕೇರ್ ಬೈ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...