Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...