Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...