Homeಕರ್ನಾಟಕಗೌಡರ ಕುಟುಂಬ ರಾಜಕಾರಣವೇ ಇದಕ್ಕೆಲ್ಲ ಕಾರಣವೇ? ಈ ವಾದದಲ್ಲಿ ಹುರುಳೆಷ್ಟು.....

ಗೌಡರ ಕುಟುಂಬ ರಾಜಕಾರಣವೇ ಇದಕ್ಕೆಲ್ಲ ಕಾರಣವೇ? ಈ ವಾದದಲ್ಲಿ ಹುರುಳೆಷ್ಟು…..

- Advertisement -
- Advertisement -

| ಗೌರಿ ಡೆಸ್ಕ್ |

ಉಳಿದಿದ್ದೆಲ್ಲಾ ನಿಜವಿರಬಹುದು ಸಾರ್. ಆದರೆ, ಗೌಡರ ಕುಟುಂಬವನ್ನು ಸಹಿಸಿಕೊಳ್ಳುವುದು ಸುಲಭವಲ್ಲ ಎನ್ನುತ್ತಾರೆ ಕಾಂಗ್ರೆಸ್ ನಾಯಕರು. ಒಬ್ಬ ಸಚಿವರ ಪ್ರಕಾರ ‘ಸಚಿವ ಸಂಪುಟದಲ್ಲಿ ರೇವಣ್ಣರ ಆರ್ಭಟ ಮತ್ತು ಎಲ್ಲದಕ್ಕೂ ಮೂಗು ತೂರಿಸುವುದು ನೋಡಿದರೆ ನಮಗೇ ಅಸಹ್ಯವಾಗುತ್ತದೆ. ಒಂಥರಾ ಮಾನ-ಮರ್ಯಾದೆ ಇಲ್ಲದಂತೆ ನಾವೆಲ್ಲರೂ ಅದರಲ್ಲಿದ್ದೇವೆ ಅಷ್ಟೇ. ಡಿಕೆಶಿ ಮತ್ತು ಪರಮೇಶ್ವರ ನಮ್ಮ ಪಕ್ಷದ ನಾಯಕರೋ ಅಥವಾ ಜೆಡಿಎಸ್ ಸೇರಿಬಿಟ್ಟಿದ್ದಾರೋ ಎಂದು ಸಂದೇಹವಾಗುತ್ತದೆ. ಹೀಗಾಗಿ ತೀರಾ ಕೆಲವರು ಬಿಟ್ಟರೆ ಮಿಕ್ಕೆಲ್ಲರಿಗೂ ಸಿದ್ದರಾಮಯ್ಯನವರ ಅಸಮಾಧಾನಿತ ಬಣವೇ ಅಪ್ಯಾಯಮಾನವಾಗಿತ್ತು’.

ಕಾಂಗ್ರೆಸ್ಸು ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದರಲ್ಲಿ ಕಾಂಗ್ರೆಸ್ಸಿನ ದೌರ್ಬಲ್ಯವೇ ಹೆಚ್ಚಿತ್ತು ಎಂಬುದೇನೋ ವಾಸ್ತವ. ಆದರೆ, ಜೆಡಿಎಸ್ ಅತ್ಯುತ್ತಮ ಪರಿಸ್ಥಿತಿಯಲ್ಲೇನೂ ಇರಲಿಲ್ಲ. ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲೂ ಎರಡು ಜಿಲ್ಲೆಗಳಲ್ಲಿ ಪ್ರಭಾವ ತಗ್ಗುತ್ತಿತ್ತು. ಅಕಸ್ಮಾತ್ತಾಗಿ ಉತ್ತರದಲ್ಲಿ ಕೆಲವು ಸೀಟುಗಳನ್ನು ಗೆದ್ದಿತ್ತು. ಕುಟುಂಬದೊಳಗಿನ ಆಂತರಿಕ ಸಮಸ್ಯೆಗಳೂ ಹೆಚ್ಚಾಗುತ್ತಿದ್ದವು. ಕುಮಾರಸ್ವಾಮಿಯವರ ಆರೋಗ್ಯ ಚೆನ್ನಾಗಿರಲಿಲ್ಲ. ಹೀಗಿದ್ದಾಗ ತಮ್ಮ ಪಾಲಿಗೆ ಬಂದ ಅಧಿಕಾರವನ್ನು ಜನಪರವಾಗಿ ಬಳಸಿ, ಅದರ ಆಧಾರದ ಮೇಲೆ ವಿಸ್ತರಿಸಿಕೊಳ್ಳುವ ಪ್ರಯತ್ನ ಅವರದ್ದಾಗಿರಲಿಲ್ಲ.

ಈ ಸಾರಿಯೂ ತಮ್ಮ ತಮ್ಮ ಕ್ಷೇತ್ರಗಳಿಗೆ ಅಥವಾ ಹಾಸನ ಜಿಲ್ಲೆಗೆ ಅನುದಾನದ ಹೆಚ್ಚಿನ ಭಾಗವನ್ನು ಕೊಂಡೊಯ್ಯುವ ಕೆಲಸ ಬಿಡಲಿಲ್ಲ. ನಾಲ್ಕು ಫಲವತ್ತಾದ ಖಾತೆಗಳಲ್ಲಿ (ಬೆಂಗಳೂರು ಅಭಿವೃದ್ಧಿ, ಲೋಕೋಪಯೋಗಿ, ಇಂಧನ ಮತ್ತು ಬೃಹತ್ ನೀರಾವರಿ) ತಲಾ ಎರಡನ್ನು ಎರಡೂ ಪಕ್ಷಗಳು ಹಂಚಿಕೊಂಡಿದ್ದವು. ಇವುಗಳಲ್ಲಿ ಎರಡನ್ನು (ಮುಖ್ಯಮಂತ್ರಿ, ಹಣಕಾಸು, ಅಬಕಾರಿಯಲ್ಲದೇ) ತಮ್ಮ ಕುಟುಂಬಕ್ಕೇ ಇಟ್ಟುಕೊಂಡರು. ಮಂಡ್ಯದ ಇಬ್ಬರು ಸಚಿವರಲ್ಲಿ (ಕಾಂಗ್ರೆಸ್, ಬಿಜೆಪಿಗಳೆರಡರಲ್ಲೂ ಇದ್ದು ಜೆಡಿಎಸ್‍ಗೆ ಬಂದ) ಬೀಗರಾದ ತಮ್ಮಣ್ಣರಿಗೆ ಸಾರಿಗೆ ಕೊಟ್ಟರೆ, ಜಿಲ್ಲೆಯ ಪ್ರಭಾವಿ ಹಾಗೂ ನಿಷ್ಠಾವಂತರಾದ ಪುಟ್ಟರಾಜುರಿಗೆ ಸಣ್ಣ ನೀರಾವರಿ ಕೊಟ್ಟರು. ತನಗೆ ಇದು ಬೇಡ ಎಂದು ಕೇಳಿದರೂ ಬಿಡದೇ ಜಿ.ಟಿ.ದೇವೇಗೌಡರಿಗೆ ಉನ್ನತ ಶಿಕ್ಷಣ ಕೊಟ್ಟರು. ಅಲ್ಲಿಯೂ ಬೀಗ ಕೆ.ಎಸ್.ರಂಗಪ್ಪರನ್ನು ಜಿಟಿಡಿ ತಲೆ ಮೇಲೆ ಕೂಡಿಸುವ ಇರಾದೆ ಕುಟುಂಬಕ್ಕಿತ್ತು. ಇನ್ನಿತರ ಇಲಾಖೆಗಳಲ್ಲೂ ಗೌಡರ ಕುಟುಂಬ ತಲೆ ಹಾಕುತ್ತದೆ ಎಂಬ ಕಿರಿಕಿರಿ ಹಲವು ಸಚಿವರಿಗಿತ್ತು. ಕುಟುಂಬವೊಂದರ ಈ ಪ್ರಮಾಣದ ಮಧ್ಯಪ್ರವೇಶವನ್ನು ಜೆಡಿಎಸ್ ಮಾತ್ರವಲ್ಲದೇ, ಕಾಂಗ್ರೆಸ್ ಸಹಾ ಒಪ್ಪಿಕೊಳ್ಳಬೇಕು ಎಂದರೆ ಸರ್ಕಾರ ಹೇಗೆ ಉಳಿಯಬೇಕು?

ವೃತ್ತಿಪರ ಬಿಸಿನೆಸ್‍ಮೆನ್ ಆಗಿದ್ದ ಎಚ್‍ಡಿಕೆ ಡೀಲ್‍ಗಳನ್ನು ಕುದುರಿಸುವುದರಲ್ಲಿ ಎತ್ತಿದ ಕೈ. ಹಾಗಾಗಿಯೇ ಭಿನ್ನಮತೀಯ ಕಾಂಗ್ರೆಸ್ಸಿಗರನ್ನೂ ಭೇಟಿಯಾಗಿ ಸಂತೃಪ್ತಿ ಪಡಿಸುತ್ತೇನೆಂಬ ವಿಶ್ವಾಸವೂ ಅವರಿಗಿತ್ತು. ಆದರೆ, ತಮ್ಮ ಜೊತೆ ಚೆನ್ನಾಗಿಲ್ಲದ ಶಾಸಕರಿಗೆ ಅಂತಹುದೇನನ್ನೂ ಅವರು ಮಾಡಲಿಲ್ಲ. ಹಣ ಮಾಡಿಕೊಳ್ಳಲು ಅವಕಾಶ ಕೊಡದಿದ್ದರೆ ಹಿಡಿತದಲ್ಲಿರುತ್ತಾರೆ ಎಂಬ ಅವರ ಲೆಕ್ಕಾಚಾರ ತಿರುಗೇಟು ನೀಡಿತು.

ರಾಜೀನಾಮೆ ಸಲ್ಲಿಸಿದ ಒಂದು ಡಜನ್‍ಗೂ ಹೆಚ್ಚು ಶಾಸಕರಲ್ಲಿ ಕೆಲವರು ಕೊಟ್ಟ ಕಾರಣಗಳು ಕುತೂಹಲಕರವಾಗಿವೆ. ಕಾಂಗ್ರೆಸ್ ಸದಸ್ಯ ಪಿ.ಮುನಿರತ್ನ ಮಾತನಾಡುತ್ತಾ ತಮ್ಮ ಅಸಮಾಧಾನಕ್ಕೆ ಎಚ್.ಡಿ.ರೇವಣ್ಣ ಕಾರಣ ಎಂದಿದ್ದಾರೆ. ಲೋಕೋಪಯೋಗಿ ಸಚಿವರಾದ ಅವರು ಬೆಂಗಳೂರು ಅಭಿವೃದ್ಧಿ ಬಗ್ಗೆ ಒಮ್ಮೆಯೂ ನಗರದ ಶಾಸಕರ ಸಭೆ ಕರೆಯಲಿಲ್ಲ. ಎಲ್ಲಾ ತೀರ್ಮಾನಗಳನ್ನು ಅವರೇ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರ ದೂರು. ಹಾಗೆಯೇ ಭೀಮಾನಾಯ್ಕ ರಾಜೀನಾಮೆ ಕೊಟ್ಟಿಲ್ಲವಾದರು ಕೂಡಾ ರೇವಣ್ಣ ವಿರುದ್ಧ ಕಿಡಿ ಕಾರಿದ್ದಾರೆ. ಮೈತ್ರಿ ಒಪ್ಪಂದದಂತೆ ತನ್ನ ಪಾಲಿಗೆ ಬರಬೇಕಿದ್ದ ಕೆಎಂಎಫ್ ಅಧ್ಯಕ್ಷ ಗಾದಿಗೂ ರೇವಣ್ಣ ಕರ್ಚೀಫು ಹಾಕಿ ಕೂತಿರೋದು ಅವರ ಸಿಟ್ಟಿನ ಸಹಜ ಕಾರಣ. ಜೆಡಿಎಸ್‍ನ ಶಾಸಕ ಕೆ.ಸಿ.ನಾರಾಯಣ ಗೌಡರೂ ದೇವೇಗೌಡರ ಪುತ್ರಿಯ ಅತಿಯಾದ ಹಸ್ತಕ್ಷೇಪದಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.

ಅತ್ತ ಬಿಜೆಪಿಯಿಂದ ಬರುತ್ತಿರುವ ಆಮಿಷಗಳ ಜೊತೆ ಕೆಲವು ರಾಜೀನಾಮೆಗಳ ಮೇಲೆ ಪ್ರಭಾವ ಬೀರುವಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ಬೇಸರವೂ ಇದೆ ಎಂಬುದು ಸತ್ಯ. ಕೆಲವರು ಮಂತ್ರಿಪಟ್ಟ ಸಿಗಲಿಲ್ಲವೆಂದು ಸಿಟ್ಟಾಗಿದ್ದಾರೆ ನಿಜ. ಆದರೆ ಮಂತ್ರಿಸ್ಥಾನದ ನಿರೀಕ್ಷೆ ಇಲ್ಲದವರೂ ಹೊರಗೆ ಹೆಜ್ಜೆ ಇಡಲು ರೇವಣ್ಣ ಕಾರಣ. ಅವರು ತಮ್ಮ ಇಲಾಖೆಯಲ್ಲದೆ ಇತರರ ಖಾತೆಗೂ ಮೂಗು ತೂರಿಸುವುದಷ್ಟೇ ಅಲ್ಲ, ತಾವೇ ಹೋಗಿ ಕೂರುವ ಅಭ್ಯಾಸ. ಅದೇ ಕಾರಣಕ್ಕೆ ಹಾಸನದಲ್ಲಿ ತಮ್ಮ ಹೊರತಾಗಿ ಬೇರಾರಿಗೂ ಮಂತ್ರಿ ಸ್ಥಾನ ದೊರಕದಂತೆ ನೋಡಿಕೊಂಡರು. ಏಳರಲ್ಲಿ ಆರು ಸ್ಥಾನಗಳನ್ನು ತಮ್ಮ ಪಕ್ಷ ಗೆದ್ದುಕೊಂಡರೂ ಮತ್ತಾರಿಗೂ ಮಂತ್ರಿಸ್ಥಾನದ ಅವಕಾಶ ಸಿಗಲಿಲ್ಲ. ಪಕ್ಷದ ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಮೂರು ಜನ ಮಂತ್ರಿಗಳಿದ್ದಾರೆ. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಚ್.ಕೆ.ಕುಮಾರಸ್ವಾಮಿ ಮಂತ್ರಿಯಾಗುತ್ತಾರೆ ಎಂದು ಹೇಳಲಾಗುತ್ತಿತ್ತು. ಅವರೂ ನಿರೀಕ್ಷೆ ಇಟ್ಟುಕೊಂಡಿದ್ದರು ಆದರೆ ಆಗಲಿಲ್ಲ. ಕೊನೆಗೆ ಮೊನ್ನೆ ಮೊನ್ನೆಯಷ್ಟೇ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಯ್ತು.

ಇಡೀ ರಾಜಕೀಯ ಈ ಪ್ರಮಾಣಕ್ಕೆ ಹೊಲಸೆದ್ದಿದ್ದು, ಅಧಿಕಾರ ದಾಹ ಮತ್ತು ಹಣ ಬಾಚಿಕೊಳ್ಳುವುದೇ ದಂಧೆಯಾಗಿದೆ. ಹೀಗಿರುವಾಗ ಅದರ ಪ್ರಧಾನ ಪಾಲು ತಮ್ಮ ಕುಟುಂಬಕ್ಕೆ ಮಾತ್ರ ಎನ್ನುವ ಗೌಡರ ಕುಟುಂಬದ ಧೋರಣೆ ಬಿಕ್ಕಟ್ಟಿಗೆ ಕಾರಣವಾಗಿದೆ ಎಂಬುದು ಹಲವು ಜೆಡಿಎಸ್-ಕಾಂಗ್ರೆಸ್ ಸಚಿವರು ಮತ್ತು ಶಾಸಕರ ಅನಿಸಿಕೆಯಾಗಿದೆ.

ಇದನ್ನು ಓದಿರಿ: ಈ ಅವಾಂತರದ ಕೇಂದ್ರ ಪಾತ್ರಧಾರಿ ಸಿದ್ದು!!??

ಶುರುವಾಯ್ತಾ ನಿಖಿಲ್ ವರ್ಸಸ್ ಪ್ರಜ್ವಲ್ ಕೆಮಿಸ್ಟ್ರಿ

ಬಿಐಟಿಯಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಾಗಿನಿಂದಲೇ ಹಾಸನ ಜಿಲ್ಲೆಯ ಕಡೆಗೆ ಕಣ್ಣಿಟ್ಟಿದ್ದ ಪ್ರಜ್ವಲ್, ಆ ನಂತರ ರಾಜಕಾರಣದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡರು. ನಿಖಿಲ್‍ಗಿಂತ ವಯಸ್ಸಿನಲ್ಲಿ ಚಿಕ್ಕವರಾದ ಪ್ರಜ್ವಲ್ ಪ್ರಕಾರ ತಾನು ಹಾಸನಕ್ಕೆ ಸಹಜ ಆಯ್ಕೆ. ಆದರೆ, ರಾಜ್ಯಾಧ್ಯಕ್ಷರಾಗಿದ್ದ ಕುಮಾರಸ್ವಾಮಿ ತನ್ನನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದಾರೆಂಬ ಅಸಮಾಧಾನ ಪ್ರಜ್ವಲ್ ಮತ್ತು ಅವರ ತಾಯಿ ಭವಾನಿಯವರಿಗೆ ಮೊದಲಿಂದ ಇತ್ತು. ಕೆ.ಆರ್.ನಗರ, ಹುಣಸೂರು ಅಥವಾ ರಾಜರಾಜೇಶ್ವರಿನಗರಕ್ಕೆ ಹೋದರೆ ಹಾಸನದಿಂದಲೂ ಹೊರಗೆ ಪ್ರಭಾವ ಬೆಳೆಸಿಕೊಳ್ಳಬಹುದು ಎಂಬ ಇರಾದೆ ಅವರದ್ದಾಗಿತ್ತು. ಆದರೆ, ಅದಕ್ಕೆ ಕುಮಾರಸ್ವಾಮಿ ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ‘ನಮ್ಮ ಪಕ್ಷದಲ್ಲಿ ಸೂಟ್‍ಕೇಸ್ ಸಂಸ್ಕøತಿ ಇದೆ’ ಎಂದು ಪ್ರಜ್ವಲ್ ಬಹಿರಂಗ ಹೇಳಿಕೆ ನೀಡಿದ್ದರು.

ಮಂಡ್ಯದಲ್ಲಿ ಸೋತ ನಿಖಿಲ್‍ರನ್ನು ಇತ್ತೀಚೆಗೆ ಜೆಡಿಎಸ್ ರಾಜ್ಯ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ನೇಮಿಸಿದರು. ಅದೇ ದಿನ ರಾಜ್ಯಾಧ್ಯಕ್ಷರಾಗಿ ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪರನ್ನೂ ನೇಮಿಸಲಾಗಿತ್ತು. ದೆಹಲಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿ ಉಳಿದವರಿಗೆ ಅಭಿನಂದಿಸಿದ್ದ ಪ್ರಜ್ವಲ್, ನಿಖಿಲ್‍ರನ್ನು ಮಾತ್ರ ಅಭಿನಂದಿಸಲಿಲ್ಲ. ಪ್ರಶ್ನೆ ಕೇಳಿದ ಪತ್ರಕರ್ತರಿಗೆ ‘ಹೌದಾ, ನಿಖಿಲ್ ಆಯ್ಕೆಯಾಗಿರುವುದು ತನಗೆ ಗೊತ್ತಿಲ್ಲ’ ಎಂದು ಹೇಳಿಕೆ ನೀಡಿದರು.
ಇಂತಹ ಕುಟುಂಬಕಾರಣವೂ ಇರುವ ಗೌಡರ ಕುಟುಂಬ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಕೆಲಸ ಮಾಡಲಿ ಎಂಬ ನಿರೀಕ್ಷೆ ಬಹುಶಃ ಬಹಳ ದುಬಾರಿಯಾದುದೇನೋ?

ಇದನ್ನು ಓದಿರಿ: ಮಾನಗೇಡಿ ಶಾಸಕರೂ, ಹೊಣೆಗೇಡಿ ನಾಯಕರೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...