Homeಅಂಕಣಗಳುಗೌರಿ ಆಶಯಗಳ ಜೊತೆಗೆ.....

ಗೌರಿ ಆಶಯಗಳ ಜೊತೆಗೆ…..

- Advertisement -
- Advertisement -

ಬಂಧುಗಳೇ,

ಗೌರಿ ಲಂಕೇಶ್‌ರ ಹತ್ಯೆ ಮಾಡುವ ಮೂಲಕ ತಮ್ಮ ವಿರುದ್ಧದ ಗಟ್ಟಿದನಿಯನ್ನು ಇಲ್ಲವಾಗಿಸುವುದು ಆ ಸಂಚುಕೂಟದ ಲೆಕ್ಕಾಚಾರವಾಗಿತ್ತು. ಆದರೆ ಈ ನಾಡಿನ ಜನತೆ ‘ನಾನೂ ಗೌರಿ! ನಾವೆಲ್ಲಾ ಗೌರಿ!!’ ಎಂದು ಒಕ್ಕೊರಲಿನಿಂದ ಕೂಗಿ ಹೇಳಿ ಈ ಸಂಚುಕೂಟಕ್ಕೆ ಬೇರೆಯದೇ ಸಂದೇಶವನ್ನು ರವಾನಿಸಿದ್ದಾರೆ. ”ವ್ಯಕ್ತಿಗಳಿಗೆ ಗುಂಡಿಕ್ಕಬಹುದೇ ಹೊರತು ವಿಚಾರಗಳಿಗೆ ಗುಂಡಿಕ್ಕಲು ನಿಮ್ಮಿಂದ ಎಂದಿಗೂ ಸಾಧ್ಯವಿಲ್ಲ” ಎಂದು ಸಾರಿ ಹೇಳಿದ್ದಾರೆ. ‘ಒಬ್ಬ ಗೌರಿಯ ವಿಚಾರವನ್ನು ಸಾವಿರಾರು ಗೌರಿಯರಾಗಿ ನಾವು ಮುಂದುವರೆಸುತ್ತೇವೆ’ ಎಂಬ ಪಣ ತೊಟ್ಟಿದ್ದಾರೆ.

ಇಂಥ ಒಂದು ಸಾಮೂಹಿಕ ದೃಢ ಸಂಕಲ್ಪದ ಫಲವಾಗಿ ‘ನಾನು ಗೌರಿ’ ಪತ್ರಿಕೆ ಆರಂಭವಾಗಿದೆ. ಪತ್ರಿಕೆಯ ಆರಂಭದೊಂದಿಗೆ ನಮ್ಮ ಗೌರಿ ಲಂಕೇಶ್ ಮರುಹುಟ್ಟು ಪಡೆದಿದ್ದಾರೆ. ಗೌರಿ ಇಲ್ಲದ ಈ ಸಂಕಟಮಯ ಸನ್ನಿವೇಶದಲ್ಲಿ ಗೌರಿ ಪತ್ರಿಕೆಯನ್ನು ಹೊರತರಲು ಕೈಜೋಡಿಸಿದ ಎಲ್ಲರಿಗೂ ‘ಗೌರಿ ಮೀಡಿಯಾ’ ತಂಡದ ಹೃದಯಪೂರ್ವಕ ಕೃತಜ್ಞತೆಗಳು.

ಲಂಕೇಶ್‌ರು ಹುಟ್ಟುಹಾಕಿದ ಜನಪರ, ನಿರ್ಭೀತ ಪತ್ರಿಕೋದ್ಯಮದ ಮಾದರಿಯನ್ನು ಮುಂದುವರೆಸಿದ ಗೌರಿ ಲಂಕೇಶ್ ಆಕ್ಟಿವಿಸ್ಟ್ ಆಗಿ, ಪತ್ರಕರ್ತೆಯಾಗಿ ಹಾಕಿಕೊಟ್ಟ ಮಾದರಿ ನಮಗೆ ಸದಾ ಸ್ಫೂರ್ತಿ. ಈ ಎರಡೂ ಲೆಗಸಿಗಳನ್ನು ಮುಂದುವರೆಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜೊತೆಗೆ ಈ ಕಾಲಘಟ್ಟದ ಹೊಸ ಸಂಕೀರ್ಣತೆಗಳಿಗೆ ಮುಖಾಮುಖಿಯಾಗಬೇಕಿರುವ ಸವಾಲು ನಮ್ಮ ಮುಂದಿದೆಯೆಂಬುದನ್ನೂ ಅರಿತು ಮುಂದಡಿ ಇಡುತ್ತಿದ್ದೇವೆ.

ಕಲ್ಬುರ್ಗಿ ಹತ್ಯೆ ಖಂಡಿಸಿ ಗೌರಿ ಹಾಗೂ ಇನ್ನಿತರೆ ಪ್ರಗತಿಪರರ ಪ್ರತಿಭಟನೆ

ಇಂದು ನಮ್ಮ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ. ನಮ್ಮ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಬುನಾದಿಯನ್ನೇ ಅಲುಗಾಡಿಸುವ ಮಟ್ಟಕ್ಕೆ ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆದು ನಿಂತಿವೆ. ಸ್ವತಂತ್ರ, ನಿರ್ಭೀತ ಪತ್ರಿಕೆಗಳ ಹಾಗೂ ಪತ್ರಕರ್ತರ ದನಿ ಅಡಗಿಸಲು ಈ ಹಿಟ್ಲರ್‌ಶಾಹಿಗಳು ದೇಶಾದ್ಯಂತ ಸೃಷ್ಟಿಸುತ್ತಿರುವ ಭೀಭತ್ಸಕ್ಕೆ ಗೌರಿಯವರ ಹತ್ಯೆಯೇ ಸಾಕ್ಷಿ. ದೀನ ದಲಿತರ, ದುರ್ಬಲರ ದನಿಯಾಗಬೇಕಿದ್ದ ಮಾಧ್ಯಮ ಕ್ಷೇತ್ರವನ್ನು ಇಡಿಯಾಗಿ ಕಾರ್ಪೊರೇಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಸಾಮಾಜಿಕ ಮಾಧ್ಯಮದಲ್ಲೂ ಫ್ಯಾಸಿಸ್ಟ್‌ಗಳದೇ ಕಾರುಬಾರು.

ಹಿಟ್ಲರ್‌ಶಾಹಿಗಳು ಸೃಷ್ಟಿಸಿರುವ ಇಂಥ ವಿಷಮ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸದೆ ಹೋದರೆ ಈ ದೇಶದ ಪ್ರಜಾತಂತ್ರದ ಅಸ್ತಿತ್ವಕ್ಕೇ ಸಂಚಕಾರ ಒದಗುವ ಅಪಾಯವಿದೆ. ಈ ಕಾಲದ ಕರೆಗೆ ಓಗೊಡಬೇಕಾದ್ದು ಜನಪರ ಪತ್ರಿಕೆಯೊಂದರ ಆದ್ಯ ಕರ್ತವ್ಯ. ‘ನಾನು ಗೌರಿ’ ಪತ್ರಿಕೆ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧವಾಗಿದೆ. ಹಾಗೆಯೇ ಗದ್ದುಗೆಯಲ್ಲಿರುವವರ ಜನವಿರೋಧಿತನವನ್ನು ಎದುರಿಸಿ ನಿರಂತರ ವಿರೋಧ ಪಕ್ಷವಾಗಿ ನಿಲ್ಲುವ ಆಶಯ ನಮ್ಮದು. ಯಾವುದೇ ರಾಜಕೀಯ ಪಕ್ಷದ, ರಾಜಕಾರಣಿಗಳ ಮರ್ಜಿಗೆ ಒಳಗಾಗದೆ ಅಥವ ಜಾಹಿರಾತುಗಳ ಹಂಗಿಗೆ ಸಿಲುಕದೆ ಪತ್ರಿಕಾ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ‘ನಾನು ಗೌರಿ’ ಬದ್ಧವಾಗಿರುತ್ತದೆ.

ಪತ್ರಿಕೆಯ ಸ್ವಭಾವ ಮತ್ತು ಗುಣಮಟ್ಟಗಳನ್ನು ಉತ್ತಮಪಡಿಸುವ ನಿರಂತರ ಪ್ರಕ್ರಿಯೆಯ ಭಾಗವಾಗಿ ಹೊಸದಾರಿಯಲ್ಲಿ ಸಾಗುತ್ತೇವೆ. ಇದರ ಭಾಗವಾಗಿ ಹೊಸ ತಲೆಮಾರಿನ ಬರಹಗಾರರನ್ನು ಒಳಗೊಳ್ಳುವುದು ಮಾತ್ರವಲ್ಲದೆ, ವಿವಿಧ ಜನಪರ ಚಳವಳಿಗಳ ನಮ್ಮ ನಡುವಿನ ಭಿನ್ನ ವಿಚಾರ ಧಾರೆಗಳ ನಡುವೆ ರಚನಾತ್ಮಕ ಸಂವಾದಕ್ಕೆ ‘ಪತ್ರಿಕೆ’ ವೇದಿಕೆಯಾಗಲಿದೆ. ವರ್ತಮಾನಕ್ಕೆ ಸಂವಾದಿಯಾಗಿ ಬರಹದಲ್ಲಿ ತೊಡಗಿಸಿಕೊಂಡಿರುವ ಹಲವು ಗಣ್ಯರ ಅಂಕಣಗಳೂ ಇರುತ್ತವೆ. ದಿಕ್ಕೆಟ್ಟ ರಾಜಕಾರಣ, ಆರ್ಥಿಕ ಕ್ಷೇತ್ರದ ಕಾರ್ಪೊರೇಟ್ ಹಿಡಿತ, ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು, ಸಾಹಿತ್ಯ, ಸಿನಿಮಾ, ವಿಮರ್ಶೆ ಇತ್ಯಾದಿ ಹತ್ತು ಹಲವು ಬಗೆಯ ಬರಹಗಳನ್ನು ಪತ್ರಿಕೆ ಒಳಗೊಳ್ಳಲಿದೆ. ಕನ್ನಡದ ಜಾಣ, ಜಾಣೆಯರು ಇಷ್ಟಪಡುವ ರಂಜನೆ, ಬೋಧನೆ, ಪ್ರಚೋದನೆಗೆ ಪೂರಕವಾದ ಬರಹಗಳೂ ಇರುತ್ತವೆ.

ಗೌರಿ ಹತ್ಯೆಯನ್ನು ಖಂಡಿಸಿ, ಈ ಹಿಂದೆ ಗೌರಿ ಪ್ರತಿಭಟಿಸಿದ್ದ ಜಾಗದಲ್ಲೇ ಪ್ರಗತಿಪರರ ಪ್ರತಿಭಟನೆ!

ಗೌರಿ ಲಂಕೇಶ್‌ರ ಸಹೋದ್ಯೋಗಿಗಳಾಗಿದ್ದ ಬಹುತೇಕ ಲೇಖಕ, ಲೇಖಕಿಯರು ಹಾಗೂ ಇಡೀ ಕಚೇರಿ ಸಿಬ್ಬಂದಿ ಈ ಹೊಸ ಪ್ರಯತ್ನದಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿರುವುದು ನಮ್ಮ ಶಕ್ತಿಯನ್ನು ಇಮ್ಮಡಿಸಿದೆ. ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೆಂದರೆ ‘ನಾನು ಗೌರಿ’ ಪತ್ರಿಕೆ ಯಾರೊಬ್ಬರ ಖಾಸಗಿ ಸ್ವತ್ತಲ್ಲ. ಗೌರಿಯವರ ಆಶಯದೊಂದಿಗೆ ಏಕೀಭವಿಸುವ ಲಕ್ಷಾಂತರ ಜನರು ಪತ್ರಿಕೆ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗೆ ಹೇಳಬೇಕೆಂದರೆ ಈ ಪತ್ರಿಕೆ ಗೌರಿ ಆಶಯವನ್ನು ಪ್ರತಿನಿಧಿಸುವ ಎಲ್ಲರಿಗೂ ಸೇರಿದ್ದು.

ಈ ಡಿಜಿಟಲ್ ಮಾಧ್ಯಮದ ಯುಗದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಅದೆಷ್ಟೋ ಹಿರಿಯರು, ಹಿತೈಷಿಗಳು ಕಿವಿ ಮಾತು ಹೇಳಿದ್ದಾರೆ. ಇದು ಸುಗಮವಾದ ಹಾದಿಯಲ್ಲ ಎಂಬುದು ನಿಜ. ಆದರೆ ನಾಡಿನಾದ್ಯಂತ ‘ಪತ್ರಿಕೆ’ಗಾಗಿ ಆಗ್ರಹಿಸುತ್ತಿರುವವರ ಸಂಖ್ಯೆಯೂ ದೊಡ್ಡದಿದೆ ಎಂಬುದೂ ನಿಜ. ಆದರೆ ಗೌರಿ ಪತ್ರಿಕೆಯನ್ನು ಮುಂದುವರೆಸುವುದು ಭಾವನಾತ್ಮಕ ವಿಷಯ ಎಂಬುದಕ್ಕಿಂತಲೂ ಹೆಚ್ಚಾಗಿ ನಮ್ಮ ಬದ್ಧತೆಗೆ ಸಂಬಂಧಿಸಿದ್ದು. ನಿಮ್ಮಲ್ಲರ ಬೆಂಬಲ, ಪ್ರೋತ್ಸಾಹಗಳ ಬಲದಿಂದ ಪತ್ರಿಕೆ ನಡೆಸುವ ಸಂಕಷ್ಟವನ್ನು ದಾಟಬಹುದೆಂಬ ವಿಶ್ವಾಸ ನಮ್ಮದು.

ಪ್ರತಿರೋಧ ಸಮಾವೇಶದಲ್ಲಿ ಗೌರಿ ಹತ್ಯಗೆ ಮಿಡಿದ ಜನಸಾಗರ

ನಮ್ಮೆಲ್ಲರ ಹೃದಯದಾಳದಲ್ಲಿ ಮಡುಗಟ್ಟಿದ ನೋವು, ಆಕ್ರೋಶಗಳು ನಮ್ಮ ಈ ಬದ್ಧತೆಯನ್ನು ಗಟ್ಟಿಗೊಳಿಸಿ, ಪತ್ರಿಕೆಯ ಮರುಹುಟ್ಟಿಗೆ ಭದ್ರ ಬುನಾದಿ ಹಾಕಿಕೊಟ್ಟಿವೆ. ಈ ಸವಾಲಿನ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸದಿಂದ ನಮ್ಮ ತಂಡ ಕಾರ್ಯೋನ್ಮುಖವಾಗಿದೆ. ಹಾಗೆಂದು ಸಮಸ್ಯೆಗಳೇ ಇರುವುದಿಲ್ಲ, ತಪ್ಪುಗಳೇ ಆಗುವುದಿಲ್ಲ ಎಂದರ್ಥವಲ್ಲ. ನಾವು ಎಡವಿದಾಗ ನೀವು ನಮ್ಮ ಕೈಹಿಡಿಯುತ್ತೀರಿ, ತಪ್ಪು ಮಾಡಿದಾಗ ಕಿವಿ ಹಿಂಡುತ್ತೀರಿ, ಪತ್ರಿಕೆಯ ನೋವು-ನಲಿವುಗಳಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ತುಂಬು ವಿಶ್ವಾಸ ನಮ್ಮದು.

ಕೊನೆಯದಾಗಿ, ಈಜಿಪ್ಟ್ ಬಂಡಾಯದ ಸಂದರ್ಭದಲ್ಲಿ ಹುಟ್ಟಿಕೊಂಡ ಒಂದು ಮಾತು ನೆನಪಿಸುತ್ತೇನೆ. “The power of the people is stronger than the people in power”. ಅಂದರೆ ಅಧಿಕಾರದಲ್ಲಿರುವವರ ಬಲಕ್ಕಿಂತ ಜನಶಕ್ತಿಯ ಬಲ ಹೆಚ್ಚು ಬಲಿಷ್ಠವಾದುದು. ಅಂಥಾ ಜನಶಕ್ತಿಯ ಬಲವನ್ನು ನಿರೂಪಿಸಲು ನಾವೆಲ್ಲರೂ ಒಗ್ಗೂಡೋಣ. ಗೆಲುವಿನ ಹಾದಿ ನಮ್ಮದು.
ನಾನು ಗೌರಿ! ನಾವೆಲ್ಲಾ ಗೌರಿ!!

ಗೌರಿ ಮೀಡಿಯಾ ಟ್ರಸ್ಟ್ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...