Homeಅಂಕಣಗಳುಗೌರಿ ಆಶಯಗಳ ಜೊತೆಗೆ.....

ಗೌರಿ ಆಶಯಗಳ ಜೊತೆಗೆ…..

- Advertisement -
- Advertisement -

ಬಂಧುಗಳೇ,

ಗೌರಿ ಲಂಕೇಶ್‌ರ ಹತ್ಯೆ ಮಾಡುವ ಮೂಲಕ ತಮ್ಮ ವಿರುದ್ಧದ ಗಟ್ಟಿದನಿಯನ್ನು ಇಲ್ಲವಾಗಿಸುವುದು ಆ ಸಂಚುಕೂಟದ ಲೆಕ್ಕಾಚಾರವಾಗಿತ್ತು. ಆದರೆ ಈ ನಾಡಿನ ಜನತೆ ‘ನಾನೂ ಗೌರಿ! ನಾವೆಲ್ಲಾ ಗೌರಿ!!’ ಎಂದು ಒಕ್ಕೊರಲಿನಿಂದ ಕೂಗಿ ಹೇಳಿ ಈ ಸಂಚುಕೂಟಕ್ಕೆ ಬೇರೆಯದೇ ಸಂದೇಶವನ್ನು ರವಾನಿಸಿದ್ದಾರೆ. ”ವ್ಯಕ್ತಿಗಳಿಗೆ ಗುಂಡಿಕ್ಕಬಹುದೇ ಹೊರತು ವಿಚಾರಗಳಿಗೆ ಗುಂಡಿಕ್ಕಲು ನಿಮ್ಮಿಂದ ಎಂದಿಗೂ ಸಾಧ್ಯವಿಲ್ಲ” ಎಂದು ಸಾರಿ ಹೇಳಿದ್ದಾರೆ. ‘ಒಬ್ಬ ಗೌರಿಯ ವಿಚಾರವನ್ನು ಸಾವಿರಾರು ಗೌರಿಯರಾಗಿ ನಾವು ಮುಂದುವರೆಸುತ್ತೇವೆ’ ಎಂಬ ಪಣ ತೊಟ್ಟಿದ್ದಾರೆ.

ಇಂಥ ಒಂದು ಸಾಮೂಹಿಕ ದೃಢ ಸಂಕಲ್ಪದ ಫಲವಾಗಿ ‘ನಾನು ಗೌರಿ’ ಪತ್ರಿಕೆ ಆರಂಭವಾಗಿದೆ. ಪತ್ರಿಕೆಯ ಆರಂಭದೊಂದಿಗೆ ನಮ್ಮ ಗೌರಿ ಲಂಕೇಶ್ ಮರುಹುಟ್ಟು ಪಡೆದಿದ್ದಾರೆ. ಗೌರಿ ಇಲ್ಲದ ಈ ಸಂಕಟಮಯ ಸನ್ನಿವೇಶದಲ್ಲಿ ಗೌರಿ ಪತ್ರಿಕೆಯನ್ನು ಹೊರತರಲು ಕೈಜೋಡಿಸಿದ ಎಲ್ಲರಿಗೂ ‘ಗೌರಿ ಮೀಡಿಯಾ’ ತಂಡದ ಹೃದಯಪೂರ್ವಕ ಕೃತಜ್ಞತೆಗಳು.

ಲಂಕೇಶ್‌ರು ಹುಟ್ಟುಹಾಕಿದ ಜನಪರ, ನಿರ್ಭೀತ ಪತ್ರಿಕೋದ್ಯಮದ ಮಾದರಿಯನ್ನು ಮುಂದುವರೆಸಿದ ಗೌರಿ ಲಂಕೇಶ್ ಆಕ್ಟಿವಿಸ್ಟ್ ಆಗಿ, ಪತ್ರಕರ್ತೆಯಾಗಿ ಹಾಕಿಕೊಟ್ಟ ಮಾದರಿ ನಮಗೆ ಸದಾ ಸ್ಫೂರ್ತಿ. ಈ ಎರಡೂ ಲೆಗಸಿಗಳನ್ನು ಮುಂದುವರೆಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜೊತೆಗೆ ಈ ಕಾಲಘಟ್ಟದ ಹೊಸ ಸಂಕೀರ್ಣತೆಗಳಿಗೆ ಮುಖಾಮುಖಿಯಾಗಬೇಕಿರುವ ಸವಾಲು ನಮ್ಮ ಮುಂದಿದೆಯೆಂಬುದನ್ನೂ ಅರಿತು ಮುಂದಡಿ ಇಡುತ್ತಿದ್ದೇವೆ.

ಕಲ್ಬುರ್ಗಿ ಹತ್ಯೆ ಖಂಡಿಸಿ ಗೌರಿ ಹಾಗೂ ಇನ್ನಿತರೆ ಪ್ರಗತಿಪರರ ಪ್ರತಿಭಟನೆ

ಇಂದು ನಮ್ಮ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ. ನಮ್ಮ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಬುನಾದಿಯನ್ನೇ ಅಲುಗಾಡಿಸುವ ಮಟ್ಟಕ್ಕೆ ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆದು ನಿಂತಿವೆ. ಸ್ವತಂತ್ರ, ನಿರ್ಭೀತ ಪತ್ರಿಕೆಗಳ ಹಾಗೂ ಪತ್ರಕರ್ತರ ದನಿ ಅಡಗಿಸಲು ಈ ಹಿಟ್ಲರ್‌ಶಾಹಿಗಳು ದೇಶಾದ್ಯಂತ ಸೃಷ್ಟಿಸುತ್ತಿರುವ ಭೀಭತ್ಸಕ್ಕೆ ಗೌರಿಯವರ ಹತ್ಯೆಯೇ ಸಾಕ್ಷಿ. ದೀನ ದಲಿತರ, ದುರ್ಬಲರ ದನಿಯಾಗಬೇಕಿದ್ದ ಮಾಧ್ಯಮ ಕ್ಷೇತ್ರವನ್ನು ಇಡಿಯಾಗಿ ಕಾರ್ಪೊರೇಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಸಾಮಾಜಿಕ ಮಾಧ್ಯಮದಲ್ಲೂ ಫ್ಯಾಸಿಸ್ಟ್‌ಗಳದೇ ಕಾರುಬಾರು.

ಹಿಟ್ಲರ್‌ಶಾಹಿಗಳು ಸೃಷ್ಟಿಸಿರುವ ಇಂಥ ವಿಷಮ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸದೆ ಹೋದರೆ ಈ ದೇಶದ ಪ್ರಜಾತಂತ್ರದ ಅಸ್ತಿತ್ವಕ್ಕೇ ಸಂಚಕಾರ ಒದಗುವ ಅಪಾಯವಿದೆ. ಈ ಕಾಲದ ಕರೆಗೆ ಓಗೊಡಬೇಕಾದ್ದು ಜನಪರ ಪತ್ರಿಕೆಯೊಂದರ ಆದ್ಯ ಕರ್ತವ್ಯ. ‘ನಾನು ಗೌರಿ’ ಪತ್ರಿಕೆ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧವಾಗಿದೆ. ಹಾಗೆಯೇ ಗದ್ದುಗೆಯಲ್ಲಿರುವವರ ಜನವಿರೋಧಿತನವನ್ನು ಎದುರಿಸಿ ನಿರಂತರ ವಿರೋಧ ಪಕ್ಷವಾಗಿ ನಿಲ್ಲುವ ಆಶಯ ನಮ್ಮದು. ಯಾವುದೇ ರಾಜಕೀಯ ಪಕ್ಷದ, ರಾಜಕಾರಣಿಗಳ ಮರ್ಜಿಗೆ ಒಳಗಾಗದೆ ಅಥವ ಜಾಹಿರಾತುಗಳ ಹಂಗಿಗೆ ಸಿಲುಕದೆ ಪತ್ರಿಕಾ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ‘ನಾನು ಗೌರಿ’ ಬದ್ಧವಾಗಿರುತ್ತದೆ.

ಪತ್ರಿಕೆಯ ಸ್ವಭಾವ ಮತ್ತು ಗುಣಮಟ್ಟಗಳನ್ನು ಉತ್ತಮಪಡಿಸುವ ನಿರಂತರ ಪ್ರಕ್ರಿಯೆಯ ಭಾಗವಾಗಿ ಹೊಸದಾರಿಯಲ್ಲಿ ಸಾಗುತ್ತೇವೆ. ಇದರ ಭಾಗವಾಗಿ ಹೊಸ ತಲೆಮಾರಿನ ಬರಹಗಾರರನ್ನು ಒಳಗೊಳ್ಳುವುದು ಮಾತ್ರವಲ್ಲದೆ, ವಿವಿಧ ಜನಪರ ಚಳವಳಿಗಳ ನಮ್ಮ ನಡುವಿನ ಭಿನ್ನ ವಿಚಾರ ಧಾರೆಗಳ ನಡುವೆ ರಚನಾತ್ಮಕ ಸಂವಾದಕ್ಕೆ ‘ಪತ್ರಿಕೆ’ ವೇದಿಕೆಯಾಗಲಿದೆ. ವರ್ತಮಾನಕ್ಕೆ ಸಂವಾದಿಯಾಗಿ ಬರಹದಲ್ಲಿ ತೊಡಗಿಸಿಕೊಂಡಿರುವ ಹಲವು ಗಣ್ಯರ ಅಂಕಣಗಳೂ ಇರುತ್ತವೆ. ದಿಕ್ಕೆಟ್ಟ ರಾಜಕಾರಣ, ಆರ್ಥಿಕ ಕ್ಷೇತ್ರದ ಕಾರ್ಪೊರೇಟ್ ಹಿಡಿತ, ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು, ಸಾಹಿತ್ಯ, ಸಿನಿಮಾ, ವಿಮರ್ಶೆ ಇತ್ಯಾದಿ ಹತ್ತು ಹಲವು ಬಗೆಯ ಬರಹಗಳನ್ನು ಪತ್ರಿಕೆ ಒಳಗೊಳ್ಳಲಿದೆ. ಕನ್ನಡದ ಜಾಣ, ಜಾಣೆಯರು ಇಷ್ಟಪಡುವ ರಂಜನೆ, ಬೋಧನೆ, ಪ್ರಚೋದನೆಗೆ ಪೂರಕವಾದ ಬರಹಗಳೂ ಇರುತ್ತವೆ.

ಗೌರಿ ಹತ್ಯೆಯನ್ನು ಖಂಡಿಸಿ, ಈ ಹಿಂದೆ ಗೌರಿ ಪ್ರತಿಭಟಿಸಿದ್ದ ಜಾಗದಲ್ಲೇ ಪ್ರಗತಿಪರರ ಪ್ರತಿಭಟನೆ!

ಗೌರಿ ಲಂಕೇಶ್‌ರ ಸಹೋದ್ಯೋಗಿಗಳಾಗಿದ್ದ ಬಹುತೇಕ ಲೇಖಕ, ಲೇಖಕಿಯರು ಹಾಗೂ ಇಡೀ ಕಚೇರಿ ಸಿಬ್ಬಂದಿ ಈ ಹೊಸ ಪ್ರಯತ್ನದಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿರುವುದು ನಮ್ಮ ಶಕ್ತಿಯನ್ನು ಇಮ್ಮಡಿಸಿದೆ. ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೆಂದರೆ ‘ನಾನು ಗೌರಿ’ ಪತ್ರಿಕೆ ಯಾರೊಬ್ಬರ ಖಾಸಗಿ ಸ್ವತ್ತಲ್ಲ. ಗೌರಿಯವರ ಆಶಯದೊಂದಿಗೆ ಏಕೀಭವಿಸುವ ಲಕ್ಷಾಂತರ ಜನರು ಪತ್ರಿಕೆ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗೆ ಹೇಳಬೇಕೆಂದರೆ ಈ ಪತ್ರಿಕೆ ಗೌರಿ ಆಶಯವನ್ನು ಪ್ರತಿನಿಧಿಸುವ ಎಲ್ಲರಿಗೂ ಸೇರಿದ್ದು.

ಈ ಡಿಜಿಟಲ್ ಮಾಧ್ಯಮದ ಯುಗದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಅದೆಷ್ಟೋ ಹಿರಿಯರು, ಹಿತೈಷಿಗಳು ಕಿವಿ ಮಾತು ಹೇಳಿದ್ದಾರೆ. ಇದು ಸುಗಮವಾದ ಹಾದಿಯಲ್ಲ ಎಂಬುದು ನಿಜ. ಆದರೆ ನಾಡಿನಾದ್ಯಂತ ‘ಪತ್ರಿಕೆ’ಗಾಗಿ ಆಗ್ರಹಿಸುತ್ತಿರುವವರ ಸಂಖ್ಯೆಯೂ ದೊಡ್ಡದಿದೆ ಎಂಬುದೂ ನಿಜ. ಆದರೆ ಗೌರಿ ಪತ್ರಿಕೆಯನ್ನು ಮುಂದುವರೆಸುವುದು ಭಾವನಾತ್ಮಕ ವಿಷಯ ಎಂಬುದಕ್ಕಿಂತಲೂ ಹೆಚ್ಚಾಗಿ ನಮ್ಮ ಬದ್ಧತೆಗೆ ಸಂಬಂಧಿಸಿದ್ದು. ನಿಮ್ಮಲ್ಲರ ಬೆಂಬಲ, ಪ್ರೋತ್ಸಾಹಗಳ ಬಲದಿಂದ ಪತ್ರಿಕೆ ನಡೆಸುವ ಸಂಕಷ್ಟವನ್ನು ದಾಟಬಹುದೆಂಬ ವಿಶ್ವಾಸ ನಮ್ಮದು.

ಪ್ರತಿರೋಧ ಸಮಾವೇಶದಲ್ಲಿ ಗೌರಿ ಹತ್ಯಗೆ ಮಿಡಿದ ಜನಸಾಗರ

ನಮ್ಮೆಲ್ಲರ ಹೃದಯದಾಳದಲ್ಲಿ ಮಡುಗಟ್ಟಿದ ನೋವು, ಆಕ್ರೋಶಗಳು ನಮ್ಮ ಈ ಬದ್ಧತೆಯನ್ನು ಗಟ್ಟಿಗೊಳಿಸಿ, ಪತ್ರಿಕೆಯ ಮರುಹುಟ್ಟಿಗೆ ಭದ್ರ ಬುನಾದಿ ಹಾಕಿಕೊಟ್ಟಿವೆ. ಈ ಸವಾಲಿನ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸದಿಂದ ನಮ್ಮ ತಂಡ ಕಾರ್ಯೋನ್ಮುಖವಾಗಿದೆ. ಹಾಗೆಂದು ಸಮಸ್ಯೆಗಳೇ ಇರುವುದಿಲ್ಲ, ತಪ್ಪುಗಳೇ ಆಗುವುದಿಲ್ಲ ಎಂದರ್ಥವಲ್ಲ. ನಾವು ಎಡವಿದಾಗ ನೀವು ನಮ್ಮ ಕೈಹಿಡಿಯುತ್ತೀರಿ, ತಪ್ಪು ಮಾಡಿದಾಗ ಕಿವಿ ಹಿಂಡುತ್ತೀರಿ, ಪತ್ರಿಕೆಯ ನೋವು-ನಲಿವುಗಳಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ತುಂಬು ವಿಶ್ವಾಸ ನಮ್ಮದು.

ಕೊನೆಯದಾಗಿ, ಈಜಿಪ್ಟ್ ಬಂಡಾಯದ ಸಂದರ್ಭದಲ್ಲಿ ಹುಟ್ಟಿಕೊಂಡ ಒಂದು ಮಾತು ನೆನಪಿಸುತ್ತೇನೆ. “The power of the people is stronger than the people in power”. ಅಂದರೆ ಅಧಿಕಾರದಲ್ಲಿರುವವರ ಬಲಕ್ಕಿಂತ ಜನಶಕ್ತಿಯ ಬಲ ಹೆಚ್ಚು ಬಲಿಷ್ಠವಾದುದು. ಅಂಥಾ ಜನಶಕ್ತಿಯ ಬಲವನ್ನು ನಿರೂಪಿಸಲು ನಾವೆಲ್ಲರೂ ಒಗ್ಗೂಡೋಣ. ಗೆಲುವಿನ ಹಾದಿ ನಮ್ಮದು.
ನಾನು ಗೌರಿ! ನಾವೆಲ್ಲಾ ಗೌರಿ!!

ಗೌರಿ ಮೀಡಿಯಾ ಟ್ರಸ್ಟ್ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...