Homeಅಂಕಣಗಳುಗೌರಿ ಆಶಯಗಳ ಜೊತೆಗೆ.....

ಗೌರಿ ಆಶಯಗಳ ಜೊತೆಗೆ…..

- Advertisement -
- Advertisement -

ಬಂಧುಗಳೇ,

ಗೌರಿ ಲಂಕೇಶ್‌ರ ಹತ್ಯೆ ಮಾಡುವ ಮೂಲಕ ತಮ್ಮ ವಿರುದ್ಧದ ಗಟ್ಟಿದನಿಯನ್ನು ಇಲ್ಲವಾಗಿಸುವುದು ಆ ಸಂಚುಕೂಟದ ಲೆಕ್ಕಾಚಾರವಾಗಿತ್ತು. ಆದರೆ ಈ ನಾಡಿನ ಜನತೆ ‘ನಾನೂ ಗೌರಿ! ನಾವೆಲ್ಲಾ ಗೌರಿ!!’ ಎಂದು ಒಕ್ಕೊರಲಿನಿಂದ ಕೂಗಿ ಹೇಳಿ ಈ ಸಂಚುಕೂಟಕ್ಕೆ ಬೇರೆಯದೇ ಸಂದೇಶವನ್ನು ರವಾನಿಸಿದ್ದಾರೆ. ”ವ್ಯಕ್ತಿಗಳಿಗೆ ಗುಂಡಿಕ್ಕಬಹುದೇ ಹೊರತು ವಿಚಾರಗಳಿಗೆ ಗುಂಡಿಕ್ಕಲು ನಿಮ್ಮಿಂದ ಎಂದಿಗೂ ಸಾಧ್ಯವಿಲ್ಲ” ಎಂದು ಸಾರಿ ಹೇಳಿದ್ದಾರೆ. ‘ಒಬ್ಬ ಗೌರಿಯ ವಿಚಾರವನ್ನು ಸಾವಿರಾರು ಗೌರಿಯರಾಗಿ ನಾವು ಮುಂದುವರೆಸುತ್ತೇವೆ’ ಎಂಬ ಪಣ ತೊಟ್ಟಿದ್ದಾರೆ.

ಇಂಥ ಒಂದು ಸಾಮೂಹಿಕ ದೃಢ ಸಂಕಲ್ಪದ ಫಲವಾಗಿ ‘ನಾನು ಗೌರಿ’ ಪತ್ರಿಕೆ ಆರಂಭವಾಗಿದೆ. ಪತ್ರಿಕೆಯ ಆರಂಭದೊಂದಿಗೆ ನಮ್ಮ ಗೌರಿ ಲಂಕೇಶ್ ಮರುಹುಟ್ಟು ಪಡೆದಿದ್ದಾರೆ. ಗೌರಿ ಇಲ್ಲದ ಈ ಸಂಕಟಮಯ ಸನ್ನಿವೇಶದಲ್ಲಿ ಗೌರಿ ಪತ್ರಿಕೆಯನ್ನು ಹೊರತರಲು ಕೈಜೋಡಿಸಿದ ಎಲ್ಲರಿಗೂ ‘ಗೌರಿ ಮೀಡಿಯಾ’ ತಂಡದ ಹೃದಯಪೂರ್ವಕ ಕೃತಜ್ಞತೆಗಳು.

ಲಂಕೇಶ್‌ರು ಹುಟ್ಟುಹಾಕಿದ ಜನಪರ, ನಿರ್ಭೀತ ಪತ್ರಿಕೋದ್ಯಮದ ಮಾದರಿಯನ್ನು ಮುಂದುವರೆಸಿದ ಗೌರಿ ಲಂಕೇಶ್ ಆಕ್ಟಿವಿಸ್ಟ್ ಆಗಿ, ಪತ್ರಕರ್ತೆಯಾಗಿ ಹಾಕಿಕೊಟ್ಟ ಮಾದರಿ ನಮಗೆ ಸದಾ ಸ್ಫೂರ್ತಿ. ಈ ಎರಡೂ ಲೆಗಸಿಗಳನ್ನು ಮುಂದುವರೆಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜೊತೆಗೆ ಈ ಕಾಲಘಟ್ಟದ ಹೊಸ ಸಂಕೀರ್ಣತೆಗಳಿಗೆ ಮುಖಾಮುಖಿಯಾಗಬೇಕಿರುವ ಸವಾಲು ನಮ್ಮ ಮುಂದಿದೆಯೆಂಬುದನ್ನೂ ಅರಿತು ಮುಂದಡಿ ಇಡುತ್ತಿದ್ದೇವೆ.

ಕಲ್ಬುರ್ಗಿ ಹತ್ಯೆ ಖಂಡಿಸಿ ಗೌರಿ ಹಾಗೂ ಇನ್ನಿತರೆ ಪ್ರಗತಿಪರರ ಪ್ರತಿಭಟನೆ

ಇಂದು ನಮ್ಮ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ. ನಮ್ಮ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಬುನಾದಿಯನ್ನೇ ಅಲುಗಾಡಿಸುವ ಮಟ್ಟಕ್ಕೆ ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆದು ನಿಂತಿವೆ. ಸ್ವತಂತ್ರ, ನಿರ್ಭೀತ ಪತ್ರಿಕೆಗಳ ಹಾಗೂ ಪತ್ರಕರ್ತರ ದನಿ ಅಡಗಿಸಲು ಈ ಹಿಟ್ಲರ್‌ಶಾಹಿಗಳು ದೇಶಾದ್ಯಂತ ಸೃಷ್ಟಿಸುತ್ತಿರುವ ಭೀಭತ್ಸಕ್ಕೆ ಗೌರಿಯವರ ಹತ್ಯೆಯೇ ಸಾಕ್ಷಿ. ದೀನ ದಲಿತರ, ದುರ್ಬಲರ ದನಿಯಾಗಬೇಕಿದ್ದ ಮಾಧ್ಯಮ ಕ್ಷೇತ್ರವನ್ನು ಇಡಿಯಾಗಿ ಕಾರ್ಪೊರೇಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಸಾಮಾಜಿಕ ಮಾಧ್ಯಮದಲ್ಲೂ ಫ್ಯಾಸಿಸ್ಟ್‌ಗಳದೇ ಕಾರುಬಾರು.

ಹಿಟ್ಲರ್‌ಶಾಹಿಗಳು ಸೃಷ್ಟಿಸಿರುವ ಇಂಥ ವಿಷಮ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸದೆ ಹೋದರೆ ಈ ದೇಶದ ಪ್ರಜಾತಂತ್ರದ ಅಸ್ತಿತ್ವಕ್ಕೇ ಸಂಚಕಾರ ಒದಗುವ ಅಪಾಯವಿದೆ. ಈ ಕಾಲದ ಕರೆಗೆ ಓಗೊಡಬೇಕಾದ್ದು ಜನಪರ ಪತ್ರಿಕೆಯೊಂದರ ಆದ್ಯ ಕರ್ತವ್ಯ. ‘ನಾನು ಗೌರಿ’ ಪತ್ರಿಕೆ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧವಾಗಿದೆ. ಹಾಗೆಯೇ ಗದ್ದುಗೆಯಲ್ಲಿರುವವರ ಜನವಿರೋಧಿತನವನ್ನು ಎದುರಿಸಿ ನಿರಂತರ ವಿರೋಧ ಪಕ್ಷವಾಗಿ ನಿಲ್ಲುವ ಆಶಯ ನಮ್ಮದು. ಯಾವುದೇ ರಾಜಕೀಯ ಪಕ್ಷದ, ರಾಜಕಾರಣಿಗಳ ಮರ್ಜಿಗೆ ಒಳಗಾಗದೆ ಅಥವ ಜಾಹಿರಾತುಗಳ ಹಂಗಿಗೆ ಸಿಲುಕದೆ ಪತ್ರಿಕಾ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ‘ನಾನು ಗೌರಿ’ ಬದ್ಧವಾಗಿರುತ್ತದೆ.

ಪತ್ರಿಕೆಯ ಸ್ವಭಾವ ಮತ್ತು ಗುಣಮಟ್ಟಗಳನ್ನು ಉತ್ತಮಪಡಿಸುವ ನಿರಂತರ ಪ್ರಕ್ರಿಯೆಯ ಭಾಗವಾಗಿ ಹೊಸದಾರಿಯಲ್ಲಿ ಸಾಗುತ್ತೇವೆ. ಇದರ ಭಾಗವಾಗಿ ಹೊಸ ತಲೆಮಾರಿನ ಬರಹಗಾರರನ್ನು ಒಳಗೊಳ್ಳುವುದು ಮಾತ್ರವಲ್ಲದೆ, ವಿವಿಧ ಜನಪರ ಚಳವಳಿಗಳ ನಮ್ಮ ನಡುವಿನ ಭಿನ್ನ ವಿಚಾರ ಧಾರೆಗಳ ನಡುವೆ ರಚನಾತ್ಮಕ ಸಂವಾದಕ್ಕೆ ‘ಪತ್ರಿಕೆ’ ವೇದಿಕೆಯಾಗಲಿದೆ. ವರ್ತಮಾನಕ್ಕೆ ಸಂವಾದಿಯಾಗಿ ಬರಹದಲ್ಲಿ ತೊಡಗಿಸಿಕೊಂಡಿರುವ ಹಲವು ಗಣ್ಯರ ಅಂಕಣಗಳೂ ಇರುತ್ತವೆ. ದಿಕ್ಕೆಟ್ಟ ರಾಜಕಾರಣ, ಆರ್ಥಿಕ ಕ್ಷೇತ್ರದ ಕಾರ್ಪೊರೇಟ್ ಹಿಡಿತ, ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು, ಸಾಹಿತ್ಯ, ಸಿನಿಮಾ, ವಿಮರ್ಶೆ ಇತ್ಯಾದಿ ಹತ್ತು ಹಲವು ಬಗೆಯ ಬರಹಗಳನ್ನು ಪತ್ರಿಕೆ ಒಳಗೊಳ್ಳಲಿದೆ. ಕನ್ನಡದ ಜಾಣ, ಜಾಣೆಯರು ಇಷ್ಟಪಡುವ ರಂಜನೆ, ಬೋಧನೆ, ಪ್ರಚೋದನೆಗೆ ಪೂರಕವಾದ ಬರಹಗಳೂ ಇರುತ್ತವೆ.

ಗೌರಿ ಹತ್ಯೆಯನ್ನು ಖಂಡಿಸಿ, ಈ ಹಿಂದೆ ಗೌರಿ ಪ್ರತಿಭಟಿಸಿದ್ದ ಜಾಗದಲ್ಲೇ ಪ್ರಗತಿಪರರ ಪ್ರತಿಭಟನೆ!

ಗೌರಿ ಲಂಕೇಶ್‌ರ ಸಹೋದ್ಯೋಗಿಗಳಾಗಿದ್ದ ಬಹುತೇಕ ಲೇಖಕ, ಲೇಖಕಿಯರು ಹಾಗೂ ಇಡೀ ಕಚೇರಿ ಸಿಬ್ಬಂದಿ ಈ ಹೊಸ ಪ್ರಯತ್ನದಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿರುವುದು ನಮ್ಮ ಶಕ್ತಿಯನ್ನು ಇಮ್ಮಡಿಸಿದೆ. ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೆಂದರೆ ‘ನಾನು ಗೌರಿ’ ಪತ್ರಿಕೆ ಯಾರೊಬ್ಬರ ಖಾಸಗಿ ಸ್ವತ್ತಲ್ಲ. ಗೌರಿಯವರ ಆಶಯದೊಂದಿಗೆ ಏಕೀಭವಿಸುವ ಲಕ್ಷಾಂತರ ಜನರು ಪತ್ರಿಕೆ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗೆ ಹೇಳಬೇಕೆಂದರೆ ಈ ಪತ್ರಿಕೆ ಗೌರಿ ಆಶಯವನ್ನು ಪ್ರತಿನಿಧಿಸುವ ಎಲ್ಲರಿಗೂ ಸೇರಿದ್ದು.

ಈ ಡಿಜಿಟಲ್ ಮಾಧ್ಯಮದ ಯುಗದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಅದೆಷ್ಟೋ ಹಿರಿಯರು, ಹಿತೈಷಿಗಳು ಕಿವಿ ಮಾತು ಹೇಳಿದ್ದಾರೆ. ಇದು ಸುಗಮವಾದ ಹಾದಿಯಲ್ಲ ಎಂಬುದು ನಿಜ. ಆದರೆ ನಾಡಿನಾದ್ಯಂತ ‘ಪತ್ರಿಕೆ’ಗಾಗಿ ಆಗ್ರಹಿಸುತ್ತಿರುವವರ ಸಂಖ್ಯೆಯೂ ದೊಡ್ಡದಿದೆ ಎಂಬುದೂ ನಿಜ. ಆದರೆ ಗೌರಿ ಪತ್ರಿಕೆಯನ್ನು ಮುಂದುವರೆಸುವುದು ಭಾವನಾತ್ಮಕ ವಿಷಯ ಎಂಬುದಕ್ಕಿಂತಲೂ ಹೆಚ್ಚಾಗಿ ನಮ್ಮ ಬದ್ಧತೆಗೆ ಸಂಬಂಧಿಸಿದ್ದು. ನಿಮ್ಮಲ್ಲರ ಬೆಂಬಲ, ಪ್ರೋತ್ಸಾಹಗಳ ಬಲದಿಂದ ಪತ್ರಿಕೆ ನಡೆಸುವ ಸಂಕಷ್ಟವನ್ನು ದಾಟಬಹುದೆಂಬ ವಿಶ್ವಾಸ ನಮ್ಮದು.

ಪ್ರತಿರೋಧ ಸಮಾವೇಶದಲ್ಲಿ ಗೌರಿ ಹತ್ಯಗೆ ಮಿಡಿದ ಜನಸಾಗರ

ನಮ್ಮೆಲ್ಲರ ಹೃದಯದಾಳದಲ್ಲಿ ಮಡುಗಟ್ಟಿದ ನೋವು, ಆಕ್ರೋಶಗಳು ನಮ್ಮ ಈ ಬದ್ಧತೆಯನ್ನು ಗಟ್ಟಿಗೊಳಿಸಿ, ಪತ್ರಿಕೆಯ ಮರುಹುಟ್ಟಿಗೆ ಭದ್ರ ಬುನಾದಿ ಹಾಕಿಕೊಟ್ಟಿವೆ. ಈ ಸವಾಲಿನ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸದಿಂದ ನಮ್ಮ ತಂಡ ಕಾರ್ಯೋನ್ಮುಖವಾಗಿದೆ. ಹಾಗೆಂದು ಸಮಸ್ಯೆಗಳೇ ಇರುವುದಿಲ್ಲ, ತಪ್ಪುಗಳೇ ಆಗುವುದಿಲ್ಲ ಎಂದರ್ಥವಲ್ಲ. ನಾವು ಎಡವಿದಾಗ ನೀವು ನಮ್ಮ ಕೈಹಿಡಿಯುತ್ತೀರಿ, ತಪ್ಪು ಮಾಡಿದಾಗ ಕಿವಿ ಹಿಂಡುತ್ತೀರಿ, ಪತ್ರಿಕೆಯ ನೋವು-ನಲಿವುಗಳಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ತುಂಬು ವಿಶ್ವಾಸ ನಮ್ಮದು.

ಕೊನೆಯದಾಗಿ, ಈಜಿಪ್ಟ್ ಬಂಡಾಯದ ಸಂದರ್ಭದಲ್ಲಿ ಹುಟ್ಟಿಕೊಂಡ ಒಂದು ಮಾತು ನೆನಪಿಸುತ್ತೇನೆ. “The power of the people is stronger than the people in power”. ಅಂದರೆ ಅಧಿಕಾರದಲ್ಲಿರುವವರ ಬಲಕ್ಕಿಂತ ಜನಶಕ್ತಿಯ ಬಲ ಹೆಚ್ಚು ಬಲಿಷ್ಠವಾದುದು. ಅಂಥಾ ಜನಶಕ್ತಿಯ ಬಲವನ್ನು ನಿರೂಪಿಸಲು ನಾವೆಲ್ಲರೂ ಒಗ್ಗೂಡೋಣ. ಗೆಲುವಿನ ಹಾದಿ ನಮ್ಮದು.
ನಾನು ಗೌರಿ! ನಾವೆಲ್ಲಾ ಗೌರಿ!!

ಗೌರಿ ಮೀಡಿಯಾ ಟ್ರಸ್ಟ್ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...