Homeಅಂಕಣಗಳುಗೌರಿ ಆಶಯಗಳ ಜೊತೆಗೆ.....

ಗೌರಿ ಆಶಯಗಳ ಜೊತೆಗೆ…..

- Advertisement -
- Advertisement -

ಬಂಧುಗಳೇ,

ಗೌರಿ ಲಂಕೇಶ್‌ರ ಹತ್ಯೆ ಮಾಡುವ ಮೂಲಕ ತಮ್ಮ ವಿರುದ್ಧದ ಗಟ್ಟಿದನಿಯನ್ನು ಇಲ್ಲವಾಗಿಸುವುದು ಆ ಸಂಚುಕೂಟದ ಲೆಕ್ಕಾಚಾರವಾಗಿತ್ತು. ಆದರೆ ಈ ನಾಡಿನ ಜನತೆ ‘ನಾನೂ ಗೌರಿ! ನಾವೆಲ್ಲಾ ಗೌರಿ!!’ ಎಂದು ಒಕ್ಕೊರಲಿನಿಂದ ಕೂಗಿ ಹೇಳಿ ಈ ಸಂಚುಕೂಟಕ್ಕೆ ಬೇರೆಯದೇ ಸಂದೇಶವನ್ನು ರವಾನಿಸಿದ್ದಾರೆ. ”ವ್ಯಕ್ತಿಗಳಿಗೆ ಗುಂಡಿಕ್ಕಬಹುದೇ ಹೊರತು ವಿಚಾರಗಳಿಗೆ ಗುಂಡಿಕ್ಕಲು ನಿಮ್ಮಿಂದ ಎಂದಿಗೂ ಸಾಧ್ಯವಿಲ್ಲ” ಎಂದು ಸಾರಿ ಹೇಳಿದ್ದಾರೆ. ‘ಒಬ್ಬ ಗೌರಿಯ ವಿಚಾರವನ್ನು ಸಾವಿರಾರು ಗೌರಿಯರಾಗಿ ನಾವು ಮುಂದುವರೆಸುತ್ತೇವೆ’ ಎಂಬ ಪಣ ತೊಟ್ಟಿದ್ದಾರೆ.

ಇಂಥ ಒಂದು ಸಾಮೂಹಿಕ ದೃಢ ಸಂಕಲ್ಪದ ಫಲವಾಗಿ ‘ನಾನು ಗೌರಿ’ ಪತ್ರಿಕೆ ಆರಂಭವಾಗಿದೆ. ಪತ್ರಿಕೆಯ ಆರಂಭದೊಂದಿಗೆ ನಮ್ಮ ಗೌರಿ ಲಂಕೇಶ್ ಮರುಹುಟ್ಟು ಪಡೆದಿದ್ದಾರೆ. ಗೌರಿ ಇಲ್ಲದ ಈ ಸಂಕಟಮಯ ಸನ್ನಿವೇಶದಲ್ಲಿ ಗೌರಿ ಪತ್ರಿಕೆಯನ್ನು ಹೊರತರಲು ಕೈಜೋಡಿಸಿದ ಎಲ್ಲರಿಗೂ ‘ಗೌರಿ ಮೀಡಿಯಾ’ ತಂಡದ ಹೃದಯಪೂರ್ವಕ ಕೃತಜ್ಞತೆಗಳು.

ಲಂಕೇಶ್‌ರು ಹುಟ್ಟುಹಾಕಿದ ಜನಪರ, ನಿರ್ಭೀತ ಪತ್ರಿಕೋದ್ಯಮದ ಮಾದರಿಯನ್ನು ಮುಂದುವರೆಸಿದ ಗೌರಿ ಲಂಕೇಶ್ ಆಕ್ಟಿವಿಸ್ಟ್ ಆಗಿ, ಪತ್ರಕರ್ತೆಯಾಗಿ ಹಾಕಿಕೊಟ್ಟ ಮಾದರಿ ನಮಗೆ ಸದಾ ಸ್ಫೂರ್ತಿ. ಈ ಎರಡೂ ಲೆಗಸಿಗಳನ್ನು ಮುಂದುವರೆಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜೊತೆಗೆ ಈ ಕಾಲಘಟ್ಟದ ಹೊಸ ಸಂಕೀರ್ಣತೆಗಳಿಗೆ ಮುಖಾಮುಖಿಯಾಗಬೇಕಿರುವ ಸವಾಲು ನಮ್ಮ ಮುಂದಿದೆಯೆಂಬುದನ್ನೂ ಅರಿತು ಮುಂದಡಿ ಇಡುತ್ತಿದ್ದೇವೆ.

ಕಲ್ಬುರ್ಗಿ ಹತ್ಯೆ ಖಂಡಿಸಿ ಗೌರಿ ಹಾಗೂ ಇನ್ನಿತರೆ ಪ್ರಗತಿಪರರ ಪ್ರತಿಭಟನೆ

ಇಂದು ನಮ್ಮ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ. ನಮ್ಮ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಬುನಾದಿಯನ್ನೇ ಅಲುಗಾಡಿಸುವ ಮಟ್ಟಕ್ಕೆ ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆದು ನಿಂತಿವೆ. ಸ್ವತಂತ್ರ, ನಿರ್ಭೀತ ಪತ್ರಿಕೆಗಳ ಹಾಗೂ ಪತ್ರಕರ್ತರ ದನಿ ಅಡಗಿಸಲು ಈ ಹಿಟ್ಲರ್‌ಶಾಹಿಗಳು ದೇಶಾದ್ಯಂತ ಸೃಷ್ಟಿಸುತ್ತಿರುವ ಭೀಭತ್ಸಕ್ಕೆ ಗೌರಿಯವರ ಹತ್ಯೆಯೇ ಸಾಕ್ಷಿ. ದೀನ ದಲಿತರ, ದುರ್ಬಲರ ದನಿಯಾಗಬೇಕಿದ್ದ ಮಾಧ್ಯಮ ಕ್ಷೇತ್ರವನ್ನು ಇಡಿಯಾಗಿ ಕಾರ್ಪೊರೇಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಸಾಮಾಜಿಕ ಮಾಧ್ಯಮದಲ್ಲೂ ಫ್ಯಾಸಿಸ್ಟ್‌ಗಳದೇ ಕಾರುಬಾರು.

ಹಿಟ್ಲರ್‌ಶಾಹಿಗಳು ಸೃಷ್ಟಿಸಿರುವ ಇಂಥ ವಿಷಮ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸದೆ ಹೋದರೆ ಈ ದೇಶದ ಪ್ರಜಾತಂತ್ರದ ಅಸ್ತಿತ್ವಕ್ಕೇ ಸಂಚಕಾರ ಒದಗುವ ಅಪಾಯವಿದೆ. ಈ ಕಾಲದ ಕರೆಗೆ ಓಗೊಡಬೇಕಾದ್ದು ಜನಪರ ಪತ್ರಿಕೆಯೊಂದರ ಆದ್ಯ ಕರ್ತವ್ಯ. ‘ನಾನು ಗೌರಿ’ ಪತ್ರಿಕೆ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧವಾಗಿದೆ. ಹಾಗೆಯೇ ಗದ್ದುಗೆಯಲ್ಲಿರುವವರ ಜನವಿರೋಧಿತನವನ್ನು ಎದುರಿಸಿ ನಿರಂತರ ವಿರೋಧ ಪಕ್ಷವಾಗಿ ನಿಲ್ಲುವ ಆಶಯ ನಮ್ಮದು. ಯಾವುದೇ ರಾಜಕೀಯ ಪಕ್ಷದ, ರಾಜಕಾರಣಿಗಳ ಮರ್ಜಿಗೆ ಒಳಗಾಗದೆ ಅಥವ ಜಾಹಿರಾತುಗಳ ಹಂಗಿಗೆ ಸಿಲುಕದೆ ಪತ್ರಿಕಾ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ‘ನಾನು ಗೌರಿ’ ಬದ್ಧವಾಗಿರುತ್ತದೆ.

ಪತ್ರಿಕೆಯ ಸ್ವಭಾವ ಮತ್ತು ಗುಣಮಟ್ಟಗಳನ್ನು ಉತ್ತಮಪಡಿಸುವ ನಿರಂತರ ಪ್ರಕ್ರಿಯೆಯ ಭಾಗವಾಗಿ ಹೊಸದಾರಿಯಲ್ಲಿ ಸಾಗುತ್ತೇವೆ. ಇದರ ಭಾಗವಾಗಿ ಹೊಸ ತಲೆಮಾರಿನ ಬರಹಗಾರರನ್ನು ಒಳಗೊಳ್ಳುವುದು ಮಾತ್ರವಲ್ಲದೆ, ವಿವಿಧ ಜನಪರ ಚಳವಳಿಗಳ ನಮ್ಮ ನಡುವಿನ ಭಿನ್ನ ವಿಚಾರ ಧಾರೆಗಳ ನಡುವೆ ರಚನಾತ್ಮಕ ಸಂವಾದಕ್ಕೆ ‘ಪತ್ರಿಕೆ’ ವೇದಿಕೆಯಾಗಲಿದೆ. ವರ್ತಮಾನಕ್ಕೆ ಸಂವಾದಿಯಾಗಿ ಬರಹದಲ್ಲಿ ತೊಡಗಿಸಿಕೊಂಡಿರುವ ಹಲವು ಗಣ್ಯರ ಅಂಕಣಗಳೂ ಇರುತ್ತವೆ. ದಿಕ್ಕೆಟ್ಟ ರಾಜಕಾರಣ, ಆರ್ಥಿಕ ಕ್ಷೇತ್ರದ ಕಾರ್ಪೊರೇಟ್ ಹಿಡಿತ, ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು, ಸಾಹಿತ್ಯ, ಸಿನಿಮಾ, ವಿಮರ್ಶೆ ಇತ್ಯಾದಿ ಹತ್ತು ಹಲವು ಬಗೆಯ ಬರಹಗಳನ್ನು ಪತ್ರಿಕೆ ಒಳಗೊಳ್ಳಲಿದೆ. ಕನ್ನಡದ ಜಾಣ, ಜಾಣೆಯರು ಇಷ್ಟಪಡುವ ರಂಜನೆ, ಬೋಧನೆ, ಪ್ರಚೋದನೆಗೆ ಪೂರಕವಾದ ಬರಹಗಳೂ ಇರುತ್ತವೆ.

ಗೌರಿ ಹತ್ಯೆಯನ್ನು ಖಂಡಿಸಿ, ಈ ಹಿಂದೆ ಗೌರಿ ಪ್ರತಿಭಟಿಸಿದ್ದ ಜಾಗದಲ್ಲೇ ಪ್ರಗತಿಪರರ ಪ್ರತಿಭಟನೆ!

ಗೌರಿ ಲಂಕೇಶ್‌ರ ಸಹೋದ್ಯೋಗಿಗಳಾಗಿದ್ದ ಬಹುತೇಕ ಲೇಖಕ, ಲೇಖಕಿಯರು ಹಾಗೂ ಇಡೀ ಕಚೇರಿ ಸಿಬ್ಬಂದಿ ಈ ಹೊಸ ಪ್ರಯತ್ನದಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿರುವುದು ನಮ್ಮ ಶಕ್ತಿಯನ್ನು ಇಮ್ಮಡಿಸಿದೆ. ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೆಂದರೆ ‘ನಾನು ಗೌರಿ’ ಪತ್ರಿಕೆ ಯಾರೊಬ್ಬರ ಖಾಸಗಿ ಸ್ವತ್ತಲ್ಲ. ಗೌರಿಯವರ ಆಶಯದೊಂದಿಗೆ ಏಕೀಭವಿಸುವ ಲಕ್ಷಾಂತರ ಜನರು ಪತ್ರಿಕೆ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗೆ ಹೇಳಬೇಕೆಂದರೆ ಈ ಪತ್ರಿಕೆ ಗೌರಿ ಆಶಯವನ್ನು ಪ್ರತಿನಿಧಿಸುವ ಎಲ್ಲರಿಗೂ ಸೇರಿದ್ದು.

ಈ ಡಿಜಿಟಲ್ ಮಾಧ್ಯಮದ ಯುಗದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಅದೆಷ್ಟೋ ಹಿರಿಯರು, ಹಿತೈಷಿಗಳು ಕಿವಿ ಮಾತು ಹೇಳಿದ್ದಾರೆ. ಇದು ಸುಗಮವಾದ ಹಾದಿಯಲ್ಲ ಎಂಬುದು ನಿಜ. ಆದರೆ ನಾಡಿನಾದ್ಯಂತ ‘ಪತ್ರಿಕೆ’ಗಾಗಿ ಆಗ್ರಹಿಸುತ್ತಿರುವವರ ಸಂಖ್ಯೆಯೂ ದೊಡ್ಡದಿದೆ ಎಂಬುದೂ ನಿಜ. ಆದರೆ ಗೌರಿ ಪತ್ರಿಕೆಯನ್ನು ಮುಂದುವರೆಸುವುದು ಭಾವನಾತ್ಮಕ ವಿಷಯ ಎಂಬುದಕ್ಕಿಂತಲೂ ಹೆಚ್ಚಾಗಿ ನಮ್ಮ ಬದ್ಧತೆಗೆ ಸಂಬಂಧಿಸಿದ್ದು. ನಿಮ್ಮಲ್ಲರ ಬೆಂಬಲ, ಪ್ರೋತ್ಸಾಹಗಳ ಬಲದಿಂದ ಪತ್ರಿಕೆ ನಡೆಸುವ ಸಂಕಷ್ಟವನ್ನು ದಾಟಬಹುದೆಂಬ ವಿಶ್ವಾಸ ನಮ್ಮದು.

ಪ್ರತಿರೋಧ ಸಮಾವೇಶದಲ್ಲಿ ಗೌರಿ ಹತ್ಯಗೆ ಮಿಡಿದ ಜನಸಾಗರ

ನಮ್ಮೆಲ್ಲರ ಹೃದಯದಾಳದಲ್ಲಿ ಮಡುಗಟ್ಟಿದ ನೋವು, ಆಕ್ರೋಶಗಳು ನಮ್ಮ ಈ ಬದ್ಧತೆಯನ್ನು ಗಟ್ಟಿಗೊಳಿಸಿ, ಪತ್ರಿಕೆಯ ಮರುಹುಟ್ಟಿಗೆ ಭದ್ರ ಬುನಾದಿ ಹಾಕಿಕೊಟ್ಟಿವೆ. ಈ ಸವಾಲಿನ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸದಿಂದ ನಮ್ಮ ತಂಡ ಕಾರ್ಯೋನ್ಮುಖವಾಗಿದೆ. ಹಾಗೆಂದು ಸಮಸ್ಯೆಗಳೇ ಇರುವುದಿಲ್ಲ, ತಪ್ಪುಗಳೇ ಆಗುವುದಿಲ್ಲ ಎಂದರ್ಥವಲ್ಲ. ನಾವು ಎಡವಿದಾಗ ನೀವು ನಮ್ಮ ಕೈಹಿಡಿಯುತ್ತೀರಿ, ತಪ್ಪು ಮಾಡಿದಾಗ ಕಿವಿ ಹಿಂಡುತ್ತೀರಿ, ಪತ್ರಿಕೆಯ ನೋವು-ನಲಿವುಗಳಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ತುಂಬು ವಿಶ್ವಾಸ ನಮ್ಮದು.

ಕೊನೆಯದಾಗಿ, ಈಜಿಪ್ಟ್ ಬಂಡಾಯದ ಸಂದರ್ಭದಲ್ಲಿ ಹುಟ್ಟಿಕೊಂಡ ಒಂದು ಮಾತು ನೆನಪಿಸುತ್ತೇನೆ. “The power of the people is stronger than the people in power”. ಅಂದರೆ ಅಧಿಕಾರದಲ್ಲಿರುವವರ ಬಲಕ್ಕಿಂತ ಜನಶಕ್ತಿಯ ಬಲ ಹೆಚ್ಚು ಬಲಿಷ್ಠವಾದುದು. ಅಂಥಾ ಜನಶಕ್ತಿಯ ಬಲವನ್ನು ನಿರೂಪಿಸಲು ನಾವೆಲ್ಲರೂ ಒಗ್ಗೂಡೋಣ. ಗೆಲುವಿನ ಹಾದಿ ನಮ್ಮದು.
ನಾನು ಗೌರಿ! ನಾವೆಲ್ಲಾ ಗೌರಿ!!

ಗೌರಿ ಮೀಡಿಯಾ ಟ್ರಸ್ಟ್ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...