Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...