Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....