Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...