Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...