Homeಅಂಕಣಗಳುಅಪ್ಪನ ವಿದಾಯ ಮತ್ತು ವೈಚಾರಿಕತೆ

ಅಪ್ಪನ ವಿದಾಯ ಮತ್ತು ವೈಚಾರಿಕತೆ

- Advertisement -
- Advertisement -

| ಗೌರಿ ಲಂಕೇಶ್ |
ಜುಲೈ 29, 2009 (ಸಂಪಾದಕೀಯದಿಂದ)

ಅವತ್ತು ದೆಹಲಿಯಿಂದ ಬಂದು ಅಪ್ಪನನ್ನು ನೋಡಿದಾಗ ಅವರು ಟಾಟಾ ಹೇಳುತ್ತಿರುವಂತೆ ಒಂದು ಕೈ ಮೇಲಕ್ಕೆ ಚಾಚಿತ್ತು. ಅವರು ತಮ್ಮ ಫೇವರೇಟ್ ಆದ ನೀಲಿ ಬಣ್ಣದ ಸ್ವೆಟರ್ ಧರಿಸಿದ್ದರು. ಕಣ್ಣೀರು ತುಂಬಿದ್ದ ನನ್ನ ಕಣ್ಣುಗಳಿಗೆ ಏನೋ ಸರಿ ಇಲ್ಲ ಅನಿಸುತ್ತಿತ್ತು. ಮರುಕ್ಷಣವೇ ಅದೇನೆಂದು ಗೊತ್ತಾಯಿತು. ಅದೇ ಕ್ಷಣ ನನ್ನ ತಂಗಿ ಬೇಬಿ ಕೂಡ “ವಿಭೂತಿಯನ್ನು ಅಳಿಸು ಗೌರು” ಅಂದಳು. ಅವತ್ತು ನಮ್ಮ ಮನೆಗೆ ಬಂದಿದ್ದ ಅದ್ಯಾರೋ ಅಪ್ಪನ ಹಣೆಗೆ ವಿಭೂತಿ ಬಳಿದಿದ್ದರು. ತಣ್ಣಗಾಗಿದ್ದ ಅಪ್ಪನನ್ನು ಮುಟ್ಟಲಾಗದೇ ಬೇಬಿ ನನಗಾಗಿ ಕಾದಿದ್ದು ನಾನು ಬಂದಕೂಡಲೇ ಹಾಗೆ ಹೇಳಿದ್ದಳು. ದುಃಖದ ಜೊತೆಗೆ ಕೋಪವೂ ಬಂತು. ನನ್ನಪ್ಪ ಎಂದೂ ವಿಭೂತಿ(ಚಿಕ್ಕವರಿದ್ದಾಗ ಹೊರತುಪಡಿಸಿ) ಧರಿಸಿದವರಲ್ಲ, ಪೂಜೆ ಮಾಡಿದವರಲ್ಲ, ಲಿಂಗ ಕಟ್ಟಕೊಂಡವರಲ್ಲ, ಅಂತಹ ನನ್ನ ಅಪ್ಪ ಅಸಹಾಯಕರಾಗಿದ್ದಾಗ, ಪ್ರತಿಭಟಿಸದಂತಾಗಿದ್ದಾಗ ಅವರ ಹಣೆಗೆ ವಿಭೂತಿ ಹಚ್ಚಿದರು. ಅದನ್ನು ಕೂಡಲೇ ಒರೆಸಿದ ನಾನು “ನನ್ನಪ್ಪನನ್ನು ಯಾರೂ ಮುಟ್ಟಬೇಡಿ, ಇಂತಹದ್ದನ್ನೆಲ್ಲ ಮಾಡಬೇಡಿ” ಎಂದು ಆರ್ಭಟಿಸಿದ್ದೆ.

ಆದರೂ ಅದೆಲ್ಲ ಅಲ್ಲಿಗೇ ನಿಲ್ಲಲಿಲ್ಲ. ಮರುದಿನ ಆಗಮಿಸಿದ ಅಪ್ಪನ ಅಣ್ಣ ಶಿವರುದ್ರಪ್ಪ ಮತ್ತು ಇತರೆ ಸಂಬಂಧಿಗಳು ಅಪ್ಪನಿಗೆ ಅವಮಾನ ಮಾಡದಂತೆ ತಡೆಯುವುದೇ ಒಂದು ಕೆಲಸವಾಗಿ ಹೋಯಿತು. ಅವರ್ಯಾರೂ ಅಪ್ಪನಿಗೆ ಪೂಜೆ ಮಾಡದಂತೆ, ಕುಂಕುಮ ವಿಭೂತಿ ಹಚ್ಚದಂತೆ ನಾವೆಲ್ಲರೂ ಕಟ್ಟೆಚ್ಚರ ವಹಿಸಿದೆವು. ಅಪ್ಪನನ್ನು ತೋಟಕ್ಕೆ ಕರೆದುಕೊಂಡು ಹೋದಾಗ ನೋಡುತ್ತೇವೆ, ಅಲ್ಲಿ ಯಾರೋ ಆಗಲೇ ಚಟ್ಟವನ್ನು ಕಟ್ಟಿದ್ದರು. ವಾಹನದಿಂದ ಅಪ್ಪನನ್ನು ಇಳಿಸಿ ಆ ಚಟ್ಟದಲ್ಲಿ ಎತ್ತಿಕೊಂಡು ಹೋಗುವ ಉದ್ದೇಶ ಅವರದ್ದಾಗಿತ್ತು. ಕೂಡಲೇ ಆ ಚಟ್ಟವನ್ನು ನನ್ನ ಅಪ್ಪನ ಹತ್ತಿರ ತರಕೂಡದು ಎಂದು ನಾನು ಮತ್ತು ಬೇಬಿ ಹೇಳಿದೆವು.

ಆದರೆ ನಾನು ಹೇಳಿದಷ್ಟು ಅವತ್ತಿನ ಪರಿಸ್ಥಿತಿ ಸರಳವಾಗಿರಲಿಲ್ಲ. ನನ್ನ ದೊಡ್ಡಪ್ಪ ಮತ್ತು ಅವರ ಮಗ ನಾಗರಾಜು “ ಇದೇನಿದು, ಲಿಂಗಾಯತರು ತೋಡುವಂತೆ ಗುಂಡಿಯನ್ನು ತೋಡಿಲ್ಲ” ಎಂದು ತಕರಾರು ಎತ್ತಿದರು. ಅದೆಲ್ಲ ಬೇಡ ಅಂದರೆ ಅವರು ಸಿದ್ಧರಾಗಿರಲಿಲ್ಲ. ಅದರಲ್ಲೂ ದೊಡ್ಡಪ್ಪ ಇದ್ದವರು ಇನ್ನೊಂದು ವಿಚಾರ ಕೈಗೆತ್ತಿಕೊಂಡರು. “ ಹೀಗೆ ಅಂಗಾತ ಮಲಗಿಸುವುದು ಸರಿಯಲ್ಲ ಕಾಲುಗಳನ್ನು ಮಡಚಿ ನಮ್ಮ ಸಂಪ್ರದಾಯದಂತೆ ಕೂರಿಸಿರಬೇಕು” ಎಂದರು. ಅಷ್ಟೊತ್ತಿಗಾಗಲೇ ಅಪ್ಪ ಹೋಗಿ 36 ಗಂಟೆಗಳಾಗಿದ್ದವು. ಆದ್ದರಿಂದ ಏನು? ಅಪ್ಪನ ಕೈಕಾಲು ಮುರಿತೀರಾ? ಅಂತ ನಾನು ಕೇಳಿದರೆ ದೊಡ್ಡಪ್ಪ ಏನಂದಿದ್ದರು ಗೊತ್ತಾ “ಮುರುದ್ರೆ ನೋವಾಗಲ್ಲ”. ಅದನ್ನು ಕೇಳಿ ನನಗೆ ಅಳಬೇಕೋ, ಕೋಪಗೊಳ್ಳಬೇಕೋ, ಗೊತ್ತಾಗಲಿಲ್ಲ. ‘ಅದೆಲ್ಲ ಗೊತ್ತಿಲ್ಲ. ಅಪ್ಪನ ನಂಬಿಕೆಗೆ ವಿದುದ್ಧವಾಗಿ ಯಾರೂ ಏನನ್ನು ಮಾಡುವಂತಿಲ್ಲ. ಆ ಜಾಗಕ್ಕೆ ನೀವೆಲ್ಲ ಪೂಜೆ ಮಾಡಿಸಲು ಬಿಟ್ಟಿದೇ ಹೆಚ್ಚು” ಎಂದು ಹೇಳಿ ಕೊನೆಗೂ ಅವರ ಬಾಯಿ ಮುಚ್ಚಿಸಿದ್ದೆ.

ಇನ್ನೇನು ಎಲ್ಲ ಮುಗಿಯಿತು. ಗುಂಡಿಗೆ ಮಣ್ಣು ಹಾಕಬೇಕು. ಆಗ ಗುಂಡಿಯಲ್ಲಿ ಅಪ್ಪನ ಪಕ್ಕ ನಿಂತಿದ್ದ ಒಬ್ಬ ಅದೆಲ್ಲಿಂದಲೋ ಲಿಂಗವೊಂದನ್ನು ಅಪ್ಪನ ಕತ್ತಿಗೆ ಕಟ್ಟಿದ. ಅದನ್ನು ನೋಡಿ ನನಗೆ ರೇಗಿತು. “ಅದನ್ನು ಬಿಚ್ಟು ಈಗಲೇ ಬಿಚ್ಚು’ ಎಂದು ಅರಚಿದೆ. ಅದೇ ಹೊತ್ತಿಗೆ ದೊಡ್ಡಪ್ಪ ಕರೆದುಕೊಂಡು ಬಂದಿದ್ದ ತಮಟೆಯವರು ಜೋರಾಗಿ ಬಾರಿಸಲಾರಂಭಿಸಿದರು. ಸುತ್ತಮುತ್ತಲಿದ್ದವರೆಲ್ಲಾ ಜೋರಾಗಿ ಅಳುತ್ತಿದ್ದರು. ಆ ಗದ್ದಲದಲ್ಲಿ ನನ್ನ ಮಾತು ಕೇಳಿಸುವಂತಿರಲಿಲ್ಲ ಬೇಬಿಗೆ ರೇಗಿ ಹೋಯಿತು. “ತಮಟೆಯವರಿಗೆ ನಿಲ್ಲಿಸಲು ಹೇಳಿ” ಎಂದು ಚೀರಿದಳು. ಅವಳೊಂದಿಗೆ ಪ್ರಕಾಶ್ ರೈ ಕೂಡ ದನಿಗೂಡಿಸಿದ್ದರಿಂದ ತಕ್ಷಣವೇ ಅವರು ತಮ್ಮ ಅಬ್ಬರವನ್ನು ನಿಲ್ಲಿಸಿದರು. ಗುಂಡಿಯಲ್ಲಿದ್ದವ ಅಪ್ಪನಿಗೆ ತೊಡಿಸಿದ್ದ ಲಿಂಗವನ್ನು ತೆಗೆಯಲು ಮತ್ತೆ ಹೇಳಿದಾಗ ಆತನಿಗೆ ಕೇಳಿಸಿತು. ಬೇರೆ ದಾರಿ ಇಲ್ಲದೆ ಅದನ್ನವನು ಬಿಚ್ಚಿದ. ಜಾತಿ ಸಂಪ್ರದಾಯದ ಮಾತು ಬದಿಗಿರಲಿ, ಅಪ್ಪನ ಸಂಪ್ರದಾಯವನ್ನಂತು ನಾವು ಪಾಲಿಸಿದೆವು. ಅದು ಹೇಗೆಂದರೆ ಅಪ್ಪನ ಸಂಪ್ರದಾಯದಲ್ಲಿ ಅತ್ಯಗತ್ಯವಾಗಿದ್ದ ಪೇಪರ್ ಮತ್ತು ಪೆನ್, ಸಿಗರೇಟ್ ಪ್ಯಾಕ್ ಮತ್ತು ಬೆಂಕಿಪೊಟ್ಟಣ , ಒಂದು ಬ್ಲಾಕ್ ಲೇಬಲ್ ವಿಸ್ಕಿ ಬಾಟಲ್ ,ಕುದುರೆ ರೇಸ್ ಪುಸ್ತಕ, ಇಸ್ಪೀಟು ಕಾರ್ಡ್‍ಗಳು, ಕಾದಂಬರಿ ಇತ್ಯಾದಿಗಳನ್ನೆಲ್ಲ ಅವರೊಂದಿಗೆ ಬೀಳ್ಕೊಟ್ಟೆವು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...