Homeಅಂಕಣಗಳುಅಪ್ಪನ ವಿದಾಯ ಮತ್ತು ವೈಚಾರಿಕತೆ

ಅಪ್ಪನ ವಿದಾಯ ಮತ್ತು ವೈಚಾರಿಕತೆ

- Advertisement -
- Advertisement -

| ಗೌರಿ ಲಂಕೇಶ್ |
ಜುಲೈ 29, 2009 (ಸಂಪಾದಕೀಯದಿಂದ)

ಅವತ್ತು ದೆಹಲಿಯಿಂದ ಬಂದು ಅಪ್ಪನನ್ನು ನೋಡಿದಾಗ ಅವರು ಟಾಟಾ ಹೇಳುತ್ತಿರುವಂತೆ ಒಂದು ಕೈ ಮೇಲಕ್ಕೆ ಚಾಚಿತ್ತು. ಅವರು ತಮ್ಮ ಫೇವರೇಟ್ ಆದ ನೀಲಿ ಬಣ್ಣದ ಸ್ವೆಟರ್ ಧರಿಸಿದ್ದರು. ಕಣ್ಣೀರು ತುಂಬಿದ್ದ ನನ್ನ ಕಣ್ಣುಗಳಿಗೆ ಏನೋ ಸರಿ ಇಲ್ಲ ಅನಿಸುತ್ತಿತ್ತು. ಮರುಕ್ಷಣವೇ ಅದೇನೆಂದು ಗೊತ್ತಾಯಿತು. ಅದೇ ಕ್ಷಣ ನನ್ನ ತಂಗಿ ಬೇಬಿ ಕೂಡ “ವಿಭೂತಿಯನ್ನು ಅಳಿಸು ಗೌರು” ಅಂದಳು. ಅವತ್ತು ನಮ್ಮ ಮನೆಗೆ ಬಂದಿದ್ದ ಅದ್ಯಾರೋ ಅಪ್ಪನ ಹಣೆಗೆ ವಿಭೂತಿ ಬಳಿದಿದ್ದರು. ತಣ್ಣಗಾಗಿದ್ದ ಅಪ್ಪನನ್ನು ಮುಟ್ಟಲಾಗದೇ ಬೇಬಿ ನನಗಾಗಿ ಕಾದಿದ್ದು ನಾನು ಬಂದಕೂಡಲೇ ಹಾಗೆ ಹೇಳಿದ್ದಳು. ದುಃಖದ ಜೊತೆಗೆ ಕೋಪವೂ ಬಂತು. ನನ್ನಪ್ಪ ಎಂದೂ ವಿಭೂತಿ(ಚಿಕ್ಕವರಿದ್ದಾಗ ಹೊರತುಪಡಿಸಿ) ಧರಿಸಿದವರಲ್ಲ, ಪೂಜೆ ಮಾಡಿದವರಲ್ಲ, ಲಿಂಗ ಕಟ್ಟಕೊಂಡವರಲ್ಲ, ಅಂತಹ ನನ್ನ ಅಪ್ಪ ಅಸಹಾಯಕರಾಗಿದ್ದಾಗ, ಪ್ರತಿಭಟಿಸದಂತಾಗಿದ್ದಾಗ ಅವರ ಹಣೆಗೆ ವಿಭೂತಿ ಹಚ್ಚಿದರು. ಅದನ್ನು ಕೂಡಲೇ ಒರೆಸಿದ ನಾನು “ನನ್ನಪ್ಪನನ್ನು ಯಾರೂ ಮುಟ್ಟಬೇಡಿ, ಇಂತಹದ್ದನ್ನೆಲ್ಲ ಮಾಡಬೇಡಿ” ಎಂದು ಆರ್ಭಟಿಸಿದ್ದೆ.

ಆದರೂ ಅದೆಲ್ಲ ಅಲ್ಲಿಗೇ ನಿಲ್ಲಲಿಲ್ಲ. ಮರುದಿನ ಆಗಮಿಸಿದ ಅಪ್ಪನ ಅಣ್ಣ ಶಿವರುದ್ರಪ್ಪ ಮತ್ತು ಇತರೆ ಸಂಬಂಧಿಗಳು ಅಪ್ಪನಿಗೆ ಅವಮಾನ ಮಾಡದಂತೆ ತಡೆಯುವುದೇ ಒಂದು ಕೆಲಸವಾಗಿ ಹೋಯಿತು. ಅವರ್ಯಾರೂ ಅಪ್ಪನಿಗೆ ಪೂಜೆ ಮಾಡದಂತೆ, ಕುಂಕುಮ ವಿಭೂತಿ ಹಚ್ಚದಂತೆ ನಾವೆಲ್ಲರೂ ಕಟ್ಟೆಚ್ಚರ ವಹಿಸಿದೆವು. ಅಪ್ಪನನ್ನು ತೋಟಕ್ಕೆ ಕರೆದುಕೊಂಡು ಹೋದಾಗ ನೋಡುತ್ತೇವೆ, ಅಲ್ಲಿ ಯಾರೋ ಆಗಲೇ ಚಟ್ಟವನ್ನು ಕಟ್ಟಿದ್ದರು. ವಾಹನದಿಂದ ಅಪ್ಪನನ್ನು ಇಳಿಸಿ ಆ ಚಟ್ಟದಲ್ಲಿ ಎತ್ತಿಕೊಂಡು ಹೋಗುವ ಉದ್ದೇಶ ಅವರದ್ದಾಗಿತ್ತು. ಕೂಡಲೇ ಆ ಚಟ್ಟವನ್ನು ನನ್ನ ಅಪ್ಪನ ಹತ್ತಿರ ತರಕೂಡದು ಎಂದು ನಾನು ಮತ್ತು ಬೇಬಿ ಹೇಳಿದೆವು.

ಆದರೆ ನಾನು ಹೇಳಿದಷ್ಟು ಅವತ್ತಿನ ಪರಿಸ್ಥಿತಿ ಸರಳವಾಗಿರಲಿಲ್ಲ. ನನ್ನ ದೊಡ್ಡಪ್ಪ ಮತ್ತು ಅವರ ಮಗ ನಾಗರಾಜು “ ಇದೇನಿದು, ಲಿಂಗಾಯತರು ತೋಡುವಂತೆ ಗುಂಡಿಯನ್ನು ತೋಡಿಲ್ಲ” ಎಂದು ತಕರಾರು ಎತ್ತಿದರು. ಅದೆಲ್ಲ ಬೇಡ ಅಂದರೆ ಅವರು ಸಿದ್ಧರಾಗಿರಲಿಲ್ಲ. ಅದರಲ್ಲೂ ದೊಡ್ಡಪ್ಪ ಇದ್ದವರು ಇನ್ನೊಂದು ವಿಚಾರ ಕೈಗೆತ್ತಿಕೊಂಡರು. “ ಹೀಗೆ ಅಂಗಾತ ಮಲಗಿಸುವುದು ಸರಿಯಲ್ಲ ಕಾಲುಗಳನ್ನು ಮಡಚಿ ನಮ್ಮ ಸಂಪ್ರದಾಯದಂತೆ ಕೂರಿಸಿರಬೇಕು” ಎಂದರು. ಅಷ್ಟೊತ್ತಿಗಾಗಲೇ ಅಪ್ಪ ಹೋಗಿ 36 ಗಂಟೆಗಳಾಗಿದ್ದವು. ಆದ್ದರಿಂದ ಏನು? ಅಪ್ಪನ ಕೈಕಾಲು ಮುರಿತೀರಾ? ಅಂತ ನಾನು ಕೇಳಿದರೆ ದೊಡ್ಡಪ್ಪ ಏನಂದಿದ್ದರು ಗೊತ್ತಾ “ಮುರುದ್ರೆ ನೋವಾಗಲ್ಲ”. ಅದನ್ನು ಕೇಳಿ ನನಗೆ ಅಳಬೇಕೋ, ಕೋಪಗೊಳ್ಳಬೇಕೋ, ಗೊತ್ತಾಗಲಿಲ್ಲ. ‘ಅದೆಲ್ಲ ಗೊತ್ತಿಲ್ಲ. ಅಪ್ಪನ ನಂಬಿಕೆಗೆ ವಿದುದ್ಧವಾಗಿ ಯಾರೂ ಏನನ್ನು ಮಾಡುವಂತಿಲ್ಲ. ಆ ಜಾಗಕ್ಕೆ ನೀವೆಲ್ಲ ಪೂಜೆ ಮಾಡಿಸಲು ಬಿಟ್ಟಿದೇ ಹೆಚ್ಚು” ಎಂದು ಹೇಳಿ ಕೊನೆಗೂ ಅವರ ಬಾಯಿ ಮುಚ್ಚಿಸಿದ್ದೆ.

ಇನ್ನೇನು ಎಲ್ಲ ಮುಗಿಯಿತು. ಗುಂಡಿಗೆ ಮಣ್ಣು ಹಾಕಬೇಕು. ಆಗ ಗುಂಡಿಯಲ್ಲಿ ಅಪ್ಪನ ಪಕ್ಕ ನಿಂತಿದ್ದ ಒಬ್ಬ ಅದೆಲ್ಲಿಂದಲೋ ಲಿಂಗವೊಂದನ್ನು ಅಪ್ಪನ ಕತ್ತಿಗೆ ಕಟ್ಟಿದ. ಅದನ್ನು ನೋಡಿ ನನಗೆ ರೇಗಿತು. “ಅದನ್ನು ಬಿಚ್ಟು ಈಗಲೇ ಬಿಚ್ಚು’ ಎಂದು ಅರಚಿದೆ. ಅದೇ ಹೊತ್ತಿಗೆ ದೊಡ್ಡಪ್ಪ ಕರೆದುಕೊಂಡು ಬಂದಿದ್ದ ತಮಟೆಯವರು ಜೋರಾಗಿ ಬಾರಿಸಲಾರಂಭಿಸಿದರು. ಸುತ್ತಮುತ್ತಲಿದ್ದವರೆಲ್ಲಾ ಜೋರಾಗಿ ಅಳುತ್ತಿದ್ದರು. ಆ ಗದ್ದಲದಲ್ಲಿ ನನ್ನ ಮಾತು ಕೇಳಿಸುವಂತಿರಲಿಲ್ಲ ಬೇಬಿಗೆ ರೇಗಿ ಹೋಯಿತು. “ತಮಟೆಯವರಿಗೆ ನಿಲ್ಲಿಸಲು ಹೇಳಿ” ಎಂದು ಚೀರಿದಳು. ಅವಳೊಂದಿಗೆ ಪ್ರಕಾಶ್ ರೈ ಕೂಡ ದನಿಗೂಡಿಸಿದ್ದರಿಂದ ತಕ್ಷಣವೇ ಅವರು ತಮ್ಮ ಅಬ್ಬರವನ್ನು ನಿಲ್ಲಿಸಿದರು. ಗುಂಡಿಯಲ್ಲಿದ್ದವ ಅಪ್ಪನಿಗೆ ತೊಡಿಸಿದ್ದ ಲಿಂಗವನ್ನು ತೆಗೆಯಲು ಮತ್ತೆ ಹೇಳಿದಾಗ ಆತನಿಗೆ ಕೇಳಿಸಿತು. ಬೇರೆ ದಾರಿ ಇಲ್ಲದೆ ಅದನ್ನವನು ಬಿಚ್ಚಿದ. ಜಾತಿ ಸಂಪ್ರದಾಯದ ಮಾತು ಬದಿಗಿರಲಿ, ಅಪ್ಪನ ಸಂಪ್ರದಾಯವನ್ನಂತು ನಾವು ಪಾಲಿಸಿದೆವು. ಅದು ಹೇಗೆಂದರೆ ಅಪ್ಪನ ಸಂಪ್ರದಾಯದಲ್ಲಿ ಅತ್ಯಗತ್ಯವಾಗಿದ್ದ ಪೇಪರ್ ಮತ್ತು ಪೆನ್, ಸಿಗರೇಟ್ ಪ್ಯಾಕ್ ಮತ್ತು ಬೆಂಕಿಪೊಟ್ಟಣ , ಒಂದು ಬ್ಲಾಕ್ ಲೇಬಲ್ ವಿಸ್ಕಿ ಬಾಟಲ್ ,ಕುದುರೆ ರೇಸ್ ಪುಸ್ತಕ, ಇಸ್ಪೀಟು ಕಾರ್ಡ್‍ಗಳು, ಕಾದಂಬರಿ ಇತ್ಯಾದಿಗಳನ್ನೆಲ್ಲ ಅವರೊಂದಿಗೆ ಬೀಳ್ಕೊಟ್ಟೆವು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...