Homeಅಂಕಣಗಳುಅಪ್ಪನ ವಿದಾಯ ಮತ್ತು ವೈಚಾರಿಕತೆ

ಅಪ್ಪನ ವಿದಾಯ ಮತ್ತು ವೈಚಾರಿಕತೆ

- Advertisement -
- Advertisement -

| ಗೌರಿ ಲಂಕೇಶ್ |
ಜುಲೈ 29, 2009 (ಸಂಪಾದಕೀಯದಿಂದ)

ಅವತ್ತು ದೆಹಲಿಯಿಂದ ಬಂದು ಅಪ್ಪನನ್ನು ನೋಡಿದಾಗ ಅವರು ಟಾಟಾ ಹೇಳುತ್ತಿರುವಂತೆ ಒಂದು ಕೈ ಮೇಲಕ್ಕೆ ಚಾಚಿತ್ತು. ಅವರು ತಮ್ಮ ಫೇವರೇಟ್ ಆದ ನೀಲಿ ಬಣ್ಣದ ಸ್ವೆಟರ್ ಧರಿಸಿದ್ದರು. ಕಣ್ಣೀರು ತುಂಬಿದ್ದ ನನ್ನ ಕಣ್ಣುಗಳಿಗೆ ಏನೋ ಸರಿ ಇಲ್ಲ ಅನಿಸುತ್ತಿತ್ತು. ಮರುಕ್ಷಣವೇ ಅದೇನೆಂದು ಗೊತ್ತಾಯಿತು. ಅದೇ ಕ್ಷಣ ನನ್ನ ತಂಗಿ ಬೇಬಿ ಕೂಡ “ವಿಭೂತಿಯನ್ನು ಅಳಿಸು ಗೌರು” ಅಂದಳು. ಅವತ್ತು ನಮ್ಮ ಮನೆಗೆ ಬಂದಿದ್ದ ಅದ್ಯಾರೋ ಅಪ್ಪನ ಹಣೆಗೆ ವಿಭೂತಿ ಬಳಿದಿದ್ದರು. ತಣ್ಣಗಾಗಿದ್ದ ಅಪ್ಪನನ್ನು ಮುಟ್ಟಲಾಗದೇ ಬೇಬಿ ನನಗಾಗಿ ಕಾದಿದ್ದು ನಾನು ಬಂದಕೂಡಲೇ ಹಾಗೆ ಹೇಳಿದ್ದಳು. ದುಃಖದ ಜೊತೆಗೆ ಕೋಪವೂ ಬಂತು. ನನ್ನಪ್ಪ ಎಂದೂ ವಿಭೂತಿ(ಚಿಕ್ಕವರಿದ್ದಾಗ ಹೊರತುಪಡಿಸಿ) ಧರಿಸಿದವರಲ್ಲ, ಪೂಜೆ ಮಾಡಿದವರಲ್ಲ, ಲಿಂಗ ಕಟ್ಟಕೊಂಡವರಲ್ಲ, ಅಂತಹ ನನ್ನ ಅಪ್ಪ ಅಸಹಾಯಕರಾಗಿದ್ದಾಗ, ಪ್ರತಿಭಟಿಸದಂತಾಗಿದ್ದಾಗ ಅವರ ಹಣೆಗೆ ವಿಭೂತಿ ಹಚ್ಚಿದರು. ಅದನ್ನು ಕೂಡಲೇ ಒರೆಸಿದ ನಾನು “ನನ್ನಪ್ಪನನ್ನು ಯಾರೂ ಮುಟ್ಟಬೇಡಿ, ಇಂತಹದ್ದನ್ನೆಲ್ಲ ಮಾಡಬೇಡಿ” ಎಂದು ಆರ್ಭಟಿಸಿದ್ದೆ.

ಆದರೂ ಅದೆಲ್ಲ ಅಲ್ಲಿಗೇ ನಿಲ್ಲಲಿಲ್ಲ. ಮರುದಿನ ಆಗಮಿಸಿದ ಅಪ್ಪನ ಅಣ್ಣ ಶಿವರುದ್ರಪ್ಪ ಮತ್ತು ಇತರೆ ಸಂಬಂಧಿಗಳು ಅಪ್ಪನಿಗೆ ಅವಮಾನ ಮಾಡದಂತೆ ತಡೆಯುವುದೇ ಒಂದು ಕೆಲಸವಾಗಿ ಹೋಯಿತು. ಅವರ್ಯಾರೂ ಅಪ್ಪನಿಗೆ ಪೂಜೆ ಮಾಡದಂತೆ, ಕುಂಕುಮ ವಿಭೂತಿ ಹಚ್ಚದಂತೆ ನಾವೆಲ್ಲರೂ ಕಟ್ಟೆಚ್ಚರ ವಹಿಸಿದೆವು. ಅಪ್ಪನನ್ನು ತೋಟಕ್ಕೆ ಕರೆದುಕೊಂಡು ಹೋದಾಗ ನೋಡುತ್ತೇವೆ, ಅಲ್ಲಿ ಯಾರೋ ಆಗಲೇ ಚಟ್ಟವನ್ನು ಕಟ್ಟಿದ್ದರು. ವಾಹನದಿಂದ ಅಪ್ಪನನ್ನು ಇಳಿಸಿ ಆ ಚಟ್ಟದಲ್ಲಿ ಎತ್ತಿಕೊಂಡು ಹೋಗುವ ಉದ್ದೇಶ ಅವರದ್ದಾಗಿತ್ತು. ಕೂಡಲೇ ಆ ಚಟ್ಟವನ್ನು ನನ್ನ ಅಪ್ಪನ ಹತ್ತಿರ ತರಕೂಡದು ಎಂದು ನಾನು ಮತ್ತು ಬೇಬಿ ಹೇಳಿದೆವು.

ಆದರೆ ನಾನು ಹೇಳಿದಷ್ಟು ಅವತ್ತಿನ ಪರಿಸ್ಥಿತಿ ಸರಳವಾಗಿರಲಿಲ್ಲ. ನನ್ನ ದೊಡ್ಡಪ್ಪ ಮತ್ತು ಅವರ ಮಗ ನಾಗರಾಜು “ ಇದೇನಿದು, ಲಿಂಗಾಯತರು ತೋಡುವಂತೆ ಗುಂಡಿಯನ್ನು ತೋಡಿಲ್ಲ” ಎಂದು ತಕರಾರು ಎತ್ತಿದರು. ಅದೆಲ್ಲ ಬೇಡ ಅಂದರೆ ಅವರು ಸಿದ್ಧರಾಗಿರಲಿಲ್ಲ. ಅದರಲ್ಲೂ ದೊಡ್ಡಪ್ಪ ಇದ್ದವರು ಇನ್ನೊಂದು ವಿಚಾರ ಕೈಗೆತ್ತಿಕೊಂಡರು. “ ಹೀಗೆ ಅಂಗಾತ ಮಲಗಿಸುವುದು ಸರಿಯಲ್ಲ ಕಾಲುಗಳನ್ನು ಮಡಚಿ ನಮ್ಮ ಸಂಪ್ರದಾಯದಂತೆ ಕೂರಿಸಿರಬೇಕು” ಎಂದರು. ಅಷ್ಟೊತ್ತಿಗಾಗಲೇ ಅಪ್ಪ ಹೋಗಿ 36 ಗಂಟೆಗಳಾಗಿದ್ದವು. ಆದ್ದರಿಂದ ಏನು? ಅಪ್ಪನ ಕೈಕಾಲು ಮುರಿತೀರಾ? ಅಂತ ನಾನು ಕೇಳಿದರೆ ದೊಡ್ಡಪ್ಪ ಏನಂದಿದ್ದರು ಗೊತ್ತಾ “ಮುರುದ್ರೆ ನೋವಾಗಲ್ಲ”. ಅದನ್ನು ಕೇಳಿ ನನಗೆ ಅಳಬೇಕೋ, ಕೋಪಗೊಳ್ಳಬೇಕೋ, ಗೊತ್ತಾಗಲಿಲ್ಲ. ‘ಅದೆಲ್ಲ ಗೊತ್ತಿಲ್ಲ. ಅಪ್ಪನ ನಂಬಿಕೆಗೆ ವಿದುದ್ಧವಾಗಿ ಯಾರೂ ಏನನ್ನು ಮಾಡುವಂತಿಲ್ಲ. ಆ ಜಾಗಕ್ಕೆ ನೀವೆಲ್ಲ ಪೂಜೆ ಮಾಡಿಸಲು ಬಿಟ್ಟಿದೇ ಹೆಚ್ಚು” ಎಂದು ಹೇಳಿ ಕೊನೆಗೂ ಅವರ ಬಾಯಿ ಮುಚ್ಚಿಸಿದ್ದೆ.

ಇನ್ನೇನು ಎಲ್ಲ ಮುಗಿಯಿತು. ಗುಂಡಿಗೆ ಮಣ್ಣು ಹಾಕಬೇಕು. ಆಗ ಗುಂಡಿಯಲ್ಲಿ ಅಪ್ಪನ ಪಕ್ಕ ನಿಂತಿದ್ದ ಒಬ್ಬ ಅದೆಲ್ಲಿಂದಲೋ ಲಿಂಗವೊಂದನ್ನು ಅಪ್ಪನ ಕತ್ತಿಗೆ ಕಟ್ಟಿದ. ಅದನ್ನು ನೋಡಿ ನನಗೆ ರೇಗಿತು. “ಅದನ್ನು ಬಿಚ್ಟು ಈಗಲೇ ಬಿಚ್ಚು’ ಎಂದು ಅರಚಿದೆ. ಅದೇ ಹೊತ್ತಿಗೆ ದೊಡ್ಡಪ್ಪ ಕರೆದುಕೊಂಡು ಬಂದಿದ್ದ ತಮಟೆಯವರು ಜೋರಾಗಿ ಬಾರಿಸಲಾರಂಭಿಸಿದರು. ಸುತ್ತಮುತ್ತಲಿದ್ದವರೆಲ್ಲಾ ಜೋರಾಗಿ ಅಳುತ್ತಿದ್ದರು. ಆ ಗದ್ದಲದಲ್ಲಿ ನನ್ನ ಮಾತು ಕೇಳಿಸುವಂತಿರಲಿಲ್ಲ ಬೇಬಿಗೆ ರೇಗಿ ಹೋಯಿತು. “ತಮಟೆಯವರಿಗೆ ನಿಲ್ಲಿಸಲು ಹೇಳಿ” ಎಂದು ಚೀರಿದಳು. ಅವಳೊಂದಿಗೆ ಪ್ರಕಾಶ್ ರೈ ಕೂಡ ದನಿಗೂಡಿಸಿದ್ದರಿಂದ ತಕ್ಷಣವೇ ಅವರು ತಮ್ಮ ಅಬ್ಬರವನ್ನು ನಿಲ್ಲಿಸಿದರು. ಗುಂಡಿಯಲ್ಲಿದ್ದವ ಅಪ್ಪನಿಗೆ ತೊಡಿಸಿದ್ದ ಲಿಂಗವನ್ನು ತೆಗೆಯಲು ಮತ್ತೆ ಹೇಳಿದಾಗ ಆತನಿಗೆ ಕೇಳಿಸಿತು. ಬೇರೆ ದಾರಿ ಇಲ್ಲದೆ ಅದನ್ನವನು ಬಿಚ್ಚಿದ. ಜಾತಿ ಸಂಪ್ರದಾಯದ ಮಾತು ಬದಿಗಿರಲಿ, ಅಪ್ಪನ ಸಂಪ್ರದಾಯವನ್ನಂತು ನಾವು ಪಾಲಿಸಿದೆವು. ಅದು ಹೇಗೆಂದರೆ ಅಪ್ಪನ ಸಂಪ್ರದಾಯದಲ್ಲಿ ಅತ್ಯಗತ್ಯವಾಗಿದ್ದ ಪೇಪರ್ ಮತ್ತು ಪೆನ್, ಸಿಗರೇಟ್ ಪ್ಯಾಕ್ ಮತ್ತು ಬೆಂಕಿಪೊಟ್ಟಣ , ಒಂದು ಬ್ಲಾಕ್ ಲೇಬಲ್ ವಿಸ್ಕಿ ಬಾಟಲ್ ,ಕುದುರೆ ರೇಸ್ ಪುಸ್ತಕ, ಇಸ್ಪೀಟು ಕಾರ್ಡ್‍ಗಳು, ಕಾದಂಬರಿ ಇತ್ಯಾದಿಗಳನ್ನೆಲ್ಲ ಅವರೊಂದಿಗೆ ಬೀಳ್ಕೊಟ್ಟೆವು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...