Homeಚಳವಳಿಗೌರಿ ಲಂಕೇಶ್ ಹತ್ಯೆಯ ಕೊಡಗು ನಂಟು ಬಿಚ್ಚಿಟ್ಟ  ಕಾಂಗ್ರೆಸ್‍ನ  ಅಧೋಗತಿ!

ಗೌರಿ ಲಂಕೇಶ್ ಹತ್ಯೆಯ ಕೊಡಗು ನಂಟು ಬಿಚ್ಚಿಟ್ಟ  ಕಾಂಗ್ರೆಸ್‍ನ  ಅಧೋಗತಿ!

- Advertisement -
ಎಸ್‍ಐಟಿ ತಂಡ ತನಿಖೆ ಬಿಗಿಗೊಳಿಸಿದಂತೆಲ್ಲ `ಕ್ಯಾಪ್ಟನ್’ ಗೌರಿ ಹತ್ಯೆಯ ಒಂದೊಂದೇ ಸಿಕ್ಕುಗಳು ಬಿಡಿಸಿಕೊಳ್ಳುತ್ತಿವೆ. ಜೊತೆಗೆ ಕೊಲೆಗಡುಕ ಹಿಂದೂತ್ವವಾದಿಗಳ ಬಯಲಾಟವೂ ಬೆತ್ತಲಾಗುತ್ತಿದೆ. ಅರೆಸ್ಟಾದ ಹನ್ನೊಂದೂ ಜನರ ಬೇರುಗಳು ಒಂದಿಲ್ಲೊಂದು ರೂಪದಲ್ಲಿ ಸಂಘ ಪರಿವಾರದೊಡನೆ ನಂಟು ಹೊಂದಿರುವುದು ಖಾತ್ರಿಯಾಗುತ್ತಿದ್ದಂತೆಯೇ ಎಲ್ಲರ ಊಹೆಗಳು ದಿಟವಾಗುತ್ತಿವೆ. ನೋ ಡೌಟ್, ಸನಾತನಿ ಮನಸ್ಥಿತಿಗಳೇ ಗೌರಿಯನ್ನು ಕೊಂದಿವೆ! ಕೆಲ ಆಪಾದಿತರ ಪರ ವಾದಿಸಲು ಹಿಂದೂ ಸಂಘಟನೆಗಳೇ ವಕೀಲರನ್ನು ನೇಮಕ ಮಾಡೋದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿರೋದು ಇದನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತು ಮಾಡುತ್ತದೆ.
ಆದರೆ, ಅಷ್ಟೂ ಅರೆಸ್ಟುಗಳಲ್ಲಿ ಕೊಡಗಿನ ರಾಜೇಶ್ ಬಂಗೇರಾನ ಬಂಧನವಿದೆಯಲ್ಲ ಅದು, ಕಾಂಗ್ರೆಸ್ ಎಂಬ ಪೊಲಿಟಿಕಲ್ ಪಾರ್ಟಿ ಕೊಡಗಿನ ಮಟ್ಟಿಗೆ ಅದೆಷ್ಟು ಹೊಣೆಗೇಡಿ ಕೂಟದಂತಾಗಿದೆ ಅನ್ನೋದನ್ನೂ ಸಾಬೀತುಮಾಡಿದೆ. ಈ ರಾಜೇಶ್ ಬಂಗೇರಾ ಸಂಘ ಪರಿವಾರದ ಹಿನ್ನೆಲೆಯವ ಅನ್ನೋದು ಎಷ್ಟು ಸತ್ಯವೋ, ಕಾಂಗ್ರೆಸ್‍ನ ಎಂಎಲ್‍ಸಿ ವೀಣಾ ಅಚ್ಚಯ್ಯ ಎಂಬ ಹೆಂಗಸಿನ ಆಪ್ತ ಕಾರ್ಯದರ್ಶಿಯಾಗಿದ್ದವ ಅನ್ನೋದೂ ಅಷ್ಟೇ ಆಘಾತಕಾರಿ ಸಂಗತಿ! ಕೊಡಗಿನ ಕಾಂಗ್ರೆಸ್ಸನ್ನು ಇಡಿಯಾಗಿ ನಿಯಂತ್ರಿಸುತ್ತಿರೋದು ಇದೇ ಹೆಂಗಸು. ಖರ್ಗೆ ಸಾಹೇಬರ ಖಡಕ್ ಕೃಪೆಯೇ ವೀಣಮ್ಮಳನ್ನು ಈ ಪರಿ ಪ್ರಭಾವಿಯಾಗಿ ಬೆಳೆಸಿದೆ. ಇಲ್ಲೇ ಇರೋದು ನೋಡಿ ಕಾಂಗ್ರೆಸ್‍ನ ದುರಂತ. ತನ್ನ ಪಕ್ಷದ ರಾಜಕೀಯ ಸಿದ್ಧಾಂತಕ್ಕೆ ತದ್ವಿರುದ್ಧ ನಿಲುವಿನ ವ್ಯಕ್ತಿಯೊಬ್ಬನನ್ನು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸಿಕೊಳ್ಳುವಷ್ಟು ರಾಜಕೀಯ ಮುಠ್ಠಾಳರು ಅಥವಾ ಅವಕಾಶವಾದಿಗಳ ಕೈಯಲ್ಲಿ ಕಾಂಗ್ರೆಸ್‍ನ ತಳಮಟ್ಟದ ಚುಕ್ಕಾಣಿ ಸಿಕ್ಕಿರೋದೆ ಆ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಹೀಗೆ ಮುಗ್ಗರಿಸಲು ಕಾರಣ.
ರಾಜೇಶ್ ಬಂಗೇರಾನ ಬಂಧನವಾಗುತ್ತಿದ್ದಂತೆಯೇ ತನ್ನ ತಪ್ಪಿನ ಅರಿವಾಗಿರುವ ವೀಣಮ್ಮ ಕಂಡಕಂಡಲ್ಲೆಲ್ಲ ನನಗೂ ಆತನಿಗೂ ಎಂಥ ಸಂಬಂಧವೂ ಇಲ್ಲ, ಕೆಲಕಾಲ ನನ್ನ ಆಪ್ತಸಹಾಯಕ ಆಗಿದ್ದ ಅಷ್ಟೇ ಅಂತ ಸ್ಪಷ್ಟೀಕರಣದ ಪ್ಲೇಕಾರ್ಡ್ ಹಿಡಿದುಕೊಂಡು ಓಡಾಡುವಂತಾಗಿದೆ. ಮೇಲ್ನೋಟಕ್ಕೆ ಅದು ನಿಜದಂತೆಯೇ ಕಂಡುಬರುತ್ತದಾದರು ವೀಣಾ ಅಚ್ಚಯ್ಯ ತಾನೇ ತಾನಾಗಿ ಸೃಷ್ಟಿಸಿಕೊಂಡಿರುವ ಈ ಅವಾಂತರದ ಫಸಲುಗಳನ್ನು ಅನುಭವಿಸಲೇಬೇಕಿದೆ. ಯಾಕೆಂದರೆ ರಾಜೇಶ್ ಬಂಗೇರಾನ ಸೈದ್ಧಾಂತಿಕ ನಿಲುವು ಅದೇನೆ ಆಗಿರಲಿ, ಕನಿಷ್ಠ ಪಕ್ಷ ಅವನ ಪೊಲಿಟಿಕಲ್ ಹಿನ್ನೆಲೆಯನ್ನು ಗಮನಿಸಿದ ಎಂಥದ್ದೇ ರಾಜಕೀಯ ಗಮಾರ ಕೂಡಾ, ಕಾಂಗ್ರೆಸ್ ಎಂಎಲ್‍ಸಿಯೊಬ್ಬರಿಗೆ ಆಪ್ತ ಸಹಾಯಕನಾಗಲು ಈತ ನಾಲಾಯಕ್ಕು ಅಂತ ಹೇಳಿಬಿಡುತ್ತಾನೆ. ಯಾಕೆಂದರೆ ಶಿಕ್ಷಣ ಇಲಾಖೆಯ ಸರ್ಕಾರಿ ನೌಕರನಾಗಿದ್ದರೂ ಈತ ಈ ಹಿಂದೆ ಬಿಜೆಪಿಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾಗಿದ್ದ ರವಿಕುಶಾಲಪ್ಪನಿಗೆ ಪಿಎ ಆಗಿ ಕೆಲಸ ಮಾಡಿದ್ದವ! ತನ್ನ ವಿರೋಧಿ ಪಕ್ಷದ ನಾಯಕನ ಪಿಎ ಆಗಿದ್ದವನನ್ನೇ ತನ್ನ ಆಪ್ತ ಸಹಾಯಕನನ್ನಾಗಿ ನೇಮಕ ಮಾಡಿಕೊಳ್ಳುತ್ತಾರೆಂದರೆ ಈ ವೀಣಮ್ಮನ ಕಾಮನ್‍ಸೆನ್ಸು, ಪೊಲಿಟಿಕಲ್ ನಾಲೆಡ್ಜು ಅದಿನ್ನೆಂತದ್ದಿರಬೇಡ.
ಕಾಂಗ್ರೆಸ್‍ನೊಳಗೆ ಕಮಲದ ಕಲರವ
ಕೊಡಗು ಕಾಂಗ್ರೆಸ್ ದುಸ್ಥಿತಿಯ ವಿಚಾರಕ್ಕೆ ಮರಳುವುದಾದರೆ ಕೈ ಪಾರ್ಟಿಯ ಕೀ ಪೊಸೀಷನ್‍ಗಳಲ್ಲಿ ಸಂಘ ಪರಿವಾರದ ಮನಸ್ಸುಗಳೇ ಅಧಿಕೃತವಾಗಿ ಠಳಾಯಿಸಿವೆ! ಕಾಂಗ್ರೆಸಿನಲ್ಲಿ ಸೈದ್ಧಾಂತಿಕ ಕಾಂಗ್ರೆಸ್ ಕಾರ್ಯಕರ್ತರಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ಸಂಘ ಪರಿವಾರದವರೇ ಬೇರೂರಿದ್ದಾರೆ. ಮೇಲ್ನೋಟಕ್ಕೆ ಇವರು ಕಾಂಗ್ರೆಸಿಗರು ಅನಿಸಿದರು ಕೂಡ, ಸಂಘ ಪರಿವಾರದ ಅಜೆಂಡಾಗಳು ಸುಲಭವಾಗಿ ಕೊಡಗು ಜಿಲ್ಲೆಯ ಕಾಂಗ್ರೆಸಿನಲ್ಲಿ ಕಾರ್ಯಾಚರಣೆಗೆ ಬರುತ್ತದೆ. ಇದಕ್ಕೊಂದು ಸೂಕ್ತ ನಿದರ್ಶನ ಟಿಪ್ಪು ಜಯಂತಿ. ಸ್ವತಃ ತಮ್ಮದೇ ಕಾಂಗ್ರೆಸ್ ಸರ್ಕಾರ ಪಣತೊಟ್ಟು, ಕೋಮುವಾದಿಗಳಿಗೆ ಸೆಡ್ಡು ಹೊಡೆದು ಟಿಪ್ಪು ಜಯಂತಿಗೆ ಅಡಿಗಲ್ಲು ಹಾಕಿದ್ದರೂ, ಬಿಜೆಪಿ ಹಾಗೂ ಸಂಘ ಪರಿವಾರ ವಿರೋಧಿಸುತ್ತದೆನ್ನುವ ಕಾರಣಕ್ಕೆ ಟಿಪ್ಪು ಜಯಂತಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯೂ ವಿರೋಧಿಸುತ್ತದೆ! ಅದೇರೀತಿ, ಬಿಜೆಪಿ ಬೆಂಬಲಿಸುವ ಕೊಡಗು ಪ್ರತ್ಯೇಕತಾ ಹೋರಾಟವನ್ನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರು ಬೆಂಬಲಿಸುತ್ತಾರೆ!!
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್‍ರ ಒಂದು ವ್ಯಂಗ್ಯೋಕ್ತಿ ಇಡೀ ಕೊಡಗು ಕೈ ಪಾರ್ಟಿಯ ಅಧೋಗತಿಯನ್ನು ಸಮಗ್ರವಾಗಿ ಕಟ್ಟಿಕೊಡುತ್ತೆ. ಜಿಲ್ಲಾ ಕಾಂಗ್ರೆಸ್ಸಿಗೆ ಅಧ್ಯಕ್ಷರು ಯಾರಾಗಬೇಕೆನ್ನುವ ಭರ್ಜರಿ ಚರ್ಚೆ ನಡೆದಿದ್ದ ಸಂದರ್ಭದಲ್ಲಿ ರಮಾನಾಥ್ ಹೀಗೆ ಹೇಳಿದ್ದರು, `ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸಿಗೆ ಪ್ರತ್ಯೇಕ ಅಧ್ಯಕ್ಷರು ಬೇಡ, ಬಿಜೆಪಿಗೂ, ಕಾಂಗ್ರೆಸಿಗೇ ಒಬ್ಬರೇ ಅಧ್ಯಕ್ಷರು ಸಾಕು!’. ಕಳೆದ ಒಂದು ದಶಕದಿಂದ ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯನವರು ಕೂಡಾ ಇದನ್ನೇ ಹೇಳುತ್ತಾ ಬಂದಿದ್ದಾರೆ. ಆದರೆ ಕಾಂಗ್ರೆಸ್‍ನ ರಾಜ್ಯ ನಾಯಕರ್ಯಾರೂ ತಲೆಕೆಡಿಸಿಕೊಂಡಿಲ್ಲ.
ಪ್ರತ್ಯೇಕತಾ ಹೋರಾಟವನ್ನು ನಡೆಸುತ್ತಿರುವ ಸಿ.ಎನ್.ಸಿ. ಸಂಘಟನೆಯ ಎನ್.ಯು. ನಾಚಪ್ಪ ಬಿಜೆಪಿಯ ಸುಬ್ರಹ್ಮಣ್ಯಸ್ವಾಮಿಯವರನ್ನು ಕರೆಸಿ, ಅವರ ಬಾಯಿಂದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ವಾಚಾಮಗೋಚರ ಟೀಕಿಸುವಂತೆ ಮಾಡಿದ ಕಾರ್ಯಕ್ರಮಗಳಲ್ಲಿ ಕಾಂಗ್ರೆಸಿನ ರಾಷ್ಟ್ರೀಯ ವಕ್ತಾರ ಎನಿಸಿಕೊಳ್ಳುವ ಬ್ರಿಜೇಶ್ ಕಾಳಪ್ಪ ಹಾಗೂ ವೀಣಾ ಅಚ್ಚಯ್ಯ ಸನ್ಮಾನ ಸ್ವೀಕರಿಸಿ ಮರಳುತ್ತಾರೆ. ಹೀಗೆ ಬಿಜೆಪಿಮಯವಾಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಬೆರಳೆಣಿಕೆಯಷ್ಟಿರುವ ಜಾತ್ಯತೀತ ನಿಲುವಿನ ಮುಖಂಡರಿಗೆ ಕವಡೆ ಕಿಮ್ಮತ್ತಿಲ್ಲ. ಅಂತವರನ್ನು ಅಧಿಕಾರದಿಂದ ದೂರ ಇಡಲಾಗಿದೆ. ಕಾಂಗ್ರೆಸಿನ ಸಮಸ್ತ ಅಧಿಕಾರ ಕಮಲ-ಕಾಂಗ್ರೆಸಿಗರ ಕೈಯಲ್ಲಿದೆ. ಈ ಕಮಲ-ಕಾಂಗ್ರೆಸಿನ ಚುಕ್ಕಾಣಿ ಹಿಡಿದು ಕೂತಿರೋದು ಇದೇ ವೀಣಾ ಅಚ್ಚಯ್ಯ!
ಇಲ್ಲದೇ ಹೋಗಿದ್ದರೆ, ಸತತವಾಗಿ ಬಿಜೆಪಿ ನಾಯಕರಿಗೇ ಪಿಎ ಆಗುತ್ತಿದ್ದ ವ್ಯಕ್ತಿಯನ್ನು ಕರೆತಂದು ತನ್ನ ಪಿಎ ಆಗಿ ನೇಮಿಸಿಕೊಳ್ಳುತ್ತಿರಲಿಲ್ಲ. ಇವತ್ತು ಗೌರಿ ಲಂಕೇಶ್‍ರ ಹತ್ಯೆಯ ಕೇಸಿನಲ್ಲಿ ಅರೆಸ್ಟಾಗಿರುವ ರಾಜೇಶ್ ಬಂಗೇರಾ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾಗಿದ್ದ ರವಿ ಕುಶಾಲಪ್ಪ ಎಂಬ ಖಟ್ಟರ್ ಆರೆಸ್ಸೆಸ್ಸಿಗ-ಕಂ-ಬಿಜೆಪಿ ಆಸಾಮಿಗೆ ಪಿಎ ಆಗಿದ್ದ. ಆ ನೇಮಕಾತಿಯ ಹಿಂದೆ ಸಂಘ ಪರಿವಾರ ಕೆಲಸ ಮಾಡಿತ್ತು. ರವಿ ಕುಶಾಲಪ್ಪನ ನಂತರ ಬಿಜೆಪಿಯ ಶರೀನ್ ಸುಬ್ಬಯ್ಯ ಎಂಬಾತ ಜಿಪಂ ಅಧ್ಯಕ್ಷನಾಗಿದ್ದಾಗಲು ಈ ಬಂಗೇರಾನೆ ಪಿಎ ಆಗಿ ಮುಂದುವರೆದ. ಆದರೆ ಆಮೇಲೆ, ಜಿಪಂ ಚುಕ್ಕಾಣಿ ಕೆ.ಜಿ.ಬೋಪಯ್ಯನ ಆಪ್ತ ಹರೀಶ್ ತೆಕ್ಕೆಗೆ ಜಾರಿದಾಗ ಪಿಎ ಹುದ್ದೆ ಬಂಗೇರಾನ ಪಾಲಿಗೆ ಉಳಿಯಲಿಲ್ಲ. ಯಾಕೆಂದರೆ ಒಂದೇ ಪಕ್ಷದ ಬೋಪಯ್ಯ ಮತ್ತು ರವಿ ಕುಶಾಲಪ್ಪನದು ಹಾವು ಮುಂಗುಸಿ ಸಂಬಂಧ. ಕಳೆದ ಎಲೆಕ್ಷನ್‍ನಲ್ಲೇ ಬೋಪಯ್ಯಗೆ ಟಿಕೆಟ್ ತಪ್ಪಿಸಿ ತಾನೇ ವಿರಾಜಪೇಟೆ ಬಿಜೆಪಿ ಅಭ್ಯರ್ಥಿಯಾಗಲು ರವಿ ಕುಶಾಲಪ್ಪ ತಂತ್ರ ನಡೆಸಿದ್ದ. ಅದೂಅಲ್ಲದೆ, ಯಡ್ಯೂರಪ್ಪನ ಪಕ್ಕಾ ಫಾಲೋವರ್ ಥರಾ ವರ್ತಿಸುವ ಬೋಪಯ್ಯನೆಂದರೆ ಸಂಘ ಪರಿವಾರಕ್ಕೂ ಅಷ್ಟಕ್ಕಷ್ಟೇ. ಬೋಪಯ್ಯನಿಗೂ ಪರಿವಾರದ ಮೇಲೆ ಸೇಮ್-ಟು-ಸೇಮ್ ಮಮಕಾರ! ಆ ಕಾರಣಕ್ಕೆ ರವಿಯ ಆಪ್ತ ಬಳಗದ, ಸಂಘ ಪರಿವಾರ ಲಿಂಕಿನ ರಾಜೇಶ್ ಬಂಗೇರಾಗೆ ಗೇಟ್‍ಪಾಸ್ ಕೊಟ್ಟು ಗದುಮಿದ ಬೋಪಯ್ಯ ತನ್ನ ಭಂಟನ ದೇಖಾರೇಖಿಗೆಂದು ಬೇರೊಬ್ಬ ಸಹಾಯಕನನ್ನು ಗೊತ್ತು ಮಾಡಿದ್ದ.
ತನ್ನ ಚೇಲಾ ಬಂಗೇರಾಗೆ ಹೇಗಾದರು ಸರ್ಕಾರಿ ಸೋಗಿನ ರಾಜಕೀಯ ಪುನರ್ವಸತಿ ಕಲ್ಪಿಸುವ ಅನಿವಾರ್ಯತೆಗೆ ಬಿದ್ದ ರವಿ ಕುಶಾಲಪ್ಪ ಎಡತಾಕಿದ್ದು ತನ್ನದೇ ಶಾಂತೆಯಂಡ ಕುಟುಂಬಸ್ಥೆಯಾದ ಕಾಂಗ್ರೆಸ್‍ನ ವೀಣಾ ಅಚ್ಚಯ್ಯರನ್ನು. ಪಕ್ಷದ ಸಿದ್ಧಾಂತ, ರಾಜಕೀಯ ನಿಲುವು ಯಾವುದೂ ಲೆಕ್ಕಕ್ಕಿರದ ವೀಣಾ ಮೇಡಮ್ಮು ಕಳ್ಳುಬಳ್ಳಿ ಸಂಬಂಧಕ್ಕೆ ಬೆಲೆಕೊಟ್ಟು ರವಿಕುಶಾಲಪ್ಪನ ಭಂಟ ಬಂಗೇರಾನನ್ನು ತನ್ನ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿಕೊಂಡಿದ್ದರು! ಸಂಘ ಪರಿವಾರದ ಈ ಆಸಾಮಿ ಕಾಂಗ್ರೆಸಿನ ಪದಾಧಿಕಾರಿಗಳ ನೇಮಕಾತಿ ವಿಚಾರದಲ್ಲೂ ಕೈ ಆಡಿಸುತ್ತಿದ್ದುದಲ್ಲದೆ ಅಲ್ಪಸಂಖ್ಯಾತ ವರ್ಗದವರು ಯಾವುದಾದರೂ ಕೆಲಸ ಕಾರ್ಯಗಳಿಗೆ ವೀಣಾ ಅಚ್ಚಯ್ಯಗೆ ಮನವಿ ನೀಡಿದರೆ, ಆ ಮನವಿಯೇ ಕಡತದಿಂದ ನಾಪತ್ತೆಯಾಗುವಂತೆ ಮಾಡಿಬಿಡುತ್ತಿದ್ದನಂತೆ!! ಇನ್ನು ಕಾಂಗ್ರೆಸ್ ಹೇಗೆ ತಾನೆ ಉದ್ದಾರವಾದೀತು….
– ಬಿ.ಎನ್. ಮನುಶೆಣೈ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...