Homeಚಳವಳಿಗೌರಿ ಲಂಕೇಶ್ ಹತ್ಯೆಯ ಕೊಡಗು ನಂಟು ಬಿಚ್ಚಿಟ್ಟ  ಕಾಂಗ್ರೆಸ್‍ನ  ಅಧೋಗತಿ!

ಗೌರಿ ಲಂಕೇಶ್ ಹತ್ಯೆಯ ಕೊಡಗು ನಂಟು ಬಿಚ್ಚಿಟ್ಟ  ಕಾಂಗ್ರೆಸ್‍ನ  ಅಧೋಗತಿ!

- Advertisement -
ಎಸ್‍ಐಟಿ ತಂಡ ತನಿಖೆ ಬಿಗಿಗೊಳಿಸಿದಂತೆಲ್ಲ `ಕ್ಯಾಪ್ಟನ್’ ಗೌರಿ ಹತ್ಯೆಯ ಒಂದೊಂದೇ ಸಿಕ್ಕುಗಳು ಬಿಡಿಸಿಕೊಳ್ಳುತ್ತಿವೆ. ಜೊತೆಗೆ ಕೊಲೆಗಡುಕ ಹಿಂದೂತ್ವವಾದಿಗಳ ಬಯಲಾಟವೂ ಬೆತ್ತಲಾಗುತ್ತಿದೆ. ಅರೆಸ್ಟಾದ ಹನ್ನೊಂದೂ ಜನರ ಬೇರುಗಳು ಒಂದಿಲ್ಲೊಂದು ರೂಪದಲ್ಲಿ ಸಂಘ ಪರಿವಾರದೊಡನೆ ನಂಟು ಹೊಂದಿರುವುದು ಖಾತ್ರಿಯಾಗುತ್ತಿದ್ದಂತೆಯೇ ಎಲ್ಲರ ಊಹೆಗಳು ದಿಟವಾಗುತ್ತಿವೆ. ನೋ ಡೌಟ್, ಸನಾತನಿ ಮನಸ್ಥಿತಿಗಳೇ ಗೌರಿಯನ್ನು ಕೊಂದಿವೆ! ಕೆಲ ಆಪಾದಿತರ ಪರ ವಾದಿಸಲು ಹಿಂದೂ ಸಂಘಟನೆಗಳೇ ವಕೀಲರನ್ನು ನೇಮಕ ಮಾಡೋದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿರೋದು ಇದನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತು ಮಾಡುತ್ತದೆ.
ಆದರೆ, ಅಷ್ಟೂ ಅರೆಸ್ಟುಗಳಲ್ಲಿ ಕೊಡಗಿನ ರಾಜೇಶ್ ಬಂಗೇರಾನ ಬಂಧನವಿದೆಯಲ್ಲ ಅದು, ಕಾಂಗ್ರೆಸ್ ಎಂಬ ಪೊಲಿಟಿಕಲ್ ಪಾರ್ಟಿ ಕೊಡಗಿನ ಮಟ್ಟಿಗೆ ಅದೆಷ್ಟು ಹೊಣೆಗೇಡಿ ಕೂಟದಂತಾಗಿದೆ ಅನ್ನೋದನ್ನೂ ಸಾಬೀತುಮಾಡಿದೆ. ಈ ರಾಜೇಶ್ ಬಂಗೇರಾ ಸಂಘ ಪರಿವಾರದ ಹಿನ್ನೆಲೆಯವ ಅನ್ನೋದು ಎಷ್ಟು ಸತ್ಯವೋ, ಕಾಂಗ್ರೆಸ್‍ನ ಎಂಎಲ್‍ಸಿ ವೀಣಾ ಅಚ್ಚಯ್ಯ ಎಂಬ ಹೆಂಗಸಿನ ಆಪ್ತ ಕಾರ್ಯದರ್ಶಿಯಾಗಿದ್ದವ ಅನ್ನೋದೂ ಅಷ್ಟೇ ಆಘಾತಕಾರಿ ಸಂಗತಿ! ಕೊಡಗಿನ ಕಾಂಗ್ರೆಸ್ಸನ್ನು ಇಡಿಯಾಗಿ ನಿಯಂತ್ರಿಸುತ್ತಿರೋದು ಇದೇ ಹೆಂಗಸು. ಖರ್ಗೆ ಸಾಹೇಬರ ಖಡಕ್ ಕೃಪೆಯೇ ವೀಣಮ್ಮಳನ್ನು ಈ ಪರಿ ಪ್ರಭಾವಿಯಾಗಿ ಬೆಳೆಸಿದೆ. ಇಲ್ಲೇ ಇರೋದು ನೋಡಿ ಕಾಂಗ್ರೆಸ್‍ನ ದುರಂತ. ತನ್ನ ಪಕ್ಷದ ರಾಜಕೀಯ ಸಿದ್ಧಾಂತಕ್ಕೆ ತದ್ವಿರುದ್ಧ ನಿಲುವಿನ ವ್ಯಕ್ತಿಯೊಬ್ಬನನ್ನು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸಿಕೊಳ್ಳುವಷ್ಟು ರಾಜಕೀಯ ಮುಠ್ಠಾಳರು ಅಥವಾ ಅವಕಾಶವಾದಿಗಳ ಕೈಯಲ್ಲಿ ಕಾಂಗ್ರೆಸ್‍ನ ತಳಮಟ್ಟದ ಚುಕ್ಕಾಣಿ ಸಿಕ್ಕಿರೋದೆ ಆ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಹೀಗೆ ಮುಗ್ಗರಿಸಲು ಕಾರಣ.
ರಾಜೇಶ್ ಬಂಗೇರಾನ ಬಂಧನವಾಗುತ್ತಿದ್ದಂತೆಯೇ ತನ್ನ ತಪ್ಪಿನ ಅರಿವಾಗಿರುವ ವೀಣಮ್ಮ ಕಂಡಕಂಡಲ್ಲೆಲ್ಲ ನನಗೂ ಆತನಿಗೂ ಎಂಥ ಸಂಬಂಧವೂ ಇಲ್ಲ, ಕೆಲಕಾಲ ನನ್ನ ಆಪ್ತಸಹಾಯಕ ಆಗಿದ್ದ ಅಷ್ಟೇ ಅಂತ ಸ್ಪಷ್ಟೀಕರಣದ ಪ್ಲೇಕಾರ್ಡ್ ಹಿಡಿದುಕೊಂಡು ಓಡಾಡುವಂತಾಗಿದೆ. ಮೇಲ್ನೋಟಕ್ಕೆ ಅದು ನಿಜದಂತೆಯೇ ಕಂಡುಬರುತ್ತದಾದರು ವೀಣಾ ಅಚ್ಚಯ್ಯ ತಾನೇ ತಾನಾಗಿ ಸೃಷ್ಟಿಸಿಕೊಂಡಿರುವ ಈ ಅವಾಂತರದ ಫಸಲುಗಳನ್ನು ಅನುಭವಿಸಲೇಬೇಕಿದೆ. ಯಾಕೆಂದರೆ ರಾಜೇಶ್ ಬಂಗೇರಾನ ಸೈದ್ಧಾಂತಿಕ ನಿಲುವು ಅದೇನೆ ಆಗಿರಲಿ, ಕನಿಷ್ಠ ಪಕ್ಷ ಅವನ ಪೊಲಿಟಿಕಲ್ ಹಿನ್ನೆಲೆಯನ್ನು ಗಮನಿಸಿದ ಎಂಥದ್ದೇ ರಾಜಕೀಯ ಗಮಾರ ಕೂಡಾ, ಕಾಂಗ್ರೆಸ್ ಎಂಎಲ್‍ಸಿಯೊಬ್ಬರಿಗೆ ಆಪ್ತ ಸಹಾಯಕನಾಗಲು ಈತ ನಾಲಾಯಕ್ಕು ಅಂತ ಹೇಳಿಬಿಡುತ್ತಾನೆ. ಯಾಕೆಂದರೆ ಶಿಕ್ಷಣ ಇಲಾಖೆಯ ಸರ್ಕಾರಿ ನೌಕರನಾಗಿದ್ದರೂ ಈತ ಈ ಹಿಂದೆ ಬಿಜೆಪಿಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾಗಿದ್ದ ರವಿಕುಶಾಲಪ್ಪನಿಗೆ ಪಿಎ ಆಗಿ ಕೆಲಸ ಮಾಡಿದ್ದವ! ತನ್ನ ವಿರೋಧಿ ಪಕ್ಷದ ನಾಯಕನ ಪಿಎ ಆಗಿದ್ದವನನ್ನೇ ತನ್ನ ಆಪ್ತ ಸಹಾಯಕನನ್ನಾಗಿ ನೇಮಕ ಮಾಡಿಕೊಳ್ಳುತ್ತಾರೆಂದರೆ ಈ ವೀಣಮ್ಮನ ಕಾಮನ್‍ಸೆನ್ಸು, ಪೊಲಿಟಿಕಲ್ ನಾಲೆಡ್ಜು ಅದಿನ್ನೆಂತದ್ದಿರಬೇಡ.
ಕಾಂಗ್ರೆಸ್‍ನೊಳಗೆ ಕಮಲದ ಕಲರವ
ಕೊಡಗು ಕಾಂಗ್ರೆಸ್ ದುಸ್ಥಿತಿಯ ವಿಚಾರಕ್ಕೆ ಮರಳುವುದಾದರೆ ಕೈ ಪಾರ್ಟಿಯ ಕೀ ಪೊಸೀಷನ್‍ಗಳಲ್ಲಿ ಸಂಘ ಪರಿವಾರದ ಮನಸ್ಸುಗಳೇ ಅಧಿಕೃತವಾಗಿ ಠಳಾಯಿಸಿವೆ! ಕಾಂಗ್ರೆಸಿನಲ್ಲಿ ಸೈದ್ಧಾಂತಿಕ ಕಾಂಗ್ರೆಸ್ ಕಾರ್ಯಕರ್ತರಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ಸಂಘ ಪರಿವಾರದವರೇ ಬೇರೂರಿದ್ದಾರೆ. ಮೇಲ್ನೋಟಕ್ಕೆ ಇವರು ಕಾಂಗ್ರೆಸಿಗರು ಅನಿಸಿದರು ಕೂಡ, ಸಂಘ ಪರಿವಾರದ ಅಜೆಂಡಾಗಳು ಸುಲಭವಾಗಿ ಕೊಡಗು ಜಿಲ್ಲೆಯ ಕಾಂಗ್ರೆಸಿನಲ್ಲಿ ಕಾರ್ಯಾಚರಣೆಗೆ ಬರುತ್ತದೆ. ಇದಕ್ಕೊಂದು ಸೂಕ್ತ ನಿದರ್ಶನ ಟಿಪ್ಪು ಜಯಂತಿ. ಸ್ವತಃ ತಮ್ಮದೇ ಕಾಂಗ್ರೆಸ್ ಸರ್ಕಾರ ಪಣತೊಟ್ಟು, ಕೋಮುವಾದಿಗಳಿಗೆ ಸೆಡ್ಡು ಹೊಡೆದು ಟಿಪ್ಪು ಜಯಂತಿಗೆ ಅಡಿಗಲ್ಲು ಹಾಕಿದ್ದರೂ, ಬಿಜೆಪಿ ಹಾಗೂ ಸಂಘ ಪರಿವಾರ ವಿರೋಧಿಸುತ್ತದೆನ್ನುವ ಕಾರಣಕ್ಕೆ ಟಿಪ್ಪು ಜಯಂತಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯೂ ವಿರೋಧಿಸುತ್ತದೆ! ಅದೇರೀತಿ, ಬಿಜೆಪಿ ಬೆಂಬಲಿಸುವ ಕೊಡಗು ಪ್ರತ್ಯೇಕತಾ ಹೋರಾಟವನ್ನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರು ಬೆಂಬಲಿಸುತ್ತಾರೆ!!
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್‍ರ ಒಂದು ವ್ಯಂಗ್ಯೋಕ್ತಿ ಇಡೀ ಕೊಡಗು ಕೈ ಪಾರ್ಟಿಯ ಅಧೋಗತಿಯನ್ನು ಸಮಗ್ರವಾಗಿ ಕಟ್ಟಿಕೊಡುತ್ತೆ. ಜಿಲ್ಲಾ ಕಾಂಗ್ರೆಸ್ಸಿಗೆ ಅಧ್ಯಕ್ಷರು ಯಾರಾಗಬೇಕೆನ್ನುವ ಭರ್ಜರಿ ಚರ್ಚೆ ನಡೆದಿದ್ದ ಸಂದರ್ಭದಲ್ಲಿ ರಮಾನಾಥ್ ಹೀಗೆ ಹೇಳಿದ್ದರು, `ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸಿಗೆ ಪ್ರತ್ಯೇಕ ಅಧ್ಯಕ್ಷರು ಬೇಡ, ಬಿಜೆಪಿಗೂ, ಕಾಂಗ್ರೆಸಿಗೇ ಒಬ್ಬರೇ ಅಧ್ಯಕ್ಷರು ಸಾಕು!’. ಕಳೆದ ಒಂದು ದಶಕದಿಂದ ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯನವರು ಕೂಡಾ ಇದನ್ನೇ ಹೇಳುತ್ತಾ ಬಂದಿದ್ದಾರೆ. ಆದರೆ ಕಾಂಗ್ರೆಸ್‍ನ ರಾಜ್ಯ ನಾಯಕರ್ಯಾರೂ ತಲೆಕೆಡಿಸಿಕೊಂಡಿಲ್ಲ.
ಪ್ರತ್ಯೇಕತಾ ಹೋರಾಟವನ್ನು ನಡೆಸುತ್ತಿರುವ ಸಿ.ಎನ್.ಸಿ. ಸಂಘಟನೆಯ ಎನ್.ಯು. ನಾಚಪ್ಪ ಬಿಜೆಪಿಯ ಸುಬ್ರಹ್ಮಣ್ಯಸ್ವಾಮಿಯವರನ್ನು ಕರೆಸಿ, ಅವರ ಬಾಯಿಂದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ವಾಚಾಮಗೋಚರ ಟೀಕಿಸುವಂತೆ ಮಾಡಿದ ಕಾರ್ಯಕ್ರಮಗಳಲ್ಲಿ ಕಾಂಗ್ರೆಸಿನ ರಾಷ್ಟ್ರೀಯ ವಕ್ತಾರ ಎನಿಸಿಕೊಳ್ಳುವ ಬ್ರಿಜೇಶ್ ಕಾಳಪ್ಪ ಹಾಗೂ ವೀಣಾ ಅಚ್ಚಯ್ಯ ಸನ್ಮಾನ ಸ್ವೀಕರಿಸಿ ಮರಳುತ್ತಾರೆ. ಹೀಗೆ ಬಿಜೆಪಿಮಯವಾಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಬೆರಳೆಣಿಕೆಯಷ್ಟಿರುವ ಜಾತ್ಯತೀತ ನಿಲುವಿನ ಮುಖಂಡರಿಗೆ ಕವಡೆ ಕಿಮ್ಮತ್ತಿಲ್ಲ. ಅಂತವರನ್ನು ಅಧಿಕಾರದಿಂದ ದೂರ ಇಡಲಾಗಿದೆ. ಕಾಂಗ್ರೆಸಿನ ಸಮಸ್ತ ಅಧಿಕಾರ ಕಮಲ-ಕಾಂಗ್ರೆಸಿಗರ ಕೈಯಲ್ಲಿದೆ. ಈ ಕಮಲ-ಕಾಂಗ್ರೆಸಿನ ಚುಕ್ಕಾಣಿ ಹಿಡಿದು ಕೂತಿರೋದು ಇದೇ ವೀಣಾ ಅಚ್ಚಯ್ಯ!
ಇಲ್ಲದೇ ಹೋಗಿದ್ದರೆ, ಸತತವಾಗಿ ಬಿಜೆಪಿ ನಾಯಕರಿಗೇ ಪಿಎ ಆಗುತ್ತಿದ್ದ ವ್ಯಕ್ತಿಯನ್ನು ಕರೆತಂದು ತನ್ನ ಪಿಎ ಆಗಿ ನೇಮಿಸಿಕೊಳ್ಳುತ್ತಿರಲಿಲ್ಲ. ಇವತ್ತು ಗೌರಿ ಲಂಕೇಶ್‍ರ ಹತ್ಯೆಯ ಕೇಸಿನಲ್ಲಿ ಅರೆಸ್ಟಾಗಿರುವ ರಾಜೇಶ್ ಬಂಗೇರಾ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾಗಿದ್ದ ರವಿ ಕುಶಾಲಪ್ಪ ಎಂಬ ಖಟ್ಟರ್ ಆರೆಸ್ಸೆಸ್ಸಿಗ-ಕಂ-ಬಿಜೆಪಿ ಆಸಾಮಿಗೆ ಪಿಎ ಆಗಿದ್ದ. ಆ ನೇಮಕಾತಿಯ ಹಿಂದೆ ಸಂಘ ಪರಿವಾರ ಕೆಲಸ ಮಾಡಿತ್ತು. ರವಿ ಕುಶಾಲಪ್ಪನ ನಂತರ ಬಿಜೆಪಿಯ ಶರೀನ್ ಸುಬ್ಬಯ್ಯ ಎಂಬಾತ ಜಿಪಂ ಅಧ್ಯಕ್ಷನಾಗಿದ್ದಾಗಲು ಈ ಬಂಗೇರಾನೆ ಪಿಎ ಆಗಿ ಮುಂದುವರೆದ. ಆದರೆ ಆಮೇಲೆ, ಜಿಪಂ ಚುಕ್ಕಾಣಿ ಕೆ.ಜಿ.ಬೋಪಯ್ಯನ ಆಪ್ತ ಹರೀಶ್ ತೆಕ್ಕೆಗೆ ಜಾರಿದಾಗ ಪಿಎ ಹುದ್ದೆ ಬಂಗೇರಾನ ಪಾಲಿಗೆ ಉಳಿಯಲಿಲ್ಲ. ಯಾಕೆಂದರೆ ಒಂದೇ ಪಕ್ಷದ ಬೋಪಯ್ಯ ಮತ್ತು ರವಿ ಕುಶಾಲಪ್ಪನದು ಹಾವು ಮುಂಗುಸಿ ಸಂಬಂಧ. ಕಳೆದ ಎಲೆಕ್ಷನ್‍ನಲ್ಲೇ ಬೋಪಯ್ಯಗೆ ಟಿಕೆಟ್ ತಪ್ಪಿಸಿ ತಾನೇ ವಿರಾಜಪೇಟೆ ಬಿಜೆಪಿ ಅಭ್ಯರ್ಥಿಯಾಗಲು ರವಿ ಕುಶಾಲಪ್ಪ ತಂತ್ರ ನಡೆಸಿದ್ದ. ಅದೂಅಲ್ಲದೆ, ಯಡ್ಯೂರಪ್ಪನ ಪಕ್ಕಾ ಫಾಲೋವರ್ ಥರಾ ವರ್ತಿಸುವ ಬೋಪಯ್ಯನೆಂದರೆ ಸಂಘ ಪರಿವಾರಕ್ಕೂ ಅಷ್ಟಕ್ಕಷ್ಟೇ. ಬೋಪಯ್ಯನಿಗೂ ಪರಿವಾರದ ಮೇಲೆ ಸೇಮ್-ಟು-ಸೇಮ್ ಮಮಕಾರ! ಆ ಕಾರಣಕ್ಕೆ ರವಿಯ ಆಪ್ತ ಬಳಗದ, ಸಂಘ ಪರಿವಾರ ಲಿಂಕಿನ ರಾಜೇಶ್ ಬಂಗೇರಾಗೆ ಗೇಟ್‍ಪಾಸ್ ಕೊಟ್ಟು ಗದುಮಿದ ಬೋಪಯ್ಯ ತನ್ನ ಭಂಟನ ದೇಖಾರೇಖಿಗೆಂದು ಬೇರೊಬ್ಬ ಸಹಾಯಕನನ್ನು ಗೊತ್ತು ಮಾಡಿದ್ದ.
ತನ್ನ ಚೇಲಾ ಬಂಗೇರಾಗೆ ಹೇಗಾದರು ಸರ್ಕಾರಿ ಸೋಗಿನ ರಾಜಕೀಯ ಪುನರ್ವಸತಿ ಕಲ್ಪಿಸುವ ಅನಿವಾರ್ಯತೆಗೆ ಬಿದ್ದ ರವಿ ಕುಶಾಲಪ್ಪ ಎಡತಾಕಿದ್ದು ತನ್ನದೇ ಶಾಂತೆಯಂಡ ಕುಟುಂಬಸ್ಥೆಯಾದ ಕಾಂಗ್ರೆಸ್‍ನ ವೀಣಾ ಅಚ್ಚಯ್ಯರನ್ನು. ಪಕ್ಷದ ಸಿದ್ಧಾಂತ, ರಾಜಕೀಯ ನಿಲುವು ಯಾವುದೂ ಲೆಕ್ಕಕ್ಕಿರದ ವೀಣಾ ಮೇಡಮ್ಮು ಕಳ್ಳುಬಳ್ಳಿ ಸಂಬಂಧಕ್ಕೆ ಬೆಲೆಕೊಟ್ಟು ರವಿಕುಶಾಲಪ್ಪನ ಭಂಟ ಬಂಗೇರಾನನ್ನು ತನ್ನ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿಕೊಂಡಿದ್ದರು! ಸಂಘ ಪರಿವಾರದ ಈ ಆಸಾಮಿ ಕಾಂಗ್ರೆಸಿನ ಪದಾಧಿಕಾರಿಗಳ ನೇಮಕಾತಿ ವಿಚಾರದಲ್ಲೂ ಕೈ ಆಡಿಸುತ್ತಿದ್ದುದಲ್ಲದೆ ಅಲ್ಪಸಂಖ್ಯಾತ ವರ್ಗದವರು ಯಾವುದಾದರೂ ಕೆಲಸ ಕಾರ್ಯಗಳಿಗೆ ವೀಣಾ ಅಚ್ಚಯ್ಯಗೆ ಮನವಿ ನೀಡಿದರೆ, ಆ ಮನವಿಯೇ ಕಡತದಿಂದ ನಾಪತ್ತೆಯಾಗುವಂತೆ ಮಾಡಿಬಿಡುತ್ತಿದ್ದನಂತೆ!! ಇನ್ನು ಕಾಂಗ್ರೆಸ್ ಹೇಗೆ ತಾನೆ ಉದ್ದಾರವಾದೀತು….
– ಬಿ.ಎನ್. ಮನುಶೆಣೈ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...