Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...