Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...