Homeಅಂಕಣಗಳುಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

- Advertisement -
- Advertisement -

ಗೌರಿ ಲಂಕೇಶ್
25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)|

ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು. ಯಾರಿಗೂ ಬಾರದ ಸಂಸ್ಕøತ ಭಾಷೆಯಲ್ಲೇ ಬರೆಯಲಾಗಿದ್ದ ಆ ಕರಪತ್ರದಲ್ಲಿ ಒಂದೇ ಒಂದು ಸಾಲು ಕನ್ನಡದಲ್ಲಿದ್ದು, ಅದು ಹೀಗಿತ್ತು. “1949ರ ಸೆಪ್ಟೆಂಬರ್ 10ರಂದು ನಡೆದ ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಸಂಸ್ಕøತವೇ ರಾಷ್ಟ್ರಭಾಷೆ ಆಗಬೇಕೆಂದಿದ್ದರಲ್ಲದೆ, ತಮ್ಮ ಈ ಅಭಿಪ್ರಾಯವನ್ನು ಸಂಸ್ಕøತದಲ್ಲೇ ಮಂಡಿಸಿದ್ದರು.”
ಅಂಬೇಡ್ಕರ್ ಸಂಸ್ಕøತ ಭಾಷೆಯನ್ನು ಚೆನ್ನಾಗಿ ಕಲಿತಿದ್ದರು ಅನ್ನೋದು ಗೊತ್ತಿತ್ತು. ಅವರು ಅದನ್ನು ಕಲಿತದ್ದು ಸ್ವ-ಇಚ್ಛೆ ಮತ್ತು ಶ್ರದ್ಧೆಯಿಂದ. ಅಂಬೇಡ್ಕರ್ ದಲಿತರಾಗಿದ್ದರಿಂದ ಅವರಿಗೆ ಶಾಲೆಯಲ್ಲಿ ಸಂಸ್ಕøತ ಹೇಳಿಕೊಡುವುದಿಲ್ಲ ಎಂದು ಮಾಸ್ತರರು ಹೇಳಿದ್ದರು. ಜನರ ಶೋಷಣೆಯ ಭಾಷೆಯೇ ಆಗಿದ್ದ ಸಂಸ್ಕøತದಲ್ಲಿ ಮತ್ತು ಸಂಸ್ಕøತದಲ್ಲೇ ರಚಿಸಿದ್ದ ಪುಸ್ತಕಗಳಲ್ಲಿ ಏನಿರಬಹುದು ಎಂದು ಅರಿಯಲಿಕ್ಕೇ ಅವರು ಆ ಭಾಷೆಯನ್ನು ಕಲಿತಿದ್ದರು. ಅಂದಮಾತ್ರಕ್ಕೆ ಅವರು ಸಂಸ್ಕøತವೇ ರಾಷ್ಟ್ರಭಾಷೆಯಾಗಲಿ ಎಂದು ಸಂಸ್ಕøತದಲ್ಲೇ ವಾದ ಮಂಡಿಸಿದ್ದರೆ?
ಇಂಟರ್‍ನೆಟ್‍ನಲ್ಲಿ ಹುಡುಕಾಡಿದಾಗ 1949ರ ಸೆಪ್ಟೆಂಬರ್ 10ರಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯು “ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಈ ಪ್ರಸ್ತಾವನೆಯನ್ನು ಮಂಡಿಸಿದರು” ಎಂದು ತಳಬುಡವಿಲ್ಲದ ವರದಿ ಸಿಕ್ಕಿತೇ ವಿನಾಃ ನಿಖರ ಮಾಹಿತಿ ಸಿಗಲಿಲ್ಲ. ಅದನ್ನೇ ಆಧಾರವಾಗಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿರೋದು ಖಾತ್ರಿಯಾಯ್ತು.
ಯಾವುದಕ್ಕೂ ಇರಲಿ ಎಂದು ನಮ್ಮ ಬಳಗದ, ತುಂಬಾ ಜಾಣೆ ರಾಜಲಕ್ಷ್ಮಿ ಅಂಕಲಗಿ ಎಂಬ ಯುವ ವಕೀಲೆಗೆ ಫೋನ್ ಮಾಡಿ ವಿಷಯ ತಿಳಿಸಿದೆ. “ಸಂವಿಧಾನ ರಚನಾ ಸಭೆಯ ಚರ್ಚೆಗಳನ್ನು ಕುರಿತ ಐದು ಪುಸ್ತಕಗಳೂ ನಮ್ಮ ಆಫೀಸಿನಲ್ಲಿವೆ. ಅವನ್ನು ನೋಡಿ ನಿಮಗೆ ತಿಳಿಸುತ್ತೇನೆ” ಎಂದಳು ಆಕೆ. ಅರ್ಧ ಗಂಟೆಯ ನಂತರ ಆಕೆ ನೀಡಿದ ಮಾಹಿತಿ ಹೀಗಿತ್ತು:
“1949ರ ಸೆಪ್ಟೆಂಬರ್ ಎಂಟನೇ ಮತ್ತು ಒಂಬತ್ತನೇ ತಾರೀಖು ನಡೆದ ಸಂವಿಧಾನ ರಚನಾ ಸಭೆಯಲ್ಲಿ ತೆರಿಗೆ ಕುರಿತ ಚರ್ಚೆಗಳು ಶುರುವಾಗಿ 10ನೇ ತಾರೀಖಿನವರೆಗೂ ಸಾಗಿದವು. 10ನೇ ತಾರೀಖು ಆಸ್ತಿ ಹೊಂದುವ ನೀತಿಗಳನ್ನು ಕುರಿತಂತೆ ಆರ್ಟಿಕಲ್ 24ರ ಬಗ್ಗೆ ಚರ್ಚೆಗಳಾದವು. ಅಂದು ಶನಿವಾರವಾದ್ದರಿಂದ ಸಭೆ ಮಧ್ಯಾಹ್ನ ನಿಂತಿತು. 11ನೇ ತಾರೀಖು ಭಾನುವಾರವಾದ್ದರಿಂದ ಸಭೆ ಮತ್ತೆ 12ನೇ ತಾರೀಖಿನಂದು ಸೇರುತ್ತದೆ. ಅವತ್ತೂ ಸಂಜೆ ನಾಲ್ಕು ಗಂಟೆಯ ತನಕ ಆಸ್ತಿ ಕುರಿತಂತೆ ಚರ್ಚೆ ನಡೆಯುತ್ತದೆ. ಆನಂತರ ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚೆ ಆರಂಭವಾಗಿ ಅದು 13 ಮತ್ತು 14ನೇ ತಾರೀಖಿನವರೆಗೂ ನಡೆಯುತ್ತದೆ. ಆಗಲೂ ಹೇಗೆ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಬೇಕು ಮತ್ತು ಹಿಂದಿಯನ್ನು ಯಾಕೆ ಹೇರಬಾರದು ಎಂಬುದರ ಬಗ್ಗೆಯೇ ಚರ್ಚೆ ನಡೆಯುತ್ತದೆ. 8ರಿಂದ 14ನೇ ತಾರೀಖಿನವರೆಗೂ ನಡೆದ ಚರ್ಚೆಗಳಲ್ಲಿ ಎರಡು ಮುಖ್ಯ ಅಂಶಗಳು ಇವೆ: ಮೊದಲನೆಯದಾಗಿ. ಸಂಸ್ಕøತ ಭಾಷೆಯಲ್ಲಿ ಮಾತನಾಡಿದವರು ಬಿಹಾರದ ಗುಪ್ತನಾಥ ಸಿಂಗ್ ಎಂಬುವವರು. ಆಸ್ತಿ ಹೊಂದುವ ವಿಚಾರ ಕುರಿತಂತೆ ಸಮಾಜವಾದಿ ಸಂವಿಧಾನವನ್ನು ನಿರೂಪಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿರುವಾಗ ಅವರು ಮನುಶಾಸ್ತ್ರದಲ್ಲಿ ಹೇಗೆ ಬಂಡವಾಳಶಾಹಿ ಪರ ಸಿದ್ಧಾಂತಗಳು ಅಡಗಿವೆ ಎಂದು ವಿವರಿಸುತ್ತಾರೆ. ಎರಡನೆಯದು: ಅಂಬೇಡ್ಕರ್‍ರವರು ಸಂಸ್ಕøತದ ಪರವಾಗಿ ಸಂಸ್ಕøತದಲ್ಲಿ ಮಾತನಾಡುವುದಿರಲಿ, ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚಾಸಭೆಗಳಲ್ಲಿ ಅವರು ಭಾಗವಹಿಸಿಯೇ ಇಲ್ಲ!!”
ಇದು ಅಧಿಕೃತವಾಗಿ ದಾಖಲಾಗಿರುವ ಸತ್ಯ! ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿತ್ತೆನ್ನಲಾದ ತಲೆ-ಬುಡವಿಲ್ಲದ ಊಹಾಪೋಹವಲ್ಲ! ಆದರೆ ಚಡ್ಡಿಗಳು ಎಂತಹ ಕುತಂತ್ರಿಗಳು ನೋಡಿ. ಒಂದೆಡೆ ಮನುಸ್ಮøತಿಯೇ ನಮ್ಮ ಸಂವಿಧಾನವಾಗಬೇಕಿತ್ತು ಎಂದು ವಾದಿಸಿದ್ದ ಗೋಲ್ವಾಲ್ಕರ್ ಎಂಬ ದ್ವೇಷದ ಗುರುವಿನ ನೂರನೇ ಜನ್ಮೋತ್ಸವವನ್ನು ‘ಹಿಂದೂ ಸಮಾವೇಶ’ ಎಂದು ಆಚರಿಸುತ್ತಾರೆ. ಇನ್ನೊಂದೆಡೆ ದಲಿತರ ನಾಯಕ ಮತ್ತು ಆತ್ಮಪ್ರಜ್ಞೆಯಾಗಿದ್ದ ಅಂಬೇಡ್ಕರ್ ಅವರೇ ಸ್ವತಃ ಸಂಸ್ಕøತದ ಪರವಾಗಿದ್ದರು ಎಂದು ಕಲ್ಪಿಸಿಕೊಂಡು ಸಭೆ ಏರ್ಪಡಿಸುತ್ತಾರೆ. ಇದನ್ನೆಲ್ಲ ಶೂದ್ರರು, ದಲಿತರು ನಂಬುತ್ತಾರೆ. ಗೋಲ್ವಾಲ್ಕರ್‍ನ ಸಭೆಗಳಲ್ಲಿ ಶೂದ್ರರು ಭಾಗವಹಿಸಿದರೆ, ಚೆಡ್ಡಿಗಳ ಅಂಬೇಡ್ಕರ್ ಕಾರ್ಯಕ್ರಮಗಳಲ್ಲಿ ದಲಿತರು ಪಾಲ್ಗೊಳ್ಳುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...