Homeಅಂಕಣಗಳುಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

- Advertisement -
- Advertisement -

ಗೌರಿ ಲಂಕೇಶ್
25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)|

ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು. ಯಾರಿಗೂ ಬಾರದ ಸಂಸ್ಕøತ ಭಾಷೆಯಲ್ಲೇ ಬರೆಯಲಾಗಿದ್ದ ಆ ಕರಪತ್ರದಲ್ಲಿ ಒಂದೇ ಒಂದು ಸಾಲು ಕನ್ನಡದಲ್ಲಿದ್ದು, ಅದು ಹೀಗಿತ್ತು. “1949ರ ಸೆಪ್ಟೆಂಬರ್ 10ರಂದು ನಡೆದ ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಸಂಸ್ಕøತವೇ ರಾಷ್ಟ್ರಭಾಷೆ ಆಗಬೇಕೆಂದಿದ್ದರಲ್ಲದೆ, ತಮ್ಮ ಈ ಅಭಿಪ್ರಾಯವನ್ನು ಸಂಸ್ಕøತದಲ್ಲೇ ಮಂಡಿಸಿದ್ದರು.”
ಅಂಬೇಡ್ಕರ್ ಸಂಸ್ಕøತ ಭಾಷೆಯನ್ನು ಚೆನ್ನಾಗಿ ಕಲಿತಿದ್ದರು ಅನ್ನೋದು ಗೊತ್ತಿತ್ತು. ಅವರು ಅದನ್ನು ಕಲಿತದ್ದು ಸ್ವ-ಇಚ್ಛೆ ಮತ್ತು ಶ್ರದ್ಧೆಯಿಂದ. ಅಂಬೇಡ್ಕರ್ ದಲಿತರಾಗಿದ್ದರಿಂದ ಅವರಿಗೆ ಶಾಲೆಯಲ್ಲಿ ಸಂಸ್ಕøತ ಹೇಳಿಕೊಡುವುದಿಲ್ಲ ಎಂದು ಮಾಸ್ತರರು ಹೇಳಿದ್ದರು. ಜನರ ಶೋಷಣೆಯ ಭಾಷೆಯೇ ಆಗಿದ್ದ ಸಂಸ್ಕøತದಲ್ಲಿ ಮತ್ತು ಸಂಸ್ಕøತದಲ್ಲೇ ರಚಿಸಿದ್ದ ಪುಸ್ತಕಗಳಲ್ಲಿ ಏನಿರಬಹುದು ಎಂದು ಅರಿಯಲಿಕ್ಕೇ ಅವರು ಆ ಭಾಷೆಯನ್ನು ಕಲಿತಿದ್ದರು. ಅಂದಮಾತ್ರಕ್ಕೆ ಅವರು ಸಂಸ್ಕøತವೇ ರಾಷ್ಟ್ರಭಾಷೆಯಾಗಲಿ ಎಂದು ಸಂಸ್ಕøತದಲ್ಲೇ ವಾದ ಮಂಡಿಸಿದ್ದರೆ?
ಇಂಟರ್‍ನೆಟ್‍ನಲ್ಲಿ ಹುಡುಕಾಡಿದಾಗ 1949ರ ಸೆಪ್ಟೆಂಬರ್ 10ರಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯು “ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಈ ಪ್ರಸ್ತಾವನೆಯನ್ನು ಮಂಡಿಸಿದರು” ಎಂದು ತಳಬುಡವಿಲ್ಲದ ವರದಿ ಸಿಕ್ಕಿತೇ ವಿನಾಃ ನಿಖರ ಮಾಹಿತಿ ಸಿಗಲಿಲ್ಲ. ಅದನ್ನೇ ಆಧಾರವಾಗಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿರೋದು ಖಾತ್ರಿಯಾಯ್ತು.
ಯಾವುದಕ್ಕೂ ಇರಲಿ ಎಂದು ನಮ್ಮ ಬಳಗದ, ತುಂಬಾ ಜಾಣೆ ರಾಜಲಕ್ಷ್ಮಿ ಅಂಕಲಗಿ ಎಂಬ ಯುವ ವಕೀಲೆಗೆ ಫೋನ್ ಮಾಡಿ ವಿಷಯ ತಿಳಿಸಿದೆ. “ಸಂವಿಧಾನ ರಚನಾ ಸಭೆಯ ಚರ್ಚೆಗಳನ್ನು ಕುರಿತ ಐದು ಪುಸ್ತಕಗಳೂ ನಮ್ಮ ಆಫೀಸಿನಲ್ಲಿವೆ. ಅವನ್ನು ನೋಡಿ ನಿಮಗೆ ತಿಳಿಸುತ್ತೇನೆ” ಎಂದಳು ಆಕೆ. ಅರ್ಧ ಗಂಟೆಯ ನಂತರ ಆಕೆ ನೀಡಿದ ಮಾಹಿತಿ ಹೀಗಿತ್ತು:
“1949ರ ಸೆಪ್ಟೆಂಬರ್ ಎಂಟನೇ ಮತ್ತು ಒಂಬತ್ತನೇ ತಾರೀಖು ನಡೆದ ಸಂವಿಧಾನ ರಚನಾ ಸಭೆಯಲ್ಲಿ ತೆರಿಗೆ ಕುರಿತ ಚರ್ಚೆಗಳು ಶುರುವಾಗಿ 10ನೇ ತಾರೀಖಿನವರೆಗೂ ಸಾಗಿದವು. 10ನೇ ತಾರೀಖು ಆಸ್ತಿ ಹೊಂದುವ ನೀತಿಗಳನ್ನು ಕುರಿತಂತೆ ಆರ್ಟಿಕಲ್ 24ರ ಬಗ್ಗೆ ಚರ್ಚೆಗಳಾದವು. ಅಂದು ಶನಿವಾರವಾದ್ದರಿಂದ ಸಭೆ ಮಧ್ಯಾಹ್ನ ನಿಂತಿತು. 11ನೇ ತಾರೀಖು ಭಾನುವಾರವಾದ್ದರಿಂದ ಸಭೆ ಮತ್ತೆ 12ನೇ ತಾರೀಖಿನಂದು ಸೇರುತ್ತದೆ. ಅವತ್ತೂ ಸಂಜೆ ನಾಲ್ಕು ಗಂಟೆಯ ತನಕ ಆಸ್ತಿ ಕುರಿತಂತೆ ಚರ್ಚೆ ನಡೆಯುತ್ತದೆ. ಆನಂತರ ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚೆ ಆರಂಭವಾಗಿ ಅದು 13 ಮತ್ತು 14ನೇ ತಾರೀಖಿನವರೆಗೂ ನಡೆಯುತ್ತದೆ. ಆಗಲೂ ಹೇಗೆ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಬೇಕು ಮತ್ತು ಹಿಂದಿಯನ್ನು ಯಾಕೆ ಹೇರಬಾರದು ಎಂಬುದರ ಬಗ್ಗೆಯೇ ಚರ್ಚೆ ನಡೆಯುತ್ತದೆ. 8ರಿಂದ 14ನೇ ತಾರೀಖಿನವರೆಗೂ ನಡೆದ ಚರ್ಚೆಗಳಲ್ಲಿ ಎರಡು ಮುಖ್ಯ ಅಂಶಗಳು ಇವೆ: ಮೊದಲನೆಯದಾಗಿ. ಸಂಸ್ಕøತ ಭಾಷೆಯಲ್ಲಿ ಮಾತನಾಡಿದವರು ಬಿಹಾರದ ಗುಪ್ತನಾಥ ಸಿಂಗ್ ಎಂಬುವವರು. ಆಸ್ತಿ ಹೊಂದುವ ವಿಚಾರ ಕುರಿತಂತೆ ಸಮಾಜವಾದಿ ಸಂವಿಧಾನವನ್ನು ನಿರೂಪಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿರುವಾಗ ಅವರು ಮನುಶಾಸ್ತ್ರದಲ್ಲಿ ಹೇಗೆ ಬಂಡವಾಳಶಾಹಿ ಪರ ಸಿದ್ಧಾಂತಗಳು ಅಡಗಿವೆ ಎಂದು ವಿವರಿಸುತ್ತಾರೆ. ಎರಡನೆಯದು: ಅಂಬೇಡ್ಕರ್‍ರವರು ಸಂಸ್ಕøತದ ಪರವಾಗಿ ಸಂಸ್ಕøತದಲ್ಲಿ ಮಾತನಾಡುವುದಿರಲಿ, ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚಾಸಭೆಗಳಲ್ಲಿ ಅವರು ಭಾಗವಹಿಸಿಯೇ ಇಲ್ಲ!!”
ಇದು ಅಧಿಕೃತವಾಗಿ ದಾಖಲಾಗಿರುವ ಸತ್ಯ! ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿತ್ತೆನ್ನಲಾದ ತಲೆ-ಬುಡವಿಲ್ಲದ ಊಹಾಪೋಹವಲ್ಲ! ಆದರೆ ಚಡ್ಡಿಗಳು ಎಂತಹ ಕುತಂತ್ರಿಗಳು ನೋಡಿ. ಒಂದೆಡೆ ಮನುಸ್ಮøತಿಯೇ ನಮ್ಮ ಸಂವಿಧಾನವಾಗಬೇಕಿತ್ತು ಎಂದು ವಾದಿಸಿದ್ದ ಗೋಲ್ವಾಲ್ಕರ್ ಎಂಬ ದ್ವೇಷದ ಗುರುವಿನ ನೂರನೇ ಜನ್ಮೋತ್ಸವವನ್ನು ‘ಹಿಂದೂ ಸಮಾವೇಶ’ ಎಂದು ಆಚರಿಸುತ್ತಾರೆ. ಇನ್ನೊಂದೆಡೆ ದಲಿತರ ನಾಯಕ ಮತ್ತು ಆತ್ಮಪ್ರಜ್ಞೆಯಾಗಿದ್ದ ಅಂಬೇಡ್ಕರ್ ಅವರೇ ಸ್ವತಃ ಸಂಸ್ಕøತದ ಪರವಾಗಿದ್ದರು ಎಂದು ಕಲ್ಪಿಸಿಕೊಂಡು ಸಭೆ ಏರ್ಪಡಿಸುತ್ತಾರೆ. ಇದನ್ನೆಲ್ಲ ಶೂದ್ರರು, ದಲಿತರು ನಂಬುತ್ತಾರೆ. ಗೋಲ್ವಾಲ್ಕರ್‍ನ ಸಭೆಗಳಲ್ಲಿ ಶೂದ್ರರು ಭಾಗವಹಿಸಿದರೆ, ಚೆಡ್ಡಿಗಳ ಅಂಬೇಡ್ಕರ್ ಕಾರ್ಯಕ್ರಮಗಳಲ್ಲಿ ದಲಿತರು ಪಾಲ್ಗೊಳ್ಳುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...