Homeಮುಖಪುಟಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ರಾಜ್ಯದಲ್ಲಿ ಗೆಲ್ಲದಿದ್ದರೂ ಕೇಂದ್ರದ ಅಧಿಕಾರದ ಚುಕ್ಕಾಣಿ ಹಿಡಿಯುವ ಮೈತ್ರಿಕೂಟದ ಸಂಚಾಲಕರಾದರೆ ಚಂದ್ರಬಾಬು ನಾಯ್ಡು ಅವರಿಗೆ ಹಲವು ಅನುಕೂಲಗಳಿವೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||
ಕೇಂದ್ರದಲ್ಲಿ ಮೈತ್ರಿ ಕೂಟದ ಸರ್ಕಾರವೊಂದನ್ನು ರಚಿಸಬೇಕೆಂದು ಬೇರೆ ಇನ್ನಾವುದೇ ಪಕ್ಷ ಅಥವಾ ನಾಯಕರಿಗಿಂತ ಹೆಚ್ಚಾಗಿ ಓಡಾಡುತ್ತಿರುವುದು ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು. ಸಾಮಾನ್ಯವಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಅಥವಾ ಎನ್‍ಸಿಪಿಯ ಶರದ್‍ಪವಾರ್ ಈ ಪಾತ್ರವನ್ನು ವಹಿಸುತ್ತಿದ್ದರು. ಆದರೆ, ಅದನ್ನೀಗ ನಾಯ್ಡು ಏಕೆ ಮಾಡುತ್ತಿದ್ದಾರೆ?


ಹಾಗೆ ನೋಡಿದರೆ ಇದು ಅವರಿಗೇನೂ ಹೊಸದಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಳೆರಡನ್ನೂ ಸರ್ಕಾರದಿಂದ ಹೊರಗಿಟ್ಟು ಸರ್ಕಾರ ನಡೆಸಿದ್ದು 1996ರಲ್ಲಿ ಸಂಯುಕ್ತ ರಂಗದ ಮೂಲಕ. ಆಗಲೂ ಅದರ ಸಂಚಾಲಕರಾಗಿದ್ದು ಚಂದ್ರಬಾಬು ನಾಯ್ಡುವೇ. ಆ ನಂತರ ನಾಯ್ಡು ಎನ್‍ಡಿಎ ಸೇರುವ ಹೊತ್ತಿಗೆ ಅದರ ಸಂಚಾಲಕರಾಗಿದ್ದು ಸಮತಾ ಪಕ್ಷದ ಜಾರ್ಜ್ ಫರ್ನಾಂಡೀಸ್. ಸಮತಾ ಪಕ್ಷವು ಜೆಡಿಯು ಆದ ಮೇಲೂ ಜಾರ್ಜ್ ಅದರ ಸಂಚಾಲಕರಾಗಿದ್ದರು. 2008ರಲ್ಲಿ ಅನಾರೋಗ್ಯದಿಂದ ಅವರು ಹಿಂದೆ ಸರಿದಾಗ ಜೆಡಿಯುನ ಶರದ್ ಯಾದವ್ ಸಂಚಾಲಕರಾದರು.

ಇದನ್ನೂ ಓದಿ: ರಾಜಕಾರಣಿಗಳ  ಎಕ್ಸಿಟ್ ಪೋಲ್ ಏನು ಹೇಳುತ್ತದೆ?
ಜೆಡಿಯು ಎನ್‍ಡಿಎದಿಂದ ಹೊರಹೋದ ಮೇಲೆ ಎನ್‍ಡಿಎ ಸಂಚಾಲಕರಾಗಿದ್ದು ಇದೇ ಚಂದ್ರಬಾಬು ನಾಯ್ಡು. ಅವರು ಸಂಚಾಲಕರಾಗಿದ್ದಾಗಲೇ ಮತ್ತೆ ಎನ್‍ಡಿಎ ಅಧಿಕಾರವನ್ನು ಹಿಡಿದರೂ, ಬಿಜೆಪಿ ಜೊತೆಗಿನ ಅವರ ಸಂಬಂಧ ಉಳಿದುಕೊಳ್ಳಲಿಲ್ಲ. ಅದರಲ್ಲೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೂ ಸೇರಿದಂತೆ ಹಲವು ವಿಚಾರಗಳಲ್ಲಿ ಮೋದಿ ನಾಯ್ಡು ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಅವರು ಎನ್‍ಡಿಎ ತೊರೆದರಲ್ಲದೇ ಮೋದಿಯನ್ನು ಕೆಳಗಿಳಿಸುವ ಶಪಥ ತೊಟ್ಟರು.


ಹೊಸ ರಾಜ್ಯವಾಗಿ ಆಂಧ್ರಪ್ರದೇಶ ಮತ್ತೊಮ್ಮೆ ಉದಯವಾದ ಮೇಲೆ ನಾಯ್ಡು ಅವರಿಗೆ ದೊಡ್ಡ ಸವಾಲು ಎದುರಾಯಿತು. ಆದಾಯ ತಂದುಕೊಡುವ ಮೆಟ್ರೋ ನಗರ ಹೈದರಾಬಾದ್ ಇಲ್ಲದೇ ರಾಜ್ಯವನ್ನು ನಡೆಸಬೇಕು ಮತ್ತು ಹೊಸ ರಾಜಧಾನಿಯನ್ನೂ ಕಟ್ಟಿಕೊಳ್ಳಬೇಕು. ಅದನ್ನು ಯಶಸ್ವಿಯಾಗಿಯೇ ನಡೆಸಿದ ಅವರು, ಕೇಂದ್ರದ ನೆರವನ್ನು ಕೇಳಿದರು. ಅಂತಹ ನೆರವನ್ನು ಉದಾರವಾಗಿ ನೀಡುವ ಇರಾದೆ ಮೋದಿಯವರದ್ದಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವಿರೋಧ ಪಕ್ಷ ವೈಎಸ್‍ಆರ್‍ಸಿಪಿಯ ಜಗನ್ ದೆಹಲಿಯಲ್ಲೂ ಧರಣಿ ಹೂಡಿದ್ದರು. ಹೀಗಾಗಿ ಕೇಂದ್ರದ ವಿರುದ್ಧ ತೊಡೆ ತಟ್ಟುವು ಅನಿವಾರ್ಯತೆ ಚಂದ್ರಬಾಬು ನಾಯ್ಡು ಅವರಿಗೆ ಉಂಟಾಯಿತು.


ಲೋಕಸಭೆಯ ಜೊತೆ ಜೊತೆಗೇ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತಿರುವ ಆಂಧ್ರದಲ್ಲಿ, ಈ ಸಾರಿ ಜಗನ್ ಅಧಿಕಾರಕ್ಕೆ ಬರುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ನಾಯ್ಡು ಅವರ ವಿಶ್ವಾಸ ಅಲುಗಾಡಿಲ್ಲ. ಒಂದು ವೇಳೆ, ಅಧಿಕಾರಕ್ಕೆ ಬರದೇ ಹೋದರೂ, ತನಗೊಂದು ವಿಶೇಷ ಸ್ಥಾನ ಕಲ್ಪಿಸಿಕೊಳ್ಳಲು ಅವರು ದೆಹಲಿಯ ದಾರಿ ತುಳಿದಿದ್ದಾರೆ.


ಯುಪಿಎ ಸರ್ಕಾರವೂ ಆಗದು, ತೃತೀಯ ರಂಗ ಮಾತ್ರವೇ ಅಧಿಕಾರಕ್ಕೆ ಬರುವುದೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ರಂಗಕ್ಕೆ ಸಂಚಾಲಕರಾಗಿ ಚಂದ್ರಬಾಬು ನಾಯ್ಡು ಸಹಜ ಆಯ್ಕೆಯಾಗಿರುತ್ತಾರೆ. ಅದಕ್ಕೆ ಬೇಕಾದಷ್ಟು ಕೆಲಸವನ್ನು ಅವರೀಗಾಗಲೇ ಮಾಡಿದ್ದಾರೆ. ಮುಖ್ಯಮಂತ್ರಿಯಾಗದೇ ಇದ್ದರೂ ಅಂತಹ ರಂಗವೊಂದರ ಸಂಚಾಲಕರಾಗಿ, ಅಮರಾವತಿ (ಆಂಧ್ರದ ಹೊಸ ರಾಜಧಾನಿ)ಯಲ್ಲೋ ಅಥವಾ ದೆಹಲಿಯಲ್ಲೋ ಕೂತು ಪತ್ರಿಕಾಗೋಷ್ಠಿ ಮಾಡಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಘೋಷಿಸುವ ಅವಕಾಶ ಅವರದ್ದಾಗಿರುತ್ತದೆ.


ಈ ಮೂಲಕ ಮುಖ್ಯಮಂತ್ರಿಯಾಗದೇ ಹೋದರೂ ಆಂಧ್ರದ ಉದ್ಧಾರಕನಾಗಿ ನಾಯ್ಡುವೇ ಇರುತ್ತಾರೆ. ನಿಧಾನಕ್ಕೆ ಜಗನ್‍ರನ್ನು ಹಣಿದು, ತನಗೋ ಅಥವಾ ತನ್ನ ಮಗ ನಾರಾ ಲೋಕೇಶ್‍ಗೋ ಮುಂದಿನ ಅವಧಿಯಲ್ಲಿ ಸ್ಥಾನ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಚಂದ್ರಬಾಬು ನಾಯ್ಡು ಅವರಿಗೆ ಈ ಲೆಕ್ಕಾಚಾರವೂ ಇರುವುದರಲ್ಲಿ ಸಂದೇಹವೇನಿಲ್ಲ. ಮೋದಿಯನ್ನು ಪ್ರಧಾನಿಯಾಗದಂತೆ ತಡೆಯಬೇಕು ಮತ್ತು ದೇಶದ ಪ್ರಜಾತಂತ್ರವು ಬಹಳ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ಇದು ತನ್ನ ಕರ್ತವ್ಯ ಎಂದು ಹೇಳುತ್ತಿರುವ ಅವರ ಮಾತುಗಳು ಸಂಪೂರ್ಣ ಸುಳ್ಳಲ್ಲದಿರಬಹುದು. ಆದರೆ, ಈ ಲೆಕ್ಕಾಚಾರ ಇಲ್ಲವೇ ಇಲ್ಲ ಎಂದೂ ಹೇಳಲಾಗದು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಅಭ್ಯರ್ಥಿ ಪ್ರಣಬ್ ಮುಖರ್ಜಿ

ಆದರೆ, ಯಾವ ಸಾಧ್ಯತೆ ಎಷ್ಟು ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಾಗುವುದು ಮೇ 23ರ ಸಂಜೆಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...