Homeಮುಖಪುಟಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ರಾಜ್ಯದಲ್ಲಿ ಗೆಲ್ಲದಿದ್ದರೂ ಕೇಂದ್ರದ ಅಧಿಕಾರದ ಚುಕ್ಕಾಣಿ ಹಿಡಿಯುವ ಮೈತ್ರಿಕೂಟದ ಸಂಚಾಲಕರಾದರೆ ಚಂದ್ರಬಾಬು ನಾಯ್ಡು ಅವರಿಗೆ ಹಲವು ಅನುಕೂಲಗಳಿವೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||
ಕೇಂದ್ರದಲ್ಲಿ ಮೈತ್ರಿ ಕೂಟದ ಸರ್ಕಾರವೊಂದನ್ನು ರಚಿಸಬೇಕೆಂದು ಬೇರೆ ಇನ್ನಾವುದೇ ಪಕ್ಷ ಅಥವಾ ನಾಯಕರಿಗಿಂತ ಹೆಚ್ಚಾಗಿ ಓಡಾಡುತ್ತಿರುವುದು ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು. ಸಾಮಾನ್ಯವಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಅಥವಾ ಎನ್‍ಸಿಪಿಯ ಶರದ್‍ಪವಾರ್ ಈ ಪಾತ್ರವನ್ನು ವಹಿಸುತ್ತಿದ್ದರು. ಆದರೆ, ಅದನ್ನೀಗ ನಾಯ್ಡು ಏಕೆ ಮಾಡುತ್ತಿದ್ದಾರೆ?


ಹಾಗೆ ನೋಡಿದರೆ ಇದು ಅವರಿಗೇನೂ ಹೊಸದಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಳೆರಡನ್ನೂ ಸರ್ಕಾರದಿಂದ ಹೊರಗಿಟ್ಟು ಸರ್ಕಾರ ನಡೆಸಿದ್ದು 1996ರಲ್ಲಿ ಸಂಯುಕ್ತ ರಂಗದ ಮೂಲಕ. ಆಗಲೂ ಅದರ ಸಂಚಾಲಕರಾಗಿದ್ದು ಚಂದ್ರಬಾಬು ನಾಯ್ಡುವೇ. ಆ ನಂತರ ನಾಯ್ಡು ಎನ್‍ಡಿಎ ಸೇರುವ ಹೊತ್ತಿಗೆ ಅದರ ಸಂಚಾಲಕರಾಗಿದ್ದು ಸಮತಾ ಪಕ್ಷದ ಜಾರ್ಜ್ ಫರ್ನಾಂಡೀಸ್. ಸಮತಾ ಪಕ್ಷವು ಜೆಡಿಯು ಆದ ಮೇಲೂ ಜಾರ್ಜ್ ಅದರ ಸಂಚಾಲಕರಾಗಿದ್ದರು. 2008ರಲ್ಲಿ ಅನಾರೋಗ್ಯದಿಂದ ಅವರು ಹಿಂದೆ ಸರಿದಾಗ ಜೆಡಿಯುನ ಶರದ್ ಯಾದವ್ ಸಂಚಾಲಕರಾದರು.

ಇದನ್ನೂ ಓದಿ: ರಾಜಕಾರಣಿಗಳ  ಎಕ್ಸಿಟ್ ಪೋಲ್ ಏನು ಹೇಳುತ್ತದೆ?
ಜೆಡಿಯು ಎನ್‍ಡಿಎದಿಂದ ಹೊರಹೋದ ಮೇಲೆ ಎನ್‍ಡಿಎ ಸಂಚಾಲಕರಾಗಿದ್ದು ಇದೇ ಚಂದ್ರಬಾಬು ನಾಯ್ಡು. ಅವರು ಸಂಚಾಲಕರಾಗಿದ್ದಾಗಲೇ ಮತ್ತೆ ಎನ್‍ಡಿಎ ಅಧಿಕಾರವನ್ನು ಹಿಡಿದರೂ, ಬಿಜೆಪಿ ಜೊತೆಗಿನ ಅವರ ಸಂಬಂಧ ಉಳಿದುಕೊಳ್ಳಲಿಲ್ಲ. ಅದರಲ್ಲೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೂ ಸೇರಿದಂತೆ ಹಲವು ವಿಚಾರಗಳಲ್ಲಿ ಮೋದಿ ನಾಯ್ಡು ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಅವರು ಎನ್‍ಡಿಎ ತೊರೆದರಲ್ಲದೇ ಮೋದಿಯನ್ನು ಕೆಳಗಿಳಿಸುವ ಶಪಥ ತೊಟ್ಟರು.


ಹೊಸ ರಾಜ್ಯವಾಗಿ ಆಂಧ್ರಪ್ರದೇಶ ಮತ್ತೊಮ್ಮೆ ಉದಯವಾದ ಮೇಲೆ ನಾಯ್ಡು ಅವರಿಗೆ ದೊಡ್ಡ ಸವಾಲು ಎದುರಾಯಿತು. ಆದಾಯ ತಂದುಕೊಡುವ ಮೆಟ್ರೋ ನಗರ ಹೈದರಾಬಾದ್ ಇಲ್ಲದೇ ರಾಜ್ಯವನ್ನು ನಡೆಸಬೇಕು ಮತ್ತು ಹೊಸ ರಾಜಧಾನಿಯನ್ನೂ ಕಟ್ಟಿಕೊಳ್ಳಬೇಕು. ಅದನ್ನು ಯಶಸ್ವಿಯಾಗಿಯೇ ನಡೆಸಿದ ಅವರು, ಕೇಂದ್ರದ ನೆರವನ್ನು ಕೇಳಿದರು. ಅಂತಹ ನೆರವನ್ನು ಉದಾರವಾಗಿ ನೀಡುವ ಇರಾದೆ ಮೋದಿಯವರದ್ದಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವಿರೋಧ ಪಕ್ಷ ವೈಎಸ್‍ಆರ್‍ಸಿಪಿಯ ಜಗನ್ ದೆಹಲಿಯಲ್ಲೂ ಧರಣಿ ಹೂಡಿದ್ದರು. ಹೀಗಾಗಿ ಕೇಂದ್ರದ ವಿರುದ್ಧ ತೊಡೆ ತಟ್ಟುವು ಅನಿವಾರ್ಯತೆ ಚಂದ್ರಬಾಬು ನಾಯ್ಡು ಅವರಿಗೆ ಉಂಟಾಯಿತು.


ಲೋಕಸಭೆಯ ಜೊತೆ ಜೊತೆಗೇ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತಿರುವ ಆಂಧ್ರದಲ್ಲಿ, ಈ ಸಾರಿ ಜಗನ್ ಅಧಿಕಾರಕ್ಕೆ ಬರುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ನಾಯ್ಡು ಅವರ ವಿಶ್ವಾಸ ಅಲುಗಾಡಿಲ್ಲ. ಒಂದು ವೇಳೆ, ಅಧಿಕಾರಕ್ಕೆ ಬರದೇ ಹೋದರೂ, ತನಗೊಂದು ವಿಶೇಷ ಸ್ಥಾನ ಕಲ್ಪಿಸಿಕೊಳ್ಳಲು ಅವರು ದೆಹಲಿಯ ದಾರಿ ತುಳಿದಿದ್ದಾರೆ.


ಯುಪಿಎ ಸರ್ಕಾರವೂ ಆಗದು, ತೃತೀಯ ರಂಗ ಮಾತ್ರವೇ ಅಧಿಕಾರಕ್ಕೆ ಬರುವುದೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ರಂಗಕ್ಕೆ ಸಂಚಾಲಕರಾಗಿ ಚಂದ್ರಬಾಬು ನಾಯ್ಡು ಸಹಜ ಆಯ್ಕೆಯಾಗಿರುತ್ತಾರೆ. ಅದಕ್ಕೆ ಬೇಕಾದಷ್ಟು ಕೆಲಸವನ್ನು ಅವರೀಗಾಗಲೇ ಮಾಡಿದ್ದಾರೆ. ಮುಖ್ಯಮಂತ್ರಿಯಾಗದೇ ಇದ್ದರೂ ಅಂತಹ ರಂಗವೊಂದರ ಸಂಚಾಲಕರಾಗಿ, ಅಮರಾವತಿ (ಆಂಧ್ರದ ಹೊಸ ರಾಜಧಾನಿ)ಯಲ್ಲೋ ಅಥವಾ ದೆಹಲಿಯಲ್ಲೋ ಕೂತು ಪತ್ರಿಕಾಗೋಷ್ಠಿ ಮಾಡಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಘೋಷಿಸುವ ಅವಕಾಶ ಅವರದ್ದಾಗಿರುತ್ತದೆ.


ಈ ಮೂಲಕ ಮುಖ್ಯಮಂತ್ರಿಯಾಗದೇ ಹೋದರೂ ಆಂಧ್ರದ ಉದ್ಧಾರಕನಾಗಿ ನಾಯ್ಡುವೇ ಇರುತ್ತಾರೆ. ನಿಧಾನಕ್ಕೆ ಜಗನ್‍ರನ್ನು ಹಣಿದು, ತನಗೋ ಅಥವಾ ತನ್ನ ಮಗ ನಾರಾ ಲೋಕೇಶ್‍ಗೋ ಮುಂದಿನ ಅವಧಿಯಲ್ಲಿ ಸ್ಥಾನ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಚಂದ್ರಬಾಬು ನಾಯ್ಡು ಅವರಿಗೆ ಈ ಲೆಕ್ಕಾಚಾರವೂ ಇರುವುದರಲ್ಲಿ ಸಂದೇಹವೇನಿಲ್ಲ. ಮೋದಿಯನ್ನು ಪ್ರಧಾನಿಯಾಗದಂತೆ ತಡೆಯಬೇಕು ಮತ್ತು ದೇಶದ ಪ್ರಜಾತಂತ್ರವು ಬಹಳ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ಇದು ತನ್ನ ಕರ್ತವ್ಯ ಎಂದು ಹೇಳುತ್ತಿರುವ ಅವರ ಮಾತುಗಳು ಸಂಪೂರ್ಣ ಸುಳ್ಳಲ್ಲದಿರಬಹುದು. ಆದರೆ, ಈ ಲೆಕ್ಕಾಚಾರ ಇಲ್ಲವೇ ಇಲ್ಲ ಎಂದೂ ಹೇಳಲಾಗದು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಅಭ್ಯರ್ಥಿ ಪ್ರಣಬ್ ಮುಖರ್ಜಿ

ಆದರೆ, ಯಾವ ಸಾಧ್ಯತೆ ಎಷ್ಟು ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಾಗುವುದು ಮೇ 23ರ ಸಂಜೆಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...