Homeಅಂಕಣಗಳುಚಾನೆಲ್‌ಗಳನ್ನು ಹೊಕ್ಕ ಕಾಗೆಗಳು ಕಾವ್ ಕಾವ್ ಎನ್ನುವ ಆ್ಯಂಕರ್ಸ್‌ಗಳು

ಚಾನೆಲ್‌ಗಳನ್ನು ಹೊಕ್ಕ ಕಾಗೆಗಳು ಕಾವ್ ಕಾವ್ ಎನ್ನುವ ಆ್ಯಂಕರ್ಸ್‌ಗಳು

- Advertisement -
- Advertisement -

ಮಲ್ಲಿ |
ಕನ್ನಡದ ಬಹುಪಾಲು ನ್ಯೂಸ್ ಚಾನೆಲ್‌ಗಳಿಗೆ ಕಾಗೆ ಎಂದರೆ ಬಲುಪ್ರೀತಿ. ಅದರಲ್ಲೂ ಬಿಜೆಪಿಗೆ ಅನುಕೂಲ ಆಗುವುದಾದರೆ ಅವು ಇಡೀ ದಿನ ಕಾಗೆಯ ಸುತ್ತವೇ ಸುದ್ದಿ ಮಾಡಲು ರೆಡಿ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಂತೆ ಎಷ್ಟೇ ಮೂದಲಿಕೆ, ವ್ಯಂಗ್ಯ ಬಂದರೂ ಅವು ಕಾಗೆಯ ಪರೀತಿಯಿಂದ ದೂರ ಉಳಿಯುತ್ತಲೇ ಆಗುತ್ತಿಲ್ಲ.

ಫೆಬ್ರುವರಿ ಎಂಟರಂದು ಬಜೆಟ್ ಮಂಡನೆ ಇತ್ತಲ್ಲ? ಅವತ್ತು ಬಜೆಟ್ ಮಂಡನೆಯೇ ಆಗುವುದಿಲ್ಲ, ಸರ್ಕಾರ ಬೀಳುತ್ತದೆ ಎಂದು ಬಹುಪಾಲು ನ್ಯೂಸ್ ಚಾನೆಲ್‌ಗಳು ಮುಂಜಾನೆಯಿಂದಲೇ ಅರಚುತ್ತಿದ್ದವು. ಆಗ ಬಿಟಿವಿ ಒಂದು ಬಿಗ್ ಬ್ರೇಕಿಂಗ್ ಕೊಡ್ತಾನೇ ಇತ್ತು. ಅದು ಕೂಡ ಸರ್ಕಾರ ಬೀಳುವುದರ ಕುರಿತೇ ಆಗಿತ್ತು! ಆದರೆ ಅದಕ್ಕೆ ಅವರು ನೀಡುತ್ತಿದ್ದ, ತೋರಿಸುತ್ತಿದ್ದ ಎಕ್ಸಕ್ಲೂಸಿವ್ ಕಾರಣವೇ ಬೇರೆ ಇತ್ತು!
ಅದು ಕಾಗೆ! ವಿಧಾನಸೌಧದದ ಪಶ್ಚಿಮ ದ್ವಾರದಲ್ಲಿ ಕಾಗೆ ಬಂದು ಸುಮಾರು ಹೊತ್ತಿನಿಂದ ಕೂತಿದೆ, ಇದು ಅಪಶಕುನ, ಸರ್ಕಾರ ಬಿದ್ದೇ ಹೋಯ್ತು ಎಂದೆಲ್ಲ ಬ್ರೇಕಿಂಗ್ ನ್ಯೂಸ್ ಕೊಡಲಾಗುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ‘ಬಿಗ್ ಬ್ರೇಕಿಂಗ್’ ಸದ್ಯದಲ್ಲೇ ಎಂಬ ಸುದ್ದಿ ಬಿಟ್ಟರು. ಆನ ಇದೇನಪ್ಪಾ ಅಂತಾ ಕಾಯ್ದರು. ಬಂದೇ ಬಿಟ್ಟಿತು ಬಿಗ್ ಬ್ರೇಕಿಂಗ್, “ಕಾಗೆ ಈಗ ವಿಧಾನಸೌಧ ಪ್ರವೇಶಿಸಲಿದೆ”….. ಛೇ, ಛೇ ರಿಯಲಿ ಬಿಗ್ ಬ್ರೇಕಿಂಗ್, ಆ ಕಾಗೆಗೆ!

ಆ ಕಾಗೆ ಹಿಂದ ಬಿದ್ದ ಕ್ಯಾಮೆರಾಮನ್ ಮತ್ತು ವರದಿಗಾರ ಬಜೆಟ್ ಬಗ್ಗೆ ತಲೆಕೆಡಿಸಿಕೊಂಡಿರಲೇ ಇಲ್ಲ. ದನ ಕಾಯುವವರಂತೆ ವಿಧಾನಸೌಧದ ಅಂಗಳದಲ್ಲೆಲ್ಲ ಓಡೋಡಿ ಶೂಟ್ ಮಾಡುತ್ತಿದ್ದ ಈ ಮನೆಹಾಳರನ್ನು ನೋಡಿ ಸೆಕ್ಯುರಿಟಿಯವರು, ಕುದುರೆ ವ್ಯಾಪಾರದ ಬಗ್ಗೆ ವರದಿ ಮಾಡ್ರೋ ಅಂದರೆ ಈ ಕತ್ತೆಗಳು ಕಾಗೆ ಹಿಂದೆ ಬಿದ್ದಿವೆಯಲ್ಲ ಎಂದು ನಗಾಡುತ್ತಿದ್ದರು. ಬಜೆಟ್ ಸುಸೂತ್ರವಾಗಿ ಮಂಡನೆಯಾಗಿತು. ಬಜೆಟ್‌ಗೂ ಮೊದಲು ಕುಮಾರಸ್ವಾಮಿ ಬಿಟ್ಟ ಆಡಿಯೋ ಬಾಂಬಿಗೆ ಬಿಜೆಪಿಯೂ ಥಂಡಾ ಹೊಡೆಯಿತು. ಪಾಪ, ಆಮೇಲೆ ಕಾಗೆಯೂ ಇಲ್ಲ, ಕಾಗೆ ಹಿಂದೆ ಬಿದ್ದಿದ್ದ ಕತ್ತೆಗಳೂ ಇಲ್ಲ!

ಪಬ್ಲಿಕ್‌ನ ಸೆಲ್ ವೀಕ್!

ಕಾಗೆ ಅಪಶಕುನ ಎಂಬ ಮೂಢನಂಬಿಕೆ ಇರುವಂತೆ, ನಿಂತ ಅಂದರೆ ಓಡದ ಗಡಿಯಾರವೂ ಮನೆಯಲ್ಲಿ ಇದ್ದರೆ ಡೇಂಜರ್ ಎಂಬ ಮುಠ್ಠಾಳ ನಂಬಿಕೆಯನ್ನೂ ವೈದಿಕರು ನಮ್ಮ ಜನರ ತಲೆಯಲ್ಲಿ ತುಂಬಿದ್ದಾರೆ. ಇದನ್ನೇ ಎನ್‌ಕ್ಯಾಷ್ ಮಾಡಿಕೊಂಡ ಪಬ್ಲಿಕ್ ಟಿವಿಯವರು ಮತ್ತೊಂದು ಬ್ರೇಕಿಂಗ್ ಹೊಡೆದೇ ಬಿಟ್ಟರು. ಕುಮಾರಸ್ವಾಮಿ ಮನೆಯ ಗಡಿಯಾರ ಕೆಟ್ಟು ಹೋಗಿದೆ ಅಂತಾ ಒಂದು ಬ್ರೇಕಿಂಗು, ಕೆಲಸದವರು ಹೊಸ ಸೆಲ್ ಹಾಕಿ ಸರಿಪಡಿಸಿದರು ಅಂತಾ ಇನ್ನೊಂದು ಬ್ರೇಕಿಂಗು.
ಕಾಗೆ ಕೂತಿದ್ದು, ಗಡಿಯಾರ ನಿಂತಿದ್ದು-ಇಂತದ್ದನ್ನೆಲ್ಲ ನೋಡಿ ಯಡಿಯೂರಪ್ಪ ಖೂಷಿ ಪಡುವ ಹೊತ್ತಿನಲ್ಲೇ ದೇವದುರ್ಗದ ಐಬಿಯಲ್ಲಿ ನಡೆಸಲು ಯತ್ನಿಸಿದ ಆಪರೇಷನ್ನಿನ ಆಡಿಯೋ ಹೊರಬಿದ್ದಿತ್ತು!

ಕಾರ್ ಕಾರ್, ಕಾರ್ ಮೇಲೆ ಕಾಗೆ ದರ್ಬಾರ್!

ಹಿಂದೆಯೂ ನಮ್ಮ ಕನ್ನಡ ಚಾನೆಲ್‌ಗಳು ಕಾಗೆಯ ಹಿಂದೆ ಬಿದ್ದು ಸರ್ಕಾರ ಬೀಳುತ್ತದೆ, ಸಿಎಂ ಬದಲಾಗುತ್ತಾರೆ ಎಂದೆಲ್ಲ ‘ವಿಶಲ್ಲೇಷಣೆ’ ಮಾಡುವ ಮಟ್ಟಕ್ಕೆ ಇಳಿದಿದ್ದವು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾರ್ ಮೇಲೆ ಕಾಗೆ ಕೂತಿದ್ದ ‘ಎಕ್ಸ್ಕ್ಲೂಸಿವ್’ ವಿಜುವಲ್ ಕ್ಯಾಚ್ ಮಾಡಿದ್ದ ಚಾನೆಲ್‌ಗಳು, ಸಿದ್ದರಾಮಯ್ಯ ಕಾರು ಬದಲಿಸಿದಾಗ, ಕಾಗೆಗೆ ಹೆದರಿ ಕಾರು ಬದಲಿಸಿದ ಸಮಾಜವಾದಿ ಎಂದೆಲ್ಲ ಲೇವಡಿ ಮಾಡಿದ್ದವು. ಮೂಢ ನಂಬಿಕೆಗಳನ್ನು ಪುಟ್ಟಾಪೂರಾ ವಿರೋಧಿಸುವ ಸಿದ್ದರಾಮಯ್ಯ ಆಡಳಿತಾತ್ಮಕ ಕಾರಣದಿಂದಲೋ ಅಥವಾ ಇನ್ನಾವುದೋ ಕಾರಣದಿಂದ ಕಾರು ಬದಲಾಯಿಸಿದ್ದರು. ಆದರೆ ಗೂಬೆಗಳಿಗೆ ಕಣ್ಣಿಗೆ ಕಾಗೆ ಮಾತ್ರ ಕಂಡಿತ್ತು.
ನಂತರವೂ ಶಕ್ತಿಸೌಧದಲ್ಲಿ ಕಾಗೆ, ಸಿದ್ದರಾಮಯ್ಯ ಕುರ್ಚಿಗೆ ಆಪತ್ತು ಎಂದೆಲ್ಲ ಕಾವ್ ಕಾವ್ ಮಾಡಲಾಗಿತ್ತು. ಪುಣ್ಯಕ್ಕೆ, ಸಿದ್ದರಾಮಯ್ಯ ಕಾರ್ ಮೇಲೆ ಕೂತಿದ್ದ ಕಾಗೆಯೇ ಮೊನ್ನೆ ಬಜೆಟ್ ದಿನ ವಿಧಾನಸೌಧದಲ್ಲಿ ಅಲೆದಾಡುತ್ತಿತ್ತು ಎಂಬ ಬ್ರೇಕಿಂಗನ್ನು ಹೊಡೆದಿಲ್ಲ. ಈಗ ಅದನ್ನು ಮಾಡುತ್ತಾರೆ, ನೋಡ್ತಾ ಇರಿ!

ರಾಧಿಕಮ್ಮನ ಕಾಗೆಗೆ ಒಂದು ಬಲಿ

4 ವರ್ಷಗಳ ಕೆಳಗೆ ಟಿವಿ ಒಂಭತ್ತರಲ್ಲಿ ರಾಧಿಕಾ ಭಾರದ್ವಾಜರು ಮಟಮಟ ಮಧ್ಯಾಹ್ನ ಕಾಗೆಯ ಸುತ್ತಲೇ ಅರ್ಧ ತಾಸಿನ ಎಪಿಸೋಡು ಮಾಡಿ ಧನ್ಯರಾಗಿದ್ದರು. ಮೂವರು ಜ್ಯೋತಿಷಿಗಳನ್ನು ಕೂಡಿಸಿಕೊಂಡಿದ್ದ ರಾಧಿಕಮ್ಮ ಕಾಗೆ ಮುಟ್ಟಿದರೆ ಮನುಷ್ಯ ಸತ್ತಂತೆ, ಮನೆ ಹಾಳಾದಂತೆ ಎಂದೆಲ್ಲ ಭೋಂಗು ಬಿಟ್ಟರು. ಯಾವುದೇ ವ್ಯಕ್ತಿಯ ಮೇಲೆ ಕಾಗೆ ಕುಳಿತರೆ ಆತನ/ಆಕೆಯ ತಾಯಿಗೆ ಮರಣ ಇಲ್ಲವೇ ಆತ/ಆಕೆಯೇ ಸಾವಿಗೆ ಈಡಾಗುತ್ತಾರೆ ಎಂದೆಲ್ಲ ಕಾವ್ ಕಾವ್ ಎಂದು ಅರಚಲಾಗಿತ್ತು.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಪ್ರೆಂಟಿಸ್ ಮಾಡುತ್ತಿದ್ದ ಲಕ್ಷ್ಮೇಶ್ವರದ ಯುವಕ ತನ್ನ ತಲೆ ಮೇಲೆ ಕಾಗೆ ಕೂತಿದ್ದಕ್ಕೆ ಚಿಂತಕ್ರಾಂತನಾಗಿ, ತನ್ನ ತಾಯಿಗೆ ಏನೂ ಆಗಬಾರದೆಂದು ಆತ್ಮಹತ್ಯೆ ಮಾಡಿಕೊಡಿದ್ದ. ಪೊಲೀಸರು ಸರಿಯಾದ ತನಿಖೆ ಮಾಡಿದ್ದರೆ ರಾಧಿಕಮ್ಮ ಮತ್ತು ಜೊತೆಗಿದ್ದ ಜ್ಯೋತಿಷಿ ಕಾಗೆಗಳೆಲ್ಲ ಜೈಲೂಟ ತನ್ನಬೇಕಾಗುತ್ತಿತ್ತೇನೋ?

ಆನರಲ್ಲಿ ವೈಜ್ಞಾನಿಕ ಮನೋಭಾವ ತುಂಬ ಬೇಕಾದ ಚಾನೆಲ್‌ಗಳು ಮುಂಜಾನೆ ಎದ್ದ ಕೂಡಲೇ ಜ್ಯೋತಿಷಿಗಳಿಗೆ ಚಾನೆಲ್ ಅನ್ನೇ ಮಾರಿಕೊಳ್ಳುವುದು ಅಸಹ್ಯಕರ. ಇದರ ಜೊತೆಗೆ ಕಾಗೆ, ಗಡಿಯಾರದ ಬ್ರೇಕಿಂಗುಗಳು ಬೇರೆ. ಟಿಆರ್‌ಪಿಗಾಗಿ ಕಾಗೆಯನ್ನೇ ಸಾಕಿ, ಅದನ್ನು ಎಲ್ಲಿ ಬೇಕಲ್ಲಿ ಕೂಡಿಸಿ ಬ್ರೇಕಿಂಗು ಕೊಡಲೂ ಹೇಸಲಾರವು ಈ ನ್ಯೂಸ್ ಚಾನೆಲ್‌ಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...