Homeಅಂಕಣಗಳುಚಾನೆಲ್‌ಗಳನ್ನು ಹೊಕ್ಕ ಕಾಗೆಗಳು ಕಾವ್ ಕಾವ್ ಎನ್ನುವ ಆ್ಯಂಕರ್ಸ್‌ಗಳು

ಚಾನೆಲ್‌ಗಳನ್ನು ಹೊಕ್ಕ ಕಾಗೆಗಳು ಕಾವ್ ಕಾವ್ ಎನ್ನುವ ಆ್ಯಂಕರ್ಸ್‌ಗಳು

- Advertisement -
- Advertisement -

ಮಲ್ಲಿ |
ಕನ್ನಡದ ಬಹುಪಾಲು ನ್ಯೂಸ್ ಚಾನೆಲ್‌ಗಳಿಗೆ ಕಾಗೆ ಎಂದರೆ ಬಲುಪ್ರೀತಿ. ಅದರಲ್ಲೂ ಬಿಜೆಪಿಗೆ ಅನುಕೂಲ ಆಗುವುದಾದರೆ ಅವು ಇಡೀ ದಿನ ಕಾಗೆಯ ಸುತ್ತವೇ ಸುದ್ದಿ ಮಾಡಲು ರೆಡಿ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಂತೆ ಎಷ್ಟೇ ಮೂದಲಿಕೆ, ವ್ಯಂಗ್ಯ ಬಂದರೂ ಅವು ಕಾಗೆಯ ಪರೀತಿಯಿಂದ ದೂರ ಉಳಿಯುತ್ತಲೇ ಆಗುತ್ತಿಲ್ಲ.

ಫೆಬ್ರುವರಿ ಎಂಟರಂದು ಬಜೆಟ್ ಮಂಡನೆ ಇತ್ತಲ್ಲ? ಅವತ್ತು ಬಜೆಟ್ ಮಂಡನೆಯೇ ಆಗುವುದಿಲ್ಲ, ಸರ್ಕಾರ ಬೀಳುತ್ತದೆ ಎಂದು ಬಹುಪಾಲು ನ್ಯೂಸ್ ಚಾನೆಲ್‌ಗಳು ಮುಂಜಾನೆಯಿಂದಲೇ ಅರಚುತ್ತಿದ್ದವು. ಆಗ ಬಿಟಿವಿ ಒಂದು ಬಿಗ್ ಬ್ರೇಕಿಂಗ್ ಕೊಡ್ತಾನೇ ಇತ್ತು. ಅದು ಕೂಡ ಸರ್ಕಾರ ಬೀಳುವುದರ ಕುರಿತೇ ಆಗಿತ್ತು! ಆದರೆ ಅದಕ್ಕೆ ಅವರು ನೀಡುತ್ತಿದ್ದ, ತೋರಿಸುತ್ತಿದ್ದ ಎಕ್ಸಕ್ಲೂಸಿವ್ ಕಾರಣವೇ ಬೇರೆ ಇತ್ತು!
ಅದು ಕಾಗೆ! ವಿಧಾನಸೌಧದದ ಪಶ್ಚಿಮ ದ್ವಾರದಲ್ಲಿ ಕಾಗೆ ಬಂದು ಸುಮಾರು ಹೊತ್ತಿನಿಂದ ಕೂತಿದೆ, ಇದು ಅಪಶಕುನ, ಸರ್ಕಾರ ಬಿದ್ದೇ ಹೋಯ್ತು ಎಂದೆಲ್ಲ ಬ್ರೇಕಿಂಗ್ ನ್ಯೂಸ್ ಕೊಡಲಾಗುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ‘ಬಿಗ್ ಬ್ರೇಕಿಂಗ್’ ಸದ್ಯದಲ್ಲೇ ಎಂಬ ಸುದ್ದಿ ಬಿಟ್ಟರು. ಆನ ಇದೇನಪ್ಪಾ ಅಂತಾ ಕಾಯ್ದರು. ಬಂದೇ ಬಿಟ್ಟಿತು ಬಿಗ್ ಬ್ರೇಕಿಂಗ್, “ಕಾಗೆ ಈಗ ವಿಧಾನಸೌಧ ಪ್ರವೇಶಿಸಲಿದೆ”….. ಛೇ, ಛೇ ರಿಯಲಿ ಬಿಗ್ ಬ್ರೇಕಿಂಗ್, ಆ ಕಾಗೆಗೆ!

ಆ ಕಾಗೆ ಹಿಂದ ಬಿದ್ದ ಕ್ಯಾಮೆರಾಮನ್ ಮತ್ತು ವರದಿಗಾರ ಬಜೆಟ್ ಬಗ್ಗೆ ತಲೆಕೆಡಿಸಿಕೊಂಡಿರಲೇ ಇಲ್ಲ. ದನ ಕಾಯುವವರಂತೆ ವಿಧಾನಸೌಧದ ಅಂಗಳದಲ್ಲೆಲ್ಲ ಓಡೋಡಿ ಶೂಟ್ ಮಾಡುತ್ತಿದ್ದ ಈ ಮನೆಹಾಳರನ್ನು ನೋಡಿ ಸೆಕ್ಯುರಿಟಿಯವರು, ಕುದುರೆ ವ್ಯಾಪಾರದ ಬಗ್ಗೆ ವರದಿ ಮಾಡ್ರೋ ಅಂದರೆ ಈ ಕತ್ತೆಗಳು ಕಾಗೆ ಹಿಂದೆ ಬಿದ್ದಿವೆಯಲ್ಲ ಎಂದು ನಗಾಡುತ್ತಿದ್ದರು. ಬಜೆಟ್ ಸುಸೂತ್ರವಾಗಿ ಮಂಡನೆಯಾಗಿತು. ಬಜೆಟ್‌ಗೂ ಮೊದಲು ಕುಮಾರಸ್ವಾಮಿ ಬಿಟ್ಟ ಆಡಿಯೋ ಬಾಂಬಿಗೆ ಬಿಜೆಪಿಯೂ ಥಂಡಾ ಹೊಡೆಯಿತು. ಪಾಪ, ಆಮೇಲೆ ಕಾಗೆಯೂ ಇಲ್ಲ, ಕಾಗೆ ಹಿಂದೆ ಬಿದ್ದಿದ್ದ ಕತ್ತೆಗಳೂ ಇಲ್ಲ!

ಪಬ್ಲಿಕ್‌ನ ಸೆಲ್ ವೀಕ್!

ಕಾಗೆ ಅಪಶಕುನ ಎಂಬ ಮೂಢನಂಬಿಕೆ ಇರುವಂತೆ, ನಿಂತ ಅಂದರೆ ಓಡದ ಗಡಿಯಾರವೂ ಮನೆಯಲ್ಲಿ ಇದ್ದರೆ ಡೇಂಜರ್ ಎಂಬ ಮುಠ್ಠಾಳ ನಂಬಿಕೆಯನ್ನೂ ವೈದಿಕರು ನಮ್ಮ ಜನರ ತಲೆಯಲ್ಲಿ ತುಂಬಿದ್ದಾರೆ. ಇದನ್ನೇ ಎನ್‌ಕ್ಯಾಷ್ ಮಾಡಿಕೊಂಡ ಪಬ್ಲಿಕ್ ಟಿವಿಯವರು ಮತ್ತೊಂದು ಬ್ರೇಕಿಂಗ್ ಹೊಡೆದೇ ಬಿಟ್ಟರು. ಕುಮಾರಸ್ವಾಮಿ ಮನೆಯ ಗಡಿಯಾರ ಕೆಟ್ಟು ಹೋಗಿದೆ ಅಂತಾ ಒಂದು ಬ್ರೇಕಿಂಗು, ಕೆಲಸದವರು ಹೊಸ ಸೆಲ್ ಹಾಕಿ ಸರಿಪಡಿಸಿದರು ಅಂತಾ ಇನ್ನೊಂದು ಬ್ರೇಕಿಂಗು.
ಕಾಗೆ ಕೂತಿದ್ದು, ಗಡಿಯಾರ ನಿಂತಿದ್ದು-ಇಂತದ್ದನ್ನೆಲ್ಲ ನೋಡಿ ಯಡಿಯೂರಪ್ಪ ಖೂಷಿ ಪಡುವ ಹೊತ್ತಿನಲ್ಲೇ ದೇವದುರ್ಗದ ಐಬಿಯಲ್ಲಿ ನಡೆಸಲು ಯತ್ನಿಸಿದ ಆಪರೇಷನ್ನಿನ ಆಡಿಯೋ ಹೊರಬಿದ್ದಿತ್ತು!

ಕಾರ್ ಕಾರ್, ಕಾರ್ ಮೇಲೆ ಕಾಗೆ ದರ್ಬಾರ್!

ಹಿಂದೆಯೂ ನಮ್ಮ ಕನ್ನಡ ಚಾನೆಲ್‌ಗಳು ಕಾಗೆಯ ಹಿಂದೆ ಬಿದ್ದು ಸರ್ಕಾರ ಬೀಳುತ್ತದೆ, ಸಿಎಂ ಬದಲಾಗುತ್ತಾರೆ ಎಂದೆಲ್ಲ ‘ವಿಶಲ್ಲೇಷಣೆ’ ಮಾಡುವ ಮಟ್ಟಕ್ಕೆ ಇಳಿದಿದ್ದವು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾರ್ ಮೇಲೆ ಕಾಗೆ ಕೂತಿದ್ದ ‘ಎಕ್ಸ್ಕ್ಲೂಸಿವ್’ ವಿಜುವಲ್ ಕ್ಯಾಚ್ ಮಾಡಿದ್ದ ಚಾನೆಲ್‌ಗಳು, ಸಿದ್ದರಾಮಯ್ಯ ಕಾರು ಬದಲಿಸಿದಾಗ, ಕಾಗೆಗೆ ಹೆದರಿ ಕಾರು ಬದಲಿಸಿದ ಸಮಾಜವಾದಿ ಎಂದೆಲ್ಲ ಲೇವಡಿ ಮಾಡಿದ್ದವು. ಮೂಢ ನಂಬಿಕೆಗಳನ್ನು ಪುಟ್ಟಾಪೂರಾ ವಿರೋಧಿಸುವ ಸಿದ್ದರಾಮಯ್ಯ ಆಡಳಿತಾತ್ಮಕ ಕಾರಣದಿಂದಲೋ ಅಥವಾ ಇನ್ನಾವುದೋ ಕಾರಣದಿಂದ ಕಾರು ಬದಲಾಯಿಸಿದ್ದರು. ಆದರೆ ಗೂಬೆಗಳಿಗೆ ಕಣ್ಣಿಗೆ ಕಾಗೆ ಮಾತ್ರ ಕಂಡಿತ್ತು.
ನಂತರವೂ ಶಕ್ತಿಸೌಧದಲ್ಲಿ ಕಾಗೆ, ಸಿದ್ದರಾಮಯ್ಯ ಕುರ್ಚಿಗೆ ಆಪತ್ತು ಎಂದೆಲ್ಲ ಕಾವ್ ಕಾವ್ ಮಾಡಲಾಗಿತ್ತು. ಪುಣ್ಯಕ್ಕೆ, ಸಿದ್ದರಾಮಯ್ಯ ಕಾರ್ ಮೇಲೆ ಕೂತಿದ್ದ ಕಾಗೆಯೇ ಮೊನ್ನೆ ಬಜೆಟ್ ದಿನ ವಿಧಾನಸೌಧದಲ್ಲಿ ಅಲೆದಾಡುತ್ತಿತ್ತು ಎಂಬ ಬ್ರೇಕಿಂಗನ್ನು ಹೊಡೆದಿಲ್ಲ. ಈಗ ಅದನ್ನು ಮಾಡುತ್ತಾರೆ, ನೋಡ್ತಾ ಇರಿ!

ರಾಧಿಕಮ್ಮನ ಕಾಗೆಗೆ ಒಂದು ಬಲಿ

4 ವರ್ಷಗಳ ಕೆಳಗೆ ಟಿವಿ ಒಂಭತ್ತರಲ್ಲಿ ರಾಧಿಕಾ ಭಾರದ್ವಾಜರು ಮಟಮಟ ಮಧ್ಯಾಹ್ನ ಕಾಗೆಯ ಸುತ್ತಲೇ ಅರ್ಧ ತಾಸಿನ ಎಪಿಸೋಡು ಮಾಡಿ ಧನ್ಯರಾಗಿದ್ದರು. ಮೂವರು ಜ್ಯೋತಿಷಿಗಳನ್ನು ಕೂಡಿಸಿಕೊಂಡಿದ್ದ ರಾಧಿಕಮ್ಮ ಕಾಗೆ ಮುಟ್ಟಿದರೆ ಮನುಷ್ಯ ಸತ್ತಂತೆ, ಮನೆ ಹಾಳಾದಂತೆ ಎಂದೆಲ್ಲ ಭೋಂಗು ಬಿಟ್ಟರು. ಯಾವುದೇ ವ್ಯಕ್ತಿಯ ಮೇಲೆ ಕಾಗೆ ಕುಳಿತರೆ ಆತನ/ಆಕೆಯ ತಾಯಿಗೆ ಮರಣ ಇಲ್ಲವೇ ಆತ/ಆಕೆಯೇ ಸಾವಿಗೆ ಈಡಾಗುತ್ತಾರೆ ಎಂದೆಲ್ಲ ಕಾವ್ ಕಾವ್ ಎಂದು ಅರಚಲಾಗಿತ್ತು.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಪ್ರೆಂಟಿಸ್ ಮಾಡುತ್ತಿದ್ದ ಲಕ್ಷ್ಮೇಶ್ವರದ ಯುವಕ ತನ್ನ ತಲೆ ಮೇಲೆ ಕಾಗೆ ಕೂತಿದ್ದಕ್ಕೆ ಚಿಂತಕ್ರಾಂತನಾಗಿ, ತನ್ನ ತಾಯಿಗೆ ಏನೂ ಆಗಬಾರದೆಂದು ಆತ್ಮಹತ್ಯೆ ಮಾಡಿಕೊಡಿದ್ದ. ಪೊಲೀಸರು ಸರಿಯಾದ ತನಿಖೆ ಮಾಡಿದ್ದರೆ ರಾಧಿಕಮ್ಮ ಮತ್ತು ಜೊತೆಗಿದ್ದ ಜ್ಯೋತಿಷಿ ಕಾಗೆಗಳೆಲ್ಲ ಜೈಲೂಟ ತನ್ನಬೇಕಾಗುತ್ತಿತ್ತೇನೋ?

ಆನರಲ್ಲಿ ವೈಜ್ಞಾನಿಕ ಮನೋಭಾವ ತುಂಬ ಬೇಕಾದ ಚಾನೆಲ್‌ಗಳು ಮುಂಜಾನೆ ಎದ್ದ ಕೂಡಲೇ ಜ್ಯೋತಿಷಿಗಳಿಗೆ ಚಾನೆಲ್ ಅನ್ನೇ ಮಾರಿಕೊಳ್ಳುವುದು ಅಸಹ್ಯಕರ. ಇದರ ಜೊತೆಗೆ ಕಾಗೆ, ಗಡಿಯಾರದ ಬ್ರೇಕಿಂಗುಗಳು ಬೇರೆ. ಟಿಆರ್‌ಪಿಗಾಗಿ ಕಾಗೆಯನ್ನೇ ಸಾಕಿ, ಅದನ್ನು ಎಲ್ಲಿ ಬೇಕಲ್ಲಿ ಕೂಡಿಸಿ ಬ್ರೇಕಿಂಗು ಕೊಡಲೂ ಹೇಸಲಾರವು ಈ ನ್ಯೂಸ್ ಚಾನೆಲ್‌ಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...