Homeಅಂಕಣಗಳು`ಗಿರಿ' ನೋಡಲು ಹೋದಾಗ ಕಂಡದ್ದು...

`ಗಿರಿ’ ನೋಡಲು ಹೋದಾಗ ಕಂಡದ್ದು…

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್ 2003 (ಸಂಪಾದಕೀಯದಿಂದ)

ಚಿಕ್ಕಮಗಳೂರು ಮತ್ತು ಬಾಬಾಬುಡನ್‍ಗಿರಿಯಲ್ಲಿ ಕೋಮುಸೌಹಾರ್ದ ಸಭೆ ನಡೆಸಿ, ಆ ಮೂಲಕ ಕೇಸರಿ ಬಳಗದವರು ಕರ್ನಾಟಕವನ್ನು ಮತ್ತೊಂದು ಗುಜರಾತ್ ಆಗಿ ಪರಿವರ್ತಿಸುವುದನ್ನೂ, ಬಾಬಾ ಬುಡನ್‍ಗಿರಿಯನ್ನು ಅಯೋಧ್ಯೆಯನ್ನಾಗಿಸುವುದನ್ನೂ ತಡೆಯೋಣ ಬನ್ನಿ ಎಂದು ಕರೆ ನೀಡಿದ ಈ ಎರಡು ವಾರಗಳಲ್ಲಿ ಅದೆಂತಹ ಅದ್ಭುತ ಬೆಳವಣಿಗೆಗಳಾಗಿವೆ ಎಂದರೆ…. ಎಲ್ಲಿಂದ ಪ್ರಾರಂಭಿಸಲಿ ಎಂಬುದೇ ಗೊಂದಲವಾಗಿಬಿಟ್ಟಿದೆ.

ಭಾವೈಕ್ಯತೆಯ ಸಂಕೇತವಾಗಿರುವ ಬಾಬಾಬುಡನ್‍ಗಿರಿಯ ಸಾಮರಸ್ಯವನ್ನು ಕಾಪಾಡಲು ಈಗಾಗಲೇ ತಮ್ಮ ಬೆಂಬಲವನ್ನು ಸೂಚಿಸಿರುವ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್‍ರವರು ಬುಧವಾರ ಬೆಳಗ್ಗೆ ನನಗೆ ಫೋನ್ ಮಾಡಿ: “ಡಿಸೆಂಬರ್ 7 ಮತ್ತು 8ರಂದು ಅಲ್ಲಿ ಸೌಹಾರ್ದ ಸಮಾವೇಶ ನಡೆಸುವ ಮುನ್ನ ನಾವು ಹಲವರು ಅಲ್ಲಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವಸ್ಥಿತಿಯನ್ನು ಪರಿಶೀಲಿಸಿ ಬರೋಣವಾ? ಎಂದು ಕೇಳಿದರು.

“ಬ್ಯೂಟಿಫುಲ್ ಐಡಿಯಾ, ಹೋಗೋಣ” ಅಂದೆ. ಅದರಂತೆ ಗುರುವಾರ ಕಾರ್ನಾಡ್, ಡಾ.ಕೆ.ಮರುಳಸಿದ್ದಪ್ಪ, ಜಿ.ಕೆ.ಗೋವಿಂದರಾವ್, ಶೂದ್ರ ಶ್ರೀನಿವಾಸ್, ಪ್ರೊ.ವಿ.ಎಸ್.ಶ್ರೀಧರ್ ಮತ್ತು ನಾನು ಎಲ್ಲರೂ ಟಾಟಾ ಕ್ವಾಲಿಸ್ ಒಂದನ್ನು ಏರಿ ಚಿಕ್ಕಮಗಳೂರಿಗೆ ಹೊರಟೆವು.

ದಾರಿಯಲ್ಲಿ ಬಾಬಾಬುಡನ್‍ಗಿರಿಯ ವೈಶಿಷ್ಟ್ಯತೆ ಮತ್ತು ಈಗ ಕೇಸರಿ ಬಳಗ ಅದರ ಸುತ್ತಲೂ ಹರಡಿರುವ ವಿಷಮಯ ವಾತಾವರಣದ ಬಗ್ಗೆ ಚರ್ಚಿಸಿದೆವು.

ಈ ವರ್ಷ ಭಜರಂಗದಳದ ಮಂಗಗಳು ಬಾಬಾ ಬುಡನ್‍ಗಿರಿಯಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಲು ಅಣಿಯಾಗಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಇದಕ್ಕೆ ಹೋದ ವರ್ಷ ಭಜರಂಗದಳ ನೀಡಿದ್ದ ಕರೆಯೇ ಸಾಕ್ಷಿಯಂತಿದೆ. ಅಂದು ತೆಗೆದಿದ್ದ ಫೋಟೋಗಳನ್ನು ಶ್ರೀಧರ್ ತೋರಿಸಿದರು. ಅವುಗಳಲ್ಲಿ ಒಂದು ಬ್ಯಾನರ್‍ನ ಫೋಟೋ ಇದ್ದು ಅದರಲ್ಲಿ ಹೀಗೆ ಕರೆ ನೀಡಲಾಗಿತ್ತು: “ಸ್ನೇಹಕ್ಕೆ ಬದ್ಧ, ಸಂಹಾರಕ್ಕೆ ಸಿದ್ಧ.”

ಇದನ್ನು ಓದಿ ಕಾರ್ನಾಡ್ ಕುಪಿತರಾದರು. “ಯಾರ ಸಂಹಾರ ಮಾಡುತ್ತಾರಂತೆ ಇವರು? ಇದರಲ್ಲಿ ಬಳಸಿರುವ ಪದಗಳನ್ನು ನೋಡಿ ‘ಮಾಂಸ ಖಂಡ’, ‘ರಕ್ತದ ಕೋಡಿ’, ‘ಶತ್ರುಗಳ ಸಂಹಾರ’. ಇದು ಕನ್ನಡ ಭಾಷೆಯೇ?” ಎಂದು ಗುಡುಗಿದರು.

ಇಂತಹ ಸ್ಥಳದಲ್ಲಿ ಪುರೋಹಿತಶಾಹಿ ಪಕ್ಷವಾದ ಬಿಜೆಪಿ ಮತ್ತದರ ಅಂಗವಾಗಿರುವ ಭಜರಂಗದ ಮಂಗಗಳು ಇಲ್ಲಿ ಅರ್ಚಕ(ಆತ ಬ್ರಾಹ್ಮಣನೇ ಆಗಿರುತ್ತಾನೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ)ನ ನೇಮಕ, ಗೋರಿಗಳ ನಿರ್ಮೂಲನೆ, ‘ಹಿಂದೂ ಪುಣ್ಯಕ್ಷೇತ್ರ’ಗಳನ್ನು ಘೋಷಿಸಲು ಮುಂದಾಗಿರುವುದು ನಿಜವಾಗಲು ಕಿಡಿಗೇಡಿತನ……

ಕಾರ್ನಾಡ್‍ರವರು “ಈ ದತ್ತ ಜಯಂತಿ, ದತ್ತಮಾಲೆ, ಇವ್ಯಾವೂ ನಮ್ಮ ಸಂಸ್ಕೃತಿಯಲ್ಲಿಲ್ಲ, ಇವುಗಳ ಆಚರಣೆಯ ಹಿಂದೆ ಇರುವುದು ಧರ್ಮವಲ್ಲ, ಬದಲಾಗಿ ಧರ್ಮದ ಹೆಸರಿನಲ್ಲಿ ರಾಜಕಾರಣ. ನಾಥ ಪಂಕ್ತಿಗೆ ಸೇರಿದ್ದ ದತ್ತಾತ್ರೇಯ ಜಾತಿ ಪದ್ದತಿಯನ್ನು ತಿರಸ್ಕರಿಸಿದ್ದರೂ, ಆತನನ್ನು ಬ್ರಾಹ್ಮಣೀಕರಿಸುತ್ತಿರುವುದರಲ್ಲ ಹಿಂದಿನ ಸಂಚು ಅರ್ಥೈಸುವುದು ಸುಲಭ” ಎಂದು ಲೇವಡಿ ಮಾಡಿದರು.

ಈ ‘ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ’ಕ್ಕೆ ತನ್ನದೇ ಇತಿಹಾದವಿದೆ. ಅರೆಬಿಯಾದಿಂದ ಚಂದ್ರ ದ್ರೋಣ ಪರ್ವತಕ್ಕೆ ಬಂದ ದಾದಾ ಹೈಯತ್ ಇಲ್ಲಿನ ಪಾಳೆಗಾರರ ದಬ್ಬಾಳಿಕೆಯಡಿ ನರಳುತ್ತಿದ್ದ ಶೂದ್ರರಿಗೂ, ದೀನ ದಲಿತ ವರ್ಗಕ್ಕೂ ಸಹಾಯ ಮಾಡಿ ಅವರ ಮೆಚ್ಚುಗೆಯನ್ನು ಗಳಿಸಿದರು. ದಾದಾ ಹೈಯತ್‍ನ ಪ್ರೀತಿ, ದಯೆ ಮತ್ತು ಸೈರಣೆಯನ್ನು ಕಂಡು ಹಲವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರೆ, ಇನ್ನು ಹಲವರು ತಮ್ಮ ಪುರಾತನ ಧರ್ಮವನ್ನು ತ್ಯಜಿಸದೇ, ದಾದಾ ಹೈರತ್‍ನನ್ನು ದತ್ತಾತ್ರೇಯನ ಅವತಾರವೆಂದೇ ಭಾವಿಸಿ ಆತನ ಭಕ್ತಾಧಿಗಳಾದರು. ಇದಕ್ಕೆ ಕಾರಣವೂ ಇತ್ತು. ಹಿಂದೂ ಪುರಾಣಗಳಲ್ಲಿ ವಿಷ್ಣು ದತ್ತಾತ್ರೇಯನ ಅವತಾರವನ್ನು ತಾಳಿ ಜನರನ್ನು ದಾಸ್ಯದಿಂದ ಪಾರು ಮಾಡುತ್ತಾನೆಂದು ಹೇಳಲಾಗಿದೆ. ಆದ್ದರಿಂದಲೇ ಹಿಂದೂ ಭಕ್ತಾದಿಗಳು ದಾದಾ ಹೈರತ್‍ನಲ್ಲಿ ದತ್ತಾತ್ರೇಯನನ್ನೇ ಕಂಡು ಆತನಿಗೆ ಹಿಂದೂ ಹೆಸರಿಟ್ಟು ಪುನರ್ ನಾಮಕರಣ ಮಾಡಿದರು. ಓರ್ವ ಮುಸ್ಲಿಂ ಸೂಫಿ ಸಂತನಿಗೆ ಆಗೆಲ್ಲ ಹಿಂದೂ ಹೆಸರನ್ನಿಡುವುದು ಸಾಮಾನ್ಯವಾಗಿತ್ತು. ಉದಾಹರಣೆಗೆ: ಬಿಜಾಪುರದ ಸೂಫಿ ಸಂತ ಖ್ವಾಜ ಅಮಿನುದ್ದೀನ್ ಅಲ್ಲಾನನ್ನು ಹಿಂದೂ ಭಕ್ತಾದಿಗಳು ಬ್ರಹ್ಮಾನಂದಯಿಕೆ ಸ್ವಾಮಿ ಎಂದೂ, ತಿಥಿನಿಯ ಮೊಯಿದ್ದೀನ್ ಅವರನ್ನು ಮುನಿಯಪ್ಪರೆಂದೂ ‘ಹಿಂದೂ’ಕರಿಸಲಾಗಿತ್ತು.

ಅಂತೂ ಚಿಕ್ಕಮಗಳೂರನ್ನು ತಲುಪಿದೆವು. ಅಲ್ಲಿ ನಮಗಾಗಿ ಹಲವರು ಕಾದಿದ್ದರು. ಅನೇಕ ಸಂಘಗಳಿಗೆ ಸೇರಿದ್ದ ಅವರೆಲ್ಲಾ ಎಂತಹ ಉತ್ಸಾಹಿ ತರುಣರೆಂದರೆ, ನಾಲ್ಕೈದು ವರ್ಷಗಳ ಕಾಲ ಅವರೆಲ್ಲಾ ಚಿಕ್ಕಮಗಳೂರಿನ ಆಸುಪಾಸಿನಲ್ಲಿ ಸಂಘ ಪರಿವಾರದ ಷಡ್ಯಂತ್ರದ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.

ಬಾಬಾಬುಡನ್‍ಗಿರಿಯಲ್ಲಿರುವ ಪೀಠಕ್ಕೆ ಭೇಟಿನೀಡಿ, ಅಲ್ಲಿನ ಶಾಖಾದ್ರಿಯವರನ್ನು ಮಾತನಾಡಿಸಿ, ಇತ್ತೀಚೆಗೆ ಗಿರಿಗೆ ಹೋಗಿದ್ದ ಮಂಗ ಪರಿವಾರದವರು ಅಲ್ಲಿ ನಾಶ ಮಾಡಿದ್ದ ಮುಸ್ಲಿಮರ ಹೋಟೆಲುಗಳನ್ನು, ಮುಸ್ಲಿಂ ಗುರುಗಳೊಬ್ಬರ ಗೋರಿಯ ಮೇಲಿರುವ ಹರಕೆಯ ಮರದ ಕೊಂಬೆಯನ್ನು ಕಡಿದು ಹಾಕಿರುವುದನ್ನೂ ಪರಿಶೀಲಿಸಿದೆವು.

ಚಿಕ್ಕಮಗಳೂರಿಗೆ ಹಿಂದಿರುಗಿದ ನಂತರ ಒಂದು ಪತ್ರಿಕಾಗೋಷ್ಠಿ. “ಕರ್ನಾಟಕವನ್ನು ಇನ್ನೊಂದು ಗುಜರಾತ್ ಮಾಡುವುದು ಎಂದರೇನು? ಗುಜರಾತ್, ಅಯೋಧ್ಯೆ ನಮಗೆ ಯಾಕೆ, ಯಾವಾಗ ಮಾದರಿಯಾದವು? ನಮಗೆ ನಮ್ಮದೇ ಮಾದರಿ, ಪರಂಪರೆಗಳಿಲ್ಲವೆ?” ಕಾರ್ನಾಡ್‍ರವರಿಂದ ಪ್ರಶ್ನೆ. “ನಮ್ಮ ಮಾರ್ಗದರ್ಶಕರು ಬಸವಣ್ಣ, ಕುವೆಂಪು ಅಂಥವರೇ ವಿನಃ ತೊಗಾಡಿಯಾ, ಮೋದಿ ಅಂಥವರಲ್ಲ,” ಮರುಳು ಸಿದ್ದಪ್ಪನವರಿಂದ ಸ್ಪಷ್ಟನೆ. “ನ್ಯಾಯಾಲಯದ ತೀರ್ಪಿನ ಪ್ರಕಾರ 1975ರ ಹಿಂದಿನ ಸ್ಥಿತಿಯನ್ನೇ ಗಿರಿಯ ಮೇಲೆ ಸ್ಥಾಪಿಸಬೇಕು” ಎಂಬುದು ನಮ್ಮೆಲ್ಲರ ಒತ್ತಾಯ.

ಪತ್ರಿಕಾಗೋಷ್ಠಿಯ ನಂತರ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್‍ರವರೊಂದಿಗೆ ಭೇಟಿ. “ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಗಿರಿಯ ಮೇಲ ಹೋಮ ನಡೆಸಲು ಯಾಕೆ ಅನುಮತಿ ನೀಡಿದಿರಿ?” ಎಂದು ಕಾರ್ನಾಡ್ ಕೇಳಿದರೆ ಆ ಅಧಿಕಾರಿಯಿಂದ ಬಂದ ಉತ್ತರ “75ರ ಹಿಂದೆಯೂ ಅಲ್ಲಿ ಹೋಮ ಮಾಡಲಾಗುತ್ತಿತ್ತು” ಇದಕ್ಕೆ ಯಾವ ದಾಖಲೆ ಇದೆ ತೋರಿಸಿ,” ಎಂದು ಮರುಪ್ರಶ್ನಿಸಿದರೆ ಆತನಲ್ಲಿ ಯಾವ ಉತ್ತರವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...