Homeಅಂಕಣಗಳು`ಗಿರಿ' ನೋಡಲು ಹೋದಾಗ ಕಂಡದ್ದು...

`ಗಿರಿ’ ನೋಡಲು ಹೋದಾಗ ಕಂಡದ್ದು…

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್ 2003 (ಸಂಪಾದಕೀಯದಿಂದ)

ಚಿಕ್ಕಮಗಳೂರು ಮತ್ತು ಬಾಬಾಬುಡನ್‍ಗಿರಿಯಲ್ಲಿ ಕೋಮುಸೌಹಾರ್ದ ಸಭೆ ನಡೆಸಿ, ಆ ಮೂಲಕ ಕೇಸರಿ ಬಳಗದವರು ಕರ್ನಾಟಕವನ್ನು ಮತ್ತೊಂದು ಗುಜರಾತ್ ಆಗಿ ಪರಿವರ್ತಿಸುವುದನ್ನೂ, ಬಾಬಾ ಬುಡನ್‍ಗಿರಿಯನ್ನು ಅಯೋಧ್ಯೆಯನ್ನಾಗಿಸುವುದನ್ನೂ ತಡೆಯೋಣ ಬನ್ನಿ ಎಂದು ಕರೆ ನೀಡಿದ ಈ ಎರಡು ವಾರಗಳಲ್ಲಿ ಅದೆಂತಹ ಅದ್ಭುತ ಬೆಳವಣಿಗೆಗಳಾಗಿವೆ ಎಂದರೆ…. ಎಲ್ಲಿಂದ ಪ್ರಾರಂಭಿಸಲಿ ಎಂಬುದೇ ಗೊಂದಲವಾಗಿಬಿಟ್ಟಿದೆ.

ಭಾವೈಕ್ಯತೆಯ ಸಂಕೇತವಾಗಿರುವ ಬಾಬಾಬುಡನ್‍ಗಿರಿಯ ಸಾಮರಸ್ಯವನ್ನು ಕಾಪಾಡಲು ಈಗಾಗಲೇ ತಮ್ಮ ಬೆಂಬಲವನ್ನು ಸೂಚಿಸಿರುವ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್‍ರವರು ಬುಧವಾರ ಬೆಳಗ್ಗೆ ನನಗೆ ಫೋನ್ ಮಾಡಿ: “ಡಿಸೆಂಬರ್ 7 ಮತ್ತು 8ರಂದು ಅಲ್ಲಿ ಸೌಹಾರ್ದ ಸಮಾವೇಶ ನಡೆಸುವ ಮುನ್ನ ನಾವು ಹಲವರು ಅಲ್ಲಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವಸ್ಥಿತಿಯನ್ನು ಪರಿಶೀಲಿಸಿ ಬರೋಣವಾ? ಎಂದು ಕೇಳಿದರು.

“ಬ್ಯೂಟಿಫುಲ್ ಐಡಿಯಾ, ಹೋಗೋಣ” ಅಂದೆ. ಅದರಂತೆ ಗುರುವಾರ ಕಾರ್ನಾಡ್, ಡಾ.ಕೆ.ಮರುಳಸಿದ್ದಪ್ಪ, ಜಿ.ಕೆ.ಗೋವಿಂದರಾವ್, ಶೂದ್ರ ಶ್ರೀನಿವಾಸ್, ಪ್ರೊ.ವಿ.ಎಸ್.ಶ್ರೀಧರ್ ಮತ್ತು ನಾನು ಎಲ್ಲರೂ ಟಾಟಾ ಕ್ವಾಲಿಸ್ ಒಂದನ್ನು ಏರಿ ಚಿಕ್ಕಮಗಳೂರಿಗೆ ಹೊರಟೆವು.

ದಾರಿಯಲ್ಲಿ ಬಾಬಾಬುಡನ್‍ಗಿರಿಯ ವೈಶಿಷ್ಟ್ಯತೆ ಮತ್ತು ಈಗ ಕೇಸರಿ ಬಳಗ ಅದರ ಸುತ್ತಲೂ ಹರಡಿರುವ ವಿಷಮಯ ವಾತಾವರಣದ ಬಗ್ಗೆ ಚರ್ಚಿಸಿದೆವು.

ಈ ವರ್ಷ ಭಜರಂಗದಳದ ಮಂಗಗಳು ಬಾಬಾ ಬುಡನ್‍ಗಿರಿಯಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಲು ಅಣಿಯಾಗಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಇದಕ್ಕೆ ಹೋದ ವರ್ಷ ಭಜರಂಗದಳ ನೀಡಿದ್ದ ಕರೆಯೇ ಸಾಕ್ಷಿಯಂತಿದೆ. ಅಂದು ತೆಗೆದಿದ್ದ ಫೋಟೋಗಳನ್ನು ಶ್ರೀಧರ್ ತೋರಿಸಿದರು. ಅವುಗಳಲ್ಲಿ ಒಂದು ಬ್ಯಾನರ್‍ನ ಫೋಟೋ ಇದ್ದು ಅದರಲ್ಲಿ ಹೀಗೆ ಕರೆ ನೀಡಲಾಗಿತ್ತು: “ಸ್ನೇಹಕ್ಕೆ ಬದ್ಧ, ಸಂಹಾರಕ್ಕೆ ಸಿದ್ಧ.”

ಇದನ್ನು ಓದಿ ಕಾರ್ನಾಡ್ ಕುಪಿತರಾದರು. “ಯಾರ ಸಂಹಾರ ಮಾಡುತ್ತಾರಂತೆ ಇವರು? ಇದರಲ್ಲಿ ಬಳಸಿರುವ ಪದಗಳನ್ನು ನೋಡಿ ‘ಮಾಂಸ ಖಂಡ’, ‘ರಕ್ತದ ಕೋಡಿ’, ‘ಶತ್ರುಗಳ ಸಂಹಾರ’. ಇದು ಕನ್ನಡ ಭಾಷೆಯೇ?” ಎಂದು ಗುಡುಗಿದರು.

ಇಂತಹ ಸ್ಥಳದಲ್ಲಿ ಪುರೋಹಿತಶಾಹಿ ಪಕ್ಷವಾದ ಬಿಜೆಪಿ ಮತ್ತದರ ಅಂಗವಾಗಿರುವ ಭಜರಂಗದ ಮಂಗಗಳು ಇಲ್ಲಿ ಅರ್ಚಕ(ಆತ ಬ್ರಾಹ್ಮಣನೇ ಆಗಿರುತ್ತಾನೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ)ನ ನೇಮಕ, ಗೋರಿಗಳ ನಿರ್ಮೂಲನೆ, ‘ಹಿಂದೂ ಪುಣ್ಯಕ್ಷೇತ್ರ’ಗಳನ್ನು ಘೋಷಿಸಲು ಮುಂದಾಗಿರುವುದು ನಿಜವಾಗಲು ಕಿಡಿಗೇಡಿತನ……

ಕಾರ್ನಾಡ್‍ರವರು “ಈ ದತ್ತ ಜಯಂತಿ, ದತ್ತಮಾಲೆ, ಇವ್ಯಾವೂ ನಮ್ಮ ಸಂಸ್ಕೃತಿಯಲ್ಲಿಲ್ಲ, ಇವುಗಳ ಆಚರಣೆಯ ಹಿಂದೆ ಇರುವುದು ಧರ್ಮವಲ್ಲ, ಬದಲಾಗಿ ಧರ್ಮದ ಹೆಸರಿನಲ್ಲಿ ರಾಜಕಾರಣ. ನಾಥ ಪಂಕ್ತಿಗೆ ಸೇರಿದ್ದ ದತ್ತಾತ್ರೇಯ ಜಾತಿ ಪದ್ದತಿಯನ್ನು ತಿರಸ್ಕರಿಸಿದ್ದರೂ, ಆತನನ್ನು ಬ್ರಾಹ್ಮಣೀಕರಿಸುತ್ತಿರುವುದರಲ್ಲ ಹಿಂದಿನ ಸಂಚು ಅರ್ಥೈಸುವುದು ಸುಲಭ” ಎಂದು ಲೇವಡಿ ಮಾಡಿದರು.

ಈ ‘ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ’ಕ್ಕೆ ತನ್ನದೇ ಇತಿಹಾದವಿದೆ. ಅರೆಬಿಯಾದಿಂದ ಚಂದ್ರ ದ್ರೋಣ ಪರ್ವತಕ್ಕೆ ಬಂದ ದಾದಾ ಹೈಯತ್ ಇಲ್ಲಿನ ಪಾಳೆಗಾರರ ದಬ್ಬಾಳಿಕೆಯಡಿ ನರಳುತ್ತಿದ್ದ ಶೂದ್ರರಿಗೂ, ದೀನ ದಲಿತ ವರ್ಗಕ್ಕೂ ಸಹಾಯ ಮಾಡಿ ಅವರ ಮೆಚ್ಚುಗೆಯನ್ನು ಗಳಿಸಿದರು. ದಾದಾ ಹೈಯತ್‍ನ ಪ್ರೀತಿ, ದಯೆ ಮತ್ತು ಸೈರಣೆಯನ್ನು ಕಂಡು ಹಲವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರೆ, ಇನ್ನು ಹಲವರು ತಮ್ಮ ಪುರಾತನ ಧರ್ಮವನ್ನು ತ್ಯಜಿಸದೇ, ದಾದಾ ಹೈರತ್‍ನನ್ನು ದತ್ತಾತ್ರೇಯನ ಅವತಾರವೆಂದೇ ಭಾವಿಸಿ ಆತನ ಭಕ್ತಾಧಿಗಳಾದರು. ಇದಕ್ಕೆ ಕಾರಣವೂ ಇತ್ತು. ಹಿಂದೂ ಪುರಾಣಗಳಲ್ಲಿ ವಿಷ್ಣು ದತ್ತಾತ್ರೇಯನ ಅವತಾರವನ್ನು ತಾಳಿ ಜನರನ್ನು ದಾಸ್ಯದಿಂದ ಪಾರು ಮಾಡುತ್ತಾನೆಂದು ಹೇಳಲಾಗಿದೆ. ಆದ್ದರಿಂದಲೇ ಹಿಂದೂ ಭಕ್ತಾದಿಗಳು ದಾದಾ ಹೈರತ್‍ನಲ್ಲಿ ದತ್ತಾತ್ರೇಯನನ್ನೇ ಕಂಡು ಆತನಿಗೆ ಹಿಂದೂ ಹೆಸರಿಟ್ಟು ಪುನರ್ ನಾಮಕರಣ ಮಾಡಿದರು. ಓರ್ವ ಮುಸ್ಲಿಂ ಸೂಫಿ ಸಂತನಿಗೆ ಆಗೆಲ್ಲ ಹಿಂದೂ ಹೆಸರನ್ನಿಡುವುದು ಸಾಮಾನ್ಯವಾಗಿತ್ತು. ಉದಾಹರಣೆಗೆ: ಬಿಜಾಪುರದ ಸೂಫಿ ಸಂತ ಖ್ವಾಜ ಅಮಿನುದ್ದೀನ್ ಅಲ್ಲಾನನ್ನು ಹಿಂದೂ ಭಕ್ತಾದಿಗಳು ಬ್ರಹ್ಮಾನಂದಯಿಕೆ ಸ್ವಾಮಿ ಎಂದೂ, ತಿಥಿನಿಯ ಮೊಯಿದ್ದೀನ್ ಅವರನ್ನು ಮುನಿಯಪ್ಪರೆಂದೂ ‘ಹಿಂದೂ’ಕರಿಸಲಾಗಿತ್ತು.

ಅಂತೂ ಚಿಕ್ಕಮಗಳೂರನ್ನು ತಲುಪಿದೆವು. ಅಲ್ಲಿ ನಮಗಾಗಿ ಹಲವರು ಕಾದಿದ್ದರು. ಅನೇಕ ಸಂಘಗಳಿಗೆ ಸೇರಿದ್ದ ಅವರೆಲ್ಲಾ ಎಂತಹ ಉತ್ಸಾಹಿ ತರುಣರೆಂದರೆ, ನಾಲ್ಕೈದು ವರ್ಷಗಳ ಕಾಲ ಅವರೆಲ್ಲಾ ಚಿಕ್ಕಮಗಳೂರಿನ ಆಸುಪಾಸಿನಲ್ಲಿ ಸಂಘ ಪರಿವಾರದ ಷಡ್ಯಂತ್ರದ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.

ಬಾಬಾಬುಡನ್‍ಗಿರಿಯಲ್ಲಿರುವ ಪೀಠಕ್ಕೆ ಭೇಟಿನೀಡಿ, ಅಲ್ಲಿನ ಶಾಖಾದ್ರಿಯವರನ್ನು ಮಾತನಾಡಿಸಿ, ಇತ್ತೀಚೆಗೆ ಗಿರಿಗೆ ಹೋಗಿದ್ದ ಮಂಗ ಪರಿವಾರದವರು ಅಲ್ಲಿ ನಾಶ ಮಾಡಿದ್ದ ಮುಸ್ಲಿಮರ ಹೋಟೆಲುಗಳನ್ನು, ಮುಸ್ಲಿಂ ಗುರುಗಳೊಬ್ಬರ ಗೋರಿಯ ಮೇಲಿರುವ ಹರಕೆಯ ಮರದ ಕೊಂಬೆಯನ್ನು ಕಡಿದು ಹಾಕಿರುವುದನ್ನೂ ಪರಿಶೀಲಿಸಿದೆವು.

ಚಿಕ್ಕಮಗಳೂರಿಗೆ ಹಿಂದಿರುಗಿದ ನಂತರ ಒಂದು ಪತ್ರಿಕಾಗೋಷ್ಠಿ. “ಕರ್ನಾಟಕವನ್ನು ಇನ್ನೊಂದು ಗುಜರಾತ್ ಮಾಡುವುದು ಎಂದರೇನು? ಗುಜರಾತ್, ಅಯೋಧ್ಯೆ ನಮಗೆ ಯಾಕೆ, ಯಾವಾಗ ಮಾದರಿಯಾದವು? ನಮಗೆ ನಮ್ಮದೇ ಮಾದರಿ, ಪರಂಪರೆಗಳಿಲ್ಲವೆ?” ಕಾರ್ನಾಡ್‍ರವರಿಂದ ಪ್ರಶ್ನೆ. “ನಮ್ಮ ಮಾರ್ಗದರ್ಶಕರು ಬಸವಣ್ಣ, ಕುವೆಂಪು ಅಂಥವರೇ ವಿನಃ ತೊಗಾಡಿಯಾ, ಮೋದಿ ಅಂಥವರಲ್ಲ,” ಮರುಳು ಸಿದ್ದಪ್ಪನವರಿಂದ ಸ್ಪಷ್ಟನೆ. “ನ್ಯಾಯಾಲಯದ ತೀರ್ಪಿನ ಪ್ರಕಾರ 1975ರ ಹಿಂದಿನ ಸ್ಥಿತಿಯನ್ನೇ ಗಿರಿಯ ಮೇಲೆ ಸ್ಥಾಪಿಸಬೇಕು” ಎಂಬುದು ನಮ್ಮೆಲ್ಲರ ಒತ್ತಾಯ.

ಪತ್ರಿಕಾಗೋಷ್ಠಿಯ ನಂತರ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್‍ರವರೊಂದಿಗೆ ಭೇಟಿ. “ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಗಿರಿಯ ಮೇಲ ಹೋಮ ನಡೆಸಲು ಯಾಕೆ ಅನುಮತಿ ನೀಡಿದಿರಿ?” ಎಂದು ಕಾರ್ನಾಡ್ ಕೇಳಿದರೆ ಆ ಅಧಿಕಾರಿಯಿಂದ ಬಂದ ಉತ್ತರ “75ರ ಹಿಂದೆಯೂ ಅಲ್ಲಿ ಹೋಮ ಮಾಡಲಾಗುತ್ತಿತ್ತು” ಇದಕ್ಕೆ ಯಾವ ದಾಖಲೆ ಇದೆ ತೋರಿಸಿ,” ಎಂದು ಮರುಪ್ರಶ್ನಿಸಿದರೆ ಆತನಲ್ಲಿ ಯಾವ ಉತ್ತರವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...